Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ರಾಜ್ಯಕ್ಕೆ 62 ಸಾವಿರ ಕೋಟಿ ರೂ. ನಷ್ಟ – ಫೆ.7 ರಂದು ದೆಹಲಿಯಲ್ಲಿ ಕರ್ನಾಟಕ ಸರ್ಕಾರದಿಂದ ಪ್ರತಿಭಟನೆ ಎಂದ ಡಿಕೆಶಿ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Bengaluru City | ರಾಜ್ಯಕ್ಕೆ 62 ಸಾವಿರ ಕೋಟಿ ರೂ. ನಷ್ಟ – ಫೆ.7 ರಂದು ದೆಹಲಿಯಲ್ಲಿ ಕರ್ನಾಟಕ ಸರ್ಕಾರದಿಂದ ಪ್ರತಿಭಟನೆ ಎಂದ ಡಿಕೆಶಿ

Bengaluru City

ರಾಜ್ಯಕ್ಕೆ 62 ಸಾವಿರ ಕೋಟಿ ರೂ. ನಷ್ಟ – ಫೆ.7 ರಂದು ದೆಹಲಿಯಲ್ಲಿ ಕರ್ನಾಟಕ ಸರ್ಕಾರದಿಂದ ಪ್ರತಿಭಟನೆ ಎಂದ ಡಿಕೆಶಿ

Public TV
Last updated: February 2, 2024 8:39 pm
Public TV
Share
4 Min Read
dk shivakumar siddaramaiah 2
SHARE

ಬೆಂಗಳೂರು: ಕೇಂದ್ರ ಬಜೆಟ್‌ನಲ್ಲಿ (Union Budget 2024) ಕರ್ನಾಟಕ ರಾಜ್ಯಕ್ಕೆ ನಿರಂತರ ಅನ್ಯಾಯವಾಗುತ್ತಿದೆ. ಕೇಂದ್ರದ ಮಲತಾಯಿ ಧೋರಣೆಯಿಂದ ಕಳೆದ 5 ವರ್ಷಗಳಲ್ಲಿ ರಾಜ್ಯಕ್ಕೆ 62 ಸಾವಿರ ಕೋಟಿ ಹಣ ನಷ್ಟವಾಗಿದೆ. ಹೀಗಾಗಿ ಫೆ.7 ರಂದು ಕಾಂಗ್ರೆಸ್ ನೇತೃತ್ವದ ಕರ್ನಾಟಕ ಸರ್ಕಾರವು ದೆಹಲಿಯಲ್ಲಿ ಪ್ರತಿಭಟನೆ ನಡೆಸಲಿದೆ ಎಂದು ಡಿಸಿಎಂ ಡಿ.ಕೆ ಶಿವಕುಮಾರ್ (DK Shivakumar) ಹೇಳಿದ್ದಾರೆ

ವಿಧಾನಸೌಧದಲ್ಲಿ ಮಾಧ್ಯಮಗೋಷ್ಠಿ ನಡೆಸಿ ಮಾತನಾಡಿದ ಅವರು, ಮುಖ್ಯಮಂತ್ರಿ ಸಿದ್ದರಾಮಯ್ಯ (Siddaramaiah) ಅವರ ನೇತೃತ್ವದಲ್ಲಿ ನಾನು ಸೇರಿದಂತೆ ರಾಜ್ಯದ ಸಚಿವರು, ಸಂಸದರು, ಶಾಸಕರು, ವಿಧಾನ ಪರಿಷತ್ ಸದಸ್ಯರು ಈ ಪ್ರತಿಭಟನೆಯಲ್ಲಿ ಭಾಗವಹಿಸುತ್ತೇವೆ. ಪ್ರತಿಭಟನೆ ಸ್ಥಳವಕಾಶದ ಬಗ್ಗೆ ಕೆಂದ್ರಕ್ಕೆ ಪತ್ರ ಬರೆದಿದ್ದು, ಅನುಮತಿ ಸಿಕ್ಕ ಸ್ಥಳದಲ್ಲಿ ಪ್ರತಿಭಟನೆ ನಡೆಸುತ್ತೇವೆ. ಪ್ರಜಾತಂತ್ರ ವ್ಯವಸ್ಥೆಯಲ್ಲಿ ಪ್ರತಿಭಟನೆ (Protest) ನಮ್ಮ ಮೂಲಭೂತ ಹಕ್ಕು. ಕಾಂಗ್ರೆಸ್ ಜನಪ್ರತಿನಿಧಿಗಳು ಭಾಗವಹಿಸಲಿರುವ ಈ ಪ್ರತಿಭಟನೆಯಲ್ಲಿ ಪ್ರತಿಪಕ್ಷದ ಸಂಸದರು. ಶಾಸಕರು ಭಾಗವಹಿಸಬೇಕು ಎಂದು ಮನವಿ ಮಾಡುತ್ತೇನೆ ಎಂದು ಹೇಳಿದ್ದಾರೆ.

ರಾಜ್ಯಕ್ಕೆ ಅನ್ಯಾಯವಾಗಿದೆ:
2018-19ರಲ್ಲಿ ಕೇಂದ್ರ ಸರ್ಕಾರದ ಬಜೆಟ್ ಗಾತ್ರ 24.5 ಲಕ್ಷ ಕೋಟಿ ಇತ್ತು. 2023-24ನೇ ಸಾಲಿನಲ್ಲಿ ಕೇಂದ್ರ ಸರ್ಕಾರದ ಬಜೆಟ್ ಗಾತ್ರ ದುಪ್ಪಟ್ಟಾಗಿದ್ದು 47 ಲಕ್ಷ ಕೋಟಿಯಾಗಿದೆ. 2018-19ರಲ್ಲಿ ಕೇಂದ್ರ ಸರ್ಕಾರದ ಬಜೆಟ್ ನಲ್ಲಿ ರಾಜ್ಯಕ್ಕೆ 46 ಸಾವಿರ ಕೋಟಿ ಅನುದಾನ ಸಿಕ್ಕಿತ್ತು. ಆದರೆ 2024-25ನೇ ಸಾಲಿನಲ್ಲಿ ರಾಜ್ಯಕ್ಕೆ ಬಂದಿರುವ ಅನುದಾನ ಕೇವಲ 50 ಸಾವಿರ ಕೋಟಿ ಮಾತ್ರ. ಕೇಂದ್ರ ಸರ್ಕಾರದ ಬಜೆಟ್ ಗಾತ್ರ ದುಪ್ಪಟ್ಟಾಗಿದ್ದರೂ ರಾಜ್ಯಕ್ಕೆ ಬರುವ ಅನುದಾನದ ಪ್ರಮಾಣದಲ್ಲಿ ಅತ್ಯಲ್ಪ ಏರಿಕೆ ಮಾತ್ರವಾಗಿದೆ. ಕರ್ನಾಟಕ ರಾಜ್ಯ ದೇಶದಲ್ಲೇ ಪ್ರಗತಿಪರ ರಾಜ್ಯ. ಮಹಾರಾಷ್ಟ್ರ ಬಿಟ್ಟರೆ ಕೇಂದ್ರಕ್ಕೆ ಅತಿ ಹೆಚ್ಚು ತೆರಿಗೆ ಪಾವತಿ ಮಾಡುತ್ತಿರುವ ರಾಜ್ಯ ಕರ್ನಾಟಕ. ಆದ್ರೆ ಕಳೆದ 5 ವರ್ಷಗಳ ಬಜೆಟ್ ನೋಡಿದ್ರೆ ನಮಗೆ ನಮ್ಮ ಪಾಲು ನ್ಯಾಯುತವಾಗಿ ಸಿಕ್ಕಿಲ್ಲ. ರಾಜ್ಯದ 28 ಸಂಸದರ ಪೈಕಿ 27 ಸಂಸದರು ಎನ್‌ಡಿಎ ಮೈತ್ರಿಕೂಟದವರೇ ಆಗಿದ್ದರೂ ನಮಗೆ ಸೂಕ್ತ ನ್ಯಾಯ ಸಿಗುತ್ತಿಲ್ಲ ಎಂದು ಅಸಮಾಧಾನ ಹೊರಹಾಕಿದ್ದಾರೆ.

62 ಸಾವಿರ ಕೋಟಿ ಹಣ ಕಡಿಮೆಯಾಗಿದೆ:
2018-19ರಿಂದ ಈಗಿನವರೆಗೂ ಕೇಂದ್ರ ಬಜೆಟ್ ಗಮನಿಸಿದರೆ ನಮ್ಮ ರಾಜ್ಯದ ಪಾಲಿನಲ್ಲಿ 40 ರಿಂದ 45% ಪಾಲು ಕಡಿಮೆಯಾಗಿದೆ. ಇದರಿಂದಾಗಿ ನಮ್ಮ ರಾಜ್ಯದ ಮೇಲೆ ಸಾಲದ ಹೊರೆ ಹೆಚ್ಚಾಗುತ್ತಿದೆ. ಇತ್ತೀಚೆಗೆ ನಡೆಸಿದ ಸಮೀಕ್ಷೆಯಲ್ಲಿ ಪ್ರತಿ ವರ್ಷ 7-10 ಸಾವಿರ ಕೋಟಿ ಅನುದಾನ ಕಡಿಮೆಯಾಗುತ್ತಾ ಬರುತ್ತಿದೆ. 14ನೇ ಹಣಕಾಸು ಆಯೋಗದ ಶಿಫಾರಸಿನಂತೆ ಕರ್ನಾಟಕ ರಾಜ್ಯಕ್ಕೆ 4.71% ಪಾಲು ನೀಡಲಾಗಿತ್ತು. ಆದರೆ 15ನೇ ಹಣಕಾಸು ಆಯೋಗದಲ್ಲಿ ರಾಜ್ಯದ ಪಾಲನ್ನು 3.64%ಗೆ ಇಳಿಸಲಾಗಿದೆ. ಇದರಿಂದಾಗಿ ನಮಗೆ 5 ವರ್ಷಕ್ಕೆ 62 ಸಾವಿರ ಕೋಟಿಯಷ್ಟು ಹಣ ಕಡಿಮೆಯಾಗಿದೆ. ಇನ್ನೂ ವಿವಿಧ ರೀತಿಯಲ್ಲಿ ಕರ್ನಾಟಕ ರಾಜ್ಯಕ್ಕೆ ಘೋಷಣೆ ಮಾಡಿದ್ದ ಅನುದಾನ ಕೂಡ ಸರಿಯಾಗಿ ನೀಡಿಲ್ಲ ಎಂದು ಕೇಂದ್ರದ ವಿರುದ್ಧ ಬೇಸರ ವ್ಯಕ್ತಪಡಿಸಿದ್ದಾರೆ.

ಭದ್ರಾ ಮೇಲ್ದಂಡೆ ಯೋಜನೆಯ ಪ್ರಸ್ತಾಪವೇ ಇಲ್ಲ:
ನೀರಾವರಿ ಯೋಜನೆಯಲ್ಲಿ ಭದ್ರಾ ಮೇಲ್ದಂಡೆ ಯೋಜನೆಗೆ 5,200 ಕೋಟಿ ನೀಡುವುದಾಗಿ ಘೋಷಣೆ ಮಾಡಿದ್ದರು. ಅದನ್ನೂ ನೀಡಿಲ್ಲ. ಇನ್ನು ಬೆಂಗಳೂರಿನಲ್ಲಿ ಮೆಟ್ರೋಗೆ ಕೂಡ ವಿವಿಧ ಹಂತದ ಯೋಜನೆ ಅನುದಾನ ನೀಡುವುದಾಗಿ ಹೇಳಿದ್ದರು. ನಾನು ಸಹ ಹಲವು ಬಾರಿ ಪ್ರಧಾನಿ, ಜಲಶಕ್ತಿ ಸಚಿವರು, ನಗರಾಭಿವೃದ್ಧಿ ಸಚಿವರಿಗೆ ಪತ್ರ ಬರೆದಿದ್ದೇನೆ. ನಮ್ಮ ರಾಜ್ಯದಿಂದ ಹೆಚ್ಚು ತೆರಿಗೆ ರವಾನೆಯಾಗುತ್ತಿದ್ದರೂ ನಮಗೆ ಮಲತಾಯಿ ಧೋರಣೆ ತೋರುತ್ತಿದ್ದೀರಿ. ಸಿದ್ದರಾಮಯ್ಯ ಅವರು ಪ್ರಧಾನಮಂತ್ರಿಗಳನ್ನು ಭೇಟಿ ಮಾಡಿ ಮನವಿ ಮಾಡಿದ್ದರು. ಆದರೂ ಯಾವುದೇ ಪ್ರಯೋಜನ ಆಗಿಲ್ಲ. ಇದರಿಂದಾಗಿ ನಮಗೆ ನಿರಾಸೆಯಾಗಿದೆ. ನಮಗೆ ಆಗಿರುವ ಅನ್ಯಾಯದ ಬಗ್ಗೆ ರಾಜ್ಯದ ಜನರಿಗೆ ತಿಳಿಸಬೇಕು. ನಮ್ಮ ರಾಜ್ಯದಲ್ಲಿ ಬರಗಾಲ ಎದುರಾಗಿದೆ. ರಾಜ್ಯದ ಇತಿಹಾಸದಲ್ಲೇ ಅತಿ ಹೆಚ್ಚು ತಾಲೂಕುಗಳನ್ನು ಬರಪೀಡಿತ ಪ್ರದೇಶ ಎಂದು ಘೋಷಣೆ ಮಾಡಲಾಗಿದೆ. ನಮ್ಮ ಹಣಕಾಸು ಹಾಗೂ ಕೃಷಿ ಸಚಿವರು ಕೇಂದ್ರ ಸಚಿವರನ್ನು ಭೇಟಿ ಮಾಡಿ ಮನವಿ ನೀಡಿದ್ದರು. ಸಂಸದರು ಕೂಡ ಸರ್ಕಾರದ ಮೇಲೆ ಒತ್ತಡ ಹಾಕಿ ರಾಜ್ಯಕ್ಕೆ ನ್ಯಾಯ ಒದಗಿಸಬೇಕು ಎಂದು ಮನವಿ ಮಾಡಿದ್ದೆವು. ಆದರೂ ನಯಾಪೈಸೆ ಹಣ ಬಂದಿಲ್ಲ ಎಂದು ವಾಗ್ದಾಳಿ ನಡೆಸಿದ್ದಾರೆ.

ಡಬಲ್‌ ಇಂಜಿನ್‌ ಸರ್ಕಾರದಲ್ಲೂ ರಾಜ್ಯಲ್ಲೆ ಲಾಭ ಆಗಿಲ್ಲ:
ಹಿಂದಿನ ಬಿಜೆಪಿ ಸರ್ಕಾರ ಇದ್ದಾಗ ಡಬಲ್ ಇಂಜಿನ್ ಸರ್ಕಾರದಿಂದ ನಮಗೆ ಲಾಭ ಆಗಿರಬಹುದು ಎಂದು ಭಾವಿಸಿದ್ದೆವು. ಆದರೆ ಸಚಿವ ಸಂಪುಟದಲ್ಲಿ ಚರ್ಚೆ ಮಾಡಿದಾಗ ನಮ್ಮ ರಾಜ್ಯಕ್ಕೆ 62 ಸಾವಿರ ಕೋಟಿ ನಷ್ಟವಾಗಿರುವುದು ಕಂಡುಬಂದಿದೆ. ಈ ಹಿನ್ನೆಲೆಯಲ್ಲಿ ಕಾಂಗ್ರೆಸ್ ಸರ್ಕಾರದಿಂದ ಪ್ರತಿಭಟನೆ ಹಮ್ಮಿಕೊಳ್ಳಲಾಗಿದೆ. ಪ್ರತಿಭಟನೆಗೆ ವಿರೋಧ ಪಕ್ಷದ ಸಂಸದರಿಗೂ ಆಹ್ವಾನ ನೀಡಲಿದ್ದೇವೆ. ಈ ಸಮಯದಲ್ಲಿ ನಾವು ಅನಿವಾರ್ಯವಾಗಿ ಹೋರಾಟ ಮಾಡಬೇಕಿದೆ. ಕರ್ನಾಟಕ ಸರ್ಕಾರ ಮುಖ್ಯಮಂತ್ರಿಗಳ ನೇತೃತ್ವದಲ್ಲಿ 136+2 ಒಟ್ಟು 138 ಶಾಸಕರು, ಎಲ್ಲಾ ಪರಿಷತ್ ಸದಸ್ಯರು ಫೆ.6ರಂದು ದೆಹಲಿಗೆ ತಲುಪಿ, ಫೆ.7ರಂದು ದೆಹಲಿಯಲ್ಲಿ ಪ್ರತಿಭಟನೆ ನಡೆಸಲಿದ್ದೇವೆ. ನಮ್ಮ ಧ್ವನಿಯನ್ನು ಕೇಂದ್ರ ಸರ್ಕಾರಕ್ಕೆ ಮುಟ್ಟಿಸಲು ಮುಂದಾಗಿದ್ದೇವೆ. ಫೆ.7ರಂದು ಬೆಳಗ್ಗೆ 10 ಗಂಟೆಗೆ ನಮಗೆ ಅನುಮತಿ ನೀಡುವ ಸ್ಥಳದಲ್ಲಿ ಪ್ರತಿಭಟನೆ ಮಾಡುತ್ತೇವೆ ಎಂದು ಹೇಳಿದ್ದಾರೆ.

ಮೇಕೆದಾಟುಗೆ ಹೊಸ ಸಮಿತಿ ರಚಿಸಲು ತೀರ್ಮಾನ:
ಇದೇ ವೇಳೆ ಮೇಕೆದಾಟು ಯೋಜನೆ ವಿಚಾರವಾಗಿ ಕೇಳಿದ ಪ್ರಶ್ನೆಗೆ ಉತ್ತರಿಸಿ, ಮೇಕೆದಾಟು ವಿಚಾರವಾಗಿ ಕರ್ನಾಟಕಕ್ಕೆ ಹೊಸ ಆಯಾಮ ಶುರುವಾಗಿದೆ. ನಿನ್ನೆ ಸಭೆಯಲ್ಲಿ ಮತಗಳನ್ನು ಹಾಕಲಾಗಿದೆ. ತಾಂತ್ರಿಕ ಸಮಿತಿ ರಚನೆಗೆ ತೀರ್ಮಾನವಾಗಿದೆ. ನಮ್ಮ ನೀರು ನಮ್ಮ ಹಕ್ಕು. ಅದನ್ನು ಬಳಸಿಕೊಂಡು ಅವರ ಪಾಲಿನ ನೀರನ್ನು ಖಂಡಿತವಾಗಿಯೂ ನೀಡುತ್ತೇವೆ. ಈ ವಿಚಾರವಾಗಿ ನಾವು ಅವರಿಗೆ ಮನದಟ್ಟು ಮಾಡುತ್ತೇವೆ. ಕೇಂದ್ರ ಸರ್ಕಾರ ಕೂಡ ಪರಿಸರ ಇಲಾಖೆ ಅನುಮತಿ ನೀಡಿ ಸಹಕಾರ ನೀಡಬೇಕಾಗುತ್ತದೆ. ಎಲ್ಲಾ ಸಂಸದರು ಒಟ್ಟಾಗಿ ಧ್ವನಿ ಎತ್ತಲಿ ಎಂದು ಮನವಿ ಮಾಡುತ್ತೇನೆ ಎಂದು ನುಡಿದಿದ್ದಾರೆ.

TAGGED:bjpbudget 2024congressDK Shivakumarnarendra modiNew Delhisiddaramaiahಕಾಂಗ್ರೆಸ್ಡಿ.ಕೆ.ಶಿವಕುಮಾರ್ನರೇಂದ್ರ ಮೋದಿನವದೆಹಲಿಬಜೆಟ್‌ 2024ಬಿಜೆಪಿಸಿದ್ದರಾಮಯ್ಯ
Share This Article
Facebook Whatsapp Whatsapp Telegram

Cinema news

Malayalam director Ranjith
ನಟಿ ಮೇಲೆ ಲೈಂಗಿಕ ದೌರ್ಜನ್ಯ ಆರೋಪ – ಮಲಯಾಳಂ ನಿರ್ದೇಶಕ ರಂಜಿತ್ ಅರೆಸ್ಟ್
Cinema Latest Main Post National South cinema
vijay thalapathy
ನಟ ವಿಜಯ್‌ ವಿರುದ್ಧ ಪ್ರಕರಣ ದಾಖಲು
Cinema Latest South cinema Top Stories
Delhi Rain
ದೆಹಲಿ-ಎನ್‌ಸಿಆರ್‌ನ ಹಲವೆಡೆ ಭಾರೀ ಮಳೆ – ಯೆಲ್ಲೋ ಅಲರ್ಟ್ ಜಾರಿ
Cinema Latest National Top Stories
Rishabh Shetty
Chandanavana Film Critics Awards 2026 | ರಿಷಬ್ ಅತ್ಯುತ್ತಮ ನಟ, ಆಶಿಕಾ ರಂಗನಾಥ್ ಅತ್ಯುತ್ತಮ ನಟಿ
Bengaluru City Cinema Latest Sandalwood Top Stories

You Might Also Like

Sameer MD 2
Bengaluru City

ದೂತ ಎಂಡಿ ಸಮೀರ್‌ಗೆ ಹೈಕೋರ್ಟ್ ಫುಲ್ ಕ್ಲಾಸ್

Public TV
By Public TV
19 seconds ago
sanket s tomb
Crime

ಅನ್ಯಕೋಮಿನ ಅಪ್ರಾಪ್ತರಿಂದ ಹತ್ಯೆಯಾಗಿದ್ದ ಬಾಲಕನ ಸಮಾಧಿ ಒಡೆದ ಕಿಡಿಗೇಡಿಗಳು

Public TV
By Public TV
20 minutes ago
Pine Gas tanker LPG
Latest

ಹಾರ್ಮುಜ್‌ ಸಮುದ್ರ ಬಾಂಬ್‌ಗಳಿಂದ ತಪ್ಪಿಸಿ ಬದಲಿ ಮಾರ್ಗ ಬಳಸಿ ಭಾರತಕ್ಕೆ ಹಡಗು ಬಂದಿದ್ದೇಗೆ?

Public TV
By Public TV
28 minutes ago
forest officer demanding bribe from farmer in aldur Chikkamagaluru video viral
Chikkamagaluru

ಖರ್ಚಿಗೇನಾದ್ರೂ ಕೊಡೋದಾದ್ರೆ ಹೆಚ್ಚು ಬರಿತೀನಿ ಇಲ್ದಿದ್ರೆ ಇಲ್ಲ – ರೈತನ ಬಳಿ ಲಂಚಕ್ಕೆ ಬೇಡಿಕೆಯಿಟ್ಟ ಅರಣ್ಯಾಧಿಕಾರಿ ವಿಡಿಯೋ ವೈರಲ್‌

Public TV
By Public TV
51 minutes ago
Pradeep Eshwar
Bagalkot

ಬಿಜೆಪಿ ನಿಯೋಗದಿಂದ ಪ್ರದೀಪ್ ಈಶ್ವರ್ ವಿರುದ್ಧ ಚುನಾವಣಾ ಆಯೋಗಕ್ಕೆ ದೂರು

Public TV
By Public TV
51 minutes ago
President Murmu In Siddaganga Mutt
Districts

ಸಾಧು ಪರಂಪರೆಯ ಆಧ್ಯಾತ್ಮಿಕತೆಯಲ್ಲಿ ಶಿವಕುಮಾರ ಶ್ರೀಗಳು ಮೇಲ್ಪಂಕ್ತಿಯಲ್ಲಿರುತ್ತಾರೆ – ರಾಷ್ಟ್ರಪತಿ ಮುರ್ಮು

Public TV
By Public TV
1 hour ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?