Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಸಿದ್ದರಾಮಯ್ಯ ಶಿಷ್ಟಾಚಾರಗೆಟ್ಟ ಮುಖ್ಯಮಂತ್ರಿ: ಹೆಚ್‌ಡಿಕೆ ವಾಗ್ದಾಳಿ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Bengaluru City | ಸಿದ್ದರಾಮಯ್ಯ ಶಿಷ್ಟಾಚಾರಗೆಟ್ಟ ಮುಖ್ಯಮಂತ್ರಿ: ಹೆಚ್‌ಡಿಕೆ ವಾಗ್ದಾಳಿ

Bengaluru City

ಸಿದ್ದರಾಮಯ್ಯ ಶಿಷ್ಟಾಚಾರಗೆಟ್ಟ ಮುಖ್ಯಮಂತ್ರಿ: ಹೆಚ್‌ಡಿಕೆ ವಾಗ್ದಾಳಿ

Public TV
Last updated: January 29, 2024 12:53 pm
Public TV
Share
2 Min Read
HD Kumaraswamy 6
SHARE

ಬೆಂಗಳೂರು: ರಾಷ್ಟ್ರಪತಿಗಳ (President) ವಿರುದ್ಧ ಏಕವಚನ ಪ್ರಯೋಗ ಮಾಡಿ ಬಳಿಕ ವಿಷಾದ ವ್ಯಕ್ತಪಡಿಸಿದ ಸಿಎಂ ಸಿದ್ದರಾಮಯ್ಯ (Siddaramaiah) ವಿರುದ್ಧ ಮಾಜಿ ಸಿಎಂ ಕುಮಾರಸ್ವಾಮಿ (HD Kumaraswamy) ಕಿಡಿಕಾರಿದ್ದಾರೆ. ಸರಣಿ ಟ್ವೀಟ್ ಮೂಲಕ ವಾಗ್ದಾಳಿ ನಡೆಸಿರುವ ಅವರು, ಸಿದ್ದರಾಮಯ್ಯ ಅವರನ್ನು ಶಿಷ್ಟಾಚಾರಗೆಟ್ಟ ಮುಖ್ಯಮಂತ್ರಿ ಎಂದು ಟೀಕಿಸಿದ್ದಾರೆ.

ಅಂಕೆ ಮೀರಿದ ಭಂಡತನಕ್ಕೆ ಮುಖ್ಯಮಂತ್ರಿ ನೀವೇ ಅತ್ಯುತ್ತಮ ಉದಾಹರಣೆ ಸಿದ್ದರಾಮಯ್ಯನವರೇ. ಭಾವುಕನಾಗಿ ಮಾತನಾಡುವ ಭರದಲ್ಲಿ ಗೌರವಾನ್ವಿತ ರಾಷ್ಟ್ರಪತಿಗಳನ್ನು ಏಕವಚನದಲ್ಲಿ ಸಂಬೋಧಿಸಿದೆ ಎಂದು ನೀವು ಕೊಟ್ಟಿರುವ ಸಮಜಾಯಿಷಿ ಮೊಸಳೆಯನ್ನೂ ನಾಚಿಸುವಂತಿದೆ. ಗ್ರಾಮೀಣ ಸೊಗಡಿನ ವ್ಯಕ್ತಿತ್ವ ನನ್ನದು. ನಾನು ಮಾತನಾಡುವುದೇ ಹಾಗೆ ಎಂದು ನೀವು ಸಮರ್ಥಿಸಿಕೊಳ್ಳುತ್ತೀರಿ. ಸಮರ್ಥನೆಗೂ ಒಂದು ಅಳತೆ, ಗೌರವ ಇರುತ್ತದೆ. ಅದಾವುದನ್ನೂ ನೀವು ಲೆಕ್ಕಕ್ಕೇ ಇಟ್ಟಿಲ್ಲ ಹೌದಲ್ಲವೇ? ಎಂದು ಕಿಡಿಕಾರಿದರು.

siddaramaiah droupadi murmu

2ನೇ ಸಲ ಸಿಎಂ ಆಗಿ ಎಲ್ಲಾ ರೀತಿಯ ಶಿಷ್ಟಾಚಾರದ ಸುಖ ಅನುಭವಿಸುತ್ತಿದ್ದೀರಿ ಮತ್ತು ಪಾಲಿಸುತ್ತಿದ್ದೀರಿ ಸರಿ. ಆದರ ಭಾಷೆ ವಿಚಾರದಲ್ಲಿ ನೀವು ಯಾಕೆ ಶಿಷ್ಟಾಚಾರ ಕಲಿತಿಲ್ಲ, ಪಾಲಿಸುತ್ತಿಲ್ಲ? ನಿಮ್ಮ ನಾಯಕರಾದ ಸೋನಿಯಾ ಗಾಂಧಿ, ರಾಹುಲ್ ಗಾಂಧಿ ಅವರಿಗೆ ಏಕವಚನ ಪ್ರಯೋಗಿಸುವಿರಾ? ಈ ಸೋಗಲಾಡಿತನವನ್ನು ಅರ್ಥ ಮಾಡಿಕೊಳ್ಳದಷ್ಟು ಮುಗ್ಧರೇ ನಮ್ಮ ಜನರು ಸಿದ್ದರಾಮಯ್ಯನವರೇ? ನಿನ್ನೆ ದಿನ ಶೋಷಿತರ ಜಾಗೃತಿ ಸಮಾವೇಶದಲ್ಲಿ ನಿಮ್ಮ ಭಾಷಣದಲ್ಲಿ ಭಾವುಕತೆ, ಮುಗ್ಧತೆ ಇತ್ತೇ? ಸುಳ್ಳು ಹೇಳುವುದಕ್ಕೂ ಸಂಕೋಚ ಬೇಡವೇ? ನಿಮ್ಮ ಭಾಷಣ ದುರಾಹಂಕಾರದ ಪರಮಾವಧಿ ಮತ್ತು ಆ ಸಮಾವೇಶದ ಕರ್ತೃ, ಕರ್ಮ, ಕ್ರಿಯೆ ಎಲ್ಲವೂ ನೀವೇ. ಹೌದೋ ಅಲ್ಲವೋ ಎಂದು ಪ್ರಶ್ನಿಸಿದರು.

ದೇಶದ ಅತ್ಯುನ್ನತ ಸ್ಥಾನದಲ್ಲಿರುವ ಗೌರವಾನ್ವಿತ ರಾಷ್ಟ್ರಪತಿಗಳ ಬಗ್ಗೆ, ಅದರಲ್ಲೂ ಮಹಿಳೆಯ ಬಗ್ಗೆ ಏಕವಚನ ಪ್ರಯೋಗಿಸುವಾಗ ಭಾವುಕತೆಯಲ್ಲಿ ನಿಮ್ಮ ವಿವೇಕ ಸತ್ತು ಹೋಗಿತ್ತಾ? ಎರಡು ಬಾರಿ ಸಿಎಂ ಆದವರು, ಡಿಸಿಎಂ, ಹಣಕಾಸು ಸಚಿವರೂ ಆಗಿದ್ದವರು, ವಕೀಲರೂ, ಸ್ವಯಂಘೋಷಿತ ಸಂವಿಧಾನ ತಜ್ಞರೂ ಆಗಿರುವ ನಿಮ್ಮಂತಹ ಪಂಡಿತರೇ ಭಾವುಕತೆಯಿಂದ ಬಾಯಿ ತಪ್ಪಿದರೆ ಹೇಗೆ? ಇನ್ನು ಆ ನಿಮ್ಮ ಭಾಷಣ ಅದನ್ನು ಭಾಷಣ ಎನ್ನಲು ಸಾಧ್ಯವೇ? ನಿಮ್ಮ ಭಾಷಣ ನಿಮ್ಮ ಹೃದಯದಲ್ಲಿ ತುಂಬಿದ್ದ ಅಸಹನೆಯ ನಂಜು. ಎಂದು ವಾಗ್ದಾಳಿ ನಡೆಸಿದರು.

ಅನ್ಯಜಾತಿಗಳ ಮೇಲೆ ಮಡುಗಟ್ಟಿದ ದ್ವೇಷ. ಜಾತಿ-ಧರ್ಮಗಳ ನಡುವೆ ಬೆಂಕಿ ಇಡಲು ನೀವು ಕಕ್ಕಿದ ಕಾರ್ಕೋಟಕ ವಿಷಜ್ವಾಲೆ. ಜಾತಿ ವ್ಯವಸ್ಥೆ ಇರುವರೆಗೆ ಇಂಥ ಸಮಾವೇಶಗಳು ನಡೆಯಬೇಕು ಎನ್ನುತ್ತೀರಿ. ಅಂದರೆ ಕಾರ್ಕೋಟಕ ವಿಷಜ್ವಾಲೆ ನಿರಂತರ ಎಂದಾಯಿತು. ನಿರಂತರವಾಗಿ ಅಧಿಕಾರದಲ್ಲಿ ಸುಖಿಸಿದ ನೀವು ಶೋಷಿತ ವರ್ಗಕ್ಕೆ ಮಾಡಿದ್ದೇನು? ಮೀಸಲಾತಿ ಬಗ್ಗೆ ಬಾಬಾ ಸಾಹೇಬ್ ಅಂಬೇಡ್ಕರ್ ಅವರು ಹೇಳಿದ್ದೇನು? ಅವರ ನಿಲುವು ಏನಾಗಿತ್ತು? ಸಂವಿಧಾನವೇ ನನ್ನ ಧರ್ಮಗ್ರಂಥ ಎನ್ನುವ ನೀವು ಇಷ್ಟು ಬೇಗ ಸಂವಿಧಾನ ಬರೆದವರ ಮಾತನ್ನೇ ಮರೆತರೆ ಹೇಗೆ ಎಂದು ಹರಿಹಾಯ್ದರು.

14 ಬಜೆಟ್ ಮಂಡಿಸಿದ ಅಪರ ವಿತ್ತವಿಶಾರದರಾದ ತಮಗೆ ಮರೆವೇ? ಇನ್ನೆಷ್ಟು ವರ್ಷ ಸುಳ್ಳುಗಳನ್ನೇ ಹೇಳಿ ಸತ್ಯವನ್ನು ಸಾಗ ಹಾಕುತ್ತೀರಿ? ನನ್ನಂತೆಯೇ ಶೋಷಿತ ಸಮಾಜದಿಂದ ಬಂದವರು, ಅವರ ಬಗ್ಗೆ ಅಪಾರ ಗೌರವವಿದೆ. ಅವರನ್ನು ಏಕವಚನದಲ್ಲಿ ಸಂಬೋಧಿಸಬಾರದಿತ್ತು. ಅಚಾತುರ್ಯದಿಂದ ಆಗಿರುವ ಈ ಪ್ರಮಾದಕ್ಕೆ ವಿಷಾದ ವ್ಯಕ್ತಪಡಿಸುತ್ತೇನೆ ಎಂದಿದ್ದೀರಿ. ವಿಷಾದ ವ್ಯಕ್ತಪಡಿಸುವ ಸೌಜನ್ಯ ತೋರಿಸಿದ್ದೀರಿ, ಸಂತೋಷ. ಆದರೆ ನಿಮ್ಮ ನಂಜಿನ ವಿಷ ರಾಜ್ಯವನ್ನೆಲ್ಲಾ ದೇಶವನ್ನೆಲ್ಲಾ ವ್ಯಾಪಿಸುತ್ತಿದೆ. ಇದಕ್ಕೆ ಏನಂತೀರಿ? ಎಂದು ಟೀಕಿಸಿದ್ದಾರೆ.

TAGGED:bengalurucongressDroupadi Murmuhd kumaraswamysiddaramaiahಕಾಂಗ್ರೆಸ್ದ್ರೌಪದಿ ಮುರ್ಮುಬೆಂಗಳೂರುಸಿದ್ದರಾಮಯ್ಯಹೆಚ್‍ಡಿ ಕುಮಾರಸ್ವಾಮಿ
Share This Article
Facebook Whatsapp Whatsapp Telegram

Cinema news

Vijay Deverakonda Rashmika Mandanna
ಮದ್ವೆ ಬಳಿಕ ಬಳಿಕ ಒಟ್ಟಿಗೆ ಶೂಟಿಂಗ್‌ಗೆ ತೆರಳಿದ ವಿರೋಶ್ ಜೋಡಿಗೆ ಅದ್ಧೂರಿ ಸ್ವಾಗತ
Cinema Latest Sandalwood South cinema Top Stories
Amita Singh Tomar
ಕೌನ್ ಬನೇಗಾ ಕರೋಡ್ ಪತಿಯಲ್ಲಿ 50 ಲಕ್ಷ ಗೆದ್ದಿದ್ದ ತಹಶೀಲ್ದಾರ್ ಅರೆಸ್ಟ್‌!
Cinema Crime Latest National Top Stories TV Shows
Dhurandhar 2 2
ಒಂದೇ ವಾರದಲ್ಲಿ 1000 ಕೋಟಿ ಕ್ಲಬ್ ಸೇರಿದ `ಧುರಂಧರ್ 2′
Bollywood Cinema Latest Top Stories
Rashmika Vijay 5
ಹನಿಮೂನ್ ಅಲ್ಲ ಬಡ್ಡೀಮೂನ್ – ರಶ್ಮಿಕಾ, ವಿಜಯ್ ಹೊಸ ಟ್ರೆಂಡ್
Cinema Latest South cinema Top Stories

You Might Also Like

Gangavathi Inscription
Districts

ಗಂಗಾವತಿಯಲ್ಲಿ ಶ್ರೀ ಕೃಷ್ಣದೇವರಾಯನ ಕಾಲದ ಶಿಲಾಶಾಸನ ಪತ್ತೆ

Public TV
By Public TV
9 minutes ago
Donald Trump 2
Latest

ಆಕ್ರಮಿಸಿಕೊಳ್ತೇನೆ, ಇಲ್ಲವೇ ಸ್ವತಂತ್ರಗೊಳಿಸುತ್ತೇನೆ – ವೆನೆಜುವೆಲಾ, ಇರಾನ್‌ ಬಳಿಕ ಮತ್ತೊಂದು ದೇಶದ ಮೇಲೆ ಟ್ರಂಪ್‌ ಕಣ್ಣು

Public TV
By Public TV
10 minutes ago
chinnaswamy stadium
Bengaluru City

ಬೆಂಗಳೂರಲ್ಲಿ ಇಂದು ಐಪಿಎಲ್‌ ಉದ್ಘಾಟನೆ – ಚಿನ್ನಸ್ವಾಮಿ‌ ಕ್ರೀಡಾಂಗಣಕ್ಕೆ 2,000 ಪೊಲೀಸರ ಭದ್ರತೆ

Public TV
By Public TV
37 minutes ago
Chinnaswamy Stadium
Bengaluru City

ಇಂದು IPL ಉದ್ಘಾಟನಾ ಪಂದ್ಯ: ಚಿನ್ನಸ್ವಾಮಿ ಸುತ್ತಮುತ್ತ ನೋ ಪಾರ್ಕಿಂಗ್, ಎಲ್ಲಿ ಪಾರ್ಕ್ ಮಾಡ್ಬೋದು?

Public TV
By Public TV
44 minutes ago
Vairamudi Utsava
Districts

ಇಂದು ವಿಶ್ವವಿಖ್ಯಾತ ಮೇಲುಕೋಟೆ ವೈರಮುಡಿ ಉತ್ಸವ

Public TV
By Public TV
1 hour ago
SRH 01
Cricket

IPl 2026 | ರನ್‌ ಹೊಳೆ, ದಾಖಲೆಗಳ ಸುರಿಮಳೆ – ಇಲ್ಲಿದೆ ಐತಿಹಾಸಿಕ ದಾಖಲೆಗಳ ಪಟ್ಟಿ

Public TV
By Public TV
1 hour ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?