Public TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Font ResizerAa
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
  • National
  • World
  • Cinema
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • Live TV
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Ayodhya Ram Mandir

ಅಯೋಧ್ಯೆಗೆ ಬರೋ ಮುನ್ನ ಮೈಸೂರಿನ ಚಿಣ್ಣರ ಮೇಳದಲ್ಲಿ ಸಮಯ ಕಳೆದಿದ್ದೆ- ಶಿಲ್ಪಿ ಅರುಣ್‌ ಯೋಗಿರಾಜ್‌ ಬಿಚ್ಚಿಟ್ಟ ಸತ್ಯ

Public TV
Last updated: January 24, 2024 2:29 pm
Public TV
Share
3 Min Read
ARUN YOGIRAJ 2
SHARE

– 7 ತಿಂಗಳು ಯಾರ ಸಂಪರ್ಕದಲ್ಲೂ ಇರಲಿಲ್ಲ
– ಅಯೋಧ್ಯೆಗೆ ಬಂದು ರಾಮಲಲ್ಲಾರನ್ನು ನೋಡಲು ಮನವಿ
– ಪ್ರಾಣಪ್ರತಿಷ್ಠೆಗೂ ಮುನ್ನ ವೈರಲ್‌ ಫೋಟೋದ ಬಗ್ಗೆ ಶಿಲ್ಪಿ ಹೇಳಿದ್ದೇನು..?

ಅಯೋಧ್ಯೆ: ರಾಮಲಲ್ಲಾನ (Ram Lalla) ಮೂರ್ತಿ ಕೆತ್ತನೆ ಮಾಡಲು ಅಯೋಧ್ಯೆಗೆ ಬರುವುದಕ್ಕೂ ಮುನ್ನ ಮೈಸೂರಿನಲ್ಲಿ ನಡೆದ ಚಿಣ್ಣರ ಮೇಳದಲ್ಲಿ ಬಹಳಷ್ಟು ಸಮಯ ಕಳೆದಿದ್ದೇನೆ. ಈ ವಿಚಾರ ಯಾರಿಗೂ ಗೊತ್ತಿಲ್ಲ ಎಂದು ಶಿಲ್ಫಿ ಅರುಣ್‌ ಯೋಗಿರಾಜ್‌ (Arun Yogiraj)  ಅವರು ಸತ್ಯವೊಂದನ್ನು ಬಿಚ್ಚಿಟ್ಟಿದ್ದಾರೆ.

ಅಯೋಧ್ಯೆಯಿಂದ (Ayodhya Ram Mandir) ವಾಪಸ್‌ ಆಗುವ ಮುನ್ನ ಪಬ್ಲಿಕ್‌ ಟಿವಿ ಜೊತೆ ಮಾತನಾಡುತ್ತಾ ಅವರು ಸಾಕಷ್ಟು ವಿಚಾರಗಳನ್ನು ಹಂಚಿಕೊಂಡರು. ಜೊತೆ ರಾಮಲಲ್ಲಾನ ಪ್ರಾಣಪ್ರತಿಷ್ಠಾಪನೆಗೂ ಮುನ್ನ ವೈರಲ್‌ ಆದ ಫೋಟೋದ ಬಗ್ಗೆಯೂ ಪ್ರತಿಕ್ರಿಯಿಸಿದರು.

ARUN YOGIRAJ

ಈ ರಾಮನ ವಿಗ್ರಹ ಮಾಡಲು ನನ್ನಿಂದ ಎಷ್ಟು ಸಾಧ್ಯವೋ ಅಷ್ಟು ಪ್ರಯತ್ನ ಪಟ್ಟಿದ್ದೀನಿ. 140 ಕೋಟಿ ಜನಕ್ಕೆ ದರ್ಶನ ಮಾಡಿಸಲು ಇರುವ ಅವಕಾಶ ಎರಡು ಕಣ್ಣು, ಒಂದು ಮೂಗು ಹಾಗೂ ಬಾಯಿ. ಅಷ್ಟರಲ್ಲಿ ನಾನು ಲಲ್ಲಾ ಅವರನ್ನು ಹುಡುಕಿ ದೇಶಕ್ಕೆ ತೋರಿಸಬೇಕಾಗಿರುತ್ತೆ. ಇದಕ್ಕೆ ಬಹಳಷ್ಟು ಅಧ್ಯಯನವನ್ನು ಮಾಡಿದ್ದೀನಿ. ಎಲ್ಲನೂ ಇಂದು ಫಲಕೊಟ್ಟಿದೆ ಎಂದು ಸಂತಸ ವ್ಯಕ್ತಪಡಿಸಿದರು.

ಕೆತ್ತನೆಯಲ್ಲಿ ಬಳಸುವ ಉತ್ತಮ ಪಂಚತಾಳವನ್ನು ಇಲ್ಲಿ ಬಳಸಿದ್ದೇನೆ. ಒಂದು ಅಳತೆಯೊಳಗಡೆ ಕಲೆ ತೋರಿಸುವುದು ನಮ್ಮ ಕೈಯಲ್ಲಿರುತ್ತೆ. ಆ ಕಲೆಯನ್ನು ತೋರಿಸುವುದಕ್ಕೆ ಪ್ರಯತ್ನ ಪಟ್ಟಿದ್ದೇನೆ. ಇದಕ್ಕಿಂತಲೂ ದೇಶದ ಜನ ನೋಡಿ ಮೆಚ್ಚಿಕೊಂಡಿರುವುದು ನನಗೆ ಸಂತಸ ತಂದಿದೆ ಎಂದರು. ಇದನ್ನೂ ಓದಿ: ಬಾಲಕ ರಾಮನ ಕಣ್ತುಂಬಿಕೊಳ್ಳಲು 2ನೇ ದಿನವೂ ಸೇರಿದ ಲಕ್ಷಾಂತರ ಭಕ್ತರು- ದೇಗುಲದಲ್ಲಿ ಹೈ ಸೆಕ್ಯೂರಿಟಿ

ಅಯೋಧ್ಯೆಗೆ ಬಂದು ಲಲ್ಲಾನ ನೋಡಿ: ಮೂರ್ತಿ ಉದ್ಘಾಟನೆಯ ದಿನ ಬಹಳಷ್ಟು ಮಂದಿಯನ್ನು ನಾನು ಭೇಟಿಯಾಗಿದ್ದೇನೆ. ಆಗ ಅವರಲ್ಲಿ ಹೇಳಲಾರದ ಸಂತಸವನ್ನು ನಾನು ಕಂಡಿದ್ದೇನೆ. ವಿಗ್ರಹ ನೋಡಿದ ತಕ್ಷಣ ಎಲ್ಲರ ಕಣ್ಣಲ್ಲಿ ನೀರು ಬಂದಿದ್ದೂ ಉಂಟು. ಇದು ಲಲ್ಲಾನ ಮೇಲಿರುವ ಪ್ರೀತಿಯನ್ನು ತೋರಿಸುತ್ತದೆ. ನೀವು ಸಾಮಾಜಿಕ ಜಾಲತಾಣಗಳಲ್ಲಿ ನೋಡಿರುವ ಫೋಟೋಗಿಂತಲೂ ರಾಮಲಲ್ಲಾ ಅವರನ್ನು ಎದುರುಗಡೆ ನೋಡಲು ತುಂಬಾ ಸುಂದರವಾಗಿದ್ದಾರೆ. ಹೀಗಾಗಿ ಅಯೋಧ್ಯೆಗೆ ಬಂದೇ ರಾಮಲಲ್ಲಾ ಅವರನ್ನು ನೋಡಿ ಎಂದು ಇದೇ ವೇಳೆ ಅವರು ಮನವಿ ಮಾಡಿಕೊಂಡರು. ಜೊತೆಗೆ ನಿಮ್ಮ ಲಲ್ಲಾ ತುಂಬಾ ಮುದ್ದಾಗಿದ್ದಾರೆ. ನಿಮಗೆಲ್ಲರಿಗೂ ಅವರು ಆಶೀರ್ವಾದ ಮಾಡಲಿ ಎಂದು ಶುಭಹಾರೈಸಿದರು.

ram lalla narendra modi puja

ಎಲ್ಲರ ಸಂಪರ್ಕದಿಂದಲೂ ದೂರವಾಗಿದ್ದೆ  : ಈ 6 ತಿಂಗಳು ನನ್ನ ಜೀವನದಲ್ಲಿಯೇ ಪ್ರಮುಖವಾದ ಘಟ್ಟವಾಗಿದೆ. ಇಡೀ ಪ್ರಪಂಚದಲ್ಲಿ ಯಾರಿಗೂ ಸಿಗದೇ ಇರುವ ಅವಕಾಶ ಇದಾಗಿದೆ. ಜೊತೆಗೆ ಇದೇ ವೇಳೆ ತಂದೆ-ತಾಯಿ, ಪತಿ ಸೇರಿದಂತೆ ಕುಟುಂಬಸ್ಥರಿಗೆ ಧನ್ಯವಾದಗಳನ್ನು ತಿಳಿಸಿದರು.

ನಾನು ಯಾರ ಜೊತೆನೂ ಸರಿಯಾಗಿ ಮಾತಾಡದೇ ಸುಮಾರು 7 ತಿಂಗಳು ಆಗಿತ್ತು. ಹೀಗಾಗಿ ಮಾತನಾಡಲು ಸ್ವಲ್ಪ ಕಷ್ಟ ಆಗುತ್ತಿದೆ. ಏಕಾಗ್ರತೆಗೆ ಎಲ್ಲಿಯೂ ತೊಂದರೆ ಆಗಬಾರದೆಂದು ಹೊರಜಗತ್ತಿನ ಜೊತೆ ಸಂಬಂಧ ಕಟ್‌ ಮಾಡಿಕೊಂಡಿದ್ದೆವು. ಯಾಕೆಂದರೆ ಇತಿಹಾಸ ಇರುವಂತಹ ಜಾಗ, ದೇಶಾದ್ಯಂತ ಜನ ಕಾಯುತ್ತಿದ್ದಾರೆ. ಇದರ ಪ್ರಾಮುಖ್ಯತೆ ನನಗೆ ಗೊತ್ತಿದ್ದರಿಂದ ಸಾಕಷ್ಟು ಅಧ್ಯಯನ ಮಾಡಿಕೊಂಡು ಮೂರ್ತಿ ಕೆತ್ತನೆ ಮಾಡಿದ್ದೇನೆ ಎಂದರು.

arun yogiraj 1

ಚಿಣ್ಣರ ಮೇಳದಲ್ಲಿ ಮಕ್ಕಳ ಜೊತೆ ಸಮಯ ಕಳೆದಿದ್ದೆ: ಅಯೋಧ್ಯೆಗೆ ಬರುವುದಕ್ಕಿಂತಲೂ ಮುಂಚೆ ಚಿಣ್ಣರ ಮೇಳಕ್ಕೆ ಹೋಗಿದ್ದೆ. ಅಲ್ಲಿ ಬಹಳಷ್ಟು ಸಮಯ ಕಳೆದಿದ್ದೇನೆ. ಮಕ್ಕಳ ಜೊತೆ ಇರುತ್ತಿದ್ದೆ. ಇದು ಯಾರಿಗೂ ಹೇಳಿಲ್ಲ. ಸಾಕಷ್ಟು ಫೋಟೋಗಳನ್ನು ಸೇವ್‌ ಮಾಡಿಕೊಂಡಿದ್ದೆ. ಒಟ್ಟಿನಲ್ಲಿ ಆ ಸಮಯದಲ್ಲಿ ಏನು ಮಾಡಬೇಕು ಎಂಬ ಆದೇಶ ಆ ಭಗವಂತನಿಂದಲೇ ಬಂದಿರುತ್ತದೆ ಎಂದು ಹೇಳಿದರು.

ram lalla narendra modi puja 13

ಪ್ರಾಣಪ್ರತಿಷ್ಠಾನೆಗೂ ಮುನ್ನ ಫೋಟೋ ವೈರಲ್‌ ಬಗ್ಗೆ ಪ್ರತಿಕ್ರಿಯಿಸಿದ ಅವರು, 7 ತಿಂಗಳಿಂದ ಕಾಪಾಡಿಕೊಂಡು ಬಂದೆ. ಆದರೆ ಅದು ಹೇಗೆ ಫೋಟೋ ಮೂಲಕ ಹೊರಗೆ ಬಂತು ಎನ್ನುವುದು ಗೊತ್ತಾಗಿಲ್ಲ. ಆದರೆ ಆ ಸಮಯದಲ್ಲಿ ಸಾಕಷ್ಟು ಬೇಸರ ಆಯಿತು. ಆದರೆ ಹಳೆಯ ಫೋಟೋ ಹಾಗೂ ಪ್ರತಿಷ್ಠಾಪನೆ ಆದ ಬಳಿಕ ರಾಮಲಲ್ಲಾನ ವಿಗ್ರಹಕ್ಕೂ ಸಾಕಷ್ಟು ವ್ಯತ್ಯಾಸ ಇದೆ ಅದೇ ಖುಷಿ ಎಂದು ತಿಳಿಸಿದರು.

ಯೋಗಿ ಆದಿತ್ಯನಾಥ್‌ ಅವರು ಪ್ರಾಣಪ್ರತಿಷ್ಠೆ ದಿನ ತಮ್ಮ ಭಾಷಣದಲ್ಲಿ ನನಗೆ ಧನ್ಯವಾದಗಳನ್ನು ತಿಳಿಸಿದ್ದಾರೆ. ಪ್ರಧಾನಿಯವರು ಮಾತನಾಡಲು ಸಿಕ್ಕಿಲ್ಲ. ಟ್ರಸ್ಟ್‌ ವತಿಯಿಂದ ಗೌರವಪೂರ್ವಕವಾಗಿ ಏನು ಕೊಟ್ಟರೂ ಖುಷಿನೇ ಎಂದು ಅರುಣ್‌ ಯೋಗಿರಾಜ್‌ ಅವರು ಪಬ್ಲಿಕ್‌ ಟಿವಿ ಜೊತೆ ಖುಷಿ ಹಂಚಿಕೊಂಡರು.

TAGGED:arun yogirajAyodhyaRam Mandirrama lallaಅಯೋಧ್ಯೆಅರುಣ್‌ ಯೋಗಿರಾಜ್‌ರಾಮಮಂದಿರರಾಮಲಲ್ಲಾ
Share This Article
Facebook Whatsapp Whatsapp Telegram

Cinema Updates

Timmana Mottegalu
ಜೂ.27ಕ್ಕೆ `ತಿಮ್ಮನ ಮೊಟ್ಟೆಗಳು’ ರಿಲೀಸ್
1 hour ago
Karisma Kapoor Sunjay Kapur
ನಟಿ ಕರಿಷ್ಮಾ ಕಪೂರ್‌ ಮಾಜಿ ಪತಿ ಸಂಜಯ್‌ ಹೃದಯಾಘಾತದಿಂದ ನಿಧನ
11 hours ago
Kantara
ಕಾಂತಾರ ಚಾಪ್ಟರ್-1 | ದೈವದ ನೇಮೋತ್ಸವ ಚಿತ್ರೀಕರಣಕ್ಕೂ ಮುನ್ನವೇ ಸಹ ಕಲಾವಿದ ಸಾವು
1 day ago
Kantara 3
ʻಕಾಂತಾರ ಚಾಪ್ಟರ್-1ʼಗೆ ಸಾಲು ಸಾಲು ವಿಘ್ನ – ಒಂದೇ ತಿಂಗಳಲ್ಲಿ ಮೂರು ಸಾವು!
1 day ago

You Might Also Like

Tata Group Air India
Latest

Plane Crash | ಟಾಟಾ ಗ್ರೂಪ್ ಇತಿಹಾಸದ ಕರಾಳ ದಿನಗಳಲ್ಲಿ ಇದೂ ಒಂದು – ಸಂಸ್ಥೆಯ ಅಧ್ಯಕ್ಷರಿಂದ ಭಾವುಕ ಪತ್ರ

Public TV
By Public TV
6 minutes ago
Meghalaya Honeymoon
Crime

Honeymoon Murder | ಬೇರೊಂದು ಮಹಿಳೆ ಹತ್ಯೆಗೈದು ಸೋನಮ್ ಶವವೆಂದು ನಂಬಿಸೋಕೆ ಮುಂದಾಗಿದ್ದ ಹಂತಕರು

Public TV
By Public TV
42 minutes ago
Air India Ahmedabad Plane Crash Black box found on hostel rooftop
Latest

ಏರ್‌ ಇಂಡಿಯಾ ವಿಮಾನ ಪತನ: ಬ್ಲ್ಯಾಕ್‌ ಬಾಕ್ಸ್‌ ಪತ್ತೆ – ಬೆಂಕಿ ಬಿದ್ದರೂ ಸುಟ್ಟು ಹೋಗಿಲ್ಲ ಯಾಕೆ?

Public TV
By Public TV
46 minutes ago
Anju Sharma
Crime

ಅಹಮದಾಬಾದ್ ವಿಮಾನ ದುರಂತ – ಮಗಳ ಸೇರುವ ತವಕದಲ್ಲಿದ್ದ ತಾಯಿ ಸಾವಿನ ಮನೆಗೆ!

Public TV
By Public TV
1 hour ago
dentist Nirali patel died in plane crash
Latest

ಅಹಮದಾಬಾದ್ ವಿಮಾನ ದುರಂತ – ದಂತವೈದ್ಯೆಯಾಗಿದ್ದ ಭಾರತೀಯ ಮೂಲದ ಕೆನಡಾ ಪ್ರಜೆ ಸಾವು

Public TV
By Public TV
2 hours ago
Foreign woman arrested for smuggling drugs worth Rs 10 crore in Bengaluru
Bengaluru City

ಬೆಂಗಳೂರು | 10 ಕೋಟಿ ಮೌಲ್ಯದ ಮಾದಕವಸ್ತು ಸಾಗಾಟ – ವಿದೇಶಿ ಮಹಿಳೆ ಅರೆಸ್ಟ್

Public TV
By Public TV
2 hours ago
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?