Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ದೇಶದ್ರೋಹಿಗಳಿಗೂ, ಕೈ ನಾಯಕರಿಗೂ ಅಪ್ಪುಗೆಯ ನಂಟಿನ ಕಾರಣ FSL ವರದಿ ವಿಳಂಬ: ಸಿ.ಟಿ.ರವಿ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | ದೇಶದ್ರೋಹಿಗಳಿಗೂ, ಕೈ ನಾಯಕರಿಗೂ ಅಪ್ಪುಗೆಯ ನಂಟಿನ ಕಾರಣ FSL ವರದಿ ವಿಳಂಬ: ಸಿ.ಟಿ.ರವಿ

Districts

ದೇಶದ್ರೋಹಿಗಳಿಗೂ, ಕೈ ನಾಯಕರಿಗೂ ಅಪ್ಪುಗೆಯ ನಂಟಿನ ಕಾರಣ FSL ವರದಿ ವಿಳಂಬ: ಸಿ.ಟಿ.ರವಿ

Public TV
Last updated: March 6, 2024 6:00 pm
Public TV
Share
3 Min Read
CONGRESS CT RAVI
SHARE

ಬೆಂಗಳೂರು: ಪಾಕಿಸ್ತಾನ ಪರ ಘೋಷಣೆ (Pro Pakistan Slogan) ಕೂಗಿದ ಮೂವರನ್ನು ಬಂಧಿಸಿರುವುದು ಸರಿ. ಆದರೆ ಎಫ್‍ಎಸ್‍ಎಲ್ ವರದಿಯನ್ನು ಯಾಕಿನ್ನೂ ಅಧಿಕೃತವಾಗಿ ಬಿಡುಗಡೆ ಮಾಡಿಲ್ಲ ಎಂದು ಬಿಜೆಪಿ ನಿಕಟಪೂರ್ವ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಮತ್ತು ರಾಜ್ಯದ ಮಾಜಿ ಸಚಿವ ಸಿ.ಟಿ.ರವಿ ಪ್ರಶ್ನಿಸಿದ್ದಾರೆ.

ಬೆಂಗಳೂರು ಬಿಜೆಪಿ ರಾಜ್ಯ ಕಾರ್ಯಾಲಯ ಜಗನ್ನಾಥ ಭವನದಲ್ಲಿ ಇಂದು ಮಾಧ್ಯಮ ಪ್ರತಿನಿಧಿಗಳ ಜೊತೆ ಮಾತನಾಡಿದ ಅವರು, ಬಂಧಿತರು ಯಾರೋ ಚೇಲಾಗಳಿರಬೇಕು ಅಂದುಕೊಂಡಿದ್ದೆವು. ಅವರಿಗೆ ರಾಹುಲ್ ಗಾಂಧಿಯವರ ಸಂಪರ್ಕ ಇರುವುದು ನಮಗೆ ಗೊತ್ತಿರಲಿಲ್ಲ ಎಂದು ತಿಳಿಸಿದರು. ಈಗ ರಾಹುಲ್ ಗಾಂಧಿಯವರ ಜೊತೆಗಿರುವ, ತಬ್ಬಿಕೊಂಡಿರುವ ಫೋಟೋ ಮಾಧ್ಯಮ, ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ಪಾಕಿಸ್ತಾನ ಜಿಂದಾಬಾದ್ ನಂಟು ನಾವು ಅಂದುಕೊಂಡಿದ್ದ ರೀತಿಯನ್ನೂ ಮೀರಿದೆ. ಪಾಕಿಸ್ತಾನದ ಅಪ್ಪ, ಅಮ್ಮನಿಗೆ ಹುಟ್ಟಿದ ದೇಶದ್ರೋಹಿಗಳು ಕೂಗಿದ್ದಾರೆ ಎಂದುಕೊಂಡಿದ್ದೆವು. ದೇಶದ್ರೋಹಿಗಳಿಗೂ, ಕಾಂಗ್ರೆಸ್ ನಾಯಕರಿಗೂ ಅಪ್ಪುಗೆಯ ನಂಟಿದೆ ಎಂದು ನಮಗೆ ತಿಳಿದಿರಲಿಲ್ಲ ಎಂದು ವಿಶ್ಲೇಷಿಸಿದರು.

ಪಾ”ಕೈ”ಸ್ತಾನಿಗಳ ಜೊತೆ ಬಿಡಿಸಲಾಗದ ನಂಟು.

ಭವ್ಯ ಭಾರತಕ್ಕೆ ಇವರಿಂದ ಸದಾ ಕಳಂಕವುಂಟು.#AntiIndiaCongress pic.twitter.com/4o15QNymme

— BJP Karnataka (@BJP4Karnataka) March 6, 2024

ಅಪ್ಪುಗೆಯ ನಂಟು ಇರುವ ಕಾರಣ ಎಫ್‍ಎಸ್‍ಎಲ್ ವರದಿಯನ್ನು ಅಧಿಕೃತವಾಗಿ ಬಿಡುಗಡೆ ಮಾಡಿಲ್ಲವೇನೋ ಎಂದು ಅವರು ಸಂಶಯ ವ್ಯಕ್ತಪಡಿಸಿದರು. ಎಫ್‍ಎಸ್‍ಎಲ್ ವರದಿಯನ್ನು ಅಧಿಕೃತವಾಗಿ ಬಿಡುಗಡೆ ಮಾಡಲು ಅವರು ಆಗ್ರಹಿಸಿದರು. ಅಧಿಕೃತವಾಗಿ ಎಫ್‍ಎಸ್‍ಎಲ್ ವರದಿಯನ್ನು ಬಿಡುಗಡೆ ಮಾಡಬೇಕಿತ್ತಲ್ಲವೇ? ಸಚಿವ ಪ್ರಿಯಾಂಕ್ ಖರ್ಗೆಯವರು ಘಟನೆ ನಡೆದ ಮರುದಿನವೇ ‘ಅವರು ಹಾಗೆ ಕೂಗಿಲ್ಲ; ಪಾಕಿಸ್ತಾನ ಜಿಂದಾಬಾದ್ ಎಂದು ಇಲ್ಲವೇ ಇಲ್ಲ’ ಎಂದಿದ್ದರು. ವರದಿ ಸಿಕ್ಕಿದ್ದರೂ ಸರ್ಕಾರ ಅಧಿಕೃತವಾಗಿ ಅದನ್ನು ಬಿಡುಗಡೆ ಮಾಡಿಲ್ಲವೇಕೆ? ಎಂದು ಕೇಳಿದರು. ಇದನ್ನೂ ಓದಿ: ಅಮ್ಮನ ಜೊತೆ ನಾನು ಹೋಗಲ್ಲ- ಹಲ್ಲೆಗೊಳಗಾದ ಮಗುವಿನ ಮುಗ್ಧ ಮಾತು

ಅಂದು – ಪಾಕಿಸ್ತಾನ್‌ ಜಿಂದಾಬಾದ್‌ ಎಂದು ಕೂಗಿಯೇ ಇಲ್ಲ.

ಇಂದು – ಪಾಕಿಸ್ತಾನ್‌ ಜಿಂದಾಬಾದ್‌ ಎಂದವರು ನಮಗೆ ಪರಿಚಯವೇ ಇಲ್ಲ.

ಸಿಎಂ @siddaramaiah ಅವರೇ, ಡಿಸಿಎಂ @DKShivakumar ಅವರೇ ಇಲ್ಲಿ ನೋಡಿ ಚಿತ್ರಗಳೇ ಮಾತನಾಡುತ್ತಿವೆ.#AntiIndiaCongress #AntiNationalCongress pic.twitter.com/tdh37PhuT2

— BJP Karnataka (@BJP4Karnataka) March 6, 2024

ಬಿಜೆಪಿ ವಿರುದ್ಧ ಟೀಕೆಯ ಹಳೆಯ ಕಾಯಿಲೆ: ರಾಮೇಶ್ವರಂ ಕೆಫೆ ಬಾಂಬ್ ಸ್ಫೋಟ ಪ್ರಕರಣಕ್ಕೆ ಸಂಬಂಧಿಸಿ ರಾಜ್ಯದ ಒಬ್ಬೊಬ್ಬ ಸಚಿವರು ಒಂದೊಂದು ರೀತಿ ಹೇಳಿಕೆ ಕೊಡುತ್ತಿದ್ದಾರೆ. ಕೆಲವರು ಬಾಂಬ್ ಇಟ್ಟವರು ಬಿಜೆಪಿಯವರೇ ಇರಬಹುದು ಎಂದು ಹೇಳಿಕೆ ಕೊಟ್ಟಿದ್ದಾರೆ. ಇದೊಂದು ಹಳೆಯ ಕಾಯಿಲೆ. ಇವತ್ತು ನಿನ್ನೆಯ ಕಾಯಿಲೆಯಲ್ಲ. 2000ನೇ ಇಸವಿಯಲ್ಲಿ ಚರ್ಚ್‍ಗಳ ಮೇಲೆ ಬಾಂಬ್ ಸ್ಫೋಟಿಸಿದ್ದರು. ಆಗ ಇವತ್ತಿನ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆಯವರು ಗೃಹ ಸಚಿವರಾಗಿದ್ದರು. ತನಿಖೆಗೆ ಮುಂಚೆಯೇ ಅವರು ‘ಇದರ ಹಿಂದೆ ಆರ್‌ಎಸ್‌ಎಸ್‌ ಪಿತೂರಿ ಇದೆ’ ಎಂದು ಫರ್ಮಾನು ಹೊರಡಿಸಿದ್ದರು. ಸಾರ್ವಜನಿಕ ಹೇಳಿಕೆಯನ್ನೂ ಕೊಟ್ಟಿದ್ದರು. ಆಮೇಲೆ ಬಂಧನ ಆದಾಗ ಪಾಕಿಸ್ತಾನ ಪ್ರೇರಿತ ಭಯೋತ್ಪಾದಕ ಸಂಘಟನೆಯವರು ಚರ್ಚ್‍ಗಳಿಗೆ ಬಾಂಬ್ ಇಟ್ಟಿದ್ದರು ಎಂಬುದು ತನಿಖೆ ನಂತರ ಬೆಳಕಿಗೆ ಬಂತು ಎಂದು ವಿವರಿಸಿದರು. ಆಗ ಫ್ಲೈಓವರ್‌ನಲ್ಲಿ ಬಾಂಬ್ ಒಯ್ಯುವಾಗ ಸ್ಫೋಟ ಸಂಭವಿಸಿ ಭಯೋತ್ಪಾದಕನೂ ಸತ್ತಿದ್ದ, ಭಯೋತ್ಪಾದನಾ ಜಾಲವೂ ಹೊರಗಡೆ ಬಂದಿತ್ತು ಎಂದು ತಿಳಿಸಿದರು.

ಈಗ ಕಾಂಗ್ರೆಸ್ ಸಚಿವರು ಭಯೋತ್ಪಾದಕರನ್ನು ರಕ್ಷಿಸುವ ರೀತಿಯಲ್ಲಿ ಹೇಳಿಕೆ ಕೊಡುತ್ತಿದ್ದಾರೆ. ಮುಖ್ಯಮಂತ್ರಿಗಳು ಇಂತಹ ವಿಷಯದಲ್ಲಿ ರಾಜಕಾರಣ ಮಾಡುವುದು ಬೇಡ ಎನ್ನುತ್ತಾರೆ. ಇನ್ನೊಬ್ಬ ಸಚಿವರು ಭೀತರಾಗದಿರಿ; ಇದೊಂದು ಲಘು ಸ್ಫೋಟ ಎಂದಿದ್ದಾರೆ. ಈಗ ತನಿಖೆಗೆ ಮೊದಲೇ ವಿಷಯಾಂತರ ಮಾಡುವ, ದಿಕ್ಕು ತಪ್ಪಿಸುವ ಹೀನ ಕೆಲಸವನ್ನು ಕರ್ನಾಟಕದ ಕಾಂಗ್ರೆಸ್ ಸಚಿವರು ಮಾಡುತ್ತಿರುವುದು ಅವರು ಯಾರನ್ನೋ ರಕ್ಷಿಸುವ ಉದ್ದೇಶ ಹೊಂದಿದ್ದಾರೆ ಎಂಬ ಅನುಮಾನಕ್ಕೆ ಕಾರಣವಾಗಿದೆ ಎಂದು ಹೇಳಿದರು.

ಮುಖ್ಯಮಂತ್ರಿಗಳು ವಿಷಯವನ್ನು ರಾಜಕೀಯಗೊಳಿಸಬೇಡಿ ಎನ್ನುತ್ತಾರೆ. ಹಾಗಿದ್ದರೆ ನಿಮ್ಮ ಸಚಿವರು ಮಾಡುತ್ತಿರುವುದು ಏನು? ಎಂದು ಪ್ರಶ್ನೆಯನ್ನು ಮುಂದಿಟ್ಟರು. ಅವರು ರಾಜಕೀಯಕರಣದ ಕೆಲಸ ಮಾಡುತ್ತಿದ್ದಾರೆ ಎಂದು ಆಕ್ಷೇಪಿಸಿದರು.

ಸರ್ಕಾರವೇ 222ಕ್ಕೂ ಹೆಚ್ಚು ತಾಲ್ಲೂಕುಗಳು ಬರಗಾಲಪೀಡಿತ ಎಂದು ಪ್ರಕಟಿಸಿದೆ. ಎಷ್ಟು ಜನ ಸಚಿವರು ಜಿಲ್ಲೆಗೆ ಹೋಗಿ ಬರಗಾಲ ಎದುರಿಸಲು, ಬರದ ಬವಣೆ ನೀಗಿಸಲು ಯೋಜನೆ ರೂಪಿಸಲು ಮುಂದಾಗಿದ್ದಾರೆ ಎಂದು ಕೇಳಿದರು. ಎಷ್ಟು ಜನ ಸಚಿವರು ಬರಗಾಲಪೀಡಿತ ತಾಲ್ಲೂಕುಗಳಿಗೆ ಪ್ರವಾಸ ಮಾಡಿದ್ದಾರೆ ಎಂದು ಪ್ರಶ್ನಿಸಿದರು. ಕುಡಿಯುವ ನೀರಿಗೆ ಹಾಹಾಕಾರ ಇದೆ. ಜನಸಾಮಾನ್ಯರ ಹಾಹಾಕಾರ ನೀಗಿಸುವ ಅಧಿಕಾರ ಇರುವ ಮುಖ್ಯಮಂತ್ರಿ, ಉಪ ಮುಖ್ಯಮಂತ್ರಿಗಳು ಅವರ ಅಸಮರ್ಥತೆ, ಅಸಹಾಯಕತೆಯನ್ನು ತೋರಿಸುತ್ತಿದ್ದಾರೆ ಎಂದು ಟೀಕಿಸಿದರು.

TAGGED:bengalurubjpcongressCT Raviಕಾಂಗ್ರೆಸ್ಬಿಜೆಪಿಬೆಂಗಳೂರುಸಿ.ಟಿ ರವಿ
Share This Article
Facebook Whatsapp Whatsapp Telegram

Cinema news

TVK Vijay
ಅಫಿಡವಿಟ್‌ನಲ್ಲಿ 105 ಕೋಟಿ ವ್ಯತ್ಯಾಸ – ನಾಮಪತ್ರ ತಿರಸ್ಕಾರ ಆತಂಕದಲ್ಲಿ ವಿಜಯ್‌
Cinema Court Latest Main Post National
Maharashtra Man Arrest
ಮಹಾರಾಷ್ಟ್ರ ‘ಲವ್ ಟ್ರ್ಯಾಪ್’ ಸಂತ್ರಸ್ತೆ ಆತ್ಮಹತ್ಯೆಗೆ ಯತ್ನ – ಮತ್ತೋರ್ವ ಆರೋಪಿ ಅಂದರ್
Cinema Latest National Top Stories
Atlee
ಹೆಣ್ಣು ಮಗು ಜನಿಸಿದ ಸಂಭ್ರಮದಲ್ಲಿ ನಿರ್ದೇಶಕ ಅಟ್ಲೀ ದಂಪತಿ
Cinema Latest Top Stories
Deepika Padukone Ranveer Singh
2ನೇ ಮಗುವಿನ ನಿರೀಕ್ಷೆಯಲ್ಲಿ ದೀಪಿಕಾ ಪಡುಕೋಣೆ, ರಣವೀರ್‌ ಸಿಂಗ್‌ ದಂಪತಿ
Bollywood Cinema Latest Top Stories

You Might Also Like

Zameer Ahmed Khan
Bengaluru City

ನಾನು ಜೆಡಿಎಸ್‌ಗೆ ಹೋಗ್ತೀನಿ ಅನ್ನೋದು ಊಹಾಪೋಹ – ಜಮೀರ್ ಅಹ್ಮದ್ ಸ್ಪಷ್ಟನೆ

Public TV
By Public TV
14 minutes ago
UP teen murder case
Crime

ಲವ್ವರ್‌ ಜೊತೆ ಬ್ರೇಕಪ್‌ ಮಾಡಿಕೊಳ್ಳಲ್ಲ ಎಂದಿದ್ದಕ್ಕೆ ತಂದೆಯಿಂದ ಮಗಳ ಬರ್ಬರ ಹತ್ಯೆ

Public TV
By Public TV
36 minutes ago
SN Narayanaswamy Bangarpet MLA
Bengaluru City

ಸಂಪುಟ ಪುನರ್ ರಚನೆ ಮಾಡಲು ಹೈಕಮಾಂಡ್‌ಗೆ ಮನವಿ: ಬಂಗಾರಪೇಟೆ ನಾರಾಯಣಸ್ವಾಮಿ

Public TV
By Public TV
44 minutes ago
Sharad Pawar
Latest

ಎನ್‌ಸಿಪಿ ಅಧ್ಯಕ್ಷ ಶರದ್ ಪವಾರ್ ಆಸ್ಪತ್ರೆಗೆ ದಾಖಲು

Public TV
By Public TV
1 hour ago
Mohammed Nalapad ED Raid
Bengaluru City

ಬಿಟ್ ಕಾಯಿನ್ ಕೇಸಲ್ಲಿ ನಲಪಾಡ್‌ಗೆ ಶಾಕ್ – ಸತತ 21 ಗಂಟೆಗಳ ಸುದೀರ್ಘ ಶೋಧ ಕಾರ್ಯ ಮುಗಿಸಿದ ಇಡಿ

Public TV
By Public TV
2 hours ago
karnataka High Court
Court

SSLC ತೃತೀಯ ಭಾಷೆಗೆ ಈ ವರ್ಷ ಗ್ರೇಡ್ ಬೇಡ, ಅಂಕವನ್ನೇ ನೀಡಿ: ಹೈಕೋರ್ಟ್ ಆದೇಶ

Public TV
By Public TV
3 hours ago

Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?