Public TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Font ResizerAa
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
  • National
  • World
  • Cinema
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Latest

ವಲಸಿಗರ ಆಧಾರ್‌ ನಿಷ್ಕ್ರಿಯ – ಏನಿದು ಪಶ್ಚಿಮ ಬಂಗಾಳ, ಕೇಂದ್ರದ ನಡುವಿನ ಕಿತ್ತಾಟ?

Public TV
Last updated: March 6, 2024 12:55 pm
Public TV
Share
3 Min Read
West Bengal 2
SHARE

ಪಶ್ಚಿಮ ಬಂಗಾಳದಲ್ಲಿ  (West Bengal) ರಾಜಕೀಯ ಉದ್ದೇಶಕ್ಕೆ ಬಾಂಗ್ಲಾ ವಲಸಿಗರಿಗೆ ಆಧಾರ್ ಕಾರ್ಡ್ (Aadhaar Card) ನೀಡಿರುವ ಆರೋಪದ ಮೇಲೆ ಕೇಂದ್ರ ಸರ್ಕಾರ ಅಗತ್ಯ ಕ್ರಮಕ್ಕೆ ಮುಂದಾಗಿದೆ. ಈಗಾಗಲೇ ಹಲವರ ಆಧಾರ್ ನಿಷ್ಕ್ರಿಯಗೊಳಿಸಲಾಗಿದ್ದು, ಕೇಂದ್ರ ಸರ್ಕಾರ ಹಾಗೂ ಪಶ್ಚಿಮ ಬಂಗಾಳದ ಮಮತಾ ಬ್ಯಾನರ್ಜಿ (Mamata Banerjee) ನೇತೃತ್ವದ ಸರ್ಕಾರದ ನಡುವಿನ ರಾಜಕೀಯ ಕೆಸರೆರಚಾಟಕ್ಕೆ ರಾಜ್ಯ ಸಾಕ್ಷಿಯಾಗಿದೆ.  

ಕೇಂದ್ರದ ನಿರ್ಧಾರದ ವಿರುದ್ಧ ಗುಡುಗಿರುವ ಪಶ್ಚಿಮ ಬಂಗಾಳ ಸಿಎಂ ಮಮತಾ ಬ್ಯಾನರ್ಜಿ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಸಮುದಾಯಗಳ ಆಧಾರ್ ನಿಷ್ಕ್ರಿಯಗೊಳಿಸಲಾಗಿದೆ ಎಂದು ಆರೋಪಿಸಿದ್ದಾರೆ. ಅಲ್ಲದೇ ಈಗ ಅಗತ್ಯ ಸೇವೆಗಳಿಗೆ ಆಧಾರ್ ಕಡ್ಡಾಯವಾಗಿ ಬೇಕಾಗಿದ್ದು, ನಿಷ್ಕ್ರಿಯಗೊಳಿಸಲಾದ ಆಧಾರ್ ಕಾರ್ಡ್‍ಗಳ ವಿಚಾರವಾಗಿ ಮಮತಾ ಬ್ಯಾನರ್ಜಿ ಕೇಂದ್ರಕ್ಕೆ ಪತ್ರ ಸಹ ಬರೆದಿದ್ದಾರೆ. ಇದರೊಂದಿಗೆ, ನಮಗೆ ಆಧಾರ್ ಅಗತ್ಯವಿಲ್ಲ, ನಾವು ಪ್ರತ್ಯೇಕ ಗುರುತಿನ ಚೀಟಿ ಜಾರಿಗೆ ತರುತ್ತೇವೆ ಎಂಬ ಸವಾಲನ್ನು ಸಹ ಕೆಂದ್ರಕ್ಕೆ ಹಾಕಿದ್ದಾರೆ.

West Bengal

ಟಿಎಂಸಿ (TMC) ಸಂಸದ ಸಾಕೇತ್ ಗೋಕಲೆ (Saket Gokhale) ಕೂಡ ಈ ವಿಚಾರವಾಗಿ ಮೋದಿ (Narendra Modi) ಸರ್ಕಾರ ಜನಸಾಮಾನ್ಯರ ಹಕ್ಕನ್ನು ಕಸಿಯುತ್ತಿದೆ ಎಂದು ವಾಗ್ದಾಳಿ ನಡೆಸಿದ್ದರು. ನೀವು ಭಾರತದಲ್ಲಿ ಎಲ್ಲಿಯೇ ವಾಸಿಸುತ್ತಿರಲಿ, ಬಿಜೆಪಿಯನ್ನು ವಿರೋಧಿಸುವ ಕಾರಣಕ್ಕಾಗಿ ಮೋದಿ ಸರ್ಕಾರ ನಿಮ್ಮ ಆಧಾರ್ ಅನ್ನು ನಿಷ್ಕ್ರಿಯಗೊಳಿಸಿದರೆ ಹಲವಾರು ಸಮಸ್ಯೆ ಎದುರಿಸಬೇಕಾಗುತ್ತದೆ ಎಂದು ಹೇಳಿದ್ದರು.

ಆಧಾರ್ ನಿಷ್ಕ್ರಿಯದಿಂದ ಎದುರಿಸಬೇಕಾದ ಸಮಸ್ಯೆಗಳು: ಆಧಾರ್ ಅಗತ್ಯವಿರುವ ಎಲ್ಲಾ ಸೇವೆಗಳು ಲಭ್ಯವಾಗುವುದಿಲ್ಲ. ವಿಶೇಷವಾಗಿ  ಸರ್ಕಾರದಿಂದ ಸಿಗುವ ಬ್ಯಾಂಕಿಂಗ್ ಮತ್ತು ಹಣಕಾಸು ಸೇವೆಗಳು ಲಭ್ಯವಿರುವುದಿಲ್ಲ.

ಕೇಂದ್ರ ಹೇಳಿದ್ದೇನು?: ಕೇಂದ್ರ ಸಚಿವ ಶಾಂತನು ಠಾಕೂರ್ ಅವರು ತಾಂತ್ರಿಕ ದೋಷದಿಂದ ಪಶ್ಚಿಮ ಬಂಗಾಳದ ನಿವಾಸಿಗಳ ಆಧಾರ್ ಕಾರ್ಡ್‍ಗಳನ್ನು ನಿಷ್ಕ್ರಿಯಗೊಳಿಸಲಾಗಿದೆ ಎಂದು ಮಾಹಿತಿ ನೀಡಿದ್ದಾರೆ.

West Bengal 1

ಟಿಎಂಸಿ ಸಂಸದರ ತಾಜಾ ಆರೋಪಗಳು ಆಧಾರ್ ಕಾರ್ಡ್‍ಗಳ ಮೂಲಕ ಸಾಮಾನ್ಯ ಜನರ ವೈಯಕ್ತಿಕ ಡೇಟಾದ ಆಪಾದನೆಯ ಉಲ್ಲಂಘನೆಯ ಸುತ್ತ ಚರ್ಚೆಗೆ ಮತ್ತೆ ಮರುಜೀವ ಬಂದಿದೆ. ಕಳೆದ ವರ್ಷ ಅಕ್ಟೋಬರ್‌ನಲ್ಲಿ ಅಮೆರಿಕ ಮೂಲದ `ರೆಸೆಕ್ಯುರಿಟಿ’ ಸಂಸ್ಥೆಯು ಡಾರ್ಕ್ ವೆಬ್‍ನಲ್ಲಿ ಆಧಾರ್ ಸಂಖ್ಯೆಗಳು ಮತ್ತು ಪಾಸ್‍ಪೋರ್ಟ್ ವಿವರಗಳು ಸೇರಿದಂತೆ ಸುಮಾರು 81.5 ಕೋಟಿ ಭಾರತೀಯರ ವೈಯಕ್ತಿಕ ಡೇಟಾ ಸೋರಿಕೆಯಾಗಿದೆ ಎಂದು ವರದಿ ಮಾಡಿತ್ತು. ವರದಿಯ ನಂತರ, ದೆಹಲಿ ಪೊಲೀಸರು ಕಳೆದ ವರ್ಷ ಡಿಸೆಂಬರ್‌ನಲ್ಲಿ ಡಾರ್ಕ್ ವೆಬ್‍ನಲ್ಲಿ ಜನರ ವೈಯಕ್ತಿಕ ಡೇಟಾವನ್ನು ಸೋರಿಕೆ ಮಾಡಿದ ಆರೋಪದ ಮೇಲೆ ನಾಲ್ವರು ಆರೋಪಿಗಳನ್ನು ಬಂಧಿಸಿದ್ದರು.

ಕೇಂದ್ರ ಸರ್ಕಾರ ಪಶ್ಚಿಮ ಬಂಗಾಳದಲ್ಲಿ ಅಕ್ರಮ ಆಧಾರ್‌ನ್ನು ನಿಷ್ಕ್ರಿಯಗೊಳಿಸಿದ್ದರೆ ಅಥವಾ ರದ್ದುಗೊಳಿಸದಿದ್ದರೆ ಆಗುವ ಸಮಸ್ಯೆಗಳೇನು? ಇದರ ಪರಿಣಾಮಗಳೇನು? ಅಲ್ಲದೇ ಪ್ರತ್ಯೇಕ ಐಡಿ ಕಾರ್ಡ್ ದೇಶದ ಭದ್ರತೆಗೆ ಹೇಗೆ ತೊಡಕಾಗಬಹುದು ಎಂಬ ಪ್ರಶ್ನೆ ಈಗ ದೇಶದೆಲ್ಲೆಡೆ ಸಂಚಲನ ಮೂಡಿಸಿದೆ. 

ಕೇಂದ್ರ ಸರ್ಕಾರ ಹಾಗೂ ಸ್ವಯತ್ತ ಸಂಸ್ಥೆಗಳನ್ನು ಹೊರತುಪಡಿಸಿ ಬೇರೆ ಯಾರಿಗೂ ಗುರುತಿನ ಚೀಟಿ ನೀಡಲು ಅಧಿಕಾರ ಇಲ್ಲ. ಇದೀಗ ಮಮತಾ ಸರ್ಕಾರ ಗುರುತಿನ ಚೀಟಿ ನೀಡಲು ಮುಂದಾಗಿದ್ದು, ರಾಜಕೀಯ ಕಾರಣ, ಮತದ ಆಸರೆಗೆ ಎಂಬ ಆರೋಪಗಳು ಸಹ ಕೇಳಿಬರುತ್ತಿದೆ. ದೇಶಕ್ಕೆ ಅಕ್ರಮವಾಗಿ ನುಸುಳಿ ಬಂದ ಬಾಂಗ್ಲಾ ಇನ್ನಿತರ ದೇಶಗಳ ಜನರಿಗೆ ಆಧಾರ್ ಅಥವಾ ಗುರುತಿನ ಚೀಟಿ ನೀಡುವುದು ಮುಂದೆ ದೇಶಕ್ಕೆ ಮಾರಕವಾಗಿ ಪರಿಣಮಿಸಲಿದೆ.  ಮೂಲ ನಿವಾಸಿಗಳು ಪರಕೀಯರಾಗಿ ಬದುಕಬೇಕಾದ ಸಮಯ ದೂರ ಇಲ್ಲ ಎಂಬ ಚರ್ಚೆ ಕೂಡ ಜನರಲ್ಲಿ ಆರಂಭವಾಗಿದೆ. 

ಕೆಲವೆಡೆ ಆಧಾರ್ ನಿಷ್ಕ್ರಿಯಗೊಳಿಸುತ್ತಿರುವುದು ಎನ್‍ಆರ್‌ಸಿ (NRC) ಜಾರಿಯ ಮೊದಲ ಹೆಜ್ಜೆ ಎಂಬ ಮಾತಗಳು ಕೇಳಿಬಂದಿದ್ದು, ಕೇಂದ್ರ ಹಾಗೂ ಪಶ್ಚಿಮ ಬಂಗಾಳ ಸರ್ಕಾರ ಸೂಕ್ತ ನಿರ್ಧಾರ ಹಾಗೂ ಮಾತುಕತೆ ಮೂಲಕ ಚರ್ಚೆಗೆ ಗ್ರಾಸವಾದ ವಿಚಾರಕ್ಕೆ ಅಂತ್ಯ ಹಾಡಬೇಕಿದೆ. 

TAGGED:aadhaar cardMamata Banerjeenarendra modiSaket GokhaleTMCWest Bengalನರೇಂದ್ರ ಮೋದಿಪಶ್ಚಿಮ ಬಂಗಾಳಮಮತಾ ಬ್ಯಾನರ್ಜಿ
Share This Article
Facebook Whatsapp Whatsapp Telegram

Cinema Updates

samantha
ಒಂದೇ ಕಾರ್ಯಕ್ರಮದಲ್ಲಿ ಕಾಣಿಸಕೊಂಡ ಮಾಜಿ ಅತ್ತೆ, ಸೊಸೆ – ಸಮಂತಾ ಮಾತಿಗೆ ಅಮಲಾ ಚಪ್ಪಾಳೆ
7 hours ago
KENISHA 1
ಕೆನಿಶಾಗೆ ಕೊಲೆ ಬೆದರಿಕೆ – ಆರತಿ ಸಮಸ್ಯೆಗೆ ನಾನು ಕಾರಣ ಆಗಿದ್ರೆ ಕೋರ್ಟ್‌ ಮುಂದೆ ನಿಲ್ಲಿಸಿ ಎಂದ ಗಾಯಕಿ
7 hours ago
janhvi kapoor 1
ಕಾನ್ ಫೆಸ್ಟಿವಲ್| ರೆಡ್ ಕಾರ್ಪೆಟ್‌ನಲ್ಲಿ ಜಾನ್ವಿ ವಾಕ್ – ‘ನನ್ನ ದೇವತೆ’ ಎಂದ ಬಾಯ್‌ಫ್ರೆಂಡ್
8 hours ago
Tamanna Bhatia
Video | ತಮನ್ನಾಗೆ 6.20 ಕೋಟಿ – ನಟಿ ತಾರಾ ಬೇಸರ
9 hours ago

You Might Also Like

Lucknow Super Gaints
Cricket

ಆಟಕ್ಕುಂಟು ಲೆಕ್ಕಕ್ಕಿಲದ ಪಂದ್ಯದಲ್ಲಿ ರೋಷಾವೇಶ – ಗುಜರಾತ್‌ ವಿರುದ್ಧ ಲಕ್ನೋಗೆ 33 ರನ್‌ಗಳ ಭರ್ಜರಿ ಗೆಲುವು

Public TV
By Public TV
4 hours ago
Shaurya Chakras
Latest

ಮೇಜರ್ ಆಶಿಶ್ ದಹಿಯಾ ಸೇರಿ 33 ಶೌರ್ಯ ಚಕ್ರ ಪ್ರಶಸ್ತಿ, 6 ಕೀರ್ತಿ ಚಕ್ರ ಪ್ರಶಸ್ತಿ ಪ್ರದಾನ

Public TV
By Public TV
4 hours ago
IndiGo Flight 1
Latest

ಡೇಂಜರ್‌ನಲ್ಲಿದ್ದರೂ ದೆಹಲಿ-ಶ್ರೀನಗರ ಇಂಡಿಗೋ ವಿಮಾನಕ್ಕೆ ತನ್ನ ವಾಯುಸೀಮೆ ಬಳಸಲು ನಿರಾಕರಿಸಿದ ಪಾಕ್‌

Public TV
By Public TV
4 hours ago
Dinesh Gundurao 1
Bengaluru City

ಸರ್ಕಾರಿ ಆಸ್ಪತ್ರೆಗಳಲ್ಲಿ ಔಷಧ ಮಾರಾಟ ಸರಿಯಲ್ಲ – ಜನೌಷಧಿ ಕೇಂದ್ರಗಳ ಸ್ಥಗಿತದ ಹಿಂದೆ ರಾಜಕೀಯ ಉದ್ದೇಶವಿಲ್ಲ – ಗುಂಡೂರಾವ್

Public TV
By Public TV
5 hours ago
Manohar Lal Khattar 1
Latest

ವಸತಿ ಹಂಚಿಕೆಯಲ್ಲಿ ಅಂಗವಿಕಲರಿಗೆ 4% ಮೀಸಲಾತಿ ಕಡ್ಡಾಯ: ಕೇಂದ್ರ ಸರ್ಕಾರ

Public TV
By Public TV
5 hours ago
Chalavadi Complaint To Governor
Bengaluru City

ಚಿತ್ತಾಪುರದಲ್ಲಿ ಛಲವಾದಿ ನಾರಾಯಣಸ್ವಾಮಿಗೆ ಘೇರಾವ್

Public TV
By Public TV
6 hours ago
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?