Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಮಹಾರಾಷ್ಟ್ರ ಸಮುದ್ರದಲ್ಲಿ ವೇವ್ ರೈಡರ್ ಬಾಯ್‌ ಜಾಗ ಪತ್ತೆ – ನೌಕಾದಳದ ಭದ್ರತೆ ನಡುವೆ ಕಳವು?
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | ಮಹಾರಾಷ್ಟ್ರ ಸಮುದ್ರದಲ್ಲಿ ವೇವ್ ರೈಡರ್ ಬಾಯ್‌ ಜಾಗ ಪತ್ತೆ – ನೌಕಾದಳದ ಭದ್ರತೆ ನಡುವೆ ಕಳವು?

Districts

ಮಹಾರಾಷ್ಟ್ರ ಸಮುದ್ರದಲ್ಲಿ ವೇವ್ ರೈಡರ್ ಬಾಯ್‌ ಜಾಗ ಪತ್ತೆ – ನೌಕಾದಳದ ಭದ್ರತೆ ನಡುವೆ ಕಳವು?

Public TV
Last updated: February 25, 2024 8:21 am
Public TV
Share
2 Min Read
Wave Rider Buoy spot found in Maharashtra sea GPS Karawara Sea
SHARE

– ಹವಾಮಾನ ವೈಪರೀತ್ಯ ಪತ್ತೆ ಹಚ್ಚುತ್ತಿದ್ದ ಸಾಧನ
– ದೇಶದ 5 ಭಾಗಗಳಲ್ಲಿ ಅಳವಡಿಸಿದ್ದ ಕೇಂದ್ರ ಸರ್ಕಾರ

ಕಾರವಾರ: ಸಮುದ್ರದಲ್ಲಿ ಬದಲಾಗುವ ವಾತಾವರಣದ ಮನ್ಸೂಚನೆ ನೀಡುತ್ತಿದ್ದ ಡೈರಕ್ಷನಲ್ ವೇವ್ ರೈಡರ್ ಬಾಯ್‌ನನ್ನು (Wave Rider Buoy) ಕಳ್ಳರು ಕದ್ದೊಯ್ದ ಘಟನೆ ಉತ್ತರ ಕನ್ನಡ ಜಿಲ್ಲೆಯ ಕಾರವಾರದ (Karawara) ಅರಬ್ಬಿ ಸಮುದ್ರದಲ್ಲಿ (Arabian Sea) ನಡೆದಿದೆ‌.

ಚಂಡಮಾರುತ, ಗಾಳಿಯ ಪ್ರಮಾಣ, ಮಳೆಯ ಮುನ್ಸೂಚನೆಯನ್ನು ವೇವ್ ರೈಡರ್ ಬಾಯ್‌ ನೀಡುತ್ತಿತ್ತು. ಭಾರತೀಯ ರಾಷ್ಟ್ರೀಯ ಸಾಗರ ಮಾಹಿತಿ ಕೇಂದ್ರವು ಅಧ್ಯಯನ ದೃಷ್ಟಿಯಿಂದ ಕಾರವಾರದಲ್ಲಿರುವ ಕರ್ನಾಟಕ ವಿಶ್ವವಿದ್ಯಾಲಯದ ಕಡಲ ಜೀವಶಾಸ್ತ್ರ ಅಧ್ಯಯನ ಕೇಂದ್ರಕ್ಕೆ ನೀಡಿತ್ತು.

ವೇವ್ ರೈಡರ್‌ ಬಾಯ್‌ಗೆ ನೆದರ್‌ಲ್ಯಾಂಡ್‌ನ (Netherlands) ಅತ್ಯಾಧುನಿಕ ತಂತ್ರಜ್ಞಾನ ಅಳವಡಿಸಿದ ಕೋಟಿ ಬೆಲೆಯ ವಸ್ತುಗಳನ್ನು ಅಳವಡಿಸಿ ಕಾರವಾರದ ಕದಂಬ ನೌಕಾ ನೆಲೆ ಇರುವ ಅರಬ್ಬಿ ಸಮುದ್ರ ಭಾಗದಲ್ಲಿ ಇದನ್ನು ಅಳವಡಿಸಲಾಗಿತ್ತು.

ವೇವ್ ರೈಡರ್‌ ಬಾಯ್‌ಗೆ  ಸಂಬಂಧಿಸಿದಂತೆ ಪಬ್ಲಿಕ್‌ ಟಿವಿ ಹಿಂದೆ ಮಾಡಿದ್ದ ವಿಡಿಯೋವನ್ನು ಇಲ್ಲಿ ನೀಡಲಾಗಿದೆ


ಗಾಳಿಯ ರಭಸಕ್ಕೆ ಸಂಪರ್ಕದ ಹಗ್ಗ ತುಂಡಾದರೂ ಮಂಗಳೂರಿನ ಭಾಗಕ್ಕೆ ತೇಲಿಹೋಗಬೇಕಿತ್ತು. ಆದರೆ ಜಿಪಿಎಸ್‌ನಲ್ಲಿ (GPS) ಮಹಾರಾಷ್ಟ್ರದ ರತ್ನಗಿರಿ ಭಾಗದ ಹೊರಭಾಗದ ಜಾಗವನ್ನು ತೋರಿಸಿದೆ. ಹೀಗಾಗಿ ಇದನ್ನು ಕದ್ದಿರುವ ಸಾಧ್ಯತೆಯನ್ನು ಇದರ ಉಸ್ತುವಾರಿ ಹೊತ್ತಿರುವ ಜಗನ್ನಾಥ್ ರಾಥೋಡ್ ತಿಳಿಸಿದ್ದಾರೆ.  ಇದನ್ನೂ ಓದಿ: ಪ್ರಧಾನಿಯಿಂದ ಭಾನುವಾರ ದೇಶದ ಅತಿ ಉದ್ದದ ತೂಗುಸೇತುವೆ ʻಸುದರ್ಶನ ಸೇತುʼ ಲೋಕಾರ್ಪಣೆ

ಈಗಾಗಲೇ ನೌಕಾದಳ, ಕರಾವಳಿ ಕಾವಲುಪಡೆ ಹಾಗೂ ಸ್ಥಳೀಯ ಪೊಲೀಸರಿಗೂ ಮಾಹಿತಿ ನೀಡಲಾಗಿದ್ದು ರಿಲಯನ್ಸ್ ಫೌಂಡೇಶನ್‌ ಸಂಸ್ಥೆ ಸಹ ಇದರ ಹುಡುಕಾಟಕ್ಕೆ ಕೈ ಜೋಡಿಸಿದೆ.

ವೇವ್ ರೈಡರ್ ಬಾಯ್‌ ಕೋಟಿಗಟ್ಟಲೇ ಬೆಲೆ ಬಾಳಿದರೂ ಯಾರ ಉಪಯೋಗಕ್ಕೂ ಬಾರದು. ಇದರ ಕಬ್ಬಿಣದ ವಸ್ತುವನ್ನು ಮಾರಾಟ ಮಾಡಬೇಕಷ್ಟೇ. ಕದಂಬ ನೌಕಾದಳ ಭಾಗದಲ್ಲಿ ಅಳವಡಿಸಿದ್ದರೂ ನೌಕಾದಳದ ಭದ್ರತೆ ನಡುವೆ ಕಳವಾಗಿದ್ದು ಹೇಗೆ ಎಂಬ ಗಂಭೀರ ಭದ್ರತಾ ಲೋಪದ ಪ್ರಶ್ನೆ ಎದ್ದಿದೆ.

Direction Wave Rider Boy 1

ಉಪಯೋಗ ಏನು?
ಕಳೆದ ಹಲವು ವರ್ಷಗಳಿಂದ ಹವಾಮಾನ ವೈಪರೀತ್ಯ ಸೇರಿದಂತೆ ದೇಶದ ಕಡಲಿನಲ್ಲಾಗುವ ಬದಲಾವಣೆಯನ್ನು ತಕ್ಷಣ ಗುರುತಿಸಿ ಮಾಹಿತಿ ರವಾನೆ ಮಾಡಲು ಹವಾಮಾನ ಇಲಾಖೆಗೆ ಕಷ್ಟಸಾಧ್ಯವಾಗುತಿತ್ತು. ಇದರಿಂದ ಮಳೆ, ಸಮುದ್ರದಲ್ಲಿ ವೈಪರಿತ್ಯ ಆಗುವ ಮೊದಲೇ ನಿಖರವಾಗಿ ಮಾಹಿತಿ ನೀಡಲಾಗುತ್ತಿರಲಿಲ್ಲ. ಆದರೆ ಕೇಂದ್ರ ಸರ್ಕಾರ ದೇಶದ ಕರಾವಳಿ ಭಾಗದಲ್ಲಿ ಹೊಸ ತಂತ್ರಜ್ಞಾನ ಹೊಂದಿದ ಎಂಕೆ-4 ಮಾದರಿಯ ಡೈರಕ್ಷನಲ್ ವೇವ್ ರೈಡರ್ ಬಾಯ್ ಅನ್ನು ಕಾರವಾರದ ಅರಬ್ಬಿ ಸಮುದ್ರ ಸೇರಿದಂತೆ ದೇಶದ 5 ಭಾಗಗಳಲ್ಲಿ ಅಳವಡಿಸಿತ್ತು. ಇದನ್ನೂ ಓಧಿ: ಕೋಟಿ ಕೋಟಿ ಒಡೆಯ ಅಯೋಧ್ಯೆ ಬಾಲರಾಮ – ಒಂದು ತಿಂಗಳಲ್ಲಿ 25 ಕೋಟಿ ಸಂಗ್ರಹ

Direction Wave Rider Boy 4

ಈ ಮೂಲಕ ಕರ್ನಾಟಕ ಕರಾವಳಿಯ ಅರಬ್ಬಿ ಸಮುದ್ರದಲ್ಲಿ ಆಗುವ ಪ್ರತಿ ಬದಲಾವಣೆ, ಹವಾಮಾನ, ಮೀನುಗಳ ಸಾಂದ್ರತೆಯ ಮಾಹಿತಿಯನ್ನು ಇದು ನೀಡುತ್ತಿತ್ತು. ಇದೇ ಮೊದಲ ಬಾರಿಗೆ ಬ್ಯಾಟರಿ ಜೊತೆಗೆ ಸೋಲಾರ್ ಶಕ್ತಿ ಬಳಸಿಕೊಂಡು ಈ ಬಾಯ್ ಕಾರ್ಯ ನಿರ್ವಹಿಸುತ್ತಿತ್ತು.

Direction Wave Rider Boy 2

ಇದರಿಂದಾಗಿ ಮೀನುಗಾರರಿಗೆ ಯಾವ ಪ್ರದೇಶದಲ್ಲಿ ಎಷ್ಟು ಮೀನುಗಳಿವೆ ಎಂಬುದನ್ನು 24 ಗಂಟೆಗೆ ಮೊದಲೇ ಮಾಹಿತಿ ನೀಡಿ ಮತ್ಸ್ಯ ಬೇಟೆಗೆ ಸಹಕಾರಿಯಾಗುತ್ತಿತ್ತು. ಜೊತೆ ಹವಾಮಾನ ವೈಪರಿತ್ಯದಿಂದ ಹಿಡಿದು ಸಮುದ್ರದಲ್ಲಿ ಆಗುವ ಬದಲಾವಣೆಯ ಪ್ರತಿ ಕ್ಷಣದ ಮಾಹಿತಿಯನ್ನ ಈ ಬಾಯ್ ನೀಡುತ್ತಿತ್ತು.

ಹಿಂದಿನ ಬಾಯ್‌ಗಿಂತ ದ್ವಿಗುಣ ಮಟ್ಟದಲ್ಲಿ ಕಾರ್ಯಕ್ಷಮತೆಯನ್ನ ಹೊಂದಿದೆ. ಹವಾಮಾನ ವೈಪರಿತ್ಯ, ಅಲೆಗಳ ಎತ್ತರ, ಅಲೆಗಳ ದಿಕ್ಕು, ಅಲೆಗಳ ಮಾದರಿ, ಸಮುದ್ರ ಮೇಲ್ಮೈ ಉಷ್ಣತೆ ಅಳತೆ, ಸಮುದ್ರಭಾಗದಲ್ಲಿ ಮೀನುಗಳ ಸಾಂದ್ರತೆಗಳ ಮಾಹಿತಿ ನೀಡುತ್ತಿತ್ತು.

TAGGED:gpsindiakarnatakaWave Rider Buoyಉತ್ತರ ಕನ್ನಡಕಾರವಾರಜಿಪಿಎಸ್ವೇವ್‌ ರೈಡರ್‌ ಬಾಯ್‌
Share This Article
Facebook Whatsapp Whatsapp Telegram

Cinema news

Monalisa
ಕುಂಭಮೇಳದ ವೈರಲ್ ಹುಡುಗಿ ಮೊನಾಲಿಸಾ ಈಗ ಗರ್ಭಿಣಿ
Cinema Latest Main Post National
Ranya Rao
ಇಂದಿಗೆ ಕಾಫಿಫೋಸಾ ಅವಧಿ ಅಂತ್ಯ – ಜೈಲಿನಿಂದ ರನ್ಯಾರಾವ್‌ ಬಿಡುಗಡೆ
Cinema Crime Karnataka Latest Main Post
ranya rao 2 1
ಗೋಲ್ಡ್ ಸ್ಮಗ್ಲಿಂಗ್ ಕೇಸ್ – ಇಂದು ರನ್ಯಾ ರಾವ್ ಜೈಲಿನಿಂದ ರಿಲೀಸ್
Bengaluru City Cinema Districts Karnataka Latest Top Stories
Duniya Vijay 1
ಝಾಂಬಿ ಡ್ರಗ್ಸ್ ಕೇಸಲ್ಲಿ ನಟ ದುನಿಯಾ ವಿಜಯ್‌ಗೆ ಸಂಕಷ್ಟ – ಡಿಲೀಟ್ ವಿಡಿಯೋ ರಿಟ್ರೀವ್‌ಗಾಗಿ ಇನ್‌ಸ್ಟಾಗೆ ಪೊಲೀಸರ ಪತ್ರ
Bengaluru City Cinema Districts Karnataka Latest Sandalwood Top Stories

You Might Also Like

Elephant
Chamarajanagar

ನೀರು ಕುಡಿಯಲು ಬಂದು ಕೆಸರಿನಲ್ಲಿ ಸಿಲುಕಿದ್ದ ಕಾಡಾನೆ 3 ದಿನಗಳ ನಂತ್ರ ಸಾವು

Public TV
By Public TV
37 minutes ago
Voting
Latest

Tamil Nadu Elections | 234 ಕ್ಷೇತ್ರಗಳಲ್ಲಿ ಮತದಾನ ಶುರು – 4.59 ಲಕ್ಷ ಫಸ್ಟ್‌ ಟೈಂ ವೋಟರ್ಸ್‌ ಹಕ್ಕು ಚಲಾವಣೆ

Public TV
By Public TV
56 minutes ago
Ballari Hotel Cylinder Blast
Bellary

ಏಕಾಏಕಿ 2 ಸಿಲಿಂಡರ್ ಬ್ಲಾಸ್ಟ್ – ಹೊತ್ತಿ ಉರಿದ ಹೋಟೆಲ್, ಬಾಲಕನಿಗೆ ಗಂಭೀರ ಗಾಯ

Public TV
By Public TV
59 minutes ago
Election vote ink
Latest

ಇಂದು ತಮಿಳುನಾಡು, ಪಶ್ಚಿಮ ಬಂಗಾಳದಲ್ಲಿ ಚುನಾವಣೆ

Public TV
By Public TV
2 hours ago
HSR Layout Crime
Bengaluru City

ಚಿನ್ನ ಖರೀದಿಗೆ ಹೋಗಿದ್ದವನಿಂದ ಕೋಟಿ ಕೋಟಿ ಹಣ ಪಡೆದು ವಂಚನೆ – ಖತರ್ನಾಕ್‌ ಲೇಡಿ ಮಾಡಿದ್ದೇನು?

Public TV
By Public TV
2 hours ago
Farmer Fertilizer
Bengaluru City

ಇನ್ಮುಂದೆ ರಸಗೊಬ್ಬರ ಬೇಕಿದ್ರೆ FID ಕಡ್ಡಾಯ

Public TV
By Public TV
2 hours ago

Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?