Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಎಲಿಮಿನೇಷನ್ ಶಾಕ್ ತಂದಿದೆ: ನಟಿ ನಮ್ರತಾ ಸಂದರ್ಶನ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Cinema | ಎಲಿಮಿನೇಷನ್ ಶಾಕ್ ತಂದಿದೆ: ನಟಿ ನಮ್ರತಾ ಸಂದರ್ಶನ

Cinema

ಎಲಿಮಿನೇಷನ್ ಶಾಕ್ ತಂದಿದೆ: ನಟಿ ನಮ್ರತಾ ಸಂದರ್ಶನ

Public TV
Last updated: January 23, 2024 11:11 am
Public TV
Share
3 Min Read
Namratha Gowda 1
SHARE

ಬಿಗ್‌ಬಾಸ್‌ ಹತ್ತನೇ ಸೀಸನ್‌ನ (Bigg Boss Kannada) ಅಂತಿಮ ಏಳು ಸ್ಪರ್ಧಿಗಳಲ್ಲಿ ಒಬ್ಬರಾಗಿದ್ದ ನಮ್ರತಾ (Namrata Gowda) ಈ ವಾರ ಮನೆಯಿಂದ ಹೊರಬಿದ್ದಿದ್ದಾರೆ. ‘ಬಿಗ್‌ಬಾಸ್‌ ಈ ಸೀಸನ್‌ನಲ್ಲಿ ನಿಮ್ಮ ಕಾಂಟ್ರಿಬ್ಯೂಷನ್‌ ನಿಜಕ್ಕೂ ಮಹತ್ವದ್ದು. ನೀವು ಯಾರು ಎಂದು ನನಗೂ ತೋರಿಸಿಕೊಟ್ಟಿದ್ದೀರಿ’ ಎಂಬ ಮೆಚ್ಚುಗೆಯ ಮಾತನ್ನು ಕಿಚ್ಚನ ಬಾಯಿಂದಲೇ ಕೇಳಿಸಿಕೊಂಡಿರುವ ನಮ್ರತಾ ಅವರು ಮನೆಯಿಂದ ಹೊರಗೆ ಬಂದ ಕೂಡಲೇ ತಮ್ಮ ಜರ್ನಿಯ ಬಗ್ಗೆ ಜಿಯೊ ಸಿನಿಮಾಗೆ ಎಕ್ಸ್‌ಕ್ಲೂಸೀವ್ ಸಂದರ್ಶನ (Interview) ನೀಡಿದ್ದಾರೆ. ಅದರ ಅಕ್ಷರರೂಪ ಇಲ್ಲಿದೆ.

Namrata Gowda 5

ನಾನು ನಿಮ್ಮ ನಮೃತಾ. ಬಿಗ್‌ಬಾಸ್‌ ಹತ್ತನೇ ಸೀಸನ್‌ನ ಟಾಪ್‌ ಸೆವೆನ್ ಸ್ಪರ್ಧಿಗಳಲ್ಲಿ ಒಬ್ಬಳು ನಾನು. ನಿಜಕ್ಕೂ ಸಖತ್ ಬೇಜಾರಾಗ್ತಿದೆ. ಹತ್ತೊಂಬತ್ತು ಜನರಲ್ಲಿ ಏಳನೇ ಸ್ಥಾನದವರೆಗೂ ಬಂದಿರುವುದು ಖಂಡಿತ ಸುಲಭವ ಸಂಗತಿ ಅಲ್ಲ. ಮೂರು ದಿನಗಳ ಹಿಂದೆ ಹಳೆಯ ಸ್ಪರ್ಧಿಗಳೆಲ್ಲ ಬಂದು ಒಂದು ಬಾಂಬ್ ಹಾಕ್ತಾರೆ. ನಿಂಗೆ ಚಾನ್ಸ್ ಇಲ್ಲ ಅಂತ. ಆಗ ನನಗೆ ಓ ಎಂದು ನನ್ನ ಆತ್ಮವಿಶ್ವಾಸ ಕುಗ್ಗಲು ಶುರುವಾಯ್ತು. ಆದರೂ ನನ್ನನ್ನು ನಾನು ಸಂಭಾಳಿಸಿಕೊಂಡು ಆಟ ಆಡಲು ಶುರುಮಾಡಿದೆ. ಆದರೆ ಈಗ ಮನೆಯಿಂದ ಹೊರಗೆ ಬಂದಿದ್ದು ನಿಜಕ್ಕೂ ಶಾಕ್‌.

Namrata Gowda 2

ಈ ನೂರಾ ಆರು ದಿನಗಳ ಪಯಣವನ್ನು ಸಣ್ಣದಾಗಿ ವಿವರಿಸಲು ಸಾಧ್ಯವೇ ಇಲ್ಲ. ಅದರಲ್ಲಿಯೂ ನನ್ನ ಜರ್ನಿ ನಿಜವಾಗಿಯೂ ಏರಿಳಿತದ ಪಯಣವಾಗಿತ್ತು. ಎಲ್ಲಿಂದಲೋ ಶುರುಮಾಡಿ ಎಲ್ಲಿಗೋ ಹೋಗಿ, ಕೆಳಗೆ ಇಳಿದು ಮತ್ತೆ ಮೇಲೆ ಏರಿ ಹೋದ ಜರ್ನಿ ನಂದು.  ಸ್ನೇಹಿತರ ಜೊತೆಗೆ ಮಾತಾಡುವುದು ನನಗೆ ತುಂಬ ಖುಷಿ ಕೊಟ್ಟಿತ್ತು. ಆದರೆ ಆ ಫ್ರೆಂಡ್‌ಷಿಪ್‌ ನಲ್ಲಿ ಮಾತಾಡುತ್ತಿದ್ದಾಗ ಬೇರೆಯವರ ಬಗ್ಗೆ ಒಂದು ಒಪಿನಿಯನ್ ಕ್ರಿಯೇಟ್ ಆಗುತ್ತದೆ. ಅವರು ಕೆಟ್ಟವರು, ಅವರು ಒಳ್ಳೆಯವರು ಎಂದೆಲ್ಲ. ಆದರೆ ಹೋಗ್ತಾ ಹೋಗ್ತಾ ನಾನು ಮೈಚಳಿ ಬಿಟ್ಟು ಅವರ ಜೊತೆಗೆ ಸೇರಲು ಪ್ರಾರಂಭಿಸಿದಾಗ, ‘ಏಯ್… ಅವರೂ ನಾನು ಅಂದುಕೊಂಡಷ್ಟು ಕೆಟ್ಟವರಲ್ಲ’ ಅನಿಸಿತು. ಎಲ್ಲರೂ ಒಳ್ಳೆಯವರೇ ಆಗಿರುತ್ತಾರೆ. ಆದರೆ ಆಯಾ ಸಂದರ್ಭದಲ್ಲಿ ಎಲ್ಲರೂ ಕೆಟ್ಟವರ ಹಾಗೆ ಕಾಣಿಸುತ್ತಿರುತ್ತಾರೆ. ನಾನೂ ಅಂಥ ಕೆಲವು ಸಂದರ್ಭಗಳಲ್ಲಿ ಕೆಟ್ಟವರಾಗಿರುತ್ತೇನೆ.

Namrata Gowda 3

ಬಿಗ್ಬಾಸ್‌ ಮನೆಯಲ್ಲಿ ನಾನು ಸಣ್ಣಪುಟ್ಟ ತಪ್ಪುಗಳನ್ನು ಮಾಡಿರಬಹುದು. ಆದರೆ ಇವೆಲ್ಲ ಹೇಳುವ ಥರ, ಶಾಡೊ, ಇನ್‌ಪ್ಲ್ಯೂಯೆನ್ಸ್‌ ಎಲ್ಲ ಆಗಿಲ್ಲ. ನಾನು ನಿಜವಾದ ಸ್ನೇಹಿತರನ್ನು ಕಂಡುಕೊಂಡಿದ್ದೇನೆ. ಆರಂಭದಲ್ಲಿ ಗೇಮ್ ಆಡಲು, ಸ್ಟ್ರಾಟೆಜಿ ಮಾಡಲು ಗೊತ್ತಾಗ್ತಿರ್ಲಿಲ್ಲ. ಆದರೆ ನಾನು ಕಲಿತಾ ಬಂದೆ. ಕಲಿಯುವಷ್ಟರಲ್ಲಿ ಸ್ವಲ್ಪ ಸಮಯ ತಗುಲಿತು ಅಷ್ಟೆ. ನಂತರ ನಾನು ಆಟದಲ್ಲಿ ಇಳಿದೆ. ಬಿಗ್‌ಬಾಸ್‌ ಮನೆಯಲ್ಲಿ ಕಳೆದ ದಿನಗಳು ನನ್ನ ಪಾಲಿಗೆ ಸೋಲ್‌ಫುಲ್ ಜರ್ನಿ. ಇಲ್ಲಿ ಯಾರೂ ಕೆಟ್ಟವರಲ್ಲ. ಈ ಪ್ರಯಾಣವನ್ನು ನಾನು ಮರೆಯಲು ಸಾಧ್ಯವೇ ಇಲ್ಲ. ರಿಯಲ್ ಫ್ರೆಂಡ್‌ಷಿಪ್‌ ಕೂಡ ಮನೆಯೊಳಗಲ್ಲ, ಹೊರಗೇ ಮುಂದುರಿಯುತ್ತದೆ ಅಂದುಕೊಂಡಿದ್ದೇನೆ. ಎಲ್ಲರ ಜೊತೆಗೂ ಸಂಪರ್ಕದಲ್ಲಿ ಇರಲು ಬಯಸುತ್ತೇನೆ.

Namrata Gowda 4

ನನ್ನ-ಸಂಗೀತಾ ನಡುವಿನ ಫ್ರೆಂಡ್‌ಷಿಪ್‌ ಅನ್ನು ಒಂದೇ ಪದದಲ್ಲಿ ಹೇಳಬೇಕು ಅಂದರೆ ಸಿಸ್ಟರ್‍ಹುಡ್‌. ನನಗೆ ಆ ಥರ ಬಾಂಡಿಂಗ್ ಆಗೋದು ಕಡಿಮೆ. ಆದರೆ ಇಲ್ಲಿ ಆಯ್ತು. ಸಂಗೀತಾ ಏನೇ ಇದ್ರೂ ಮುಖದ ಮೇಲೇ ಹೇಳ್ತಾರೆ. ನೀನು ಇಲ್ಲಿ ತಪ್ಪು ಮಾಡಿದೆ. ಇದು ಸರಿ ಎಂಬುದನ್ನು ನೇರವಾಗಿ ಹೇಳ್ತಾರೆ. ಅಂಥ ಕ್ರಿಟಿಕ್ ಎಲ್ಲರ ಬದುಕಿನಲ್ಲಿಯೂ ಇರಬೇಕು ಅನಿಸುತ್ತದೆ. ನನಗೆ ಅಣ್ಣ ಇಲ್ಲ ಎಂಬ ಕೊರಗು ಯಾವಾಗಲೂ ಇತ್ತು. ಆ ಸ್ಥಾನವನ್ನು ವಿನಯ್ ತುಂಬಿದ್ದಾರೆ. ಹೊರಗಡೆ ಕೂಡ ಆ ಬಂಧನವನ್ನು ಮುಂದುವರಿಸಿಕೊಳ್ಳಲು ಬಯಸುತ್ತೇನೆ. ಇಡೀ ಮನೆಯಲ್ಲಿ ನನಗೆ ಬಹುಬೇಗ ಮನಸ್ಸಿಗೆ ಹತ್ತಿರವಾದವನು ಪ್ರತಾಪ್. ಆವಾಗಾವಾಗ ವಿಯರ್ಡ್ ಆಗಿ ಆಡ್ತಾನೆ ನಿಜ. ಆದರೆ ಅವನು ಇರೋದೇ ಹಾಗೆ. ಅವನನ್ನು ಹಾಗೆಯೇ ಒಪ್ಪಿಕೊಂಡಿದ್ದೇನೆ ನಾನು. ಮೊದಲು ಅವನು ಒಪಿನಿಯನ್ ಹೇಳಬೇಕಾದರೆ, ಕಮೆಂಟ್ ಮಾಡುವುದನ್ನು ಕೇಳಿದಾಗ ಕೋಪ ಬರುತ್ತಿತ್ತು. ಏನೋ ಹೇಳಿದ್ದನ್ನು ಪರ್ಸನಲ್ ಆಗಿಟ್ಟುಕೊಂಡು ತುಂಬದಿನ ಸಾಧಿಸ್ತಿದ್ದ. ಆದರೆ ಈಗ, ಅವನೂ ಅದನ್ನೆಲ್ಲ ಬಿಟ್ಟು ತುಂಬ ಚೇಂಜ್ ಆಗಿದ್ದಾನೆ.

 

ಅವನ ಅಪ್ಪ, ಅಮ್ಮ ಇಬ್ಬರೂ ಸಿಕ್ಕಾಪಟ್ಟೆ ಒಳ್ಳೆಯ ಜನ, ಮುಗ್ಧರು. ನಾನು ನೋಡಿದ ತಕ್ಷಣ ಪಟ್ ಅಂತ ಕನೆಕ್ಟ್ ಆದೆ. ಅವರಿಬ್ಬರ ಸೆಲ್ಫ್‌ಸೆಲ್ ಮಾತು ನೋಡಿ ಇಷ್ಟವಾಯ್ತು. ಅವನು ‘ನಾನು ನಿಮಗೆ ಸೀರೆ ಕೊಡಿಸ್ತೀನಿ ದೀ… ನಿಮಗೆ ಓಲೆ ಜುಮುಕಿ ಕೊಡಿಸ್ತೀನಿ’ ಎಂದು ಹೇಳೋನು. ಬಟ್ ಅವರ ತಂದೆ ತಾಯಿ ಸೀರೆ ತಂದುಕೊಟ್ಟಿದ್ದು ನೋಡಿ ಬಹಳ ಎಮೋಷನಲ್ ಆಯ್ತು. ನಮ್ಮೋರು ಅಂತ ಅನಿಸಿತು. ಬೇಕೋ ಬೇಡವೋ ನಾನು ಯಾವಾಗಲೂ ಅವನ ದಿದಿ ಆಗಿಯೇ ಇರುತ್ತೇನೆ. ಅವನು ಯಾವಾಗಲೂ ನನ್ನ ಪುಟ್ಟ ತಮ್ಮನೇ.

TAGGED:Bigg Boss KannadainterviewNamrata Gowdaನಮ್ರತಾ ಗೌಡಬಿಗ್ ಬಾಸ್ ಕನ್ನಡಸಂದರ್ಶನ
Share This Article
Facebook Whatsapp Whatsapp Telegram

Cinema news

Keerthy Suresh
ಕೀರ್ತಿ ಇಟ್ಟ ಗುರಿಗೆ ಫೋಟೋಗ್ರಾಫರ್ ಕಣ್ಣೇ ಹೋಯ್ತು..!
Cinema Latest South cinema
Kerala Court 2
ಖ್ಯಾತ ಬಹುಭಾಷಾ ನಟಿ ಮೇಲೆ ಲೈಂಗಿಕ ದೌರ್ಜನ್ಯ – 6 ಆರೋಪಿಗಳಿಗೆ 20 ವರ್ಷ ಜೈಲು
Cinema Court Latest Main Post National South cinema
Salman Khan Sharukh Khan
ಸಲ್ಮಾನ್-ಶಾರುಖ್ ಫ್ಯಾನ್ಸ್‌ಗೆ ಭರ್ಜರಿ ನ್ಯೂಸ್.. ಶೀಘ್ರದಲ್ಲೇ ಪಠಾಣ್-2!
Bollywood Cinema Latest Top Stories
Rishab Shetty
ಕಾಗದದ ಮೇಲೆ ಹುಟ್ಟಿದ ಪಾತ್ರ ಜೀವ ಪಡೆದಾಗ… `ಕಾಂತಾರ’ದ ಆತ್ಮಕಥೆ ಬಿಚ್ಚಿಟ್ಟ ರಿಷಬ್
Cinema Latest Sandalwood Top Stories

You Might Also Like

daily horoscope dina bhavishya
Astrology

ದಿನ ಭವಿಷ್ಯ 13-12-2025

Public TV
By Public TV
20 minutes ago
Mysuru Palace 2
Districts

ಮೈಸೂರು | ಅರಮನೆಯ ಜಯರಾಮ-ಬಲರಾಮ ದ್ವಾರದ ಗೋಡೆಯಲ್ಲಿ ಭಾರೀ ಬಿರುಕು

Public TV
By Public TV
8 hours ago
Shehbaz Sharif
Latest

ಪಾಕ್‌ ಪ್ರಧಾನಿಗೆ ವಿಶ್ವವೇದಿಕೆಯಲ್ಲಿ ಅವಮಾನ – ಪುಟಿನ್‌ ಭೇಟಿಗಾಗಿ 40 ನಿಮಿಷ ಕಾದು ಕುಳಿತ ಶೆಹಬಾಜ್ ಷರೀಫ್

Public TV
By Public TV
8 hours ago
03 5
Latest

MGNREGA | ನರೇಗಾ ಹೆಸರು ಬದಲು – ಪ್ರಮುಖ ನಿರ್ಧಾರಗಳೊಂದಿಗೆ ದೇಶದ ಗಮನ ಸೆಳೆದ ಸಂಸತ್ತು

Public TV
By Public TV
8 hours ago
MB Patil 1 1
Districts

ಶ್ರೀಗಳು ಹಾಕಿಕೊಟ್ಟ ಮಾರ್ಗ ಸೂರ್ಯ, ಚಂದ್ರ ಇರೋವರೆಗೂ ಚಿರಸ್ಥಾಯಿ – ಲಿಂ.ಚನ್ನಬಸವ ಸ್ವಾಮೀಜಿ ಅಂತಿಮ ದರ್ಶನ ಪಡೆದ ಎಂ.ಬಿ.ಪಾಟೀಲ್

Public TV
By Public TV
8 hours ago
Kalaburagi Chariot
Districts

ಕಲಬುರಗಿ | ಕಡಕೋಳ ಜಾತ್ರೆಯಲ್ಲಿ ರಥದ ಚಕ್ರ ಕಟ್ಟಾಗಿ ಅವಘಡ

Public TV
By Public TV
8 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?