Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಪ್ರಜಾಪ್ರಭುತ್ವ ಅಪಾಯದಲ್ಲಿದೆ, ಬಿಜೆಪಿ ಸರ್ಕಾರ ಇಲ್ಲದ ರಾಜ್ಯಕ್ಕೆ ಅನುದಾನ ಇಲ್ಲ: ಖರ್ಗೆಯಿಂದ ಕಪ್ಪು ಪತ್ರ ಬಿಡುಗಡೆ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Latest | ಪ್ರಜಾಪ್ರಭುತ್ವ ಅಪಾಯದಲ್ಲಿದೆ, ಬಿಜೆಪಿ ಸರ್ಕಾರ ಇಲ್ಲದ ರಾಜ್ಯಕ್ಕೆ ಅನುದಾನ ಇಲ್ಲ: ಖರ್ಗೆಯಿಂದ ಕಪ್ಪು ಪತ್ರ ಬಿಡುಗಡೆ

Latest

ಪ್ರಜಾಪ್ರಭುತ್ವ ಅಪಾಯದಲ್ಲಿದೆ, ಬಿಜೆಪಿ ಸರ್ಕಾರ ಇಲ್ಲದ ರಾಜ್ಯಕ್ಕೆ ಅನುದಾನ ಇಲ್ಲ: ಖರ್ಗೆಯಿಂದ ಕಪ್ಪು ಪತ್ರ ಬಿಡುಗಡೆ

Public TV
Last updated: February 8, 2024 12:30 pm
Public TV
Share
2 Min Read
mallikarjun kharge black paper
SHARE

ನವದೆಹಲಿ: ಎಲ್ಲಿ ಬಿಜೆಪಿ ಸರ್ಕಾರ (BJP Government) ಇಲ್ಲವೋ ಆ ರಾಜ್ಯಕ್ಕೆ ಅನುದಾನ ನೀಡುವುದಿಲ್ಲ. ನೆಹರು ಕಾಲದಲ್ಲಿ ನಿರ್ಮಾಣವಾದ ಸಂಸ್ಥೆಯಿಂದ ಜನರಿಗೆ ಉದ್ಯೋಗ ಸಿಗುತ್ತಿದೆ. ಮೋದಿ ಸರ್ಕಾರದಲ್ಲಿ ಸ್ಥಾಪನೆಯಾದ ಸಂಸ್ಥೆಗಳು ಅಥವಾ ಉದ್ಯೋಗ ಸೃಷ್ಟಿ ಮಾಡಿಲ್ಲ ಎಂದು ರಾಜ್ಯಸಭೆಯ ಪ್ರತಿಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ (Mallikarjun Kharge) ಹೇಳಿದ್ದಾರೆ.

ಕೇಂದ್ರ ಸರ್ಕಾರ ಶ್ವೇತ ಪತ್ರ (White Paper) ಬಿಡುಗಡೆ ಮಾಡುವ ಮೊದಲೇ ತಮ್ಮ ನಿವಾಸದಲ್ಲಿ ಕಪ್ಪು ಪತ್ರದ (Black Paper) ಪೋಸ್ಟರ್‌ ರಿಲೀಸ್‌ ಮಾಡಿ ಮೋದಿ ಸರ್ಕಾರದ (Modi Government) ವಿರುದ್ಧ ಕಿಡಿಕಾರಿದರು.

#WATCH | Congress President Mallikarjun Kharge says, "We are raising the main issue of unemployment, which the BJP never talks about…There is discrimination being done with non-BJP states like Kerala, Karnataka, Telangana…" pic.twitter.com/9kKT9qEvZ5

— ANI (@ANI) February 8, 2024

ಖರ್ಗೆ ಹೇಳಿದ್ದೇನು?
ಬೆಲೆ ಏರಿಕೆ ಅತಿದೊಡ್ಡ ಸಮಸ್ಯೆಯಾಗಿದೆ. ಅಗತ್ಯ ವಸ್ತುಗಳ ಮೇಲೆ ಬೆಲೆ ನಿಯಂತ್ರಣ ಮಾಡಬೇಕು ಎಂಬ ಕಾನೂನು ಇದೆ. ಆದರೆ ಸರ್ಕಾರದ ಕೆಲವು ಜನರು ಉದ್ದೇಶ ಪೂರ್ವಕವಾಗಿ ಬೆಲೆ ಏರಿಸುತ್ತಿದ್ದಾರೆ.

ರೈತರ ಆದಾಯವನ್ನು ದ್ವಿಗುಣ ಮಾಡುತ್ತೇವೆ ಎಂದು ಹೇಳಿ ಕೃಷಿ ಕಾಯ್ದೆ ತಂದರು. ಒಂದು ವರ್ಷ ರೈತರ ಪ್ರತಿಭಟನೆಯ ನಂತರ ಮೂರು ಕಾನೂನು ವಾಪಸ್ ಪಡೆದರು. ಕೃಷಿ ಬಳಕೆ ವಸ್ತುಗಳ ಮೇಲೆ ಜಿಎಸ್‌ಟಿ ಹಾಕಲಾಗಿದೆ. ಪ್ರತಿ ವರ್ಷ ಎರಡು ಕೋಟಿ ಉದ್ಯೋಗ ನೀಡಬೇಕಿತ್ತು ನೀಡಿಲ್ಲ. ನೆಹರು, ಇಂದಿರಾ ಗಾಂಧಿ ಕಾಲಕ್ಕೆ ಹೋಲಿಕೆ ಮಾಡುತ್ತಿದ್ದಾರೆ. ನೀವು ಏನು ಮಾಡುತ್ತಿದ್ದೀರಿ ಎಂಬುದನ್ನು ಹೇಳಬೇಕು. ಅದನ್ನು ಬಿಟ್ಟು ಬರೀ ಹೋಲಿಕೆ ಮಾಡುತ್ತಿದ್ದೀರಿ.  ಇದನ್ನೂ ಓದಿ: 48 ವರ್ಷಗಳ ಬಳಿಕ ದಿಢೀರ್‌ ಕಾಂಗ್ರೆಸ್‌ ತೊರೆದ ಮಾಜಿ ಸಚಿವ ಬಾಬಾ ಸಿದ್ದಿಕ್

ಸಾಮಾಜಿಕ ನ್ಯಾಯ ನೀಡುವಲ್ಲಿ ಸರ್ಕಾರ ವಿಫಲವಾಗಿದೆ. ಬುಡಕಟ್ಟು ಸಮುದಾಯದ ವ್ಯಕ್ತಿಯನ್ನು ರಾಷ್ಟ್ರಪತಿ ಮಾಡಲಾಗಿದೆ ಎಂದು ಹೇಳಿಕೊಳ್ಳುತ್ತಾರೆ. ಇದು ಎಲ್ಲಾ ಸರ್ಕಾರದಲ್ಲೂ ಆಗುತ್ತದೆ.

ದೊಡ್ಡ ಉದ್ಯಮಿಗಳ ಸಾಲ ಮನ್ನಾ ಮಾಡಲಾಗುತ್ತಿದೆ. ಮೋದಿ ಸರ್ಕಾರದಲ್ಲಿ ಪ್ರಜಾಪ್ರಭುತ್ವ ವ್ಯವಸ್ಥೆ ಅಪಾಯದಲ್ಲಿದೆ. ಚುನಾವಣೆ ಬಾಂಡ್‌ಗಳ ಮೂಲಕ ಹಣ ವಸೂಲಿ ಮಾಡಲಾಗುತ್ತಿದೆ. ಇಡಿ, ಸಿಬಿಐ ಬಿಟ್ಟು ಹೆದರಿಸಲಾಗುತ್ತಿದೆ, ಒತ್ತಡ ಹೇರಲಾಗುತ್ತಿದೆ. ಮೊದಲು ಯಾಕೆ ಇಷ್ಟು ಪ್ರಮಾಣದ ಹಣ ಬರುತ್ತಿರಲಿಲ್ಲ? ಈಗ ಯಾಕೆ ಹಣ ಹೆಚ್ಚು ಬಿಜೆಪಿಗೆ ಬರುತ್ತಿದೆ? ಕೋಟ್ಯಂತರ ರೂ. ಹಣ ನೀಡಿ ಕಾಂಗ್ರೆಸ್ ಶಾಸಕರನ್ನು ಬಿಜೆಪಿ ಸೇರ್ಪಡೆ ಮಾಡಿಕೊಳ್ಳಲಾಗುತ್ತಿದೆ.

modi rajya sabha speech 1

ನನ್ನ ವಿರುದ್ಧವೂ ದೂರು ದಾಖಲಿಸುವ ಕೆಲಸ ಮಾಡಲಾಗುತ್ತಿದೆ. ನನಗೂ ಅವಹೇಳನ ಮಾಡುವುದು, ಬೆದರಿಸುವ ಪ್ರಯತ್ನ ನಡೆಯುತ್ತಿದೆ. ನಾನು ಯಾವುದಕ್ಕೂ ಹೆದರುವುದಿಲ್ಲ. ನಾನು ನನ್ನ ಅಪ್ಪ ಇಬ್ಬರೇ ಬದುಕಿದ್ದು, ಇಲ್ಲಿಯವರೆಗೂ ಬಂದಿದ್ದೇನೆ, ಏನೇ ಆದರೂ ಹೆದರುವುದಿಲ್ಲ. ದಲಿತನಾಗಿ ಇಲ್ಲಿಯವರೆಗೂ ಬಂದಿದ್ದೇನೆ, ನನ್ನ ಗೌರವದಿಂದ ಕಾಣುತ್ತಾರೆ.

ರಾಹುಲ್ ಗಾಂಧಿ, ಸೋನಿಯಗಾಂಧಿ, ಪ್ರಿಯಾಂಕಾ ಗಾಂಧಿ ಎಲ್ಲರನ್ನು ಅವಹೇಳನ ಮಾಡುತ್ತಾರೆ. ಪ್ರಧಾನಮಂತ್ರಿ ಹುದ್ದೆಗೆ ಒಂದು ಗೌರವವಿದೆ. ನಮ್ಮ ಸಾಧನೆಗಳನ್ನು ಹೇಳಬೇಕು, ವಿರೋಧ ಪಕ್ಷದ ನಾಯಕರನ್ನು ಅವಹೇಳನ ಮಾಡಬಾರದು.  ಇದನ್ನೂ ಓದಿ: ಜೆಡಿಎಸ್‌ ತೊರೆದು ಬಿಜೆಪಿ ಸೇರಿದ್ದ ನಾರಾಯಣ ಗೌಡ ಕಾಂಗ್ರೆಸ್‌ ಸೇರ್ಪಡೆ?

ತೆರಿಗೆ ಅನ್ಯಾಯದ ಇವರದೇ ಪಕ್ಷದವರು ಮಾತನಾಡಿದರೆ ಅದು ದೇಶ ಒಡೆಯುವ ಮಾತಲ್ಲ. ಇದೇ ಮಾತು ಬೇರೆ ನಾಯಕರು ಹೇಳಿದರೆ ದೇಶ ಒಡೆಯುವ ಮಾತು. ಮುಖ್ಯಮಂತ್ರಿಯಾಗಿದ್ದಾಗ ದೇಶ ಒಡೆದವರು ಯಾರು? ದೇಶ ಒಡೆಯುವ ಭಾಷಣ ಮಾಡುವುದು ಯಾರು? ರಾಜ್ಯಪಾಲರನ್ನು ಸರ್ವಾಧಿಕಾರಿಯಂತೆ ವರ್ತಿಸಲು ಬಿಟ್ಟಿದ್ದಾರೆ. ರಾಜ್ಯ ಸರ್ಕಾರ ಫೈಲ್‌ಗಳನ್ನು ಕ್ಲಿಯರ್ ಮಾಡದೇ ಕಿರುಕುಳ ನೀಡುವ ಪ್ರಯತ್ನ ಮಾಡಲಾಗುತ್ತಿದೆ. ಉಚಿತ ರೇಷನ್ ನೀಡುವುದಾಗಿ ಹೇಳುತ್ತಾರೆ. ಆದರೆ ಆ ಕಾನೂನು ಮಾಡಿದ್ದು ಕಾಂಗ್ರೆಸ್.

 

TAGGED:bjpcongresskarnatakamallikarjun khargenarendra modipoliticsಕರ್ನಾಟಕಕಾಂಗ್ರೆಸ್ನರೇಂದ್ರ ಮೋದಿಬಿಜೆಪಿಮಲ್ಲಿಕಾರ್ಜುನ ಖರ್ಗೆ
Share This Article
Facebook Whatsapp Whatsapp Telegram

Cinema news

Delhi Rain
ದೆಹಲಿ-ಎನ್‌ಸಿಆರ್‌ನ ಹಲವೆಡೆ ಭಾರೀ ಮಳೆ – ಯೆಲ್ಲೋ ಅಲರ್ಟ್ ಜಾರಿ
Cinema Latest National Top Stories
Rishabh Shetty
Chandanavana Film Critics Awards 2026 | ರಿಷಬ್ ಅತ್ಯುತ್ತಮ ನಟ, ಆಶಿಕಾ ರಂಗನಾಥ್ ಅತ್ಯುತ್ತಮ ನಟಿ
Bengaluru City Cinema Latest Sandalwood Top Stories
lyari in pakistan dhurandhar
ಧುರಂಧರ್‌ ಸಿನಿಮಾದಲ್ಲಿ ನಮಗೆ 500 ಕೋಟಿ ಕೊಡಿ – ಹಿಟ್‌ ಬೆನ್ನಲ್ಲೇ ಪಾಲು ಕೇಳಿದ ಪಾಕ್‌
Cinema Latest Top Stories
Vijay Deverakonda Rashmika Mandanna
ಮದ್ವೆ ಬಳಿಕ ಬಳಿಕ ಒಟ್ಟಿಗೆ ಶೂಟಿಂಗ್‌ಗೆ ತೆರಳಿದ ವಿರೋಶ್ ಜೋಡಿಗೆ ಅದ್ಧೂರಿ ಸ್ವಾಗತ
Cinema Latest Sandalwood South cinema Top Stories

You Might Also Like

Vijayapura Bus Fire
Crime

ಲವ್ ಬ್ರೇಕಪ್ ಆಗಿದ್ದಕ್ಕೆ ಬಸ್ಸಿಗೆ ಡಿಕ್ಕಿ ಹೊಡೆದು ಸೂಸೈಡ್ – ಬೈಕ್ ಸವಾರ ಸಜೀವ ದಹನ, ಹೊತ್ತಿಯುರಿದ KSRTC

Public TV
By Public TV
25 minutes ago
ABVP Protest
Bengaluru City

ಮೂಲ ಸೌಕರ್ಯಗಳ ಕೊರತೆ, ಬ್ರಹ್ಮಾಂಡ ಭ್ರಷ್ಟಾಚಾರ ಆರೋಪ – ಮಹಾರಾಣಿ ಕ್ಲಸ್ಟರ್ ವಿವಿ ವಿರುದ್ಧ ಪ್ರತಿಭಟನೆ

Public TV
By Public TV
48 minutes ago
belthangady bus door
Dakshina Kannada

ಚಲಿಸುತ್ತಿದ್ದ ಬಸ್‌ನಿಂದ ಏಕಾಏಕಿ ಡೋರ್ ಓಪನ್ – ಕೆಳಗೆ ಬಿದ್ದ ವಿದ್ಯಾರ್ಥಿನಿಯರು

Public TV
By Public TV
49 minutes ago
Garbage Auto
Bengaluru City

ನಾಳೆಯಿಂದ ಘನತ್ಯಾಜ್ಯ ನಿರ್ವಹಣೆಗೆ ಹೊಸ ನಿಯಮ ಜಾರಿ – ಉಲ್ಲಂಘಿಸಿದ್ರೆ GBAಯಿಂದ ದಂಡಾಸ್ತ್ರ

Public TV
By Public TV
1 hour ago
ಸಾಂದರ್ಭಿಕ ಚಿತ್ರ
Bagalkot

ಮಧ್ಯಪ್ರಾಚ್ಯದಲ್ಲಿ ಯುದ್ಧದಿಂದ ʻಗ್ಯಾಸ್‌ ಟ್ರಬಲ್‌ʼ – ರಾಜ್ಯದಲ್ಲಿ ಎಲ್‌ಪಿಜಿ ಸಿಲಿಂಡರ್‌ ಹಾಹಾಕಾರಕ್ಕೆ ತತ್ತರಿಸಿದ ಜನ

Public TV
By Public TV
2 hours ago
Hormuz Toll
Latest

ಹಾರ್ಮುಜ್‌ ಜಲಸಂಧಿಯಲ್ಲಿ ಟೋಲ್‌ ಸಂಗ್ರಹಿಸುವ ಯೋಜನೆಗೆ ಇರಾನ್‌ ಒಪ್ಪಿಗೆ – ಅಮೆರಿಕ, ಇಸ್ರೇಲ್‌ ಹಡಗುಗಳಿಗೆ ನಿಷೇಧ

Public TV
By Public TV
2 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?