Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಸನ್ಯಾಸಿಗಳು ಧ್ಯಾನಿಸ್ತಿದ್ದ ಕೂಡ್ಲು ತೀರ್ಥ ಫಾಲ್ಸ್‌ಗೆ ಭೇಟಿ ಕೊಟ್ಟು ಲೈಫ್ ಎಂಜಾಯ್ ಮಾಡಿ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | ಸನ್ಯಾಸಿಗಳು ಧ್ಯಾನಿಸ್ತಿದ್ದ ಕೂಡ್ಲು ತೀರ್ಥ ಫಾಲ್ಸ್‌ಗೆ ಭೇಟಿ ಕೊಟ್ಟು ಲೈಫ್ ಎಂಜಾಯ್ ಮಾಡಿ

Districts

ಸನ್ಯಾಸಿಗಳು ಧ್ಯಾನಿಸ್ತಿದ್ದ ಕೂಡ್ಲು ತೀರ್ಥ ಫಾಲ್ಸ್‌ಗೆ ಭೇಟಿ ಕೊಟ್ಟು ಲೈಫ್ ಎಂಜಾಯ್ ಮಾಡಿ

Public TV
Last updated: February 15, 2024 11:11 pm
Public TV
Share
3 Min Read
KUDLU THEERTHA 3
SHARE

ಕೆಲಸದ ಒತ್ತಡ, ನಗರದ ಜಂಜಾಟದಿಂದ ಮನಸ್ಸು ಭಾರವಾದಾಗ ಕೆಲವೊಮ್ಮೆ ಮೊಬೈಲ್ ಎಲ್ಲಾ ಬಿಟ್ಟು, ಯಾರ ಸಂಪರ್ಕಕ್ಕೂ ಸಿಗದೆ ನೆಮ್ಮದಿಯಾಗಿ ಎಲ್ಲಾದರೂ ಹೋಗಿ ಒಂದೆರಡು ದಿನ ಕಳೆದು ಫ್ರೆಶ್ ಆಗಿಬಿಡಬೇಕು ಅನಿಸುವುದು ಸಹಜ. ಇಂತಹ ಸಂದರ್ಭಗಳಲ್ಲಿ ಕೆಲವರು ದೇವಸ್ಥಾನಗಳ ಭೇಟಿಯನ್ನು ಬಯಸಿದರೆ ಇನ್ನೂ ಕೆಲವರು ಗೆಳೆಯರ ಬಳಗದೊಂದಿಗೆ ಚಾರಣವನ್ನು ಆಯ್ಕೆ ಮಾಡುತ್ತಾರೆ. ಈ ಚಾರಣ ಮಾಡಲು ಕರಾವಳಿ ಭಾಗದಲ್ಲಿ ಸಾಕಷ್ಟು ಸ್ಥಳಗಳಿವೆ. ಇಂಥವುಗಳಲ್ಲಿ ಕೂಡ್ಲು ತೀರ್ಥ ಜಲಪಾತ ಕೂಡ ಒಂದಾಗಿದೆ.

ಉಡುಪಿ- ಆಗುಂಬೆ ರಸ್ತೆಯ ಹೆಬ್ರಿ ಬಳಿ ಈ ಜಲಪಾತವು ಪ್ರವಾಸಿಗರನ್ನು (Tourist) ಕೈ ಬೀಸಿ ಕರೆಯುತ್ತಿದೆ. ಪಶ್ಚಿಮ ಘಟ್ಟಗಳ ದಟ್ಟ ಕಾನನದ ನಡುವೆ ಸೀತಾನದಿ ಹರಿಯುತ್ತದೆ. ಈ ನದಿಯಿಂದ ಜಲಪಾತ ಉಂಟಾಗಿದ್ದು, ಮೈದುಂಬಿ ಹರಿಯುತ್ತಿರುವ ಕೂಡ್ಲು ತೀರ್ಥವನ್ನು ನೋಡುವುದೇ ಕಣ್ಣಿಗೆ ಹಬ್ಬವಾಗಿದೆ. ಜೊತೆಗೆ ಹಚ್ಚ ಹಸಿರಿನ ನಡುವೆ ಇರುವ ಸುಂದರ ದೃಶ್ಯವನ್ನು ನೋಡುತ್ತಿದ್ದರೆ ನಮ್ಮನ್ನೇ ನಾವು ಮರೆತು ಹೋಗುವುದರಲ್ಲಿ ಎರಡು ಮಾತಿಲ್ಲ.

KUDLU THEERTHA 1

ವಿಶೇಷತೆ ಏನು..?: ಪುರಾಣಗಳ ಪ್ರಕಾರ, ಸುಮಾರು ಸಾವಿರ ವರ್ಷಗಳ ಹಿಂದೆ ಈ ಸ್ಥಳದಲ್ಲಿ ಸನ್ಯಾಸಿಗಳು ಧ್ಯಾನ ಮಾಡುತಿದ್ದರಂತೆ. ಹಾಗಾಗಿ ಈ ಜಲಪಾತಕ್ಕೆ ಕೂಡ್ಲು ತೀರ್ಥ ಎಂಬ ಹೆಸರು ಬಂದಿದೆ. ಈ ಕೂಡ್ಲು ತೀರ್ಥ ಜಲಪಾತವು ಸುಮಾರು 120 ಅಡಿಗಳಷ್ಟು ಎತ್ತರದಿಂದ ಧುಮ್ಮಿಕ್ಕಿ ಹರಿಯುತ್ತಿದೆ. ಬೆಟ್ಟದ ತುತ್ತ ತುದಿಯಿಂದ ಹರಿಯುವ ಜಲಪಾತದ ಸೌಂದರ್ಯ ನೋಡುವುದೇ ಕಣ್ಣಿಗೆ ಹಬ್ಬ.

ಹೆಬ್ಬಂಡೆಗಳನ್ನು ಸೀಳಿ ರಭಸವಾಗಿ ನೀರು ಮೇಲಿಂದ ಬೀಳುತ್ತಿದ್ದರಿಂದ ನೈಸರ್ಗಿಕವಾಗಿಯೇ ಕೊಳವೊಂದು ರಚನೆಯಾಗಿದೆ. ಆದರೆ ಇದು ಹೆಚ್ಚು ಆಳವಿಲ್ಲದ ಕಾರಣ ನಿರ್ಭಯವಾಗಿ ನೀರಿಗೆ ಇಳಿದು ಮೋಜು ಮಸ್ತಿ ಮಾಡಬಹುದಾಗಿದೆ. ಇದು ಪ್ರವಾಸಿಗರನ್ನು ಇನ್ನಷ್ಟು ಎಂಜಾಯ್ ಮಾಡುವುದಕ್ಕೆ ಸಹಾಯ ಮಾಡುತ್ತಿದೆ. ಬಿಳಿ ನೊರೆಯಂತೆ ಧುಮ್ಮುಕ್ಕಿ ಹರಿಯುತ್ತಿರುವ ಈ ಜಲಪಾತದ ಕೆಳಗೆ ನಿಂತು ಸ್ನಾನ ಮಾಡಿದರೆ ಮೈ ಹಾಗೂ ಮನಸ್ಸಿಗೆ ಉಲ್ಲಾಸ ಸಿಗುತ್ತದೆ. ಆದರೆ ನೀರು ರಭಸವಾಗಿ ಮೇಲಿಂದ ಬೀಳುವುದರಿಂದ ಮೈಗೆ ಚುಚ್ಚಿದ ಅನುಭವವಾಗುತ್ತದೆ. ಹೀಗಾಗಿ ಸ್ವಲ್ಪ ಎಚ್ಚರದಿಂದಿರುವುದು ಸೂಕ್ತ.

ಹೋಗುವುದು ಹೇಗೆ..?: ಉಡುಪಿ ಆಥವಾ ಶಿವಮೊಗ್ಗದಿ0ದ ಮಿನಿಬಸ್ಸಿನಲ್ಲಿ ಪ್ರಯಾಣ ಬೆಳಸಬಹುದು. ಉಡುಪಿ ಹಾಗೂ ಶಿವಮೊಗ್ಗದಿಂದ ಹೆಬ್ರಿಯವರೆಗೂ ವಾಹನ ಸೌಕರ್ಯಗಳಿರುತ್ತವೆ. ಹೆಬ್ರಿಯಿಂದ ಸ್ಥಳೀಯ ಆಟೋಗಳ ಸಹಾಯ ಪಡೆಯಬೇಕು. ಸ್ಥಳ ಪರಿಚಯವಿರುವ ವಾಹನ ಚಾಲಕರ ಜೊತೆ ಹೋಗಿಬರಬಹುದು. ಇದನ್ನೂ ಓದಿ: ಪ್ರಕೃತಿ ರಮಣೀಯ ನರಹರಿ ಪರ್ವತದ ಸೌಂದರ್ಯ ಸವಿಯಲು ನೀವೂ ಭೇಟಿ ಕೊಡಿ

KUDLU THEERTHA

ಚಾರಣ ಮಾಡುವವರು ಕೂಡ್ಲು ತೀರ್ಥ ಜಲಪಾತವನ್ನು ತಲುಪಲು ಪಶ್ಚಿಮ ಘಟ್ಟಗಳ ಅಭಯಾರಣ್ಯದ ಮಧ್ಯೆ ಹರಿಯುವ ಸೀತಾನದಿಯನ್ನು ದಾಟಿ ಹೋಗಬೇಕು. ಹೀಗಾಗಿ ದಟ್ಟವಾದ ಕಾಡಿನ ನಡುವೆ ಕಾಲುದಾರಿಯಲ್ಲಿ ಸುಮಾರು 2 ಕಿ.ಮೀ ದೂರ ಸಾಗಬೇಕಾಗುತ್ತದೆ. ನಡೆಯುವ ದಾರಿ ಎತ್ತರ ತಗ್ಗಿನ ಭೂಪ್ರದೇಶವಾಗಿರುವ ಕಾರಣ ಸ್ವಲ್ಪ ಕಷ್ಟವೆನಿಸಬಹುದು. ಆದರೆ ಜಲಪಾತ ಬಳಿ ಬರುತ್ತಿದ್ದಂತೆಯೇ ಝುಳು-ಝುಳು ನೀರಿನ ನಾದದ ಜೊತೆ ಸಿಗುವ ಆನಂದ ಈ ದಣಿವನ್ನೆಲ್ಲ ಮರೆ ಮಾಡಿ ಮನಸ್ಸಿಗೆ ಮುದ ನೀಡುತ್ತದೆ.

ಯಾವ ಸಮಯದಲ್ಲಿ ಭೇಟಿ ಸೂಕ್ತ : ಈ ಫಾಲ್ಸ್ ಗೆ ಭೇಟಿ ನೀಡಲು ಆಗಸ್ಟ್ ನಿಂದ ಜನವರಿ ತಿಂಗಳು ಸೂಕ್ತ. ಯಾಕೆಂದರೆ ಈ ಸಮಯದಲ್ಲಿ ನೀರಿನ ಹರಿವು ಹೆಚ್ಚು ಪ್ರಮಾಣದಲ್ಲಿ ಇರುವುದರಿಂದ ಜಲಪಾತ ವೀಕ್ಷಣೆ ಮಜಾ ನೀಡುತ್ತದೆ. ಮಳೆಗಾಲದಲ್ಲಿ ಈ ಪ್ರದೇಶಕ್ಕೆ ಭೇಟಿ ನೀಡಿದರೆ ಜಿಗಣೆಗಳ ಕಾಟ ಇರುತ್ತದೆ.

ನೀರು, ಆಹಾರ ಪ್ಯಾಕ್ ಮಾಡಿಕೊಳ್ಳಿ: ದಟ್ಟವಾದ ಅರಣ್ಯ ಪ್ರದೇಶದೊಳಗೆ ಈ ಫಾಲ್ಸ್ ಇರುವುದರಿಂದ ಇದರ ಹತ್ತಿರ ಯಾವುದೇ ಅಂಗಡಿಗಳಿಲ್ಲ. ಹೀಗಾಗಿ ಚಾರಣ ಮಾಡುವಾಗ ಬೇಕಾಗುವ ಅಗತ್ಯ ವಸ್ತುಗಳು, ನೀರು ಹಾಗೂ ಆಹಾರವನ್ನು ಕೊಂಡೊಯ್ಯಬೇಕಿದೆ.

ನಿಷೇಧಿತ ವಸ್ತುಗಳು ಬ್ಯಾನ್: ಚಾರಣ ಮಾಡುವಾಗ ಕೆಲವರು ಎಂಜಾಯ್ ಮಾಡಲೆಂದು ಮದ್ಯ, ಸಿಗರೇಟ್ ಮೊದಲಾದವುಗಳನ್ನು ಕೊಂಡೊಯ್ಯುತ್ತಾರೆ. ಆದರೆ ಈ ಫಾಲ್ಸ್ ನಲ್ಲಿ ಅವುಗಳಿಗೆ ಅನುಮತಿ ಇಲ್ಲ. ಹೀಗಾಗಿ ಮದ್ಯ, ಸಿಗರೇಟ್ ಮುಂತಾದವುಗಳನ್ನು ಜಲಪಾತದ ಬಳಿ ಕೊಂಡೊಯ್ಯುವಂತಿಲ್ಲ.

KUDLU THEERTHA 2

ಅನುಮತಿ ಅಗತ್ಯ: ಕಾಡಿನ ಮಧ್ಯೆ ಈ ಜಲಪಾತ ಇರುವ ಹಿನ್ನೆಲೆಯಲ್ಲಿ ಚಾರಣ ಮಾಡುವುದಕ್ಕೂ ಮುನ್ನ ಅರಣ್ಯ ಇಲಾಖೆಯ ಅನುಮತಿ ಪಡೆದುಕೊಳ್ಳುವುದು ಕಡ್ಡಾಯವಾಗಿದೆ. ಚಾರಣಿಗರು ಅರಣ್ಯ ಇಲಾಖೆಯ ಆಫೀಸ್‍ನಲ್ಲಿ ಪ್ರವೇಶ ಶುಲ್ಕವನ್ನು ಪಾವತಿಸಬೇಕು. ಜೊತೆಗೆ ಸ್ಪಷ್ಟ ಹೆಸರು, ಮೊಬೈಲ್ ನಂಬರ್ ಹಾಗೂ ತಾವು ತೆಗೆದುಕೊಂಡು ಹೋಗುತ್ತಿರುವ ವಸ್ತುಗಳ ಬಗ್ಗೆ ಮಾಹಿತಿ ನೀಡಿ ಚಾರಣ ಮುಂದುವರಿಸಬೇಕಾಗಿದೆ.

ಒಟ್ಟಿನಲ್ಲಿ ಪ್ರಶಾಂತವಾದ ದಟ್ಟಕಾಡಿನ ಮಧ್ಯೆ ಇರುವ ಈ ಕೂಡ್ಲು ತೀರ್ಥ ಜಲಪಾತವು ಪ್ರತ್ಯೇಕವಾದ ಸೌಂದರ್ಯದಿಂದಲೇ ಖ್ಯಾತಿ ಪಡೆದುಕೊಂಡಿದೆ. ಹೀಗಾಗಿ ಈ ಫಾಲ್ಸ್ ಗೆ ನೀವೂ ಒಂದು ಬಾರಿ ಭೇಟಿ ಕೊಟ್ಟು ಮನಸ್ಸನ್ನು ಹಗುರಮಾಡಿಕೊಳ್ಳಿ.

TAGGED:bengalurukudlu theerthaಕೂಡ್ಲು ತೀರ್ಥಬೆಂಗಳೂರು
Share This Article
Facebook Whatsapp Whatsapp Telegram

Cinema news

Duniya Vijay 1
ಝಾಂಬಿ ಡ್ರಗ್ಸ್ ಕೇಸಲ್ಲಿ ನಟ ದುನಿಯಾ ವಿಜಯ್‌ಗೆ ಸಂಕಷ್ಟ – ಡಿಲೀಟ್ ವಿಡಿಯೋ ರಿಟ್ರೀವ್‌ಗಾಗಿ ಇನ್‌ಸ್ಟಾಗೆ ಪೊಲೀಸರ ಪತ್ರ
Bengaluru City Cinema Districts Karnataka Latest Sandalwood Top Stories
TVK Vijay
ಅಫಿಡವಿಟ್‌ನಲ್ಲಿ 105 ಕೋಟಿ ವ್ಯತ್ಯಾಸ – ನಾಮಪತ್ರ ತಿರಸ್ಕಾರ ಆತಂಕದಲ್ಲಿ ವಿಜಯ್‌
Cinema Court Latest Main Post National
Maharashtra Man Arrest
ಮಹಾರಾಷ್ಟ್ರ ‘ಲವ್ ಟ್ರ್ಯಾಪ್’ ಸಂತ್ರಸ್ತೆ ಆತ್ಮಹತ್ಯೆಗೆ ಯತ್ನ – ಮತ್ತೋರ್ವ ಆರೋಪಿ ಅಂದರ್
Cinema Latest National Top Stories
Atlee
ಹೆಣ್ಣು ಮಗು ಜನಿಸಿದ ಸಂಭ್ರಮದಲ್ಲಿ ನಿರ್ದೇಶಕ ಅಟ್ಲೀ ದಂಪತಿ
Cinema Latest Top Stories

You Might Also Like

NIA 2
Bengaluru City

ಶಿವಮೊಗ್ಗ ಟ್ರಯಲ್ ಬ್ಲಾಸ್ಟ್ ಕೇಸ್ – ಪ್ರಕರಣದ 3ನೇ ಅಪರಾಧಿಗೆ 6 ವರ್ಷ ಜೈಲು

Public TV
By Public TV
4 hours ago
Bengaluru 2
Bengaluru City

ಫಾರಿನ್ ಸ್ಟೈಲಲ್ಲಿ ಪ್ರಪೋಸ್‌ ಮಾಡ್ತೀನಿ ಅಂತ ಸೀಮೆ ಎಣ್ಣೆ ಸುರಿದು ಪ್ರಿಯಕರನಿಗೆ ಬೆಂಕಿ ಹಚ್ಚಿ ಕೊಂದ ಪ್ರೇಯಸಿ..!

Public TV
By Public TV
7 hours ago
Belagavi Heat Stroke Death
Bengaluru City

ರಾಜ್ಯದಲ್ಲಿ ಹಿಟ್ ಸ್ಟ್ರೋಕ್‌ಗೆ ಎರಡನೇ ಬಲಿ – ಬಿಸಿಲ ತಾಪಕ್ಕೆ ಪಟ್ಟಣ ಪಂಚಾಯಿತಿ ಮುಖ್ಯಾಧಿಕಾರಿ ಸಾವು

Public TV
By Public TV
8 hours ago
Grenade Case
Bengaluru City

ಬೆಂಗ್ಳೂರಲ್ಲಿ ಜೀವಂತ ಗ್ರೆನೇಡ್ ಪತ್ತೆ ಕೇಸ್ – 7 ಅಪರಾಧಿಗಳಿಗೆ 7 ವರ್ಷ ಜೈಲು ಶಿಕ್ಷೆ ವಿಧಿಸಿದ ಎನ್‌ಐಎ ಕೋರ್ಟ್

Public TV
By Public TV
8 hours ago
G Parameshwar
Bengaluru City

ಗೃಹ ಸಚಿವ ಪರಮೇಶ್ವರ್ ವಿರುದ್ಧ ಎಫ್‌ಐಆರ್‌ಗೆ ಕೋರ್ಟ್‌ ಆದೇಶ

Public TV
By Public TV
8 hours ago
KN RAJANNA
Bengaluru City

ಸಿಎಂಗೆ ಯಾರೋ ಮಾಟ ಮಂತ್ರ ಮಾಡಿಸಿರಬಹುದು, ಜನ್ರೂ ಮಾತಾಡಿಕೊಳ್ತಿದ್ದಾರೆ: ರಾಜಣ್ಣ

Public TV
By Public TV
10 hours ago

Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?