Public TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Font ResizerAa
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
Search
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Belgaum

6 ವರ್ಷ ಪ್ರೀತಿಸಿ ಕೈಕೊಟ್ಟ, ಸಪ್ತಪದಿ ತುಳಿದವನೂ ಬೇಡವೆಂದ- ಪಾಗಲ್ ಪ್ರೇಮಿಯ ಹುಚ್ಚಾಟಕ್ಕೆ ಯುವತಿ ಕಂಗಾಲು

Public TV
Last updated: February 23, 2024 11:27 am
Public TV
Share
2 Min Read
BELAGAVI DHOKA
SHARE

ಬೆಳಗಾವಿ: ಪ್ರೀತಿಸಿ ಕೈಕೊಡುವುದರ ಜೊತೆಗೆ ಮದುವೆ ಮುರಿದ ಪಾಗಲ್ ಪ್ರೇಮಿ ಈಗ ಎಸ್ಕೇಪ್ ಆಗಿದ್ದಾನೆ. ಯುವಕನ ಹುಚ್ಚಾಟಕ್ಕೆ ಕುಟುಂಬಸ್ಥರು, ಸ್ಥಳೀಯರು ಯುವತಿಯ ಬೆನ್ನಿಗೆ ನಿಂತಿದ್ದು ಯುವತಿ ಪಾಗಲ್ ಪ್ರೇಮಿಯ ಮನೆ ಮುಂದೆ ನ್ಯಾಯಕ್ಕಾಗಿ ಇಡೀ ರಾತ್ರಿ ಪ್ರತಿಭಟನೆಗೆ ಕುಳಿತಿದ್ದಾರೆ.

BELAGAVI LOVE DHOKA 3

ಬೆಳಗಾವಿ (Belagavi) ಜಿಲ್ಲೆಯ ಕಿತ್ತೂರು ಪಟ್ಟಣದಲ್ಲಿ ಲವ್ ಸೆಕ್ಸ್ ದೋಖಾ ಪ್ರಕರಣ ನಡೆದಿದೆ. ಕಿತ್ತೂರು ಪಟ್ಟಣದ ನೇಕಾರ ಕಾಲೋನಿ ನಿವಾಸಿ ಮುತ್ತುರಾಜ್ ಇಟಗಿ ಎಂಬಾತ ಯುವತಿ ಬಾಳು ಹಾಳು ಮಾಡಿದವ. ಕಳೆದ ಆರು ವರ್ಷಗಳಿಂದ ಪರಸ್ಪರ ಪ್ರೀತಿಸಿದ ಯುವಕನೂ ಕೈಕೊಟ್ಟ, ಸಪ್ತಪದಿ ತುಳಿದ ಗಂಡನೂ ನೀ ನನಗೆ ಬೇಡ ಎಂದಿದ್ದು ಪಾಗಲ್ ಪ್ರೇಮಿಯ ಹುಚ್ಚಾಟಕ್ಕೆ ಯುವತಿಯ ಕುಟುಂಬ ಬೀದಿಗೆ ಬಂದಿದೆ. ಇದನ್ನೂ ಓದಿ: ರಾಮ ಭಕ್ತರಿದ್ದ ರೈಲಿಗೆ ಬೆದರಿಕೆ – ಬಂಧಿತ ವ್ಯಕ್ತಿ ಸಿ ಗ್ರೂಪ್‌ ನೌಕರ

BELAGAVI LOVE DHOKA

ಏನಿದು ಪ್ರಕರಣ?: ಕಳೆದ ಆರು ವರ್ಷಗಳಿಂದ ತಮ್ಮ ಮನೆಯ ಪಕ್ಕದ ಮನೆಯ ಯುವತಿಯನ್ನು ಪ್ರೀತಿಸುತ್ತಿದ್ದ ಮುತ್ತುರಾಜ್ ಮದುವೆ ಆಗುವುದಾಗಿ ನಂಬಿಸಿ ಆಕೆಯ ಜೊತೆಗೆ ದೈಹಿಕ ಸಂಬಂಧ ಬೆಳೆಸಿದ್ದನು. ಸಾಲದೆಂಬಂತೆ ಇಬ್ಬರ ಖಾಸಗಿ ವೀಡಿಯೋ, ಫೋಟೋಗಳನ್ನು ಸಂಗ್ರಹಿಸಿಟ್ಟುಕೊಂಡಿದ್ದನು. ಆರು ವರ್ಷಗಳ ಕಾಲ ಯುವತಿ ಜೊತೆಗೆ ಸುತ್ತಾಡಿ ಕುಟುಂಬಸ್ಥರು ಮದುವೆಗೆ ಒಪ್ಪುತ್ತಿಲ್ಲ. ನೀನು ಬೇರೆ ಮದುವೆ ಆಗು ಎಂದು ದಿಢೀರ್ ಮದುವೆ ಆಗಲ್ಲವೆಂದು ಕೈ ಎತ್ತಿದ್ದಾನೆ. ಬಳಿಕ ಪೋಷಕರು ತೋರಿಸಿದ್ದ ವರನ ಜೊತೆಗೆ ಕೆಲ ದಿನಗಳ ಹಿಂದಷ್ಟೇ ಖಾನಾಪುರ ತಾಲೂಕಿನ ಯುವಕನ ಜೊತೆಗೆ ಯುವತಿಯ ವಿವಾಹ ಆಗಿತ್ತು.

ಮದುವೆಯ ಮರುದಿನವೇ ತವರುಮನೆಗೆ: ಸಾಲಸೋಲ ಮಾಡಿದ ಪೋಷಕರು, ಪುತ್ರಿಯ ಮದುವೆ ಮಾಡಿಕೊಟ್ಟಿದ್ದರು.ಮದುವೆ ಆದ ಮೊದಲ ದಿನವೇ ವರನ ಮನೆಯಲ್ಲಿ ಪಾಗಲ್ ಪ್ರೇಮಿಯ ಹೈಡ್ರಾಮಾ ಮಾಡಿದ್ದು, ಗಂಡನ ಮನೆಗೆ ಹೋಗಿ ವರನ ಸಂಬಂಧಿಗೆ ಯುವತಿ ಜೊತೆಗಿನ ಖಾಸಗಿ ವೀಡಿಯೋ ಶೇರ್ ಮಾಡಿದ್ದಾನೆ. ಈ ವಿಷಯ ತಿಳಿಯುತ್ತಿದ್ದಂತೆಯೇ ಯುವತಿ ಪೋಷಕರ ಜೊತೆಗೆ ವರನ ಪೋಷಕರು ವಾಗ್ವಾದ ನಡೆಸಿದ್ದಾರೆ. ಮದುವೆ ಆದ ಮೊದಲ ದಿನವೇ ನೀ ನನಗೆ ಬೇಡವೆಂದು ತವರು ಮನೆಗೆ ವಧುವನ್ನ ಕಳುಹಿಸಿದ್ದಾರೆ. ತಮ್ಮದೇ ನೂತನ ಮನೆಯ ಗೃಹ ಪ್ರವೇಶ ಇದ್ದರೂ ಗೈರಾಗಿ ಎಸ್ಕೆಪ್ ಆಗಿದ್ದಾನೆ‌‌. ಇನ್ನು ನ್ಯಾಯ ಕೊಡಿಸುವಂತೆ ಎರಡ್ಮೂರು ಸಲ ಕಿತ್ತೂರು ಪೊಲೀಸ್ ಠಾಣೆ ಮೆಟ್ಟಿಲೇರಿದ್ದಾರೆ. ಆದರೆ ಕಿತ್ತೂರು ಪಿಎಸ್ ಐ ಸಕಾರಾತ್ಮಕ ಸ್ಪಂದನೆ ಮಾಡಿಲ್ಲ ಎಂದು ಆರೋಪಿಸಿದ್ದಾರೆ.

BELAGAVI LOVE DHOKA 1

ಪ್ರಿಯಕರನ ಮನೆ ಮುಂದೆ ಧರಣಿ: ಜೀವನ ಹಾಳು ಮಾಡಿದ ಪಾಗಲ್ ಪ್ರೇಮಿ ಮುತ್ತುರಾಜ್ ಮನೆ ಎದುರು ಯುವತಿ ಪ್ರತಿಭಟನೆಗೆ ಮುಂದಾಗಿದ್ದು, ಯುವತಿ ಮನೆ ಎದುರು ಬರುತ್ತಿದ್ದಂತೆಯೇ‌ ಮುತ್ತುರಾಜ್‌ನ ಸಹೋದರಿಯರು ಬಾಗಿಲು ಹಾಕಿಕೊಂಡು ಒಳಗೆ ಕುಳಿತುಕೊಂಡಿದ್ದಾರೆ. ಈ ವೇಳೆ ಮುತ್ತುರಾಜ್ ಪೋಷಕರು, ಸಹೋದರಿಯರ ವಿರುದ್ಧ ಯುವತಿ ಪೋಷಕರ ಆಕ್ರೋಶ ವ್ಯಕ್ತಪಡಿಸಿದರು. ಉಭಯ ಕುಟುಂಬಸ್ಥರ ಮಧ್ಯೆ ಕೆಲಹೊತ್ತು ವಾಗ್ವಾದ ನಡೆದಿದ್ದು, ಹೊಸ ಮನೆಯಲ್ಲಿ ಹೈಡ್ರಾಮಾ ಸೃಷ್ಟಿಯಾಗಿತ್ತು. ಪೋಷಕರು ಮನೆ ಒಳಗಿದ್ದರೆ, ಇತ್ತ ರಾತ್ರಿಯಿಡಿ ಮನೆ ಮುಂದೆಯೇ ಯುವತಿ ಹಾಗೂ ತಾಯಿ ಕುಳಿತು ಪ್ರತಿಭಟಿಸಿದರು. ನಮ್ಮ ಪುತ್ರಿಯನ್ನು ಮದುವೆ ಮಾಡಿಕೊಂಡು ಬಾಳು ಕೊಡುವಂತೆ ಮುತ್ತುರಾಜ್‌ಗೆ ಯುವತಿಯ ಪೋಷಕರು ಆಗ್ರಹಿಸಿದರು.

TAGGED:belagavilovemarriageyouthಪ್ರೇಮಿಬೆಳಗಾವಿಮದುವೆಯುವಕಯುವತಿಲವ್
Share This Article
Facebook Whatsapp Whatsapp Telegram

You Might Also Like

Mangaluru Rain
Dakshina Kannada

ಮಂಗಳೂರಿನಲ್ಲಿ ಭಾರೀ ಮಳೆ – ಪಂಪ್‌ವೆಲ್ ಸರ್ಕಲ್ ಮತ್ತೆ ಮುಳುಗಡೆ

Public TV
By Public TV
10 minutes ago
ED 1
Bengaluru City

Exclusive | ವಾಲ್ಮೀಕಿ ಹಗರಣ: ಬಳ್ಳಾರಿ ಚುನಾವಣೆಗೆ 27 ಕೋಟಿ ಬಳಕೆಯಾಗಿದ್ದು ಹೇಗೆ? – 87 ಕೋಟಿ ಎಲ್ಲೆಲ್ಲಿ ಹಂಚಿಕೆಯಾಯ್ತು?

Public TV
By Public TV
15 minutes ago
Siddaramaiah 4
Districts

ನಮ್ಮ ನಿರೀಕ್ಷೆಗಳಿಗೆ ವಿರುದ್ಧವಾಗಿ ಕೆಲವು ಘಟನೆಗಳು ನಡೆಯುತ್ತವೆ – ಕಾಲ್ತುಳಿತ ಪ್ರಕರಣಕ್ಕೆ ಸಿಎಂ ಬೇಸರ

Public TV
By Public TV
48 minutes ago
Bunny Hop Catch
Cricket

`ಬನ್ನಿ ಹಾಪ್ ಕ್ಯಾಚ್’ ರೂಲ್ಸ್‌ಗೆ ಐಸಿಸಿ ಬ್ರೇಕ್ – ಶೀಘ್ರವೇ ಹೊಸ ರೂಲ್ಸ್

Public TV
By Public TV
49 minutes ago
Temba Bavuma
Cricket

ಚೋಕರ್ಸ್‌ ಹಣೆಪಟ್ಟಿ ಕಳಚಿದ ಹರಿಣರು – ದ. ಆಫ್ರಿಕಾಗೆ ವಿಶ್ವ ಟೆಸ್ಟ್‌ ಚಾಂಪಿಯನ್‌ ಕಿರೀಟ, ದಶಕಗಳ ಕನಸು ನನಸು

Public TV
By Public TV
50 minutes ago
Samir Kumar Sinha plane crash
Latest

ದುರಂತಕ್ಕೂ ಮುನ್ನ ಇದೇ ವಿಮಾನ ಪ್ಯಾರಿಸ್‌ನಿಂದ ದೆಹಲಿಗೆ ಹಾರಾಟ ನಡೆಸಿತ್ತು!

Public TV
By Public TV
2 hours ago
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?