ಗೃಹ ಇಲಾಖೆ ಕಾರ್ಯದರ್ಶಿಗೆ ನಿಂದನೆ- ದೆಹಲಿ ಪೊಲೀಸರಿಂದ ಆರೋಪಿ ಬಂಧನ

Public TV
1 Min Read
POLICE JEEP 1

ತುಮಕೂರು: ಕೇಂದ್ರ ಗೃಹ ಇಲಾಖೆ ಕಾರ್ಯದರ್ಶಿಗೆ ಕರೆ ಮಾಡಿ ನಿಂದನೆ ಮಾಡಿದ ಆರೋಪದ ಮೇಲೆ ಪಾವಗಡ ತಾಲೂಕಿನ ವೆಂಕಟಾಪುರದ ವ್ಯಕ್ತಿಯೊಬ್ಬನನ್ನು ದೆಹಲಿ ಪೊಲೀಸರು (Delhi Police) ಬಂಧಿಸಿದ್ದಾರೆ.

ಬಂಧಿತ ಆರೋಪಿಯನ್ನು ಗ್ರಾಮದ ನಿರಂಜನ್ (40) ಎಂದು ಗುರುತಿಸಲಾಗಿದೆ. ಕಳೆದ ಕೆಲ ದಿನಗಳ ಹಿಂದೆ ಕೇಂದ್ರ ಗೃಹ ಇಲಾಖೆ ಕಾರ್ಯದರ್ಶಿಗೆ ಆರೋಪಿ ಫೋನ್ ಮಾಡಿ ನಿಂದನೆ ಮಾಡಿದ್ದ ಎಂದು ಆರೋಪಿಸಲಾಗಿದೆ. ಈ ಹಿನ್ನೆಲೆ ಆತನನ್ನ ಹುಡುಕಿಕೊಂಡು ದೆಹಲಿ ಪೊಲೀಸರು ಬಂದಿದ್ದು, ಇದೀಗ ಆತನನ್ನು ಬಂಧಿಸಿದ್ದಾರೆ. ಇದನ್ನೂ ಓದಿ: ತಮಿಳುನಾಡಿಗೆ ಕಾವೇರಿ ನೀರು ಹರಿಸಲು CWRC ಶಿಫಾರಸು

ಎಂಜಿನಿಯರ್ ಪದವೀಧರನಾಗಿರುವ ನಿರಂಜನ್, ಕೆಲಸವಿಲ್ಲದೇ ನಿರುದ್ಯೋಗಿಯಾಗಿದ್ದು ಸದಾ ಮನೆಯಲ್ಲೇ ಇರುತ್ತಿದ್ದ ಎಂಬ ಮಾಹಿತಿ ದೊರಕಿದೆ. ಕೆಲಸ ಸಿಗದ ಹಿನ್ನೆಲೆ ಮನನೊಂದು ಕೇಂದ್ರ ಗೃಹ ಇಲಾಖೆ ಕಾರ್ಯದರ್ಶಿಗೆ ನಿಂದನೆ ಮಾಡಿದ್ದಾನೆ ಎನ್ನಲಾಗಿದೆ. ನಿರಂಜನ್ ನಿಂದನೆ ಮಾಡಿರುವ ಮಾಹಿತಿ ಬಗ್ಗೆ ಪೊಲೀಸರು ಯಾವುದೇ ಸುಳಿವು ಬಿಟ್ಟು ಕೊಟ್ಟಿಲ್ಲ.

ಆರೋಪಿಯ ಸ್ನೇಹಿತರು ಹಾಗೂ ಗ್ರಾಮಸ್ಥರ ಬಳಿ ಸ್ಥಳೀಯ ಪೊಲೀಸರ ಸಹಾಯದಿಂದ ಮಾಹಿತಿ ಕಲೆ ಹಾಕಲಾಗುತ್ತಿದೆ. ಇದನ್ನೂ ಓದಿ: ಅಪಘಾತದಿಂದ ಯುವಕನ ಸಾವಿಗೆ ನಾನೇ ಕಾರಣ ಎಂದು ಆತ್ಮಹತ್ಯೆಗೆ ಶರಣಾದ!

Share This Article