Public TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Font ResizerAa
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
Search
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Bollywood

74 ಕೋಟಿ ಪಡೆದು ಬೇಗ ನಿರ್ಗಮಿಸಿದ್ದೇಕೆ ಗಾಯಕಿ ರಿಯಾನಾ?

Public TV
Last updated: March 4, 2024 9:25 am
Public TV
Share
2 Min Read
rihanaa
SHARE

ಅತ್ಯಂತ ಶ್ರೀಮಂತ ಕುಟುಂಬದ ಅನಂತ್ ಅಂಬಾನಿ (Ananth Ambani)  ಪ್ರೀ-ವೆಡ್ಡಿಂಗ್ ಕಾರ್ಯಕ್ರಮ ಗುಜರಾತಿನ ಜಾಮ್‌ನಗರದಲ್ಲಿ ನಡೆಯುತ್ತಿದೆ. ಈ ಪ್ರೀ-ವೆಡ್ಡಿಂಗ್‌ನ ಆಕರ್ಷಣೆ ಎಂದರೆ ಸುಪ್ರಸಿದ್ಧ ಗಾಯಕಿ ರಿಯಾನಾ ಅವರ ಸಂಗೀತ ಕಾರ್ಯಕ್ರಮ. ಈ ಕಾರ್ಯಕ್ರಮವನ್ನು ನೀಡುವುದಕ್ಕಾಗಿ ಅವರು ಬರೋಬ್ಬರಿ 4 ಗಾಡಿ ಲಗೇಜ್ ನೊಂದಿಗೆ ವಿಮಾನ ನಿಲ್ದಾಣದಲ್ಲಿ ಬಂದಿಳಿದಿದ್ದರು. ಆದರೆ ಸಂಭಾವನೆ ಸಿಗುತ್ತಿದ್ದಂತೆ ಒಂದು ಕ್ಷಣವೂ ನಿಲ್ಲದೇ ಭಾರತಕ್ಕೆ ರಿಯಾನಾ (Rihanna) ಗುಡ್ ಬೈ ಹೇಳಿದ್ದರು.

radhika 1

ಅನಂತ್ ಮತ್ತು ರಾಧಿಕಾ ಮರ್ಚೆಂಟ್ (Radhika Merchant) ಪ್ರೀ-ವೆಡ್ಡಿಂಗ್ ಕಾರ್ಯಕ್ರಮಕ್ಕೆ ರಿಯಾನಾ ಗಾಯನ ಅತಿಥಿಗಳಿಗೆ ಕಿಕ್ ಕೊಟ್ಟಿತ್ತು. ಅಷ್ಟರ ಮಟ್ಟಿಗೆ ಅಂಬಾನಿ ಮನೆ ಕಾರ್ಯಕ್ರಮದಲ್ಲಿ ಗಾಯಕಿ ಮನರಂಜನೆ ನೀಡಿದ್ದರು. ಅದಕ್ಕೆ ಸರಿಯಾಗಿ 74 ಕೋಟಿ ರೂ. ಸಂಭಾವನೆ ಕೂಡ ಪಡೆದರು. ಬಳಿಕ ಭಾರತಕ್ಕೆ ಬೈ ಹೇಳಿ ಹೋಗಿದ್ದಾರೆ. ನಿರ್ಗಮನದ ಕಾರಣ ಕೂಡ ರಿಯಾನಾ ತಿಳಿಸಿದ್ದಾರೆ. ಇದನ್ನೂ ಓದಿ:ಬಾಲ್ಯದ ಕನಸು ನನಸಾಗಿದೆ ಎಂದು ಸಂಭ್ರಮಿಸಿದ ರಶ್ಮಿಕಾ ಮಂದಣ್ಣ

rihannaನಾನು ಭಾರತದಲ್ಲಿ ಅತ್ಯುತ್ತಮ ಸಮಯವನ್ನು ಕಳೆದಿದ್ದೇನೆ. ನನಗೆ ಕೇವಲ ಎರಡು ದಿನಗಳು ಮಾತ್ರ ಇದ್ದವು, ಆದರೆ ನಾನು ಹೊರಟ ಏಕೈಕ ಕಾರಣವೆಂದರೆ ನನ್ನ ಮಕ್ಕಳು ನನಗಾಗಿ ಕಾಯುತ್ತಿದ್ದರು. ನಾನು ಹಿಂದಿರುಗಲೇಬೇಕಿತ್ತು ಎಂದು ಸೋಷಿಯಲ್ ಮೀಡಿಯಾ ಲೈವ್‌ನಲ್ಲಿ ಗಾಯಕಿ ಹೇಳಿದ್ದಾರೆ.

aliaa 1

ಅಂಬಾನಿ ಕುಟುಂಬಕ್ಕೆ ಧನ್ಯವಾದಗಳು. ನನ್ನನ್ನು ಇಲ್ಲಿಗೆ ಆಹ್ವಾನಿಸಿದ್ದಕ್ಕೆ ಧನ್ಯವಾದಗಳು. ದೇವರು ನಿಮ್ಮ ಒಕ್ಕೂಟವನ್ನು ಆಶೀರ್ವದಿಸುತ್ತಾನೆ. ನಾನು ನಿಮಗೆ ಶುಭ ಹಾರೈಸುತ್ತೇನೆ. ಅಭಿನಂದನೆಗಳು ಎಂದು ಅವರು ಶೀಘ್ರದಲ್ಲೇ ಮದುವೆಯಾಗಲಿರುವ ಜೋಡಿಗೆ ಗಾಯಕಿ ಶುಭಹಾರೈಸಿದ್ದರು.

aliaa

ಅನಂತ್- ರಾಧಿಕಾ ಹಲವು ವರ್ಷಗಳಿಂದ ಪರಿಚಿತರು. ಆ ಪರಿಚಯವೇ ಪ್ರೀತಿಗೆ ತಿರುಗಿ ಇದೀಗ ಮದುವೆಯ ಮುದ್ರೆ ಒತ್ತಲು ಈ ಜೋಡಿ ಸಜ್ಜಾಗಿದ್ದಾರೆ. ಗುರುಹಿರಿಯರ ಸಮ್ಮತಿಯ ಮೇರೆಗೆ ಈ ಜೋಡಿ ಮದುವೆಯಾಗುತ್ತಿದ್ದಾರೆ. ಇದನ್ನೂ ಓದಿ:ಹೊಸ ಕಾರು ಖರೀದಿಸಿ ಕಂಡ ಕನಸನ್ನು ಈಡೇರಿಸಿಕೊಂಡ ತುಕಾಲಿ

kareena kapoor 1 1

ಅನಂತ್ ಮತ್ತು ರಾಧಿಕಾ ಮದುವೆ ಇದೇ ಜೂನ್ 12ಕ್ಕೆ ಫಿಕ್ಸ್ ಆಗಿದೆ. ಮಾರ್ಚ್ 1ರಿಂದ 3ರವರೆಗೆ ವಿವಾಹ ಪೂರ್ವ ಕಾರ್ಯಕ್ರಮ ಜರುಗಲಿದೆ. ಅದಕ್ಕಾಗಿ ಗುಜರಾತ್‌ನ ಜಾಮ್‌ನಗರವನ್ನು ಸಿಂಗರಿಸಲಾಗಿದೆ. ಅನಂತ್ ಪ್ರೀ-ವೆಡ್ಡಿಂಗ್ ಕಾರ್ಯಕ್ರಮದಲ್ಲಿ ಸಂಗೀತ, ನೃತ್ಯ ಹೀಗೆ ವಿವಿಧ ರೀತಿಯ ಪ್ರದರ್ಶನಗಳಿತ್ತು. ದೇಶ-ವಿದೇಶದ ಸೆಲೆಬ್ರಿಟಿಗಳು ಭಾಗಿಯಾಗಿದ್ದರು.

deepika padukone

ಶಾರುಖ್ ಖಾನ್ ಕುಟುಂಬ, ಸಲ್ಮಾನ್ ಖಾನ್, ಆಮೀರ್ ಖಾನ್, ದೀಪಿಕಾ ಪಡುಕೋಣೆ- ರಣ್‌ವೀರ್ ಸಿಂಗ್, ಆಲಿಯ ಭಟ್- ರಣ್‌ಬೀರ್, ಕತ್ರಿನಾ ಕೈಫ್-ವಿಕ್ಕಿ ಕೌಶಲ್ ಭಾಗಿಯಾಗಿದ್ದರು.

ananya panday

ಶ್ರದ್ಧಾ ಕಪೂರ್, ಅನನ್ಯಾ ಪಾಂಡೆ, ಬೋನಿ ಕಪೂರ್ ಕುಟುಂಬ, ಕರೀನಾ ಕಪೂರ್-ಸೈಫ್, ರಾಮ್ ಚರಣ್- ಉಪಸನಾ, ಮನೀಷ್ ಮಲ್ಹೋತ್ರಾ, ಕಿಯಾರಾ- ಸಿದ್ಧಾರ್ಥ್ ಮಲ್ಹೋತ್ರಾ ಭಾಗಿಯಾಗಿದ್ದರು.

genelia

ಬಿಲ್ ಗೇಟ್ಸ್, ಮಾರ್ಕ್ ಜುಕರ್‌ಬರ್ಗ್, ಸದ್ಗುರು, ಡೇವಿಡ್ ಧವನ್, ಎಂಎಸ್ ಧೋನಿ, ರೋಹಿತ್ ಶರ್ಮಾ, ಹಾರ್ದಿಕ್ ಪಾಂಡ್ಯ, ಸುಹಾನಾ ಖಾನ್, ರಿಯಾ ಕಪೂರ್ ಭಾಗಿಯಾಗಿದ್ದರು.

TAGGED:Anant Ambanibollywoodmukesh ambaniRadhika MerchantRihannaಅನಂತ್ ಅಂಬಾನಿರಾಧಿಕಾ ಮರ್ಚೆಂಟ್ರಿಯಾನಾ
Share This Article
Facebook Whatsapp Whatsapp Telegram

You Might Also Like

Temba Bavuma 2
Cricket

ಆಸೀಸ್‌ ಲಕ್ಕಿ ಚಾರ್ಮ್‌ಗಳಿಗೆ ಸೋಲಿನ ರುಚಿ ತೋರಿಸಿದ ಹರಿಣರು – ಹೇಜಲ್ವುಡ್‌ ಗೆಲುವಿನ ನಾಗಾಲೋಟಕ್ಕೆ ಬ್ರೇಕ್‌

Public TV
By Public TV
2 minutes ago
Koppal nava brindavana
Districts

ರಘುವರ್ಯ ತೀರ್ಥರ ಮಧ್ಯಾರಾಧನೆ ಮಹೋತ್ಸವ ಸಂಪನ್ನ

Public TV
By Public TV
19 minutes ago
WTC SA 3
Cricket

ದ. ಆಫ್ರಿಕಾ ಈಗ ʻವಿಶ್ವ ಟೆಸ್ಟ್‌ ಚಾಂಪಿಯನ್‌ʼ – 27 ವರ್ಷಗಳ ಬಳಿಕ ಐಸಿಸಿ ಪ್ರಶಸ್ತಿ ಬರ ನೀಗಿಸಿಕೊಂಡ ಹರಿಣರು

Public TV
By Public TV
23 minutes ago
Chikkodi Crime
Belgaum

ಅಣ್ಣ ಶ್ರೀಮಂತ ಆಗ್ಬಿಟ್ಟ ಅಂತ ತಮ್ಮ ಮಾಡಿದ್ದೆಂತ ನೀಚ ಕೆಲ್ಸ ಗೊತ್ತಾ? – ಹಂತಕ ಸಿಕ್ಕಿಬಿದ್ದಿದ್ದೇ ರೋಚಕ!

Public TV
By Public TV
26 minutes ago
Untitled 1 copy
Latest

11A ಸೀಟ್ ಮಿಸ್ಟರಿ – 2 ವಿಮಾನ ಪತನ, ಒಂದೇ ಕಡೆ ಕುಳಿತಿದ್ದ ಇಬ್ಬರು ಮೃತ್ಯುಂಜಯರು!

Public TV
By Public TV
55 minutes ago
Mallikarjun Kharge
Latest

ವಿಮಾನ ದುರಂತ ಸ್ಥಳಕ್ಕೆ ಭೇಟಿ – ಗಾಯಾಳುಗಳ ಆರೋಗ್ಯ ವಿಚಾರಿಸಿ, ಧೈರ್ಯ ತುಂಬಿದ ಮಲ್ಲಿಕಾರ್ಜುನ ಖರ್ಗೆ

Public TV
By Public TV
55 minutes ago
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?