Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಸರ್ಕಾರದ ನಿರ್ಲಕ್ಷ್ಯದಿಂದ ಮಂಗನಕಾಯಿಲೆಗೆ ಇಬ್ಬರು ಬಲಿ: ಆರ್. ಅಶೋಕ್ ವಾಗ್ದಾಳಿ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Bengaluru City | ಸರ್ಕಾರದ ನಿರ್ಲಕ್ಷ್ಯದಿಂದ ಮಂಗನಕಾಯಿಲೆಗೆ ಇಬ್ಬರು ಬಲಿ: ಆರ್. ಅಶೋಕ್ ವಾಗ್ದಾಳಿ

Bengaluru City

ಸರ್ಕಾರದ ನಿರ್ಲಕ್ಷ್ಯದಿಂದ ಮಂಗನಕಾಯಿಲೆಗೆ ಇಬ್ಬರು ಬಲಿ: ಆರ್. ಅಶೋಕ್ ವಾಗ್ದಾಳಿ

Public TV
Last updated: February 6, 2024 11:13 pm
Public TV
Share
4 Min Read
R ASHOK
SHARE

– ಪ್ರತಿದಿನ 10-15 ಮಂದಿಯಲ್ಲಿ ರೋಗ ಲಕ್ಷಣ

ಬೆಂಗಳೂರು: ಸರ್ಕಾರದ ನಿರ್ಲಕ್ಷ್ಯ ಮತ್ತು ಬೇಜವಾಬ್ದಾರಿತನದಿಂದ ಮಂಗನಕಾಯಿಲೆಗೆ (ಕ್ಯಾಸನೂರು ಫಾರೆಸ್ಟ್ ಡಿಸೀಸ್- KFD) ಇಬ್ಬರು ಬಲಿಯಾಗಿದ್ದು, ಮಲೆನಾಡು ಜಿಲ್ಲೆಗಳಲ್ಲಿ ರೋಗ ವ್ಯಾಪಕವಾಗಿ ಹರಡುತ್ತಿರುವುದರಿಂದ ಆತಂಕಕಾರಿ ಪರಿಸ್ಥಿತಿ ನಿರ್ಮಾಣವಾಗಿದೆ ಎಂದು ವಿಧಾನಸಭೆ ಪ್ರತಿಪಕ್ಷದ ನಾಯಕ ಆರ್. ಅಶೋಕ್ (R Ashok) ಆರೋಪಿಸಿದ್ದಾರೆ.

ಕಳೆದ ನವೆಂಬರ್ ತಿಂಗಳಿನಲ್ಲೇ ಮಲೆನಾಡು ಭಾಗದ ಅಲ್ಲಲ್ಲಿ ಕಾಯಿಲೆ ಕಾಣಿಸಿಕೊಂಡ ಬಗ್ಗೆ ವರದಿಯಾಗಿತ್ತು. ಮಾಧ್ಯಮಗಳಲ್ಲೂ ಈ ಕುರಿತು ಸುದ್ದಿ ಪ್ರಕಟವಾದರೂ ಸರ್ಕಾರ ಎಚ್ಚೆತ್ತುಕೊಳ್ಳಲಿಲ್ಲ. ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ವೈಫಲ್ಯವೇ ಕಾಯಿಲೆ ವ್ಯಾಪಕವಾಗಿ ಹರಡಲು ಕಾರಣ ಎಂದು ಆಕ್ರೋಶ ವ್ಯಕ್ತಪಡಿಸಿದರು. ಇದನ್ನೂ ಓದಿ: ಮೋದಿ-ಅಮಿತ್ ಶಾಗೆ ಕಿವಿ ಕೇಳಲ್ಲ, ನಿರ್ಮಲಾ ಸೀತಾರಾಮನ್‌ಗೆ ಕಣ್ಣು ಕಿವಿ ಎರಡೂ ಇಲ್ಲ: ರಾಮಲಿಂಗಾ ರೆಡ್ಡಿ

ರೋಗ ಹರಡುತ್ತಿದೆ ಎಂದು ಮಾಧ್ಯಮಗಳಲ್ಲಿ ವರದಿ ಪ್ರಕಟವಾದ ಮತ್ತು ಎರಡು ಸಾವು ಸಂಭವಿಸಿದ ಬಳಿಕ ಸುದೀರ್ಘ ನಿದ್ದೆಯಿಂದ ಎಚ್ಚೆತ್ತ ಆರೋಗ್ಯ ಇಲಾಖೆ ಮಾರ್ಗಸೂಚಿ ಹೊರಡಿಸಿತು. ಆ ಬಳಿಕವಷ್ಟೇ ಹಿರಿಯ ಅಧಿಕಾರಿಗಳು ಶಿವಮೊಗ್ಗಕ್ಕೆ ಧಾವಿಸಿ ಸಭೆ ನಡೆಸುವ ಶಾಸ್ತ್ರ ಮಾಡಿದ್ದಾರೆ. ಎರಡು ತಿಂಗಳ ಮೊದಲೇ ಎಚ್ಚೆತ್ತುಕೊಂಡಿದ್ದರೆ ಅಮಾಯಕ ಜೀವಗಳನ್ನು ಉಳಿಸಿಕೊಳ್ಳಬಹುದಿತ್ತು ಎಂದು ಪತ್ರಿಕಾ ಹೇಳಿಕೆಯಲ್ಲಿ ಇಲಾಖೆ ಕಾರ್ಯವೈಖರಿಗೆ ಕಿಡಿಕಾರಿದ್ದಾರೆ. ಇದನ್ನೂ ಓದಿ: ಅಜಿತ್‌ ಪವಾರ್‌ ನೇತೃತ್ವದ NCP ನಿಜವಾದ ಪಕ್ಷ: ಚುನಾವಣಾ ಆಯೋಗ

ಶಿವಮೊಗ್ಗ, ಉತ್ತರಕನ್ನಡ, ದಕ್ಷಿಣಕನ್ನಡ, ಚಿಕ್ಕಮಗಳೂರು ಮತ್ತು ಉಡುಪಿ ಮತ್ತು ಬೆಳಗಾವಿಯ ಕೆಲ ಪ್ರದೇಶಗಳಲ್ಲಿ ಬೇಸಿಗೆ ಸಂದರ್ಭದಲ್ಲಿ ಮಂಗನಕಾಯಿಲೆ ಕಾಣಿಸಿಕೊಳ್ಳುವುದು ವಾಡಿಕೆ. ಕಳೆದ 66 ವರ್ಷಗಳಿಂದ ಈ ರೋಗ ಕಾಡುತ್ತಿದೆ. ಇದು ಗೊತ್ತಿದ್ದರೂ ಇಲಾಖೆ ಕಾಲಹರಣ ಮಾಡಿದೆ. ಇದರಿಂದಾಗಿಯೇ ಇವತ್ತು ಆತಂಕಕಾರಿ ಪರಿಸ್ಥಿತಿ ಎದುರಿಸಬೇಕಾಗಿದೆ ಎಂದು ಅಭಿಪ್ರಾಯಪಟ್ಟರು. ಇದನ್ನೂ ಓದಿ: ಸಮಸ್ಯೆ ಏನು ಅಂತ ಅರ್ಥವಾಗ್ತಿಲ್ಲ: ‘ನಾಯಿ ಬಿಸ್ಕೆಟ್‌’ ಟೀಕೆಗೆ ರಾಹುಲ್‌ ಗಾಂಧಿ ಕಿಡಿ

ಈ ವರ್ಷ ಶಿವಮೊಗ್ಗ ಜಿಲ್ಲೆ ಹೊಸನಗರ ತಾಲೂಕಿನ ಅರಮನೆ ಕೊಪ್ಪದ ಯುವತಿ ಅನನ್ಯ (18) ಮತ್ತು ಚಿಕ್ಕಮಗಳೂರು ಜಿಲ್ಲೆಯ ಶೃಂಗೇರಿ ತಾಲೂಕಿನ ಧರೇಕೊಪ್ಪಗ್ರಾಮ ಪಂಚಾಯಿತಿ ವ್ಯಾಪ್ತಿಯ ಕೃಷಿಕ ಸುಬ್ಬಯ್ಯಗೌಡ (79) ಅವರು ಮಣಿಪಾಲದ ಕೆಎಂಸಿ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾರೆ. ಐವತ್ತಕ್ಕೂ ಹೆಚ್ಚು ಮಂದಿಯಲ್ಲಿ ರೋಗ ಕಾಣಿಸಿಕೊಂಡ ಬಗ್ಗೆ ವರದಿಗಳಿವೆ. ಉತ್ತರಕನ್ನಡ ಜಿಲ್ಲೆಯ ಸಿದ್ದಾಪುರ ಭಾಗ, ಶಿವಮೊಗ್ಗ ಜಿಲ್ಲೆಯ ಹೊಸನಗರ ತಾಲೂಕು, ಶೃಂಗೇರಿ ಮತ್ತು ಕೊಪ್ಪ ಭಾಗದ ಅನೇಕ ಗ್ರಾಮಗಳಲ್ಲಿ ಒಂದೇ ದಿನಕ್ಕೆ ಹತ್ತು-ಹದಿನೈದು ಮಂದಿಯಲ್ಲಿ ರೋಗದ ಲಕ್ಷಣಗಳು ಕಾಣಿಸಿಕೊಂಡು ಭೀತಿ ಮೂಡಿಸಿದೆ. ಅರಣ್ಯ ಮತ್ತು ಆರೋಗ್ಯ ಇಲಾಖೆ ಸಿಬ್ಬಂದಿ ಮುನ್ನೆಚ್ಚರಿಕೆ ಕ್ರಮವಾಗಿ ಯಾರೂ ಹೊರಗೆ ಹೋಗಬೇಡಿ ಅನ್ನುತ್ತಾರೆ. ಮಲೆನಾಡಿನ ಜನ ಸೌದೆ, ಸೊಪ್ಪು, ದರಗು, ದನಕರುಗಳ ಕಾರಣಕ್ಕೆ ಕಾಡುಮೇಡು ಸುತ್ತಾಡಲೇಬೇಕು,. ಇಷ್ಟಕ್ಕೂ ಕಾಫಿ, ಅಡಕೆ ತೋಟ, ಹೊಲಗದ್ದೆಗಳಿಗೆ ಕಾಲಿಡದಿರಲು ಸಾಧ್ಯವೇ ಎಂದು ಪ್ರಶ್ನಿಸಿದರು. ಇದನ್ನೂ ಓದಿ: ದೆಹಲಿ ಪ್ರತಿಭಟನೆ ಬಗ್ಗೆ ಕಾಂಗ್ರೆಸ್ ಜಾಹೀರಾತು – ರಾಜ್ಯ ಸರ್ಕಾರದ ವಿರುದ್ಧ ರಾಜಭವನಕ್ಕೆ ಬಿಜೆಪಿ ದೂರು

ಈ ಕೂಡಲೇ ಇಲಾಖೆ ವತಿಯಿಂದ ಆಂದೋಲನದ ಮಾದರಿಯಲ್ಲಿ ಮನೆ ಮನೆಗೆ ಲಸಿಕೆ ನೀಡಬೇಕು. ಸಂಶೋಧನಾ ಸಂಸ್ಥೆ ಮತ್ತು ಉತ್ಪಾದನಾ ಕಂಪನಿಗಳ ಜೊತೆ ಸಮಾಲೋಚನೆ ನಡೆಸಿ ರೋಗಕ್ಕೆ ಕಾರಣವಾಗಿರುವ ವೈರಸ್‌ನಲ್ಲಿ ಆಗಿರುವ ಬದಲಾವಣೆಗೆ ಅನುಗುಣವಾಗಿ ಪರಿಣಾಮಕಾರಿಯಾಗಿ ಕಾರ್ಯ ನಿರ್ವಹಿಸುವ ಲಸಿಕೆ ಕಂಡು ಹಿಡಿಯಲು ಅಗತ್ಯ ಕ್ರಮ ಕೈಗೊಳ್ಳಬೇಕು. ಆ ಲಸಿಕೆ ದೀರ್ಘ ಕಾಲ ಕಾರ್ಯ ನಿರ್ವಹಿಸುವಂತಿರಬೇಕು ಎಂದು ಆಗ್ರಹಿಸಿದರು. ಇದನ್ನೂ ಓದಿ: ಕೇಂದ್ರವನ್ನು ರಾಜ್ಯ ಸರ್ಕಾರದವರು ದೂರುವುದು ಸರಿಯಲ್ಲ, ಅಗತ್ಯವಿದ್ದಾಗಲೆಲ್ಲ ನೆರವು ನೀಡಿದೆ: ಪ್ರಜ್ವಲ್ ರೇವಣ್ಣ

ಬೆಂಗಳೂರು ಅಥವಾ ಶಿವಮೊಗ್ಗ ನಗರದಲ್ಲಿ ಕುಳಿತು ಸಭೆಗಳನ್ನು ನಡೆಸಿದರೆ ಪ್ರಯೋಜನ ಆಗುವುದಿಲ್ಲ. ಎಲ್ಲ ಅಧಿಕಾರಿ ಮತ್ತು ಸಿಬ್ಬಂದಿ ಫೀಲ್ಡಿಗಿಳಿದು ಸಮರೋಪಾದಿಯಲ್ಲಿ ಕಾರ್ಯ ನಿರ್ವಹಿಸಬೇಕು. ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಅವರು ಮಲೆನಾಡು ಜಿಲ್ಲೆಗಳಿಗೆ ಭೇಟಿ ನೀಡಿ ಪರಿಸ್ಥಿತಿಯನ್ನು ಅವಲೋಕಿಸುವ ಕೆಲಸ ಮಾಡಬೇಕು ಎಂದು ಒತ್ತಾಯಿಸಿದರು. ಇದನ್ನೂ ಓದಿ: ನಮ್ಮ ಹಕ್ಕು ಕೇಳಲು ದೆಹಲಿಯಲ್ಲಿ ಪ್ರತಿಭಟನೆ: ಸತೀಶ್ ಜಾರಕಿಹೊಳಿ

ರೋಗದ ಕಾಲಾವಧಿ 3 ರಿಂದ 8 ದಿನ ಆಗಿರುತ್ತದೆ. ಹೀಗಾಗಿ ರೋಗದ ಲಕ್ಷಣಗಳಾದ ವಾಕರಿಕೆ, ವಾಂತಿ, ಸ್ನಾಯು ಬಿಗಿತ, ಮಾನಸಿಕ ಅಸ್ವಸ್ಥತೆ, ನಡುಕ, ದೃಷ್ಟಿ ಮಂದವಾಗುವುದು ಹಾಗೂ ತೀವ್ರ ತಲೆನೋವು ಪೈಕಿ ಯಾವುದೇ ಲಕ್ಷಣ ಕಾಣಿಸುತ್ತಿದ್ದಂತೆ ಅವರನ್ನು ತಾಲೂಕು ಅಥವಾ ಜಿಲ್ಲಾಸ್ಪತ್ರೆಗೆ ಕರೆದೊಯ್ದು ಚಿಕಿತ್ಸೆ ಕೊಡಿಸುವ ಕೆಲಸ ಆಗಬೇಕು. ಅದಕ್ಕೆ ಮುಂಚೆ ಕಾಡಿನಂಚಿನ ಗ್ರಾಮಗಳಲ್ಲಿ ಅರಿವು ಮೂಡಿಸುವುದು, ಲಸಿಕೆ ಹಾಕುವುದು ಮತ್ತು ರೋಗ ತಪಾಸಣೆ ಮಾಡುವ ಕೆಲಸ ಆಗಬೇಕು ಎಂದು ಸಲಹೆ ನೀಡಿದರು. ಇದನ್ನೂ ಓದಿ: ಯಡಿಯೂರಪ್ಪರಿಂದ ಭಾರತ್ ಬ್ರ್ಯಾಂಡ್ ಅಕ್ಕಿ ವಿತರಣೆಗೆ ಚಾಲನೆ

ಒಂದು ವೇಳೆ ಸಿಬ್ಬಂದಿ ಕೊರತೆ ಇದ್ದರೆ ಮೆಡಿಕಲ್ ಕಾಲೇಜು ಆಡಳಿತ ಮಂಡಳಿಗಳ ಜೊತೆ ಮಾತುಕತೆ ನಡೆಸಿ ಸ್ನಾತಕೋತ್ತರ ವೈದ್ಯ ವಿಭಾಗದ ವಿದ್ಯಾರ್ಥಿಗಳನ್ನು ಈ ಕೆಲಸಕ್ಕೆ ಬಳಸಿಕೊಳ್ಳಬೇಕು ಎಂದರು. ಬೆಂಗಳೂರಿನ ಆರೋಗ್ಯ ಭವನದಲ್ಲಿ ಠಿಕಾಣಿ ಹೂಡಿರುವ ಹಿರಿಯ ಅಧಿಕಾರಿಗಳನ್ನು ತಕ್ಷಣ ನೋಡಲ್ ಅಧಿಕಾರಿಗಳಾಗಿ ಮೂರು ಜಿಲ್ಲೆಗಳಿಗೆ ನೇಮಕ ಮಾಡಿ ಮೇಲುಸ್ತುವಾರಿ ನೋಡಿಕೊಳ್ಳಲು ಸೂಚನೆ ನೀಡಬೇಕು ಎಂದು ತಿಳಿಸಿದರು. ಇದನ್ನೂ ಓದಿ: ಮೈಸೂರು-ಕೊಡಗು ಲೋಕಸಭಾ ಕ್ಷೇತ್ರದಿಂದ ಆಭ್ಯರ್ಥಿಯಾಗಿ ಸ್ಪರ್ಧಿಸಲು ವಿಶ್ವನಾಥ್ ಸಿದ್ಧತೆ

ಪರಿಹಾರ ಕೊಡಿ:
ಈಗಾಗಲೇ ಕೆಎಫ್‌ಡಿಗೆ ಇಬ್ಬರು ಅಮಾಯಕರು ಬಲಿಯಾಗಿದ್ದಾರೆ. ಇದಕ್ಕೆ ಇಲಾಖೆಯ ನಿರ್ಲಕ್ಷ್ಯ ಕಾರಣ. ಹೀಗಾಗಿ ಸಾವಿನ ನೈತಿಕ ಹೊಣೆ ಹೊತ್ತು ಮೃತರ ಕುಟುಂಬಗಳಿಗೆ ತಲಾ ಹತ್ತು ಲಕ್ಷ ರೂ. ಪರಿಹಾರ ನೀಡಬೇಕು. ಆ ಕುಟುಂಬದ ಒಬ್ಬ ವ್ಯಕ್ತಿಗೆ ಸರ್ಕಾರದ ಉದ್ಯೋಗ ನೀಡಬೇಕು ಮತ್ತು ರೋಗಿಗಳ ಚಿಕಿತ್ಸಾ ವೆಚ್ಚವನ್ನು ಸರ್ಕಾರವೇ ಭರಿಸಬೇಕು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಆಗ್ರಹಿಸಿದರು. ಇದನ್ನೂ ಓದಿ: ಉತ್ತರಾಖಂಡ ವಿಧಾನಸಭೆಯಲ್ಲಿ ಏಕರೂಪದ ನಾಗರಿಕ ಸಂಹಿತೆ ಮಸೂದೆ ಮಂಡನೆ

TAGGED:bengalurubjpcongressKFDr ashokಆರ್ ಅಶೋಕ್ಕಾಂಗ್ರೆಸ್ಕೆಎಫ್‍ಡಿಬಿಜೆಪಿಬೆಂಗಳೂರುಮಂಗನ ಕಾಯಿಲೆ
Share This Article
Facebook Whatsapp Whatsapp Telegram

Cinema news

rashmika vijay dkshivakumar 1
ವಿಜಯ್, ರಶ್ಮಿಕಾ ಆರತಕ್ಷತೆಗೆ ತೆರಳಿ ಶುಭಕೋರಿದ ಡಿಕೆ ಶಿವಕುಮಾರ್
Cinema Latest Top Stories
honey singh 1
ನಾನು ದುಬೈನಲ್ಲಿ ಸೇಫ್ ಆಗಿದ್ದೇನೆ: ವದಂತಿಗಳಿಗೆ ಕಿವಿಗೊಡಬೇಡಿ ಎಂದ ಹನಿ ಸಿಂಗ್
Cinema Latest National Top Stories
Toxic
ಕೊನೇ ಕ್ಷಣದಲ್ಲಿ ಫ್ಯಾನ್ಸ್‌ಗೆ ಶಾಕ್ ಕೊಟ್ಟ ಯಶ್ – ಮಾ.19ಕ್ಕೆ ರಿಲೀಸ್‌ ಆಗಲ್ಲ ʻಟಾಕ್ಸಿಕ್ʼ – ಮತ್ಯಾವಾಗ?
Bollywood Cinema Latest Main Post Sandalwood
mandana Karimi
ಇಲ್ಲಿನ ಜನ ನನ್ನನ್ನ ತುಚ್ಛವಾಗಿ ನಿಂದಿಸಿದ್ದಾರೆ, ಆಡಳಿತ ಬದಲಾದ ಬಳಿಕ ಇರಾನ್‌ಗೆ ತೆರಳುತ್ತೇನೆ – ನಟಿ ಮಂದನಾ ಕರಿಮಿ
Bollywood Cinema Latest National Top Stories

You Might Also Like

Devanahalli Businessman Robbed 20 lakhs by showing gold desire at low price
Bengaluru City

ಕಡಿಮೆ ಬೆಲೆಗೆ ಚಿನ್ನದ ಆಸೆ ತೋರಿಸಿ ಉದ್ಯಮಿಯಿಂದ 20 ಲಕ್ಷ ದರೋಡೆ

Public TV
By Public TV
42 minutes ago
Belagavi Police 2
Belgaum

ಕಾರನ್ನೇ ಬಾರ್‌ ಮಾಡಿಕೊಂಡವರಿಗೆ ಬೆಳಗಾವಿ ಪೊಲೀಸರಿಂದ ಶಾಕ್‌

Public TV
By Public TV
2 hours ago
Commercial LPG
Latest

ಯುದ್ಧದ ಎಫೆಕ್ಟ್‌ – ವಾಣಿಜ್ಯ LPG ಸಿಲಿಂಡರ್‌ಗಳಿಗೆ ನೀಡಲಾಗಿದ್ದ ರಿಯಾಯಿತಿ ರದ್ದು

Public TV
By Public TV
2 hours ago
V Somanna Sister Mahadevamma Death
Districts

ಕೇಂದ್ರ ಸಚಿವ ವಿ.ಸೋಮಣ್ಣ ಸಹೋದರಿ ನಿಧನ

Public TV
By Public TV
2 hours ago
Hassan Loka Raid 2
Districts

ಹಾಸನ ನಗರಪಾಲಿಕೆ ಎಇಇ ಮನೆ ಮೇಲೆ ʻಲೋಕಾʼ ದಾಳಿ; ಬಾಗಿಲು ತೆರೆಯದೇ ಸತ್ಯನಾರಾಯಣ ಕಳ್ಳಾಟ

Public TV
By Public TV
2 hours ago
Lokayukta Raid Bengaluru
Bengaluru City

ಭ್ರಷ್ಟರಿಗೆ ಬಿಸಿ ಮುಟ್ಟಿಸಿದ ಲೋಕಾಯುಕ್ತ – ಬೆಂಗಳೂರಿನ 4 ಕಡೆ ಸೇರಿ ರಾಜ್ಯದ ಹಲವೆಡೆ ದಾಳಿ

Public TV
By Public TV
3 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?