Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಪ್ರತಾಪ್‌ ಸಿಂಹಗೆ ಟಿಕೆಟ್‌ ಸಿಗೋದು ಅನುಮಾನ – ಮೈಸೂರಿನಿಂದ ಯದುವೀರ್‌ ಸ್ಪರ್ಧೆ?
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Bengaluru City | ಪ್ರತಾಪ್‌ ಸಿಂಹಗೆ ಟಿಕೆಟ್‌ ಸಿಗೋದು ಅನುಮಾನ – ಮೈಸೂರಿನಿಂದ ಯದುವೀರ್‌ ಸ್ಪರ್ಧೆ?

Bengaluru City

ಪ್ರತಾಪ್‌ ಸಿಂಹಗೆ ಟಿಕೆಟ್‌ ಸಿಗೋದು ಅನುಮಾನ – ಮೈಸೂರಿನಿಂದ ಯದುವೀರ್‌ ಸ್ಪರ್ಧೆ?

Public TV
Last updated: March 9, 2024 10:24 am
Public TV
Share
3 Min Read
narendra Modi yaduveer wadiyar
SHARE

ಬೆಂಗಳೂರು/ಮೈಸೂರು: ಚುನಾವಣೆಯಲ್ಲಿ ಅಚ್ಚರಿ ಅಭ್ಯರ್ಥಿಗಳನ್ನು ಕಣಕ್ಕೆ ಇಳಿಸುವ ಬಿಜೆಪಿ ಹೈಕಮಾಂಡ್‌ (BJP High Command) ಮೈಸೂರಿನಲ್ಲಿ (Mysuru) ಈ ಬಾರಿ ಯದುವೀರ್‌ ಒಡೆಯರ್‌ (Yaduveer Wadiyar) ಅವರನ್ನು ಕಣಕ್ಕೆ ಇಳಿಸಲು ಚಿಂತನೆ ನಡೆಸಿದೆ.

ಹೌದು. ಹಾಲಿ ಸಂಸದರಾಗಿರುವ ಪ್ರತಾಪ್‌ ಸಿಂಹ (Pratap Simha) ಅವರಿಗೆ ಈ ಬಾರಿ ಟಿಕೆಟ್‌ ಸಿಗುವುದು ಅನುಮಾನ ಎನ್ನಲಾಗುತ್ತಿದ್ದು ಅವರ ಜಾಗದಲ್ಲಿ ಮೈಸೂರಿನ ರಾಜವಂಶಸ್ಥರ ಕುಡಿಗೆ ಟಿಕೆಟ್‌ ಸಿಗುವ ಸಾಧ್ಯತೆಯಿದೆ.

ಕಳೆದ ಕೆಲ ದಿನಗಳಿಂದ ಯದುವೀರ್‌ ಒಡೆಯರ್‌ ಹೆಸರು ಕೇಳಿ ಬರುತ್ತಿದ್ದರೂ ಅದು ಹೈಕಮಾಂಡ್‌ ಮಟ್ಟದಲ್ಲಿ ಚರ್ಚೆ ಆಗಿರಲಿಲ್ಲ. ಆದರೆ ಈಗ ಬಿಜೆಪಿ ಕೇಂದ್ರ ಚುನಾವಣಾ ಸಮಿತಿ ಸಭೆಯಲ್ಲಿ ಯದುವೀರ್‌ ಒಡೆಯರ್‌ ಹೆಸರು ಪ್ರಸ್ತಾಪವಾಗಿದೆ. ಇದನ್ನೂ ಓದಿ: ರಣಬಿಸಿಲ ನಡುವೆ ದಾಖಲೆಯ ವಿದ್ಯುತ್ ಬಳಕೆ – ಲೋಡ್ ಶೆಡ್ಡಿಂಗ್ ಭೀತಿ

yaduveer wadiyar and modi

ಈಗಾಗಲೇ ಯದುವೀರ್‌ ಒಡೆಯರ್‌ ಅವರನ್ನು ಬಿಜೆಪಿ ಸಂಪರ್ಕಿಸಿದ್ದು ಸ್ಪರ್ಧಿಸಲು ಒಪ್ಪಿಗೆ ಸೂಚಿಸಿದ್ದಾರೆ ಎನ್ನಲಾಗಿದೆ. ಆದರೆ ಪ್ರಮೋದಾ ದೇವಿ (Pramoda Devi) ಗ್ರೀನ್ ಸಿಗ್ನಲ್‌ಗೆ ನಾಯಕರು ಕಾಯುತ್ತಿದ್ದಾರೆ. ಒಂದು ವೇಳೆ ಪ್ರಮೋದಾ ದೇವಿ ಒಪ್ಪಿಗೆ ನೀಡಿದರೆ ಯದುವೀರ್‌ ಒಡೆಯರ್‌ ರಾಜಕಿಯ  ಪ್ರವೇಶಿಸಲಿದ್ದಾರೆ.

ಯಡಿಯೂರಪ್ಪ (Yediyurappa) ಮತ್ತು ಆರ್‌ಎಸ್‌ಎಸ್‌ ನಾಯಕರೊಬ್ಬರ ಮೂಲಕ ಯದುವೀರ್‌ ಅವರನ್ನು ಮನವೊಲಿಕೆ ಮಾಡಲಾಗಿದೆ. ಮನವೊಲಿಕೆಯ ಬೆನ್ನಲ್ಲೇ ಪ್ರತಾಪ್‌ ಸಿಂಹ ಜೊತೆ ಯದುವೀರ್‌ ಒಡೆಯರ್‌ ಹೆಸರನ್ನು ಅಮಿತ್‌ ಶಾ ನೇತೃತ್ವದಲ್ಲಿ ನಡೆದ ಸಭೆಯಲ್ಲೇ ಶಿಫಾರಸ್ಸು ಮಾಡಲಾಗಿತ್ತು.

 

ಯದುವೀರ್‌ ಯಾಕೆ?
ಮೈಸೂರಿನ ಕೊನೆಯ ಮಹಾರಾಜರಾದ ಜಯಚಾಮರಾಜೇಂದ್ರ ಒಡೆಯರ್‌ ಅವರ ಏಕೈಕ ಪುತ್ರ ಶ್ರೀಕಂಠದತ್ತ ನರಸಿಂಹರಾಜ ಒಡೆಯರ್‌ ನಾಲ್ಕು ಬಾರಿ ಮೈಸೂರಿನ ಸಂಸದರಾಗಿದ್ದರಾಗಿ ಆಯ್ಕೆ ಅಗಿದ್ದರು. ಕಾಂಗ್ರೆಸ್ಸಿನಿಂದ ನಾಲ್ಕು ಬಾರಿ ಗೆದ್ದು ಎರಡು ಬಾರಿ ಅವರು ಸೋತಿದ್ದರು. 1984 ,1989, 1996, 1999ರಲ್ಲಿ ಗೆದ್ದಿದ್ದರೆ 1991 ಹಾಗೂ 2004ರಲ್ಲಿ ಸೋಲು ಅನುಭವಿಸಿದ್ದರು.

ಹಳೆ ಮೈಸೂರು ಭಾಗದಲ್ಲಿ ಮೈಸೂರು ರಾಜವಂಶಸ್ಥರ ಬಗ್ಗೆ ಈಗಲೂ ಜನರಲ್ಲಿ ಗೌರವವಿದೆ. ಮೈಸೂರಿನಲ್ಲಿ ಶಿಕ್ಷಣ,ನೀರಾವರಿ ಸೇರಿದಂತೆ ಹಲವು ಅಭಿವೃದ್ಧಿ ಕೆಲಸಗಳಿಗೆ ರಾಜರು ಭಾರೀ ಕೊಡುಗೆ ನೀಡಿದ್ದಾರೆ. ಈ ಸಮಾಜಮುಖಿ ಕೆಲಸದಿಂದ ಈಗಲೂ ರಾಜರ ಫೋಟೋವನ್ನು ಇಟ್ಟು ಪೂಜೆ ಮಾಡುವವರಿದ್ದಾರೆ. ಈ ಕಾರಣಕ್ಕೆ ಯದುವೀರ್‌ ಒಡೆಯರ್‌ ಅವರಿಗೆ ಟಿಕೆಟ್‌ ನೀಡಿದರೆ ಹಳೆ ಮೈಸೂರು ಭಾಗ ಸೇರಿದಂತೆ ರಾಜ್ಯದಲ್ಲೂ ಪ್ರಭಾವ ಬೀರಬಹುದು ಎಂಬ ಲೆಕ್ಕಾಚಾರವನ್ನು ಬಿಜೆಪಿ ಹಾಕಿಕೊಂಡಿದೆ.

 

ಪ್ರತಾಪ್‌ ಸಿಂಹ ಭವಿಷ್ಯ ಏನು?
ಸತತ ಎರಡು ಬಾರಿ ಸಂಸದರಾಗಿ ಆಯ್ಕೆ ಆಗಿರುವ ಪ್ರತಾಪ್‌ ಸಿಂಹ ಮೂರನೇ ಬಾರಿ ಸ್ಪರ್ಧಿಸಲು ಸಿದ್ಧತೆ ನಡೆಸಿದ್ದಾರೆ. ರಾಜ್ಯದ ಹಲವು ಬಿಜೆಪಿ ಸಂಸದರು ತಮ್ಮ ಸಾಧನೆ ಕೈಪಿಡಿ ಹೊರತರದೇ ಇದ್ದರೂ ಪ್ರತಾಪ್‌ ಸಿಂಹ ಬಿಜೆಪಿಯ ಅಗ್ರ ನಾಯಕರಿಗೆ ತಮ್ಮ ಕೆಲಸದ ಸಾಧನೆಯ ಕೈಪಿಡಿಯನ್ನು ನೀಡಿದ್ದಾರೆ.

ಒಂದು ವೇಳೆ ಲೋಕಸಭೆ ಟಿಕೆಟ್‌ ಸಿಗದೇ ಇದ್ದರೆ ಪ್ರತಾಪ್‌ ಸಿಂಹ ಅವರ ಮುಂದಿನ ರಾಜಕೀಯ ಭವಿಷ್ಯ ಏನು ಎಂಬ ಪ್ರಶ್ನೆ ಬರುತ್ತದೆ. ಇನ್ನೂ ಮೈಸೂರು ಟಿಕೆಟ್‌ ಯಾರಿಗೆ ಸಿಗಲಿದೆ ಎನ್ನುವುದು ಅಂತಿಮವಾಗಿಲ್ಲ. ಯದುವೀರ್‌ ಒಡೆಯರ್‌ ಸ್ಪರ್ಧಿಸಿದರೆ ಪ್ರತಾಪ್‌ ಸಿಂಹಗೆ ಟಿಕೆಟ್‌ ಸಿಗುವುದು ಅನುಮಾನ. ಹೀಗಾಗಿ ಬೇರೆ ಲೋಕಸಭಾ ಕ್ಷೇತ್ರದ ಟಿಕೆಟ್‌ ಸಿಕ್ಕರೂ ಸಿಗಬಹುದು ಎಂಬ ಮಾತು ಕೇಳಿ ಬಂದಿದೆ.

ಮೊದಲ ಬಾರಿ ಸ್ಪರ್ಧೆ ಮಾಡಿದ್ದ 2014ರ ಚುನಾವಣೆಯಲ್ಲಿ ಪ್ರತಾಪ್‌ ಸಿಂಹ ಕಾಂಗ್ರೆಸ್‌ ಅಭ್ಯರ್ಥಿ ವಿರುದ್ಧ 31,608 ಮತಗಳಿಂದ ಗೆದ್ದರೆ, 2019ರ ಚುನಾವಣೆಯಲ್ಲಿ 1,38,647 ಮತಗಳ ಅಂತರದಿಂದ ಮೈತ್ರಿ ಅಭ್ಯರ್ಥಿಯನ್ನು ಸೋಲಿಸಿದ್ದರು. ಸದ್ಯ ಪ್ರತಾಪ್‌ ಸಿಂಹ ರಾಜಕೀಯ ಭವಿಷ್ಯ ಪ್ರಧಾನಿ ನರೇಂದ್ರ ಮೋದಿ (Narendra Modi)  ಅವರ ಕೈಯಲ್ಲಿದೆ.

 

TAGGED:bjpkarnatakamysurupratp simhaYaduveer Wadiyarಪ್ರತಾಪ್ ಸಿಂಹಬಿಜೆಪಿಯದುವೀರ್ ಒಡೆಯರ್ಲೋಕಸಭಾ ಚುನಾವಣೆ
Share This Article
Facebook Whatsapp Whatsapp Telegram

Cinema news

darshan ex manager mallikarjun 2 1
ದರ್ಶನ್‌, ಧ್ರುವ ಸರ್ಜಾ ನಡುವೆ ಮನಸ್ತಾಪಕ್ಕೆ ಕಾರಣ ಯಾರು? – ಮಲ್ಲಿಕಾರ್ಜುನ್‌ ಹೇಳಿದ್ದೇನು?
Bengaluru City Cinema Latest Sandalwood Top Stories
darshan ex manager mallikarjun 2
ಕೇಸ್‌ ಒಂದ್ರಲ್ಲಿ ದರ್ಶನ್‌ ಸರ್‌ ಸಿಕ್ಕಾಕೊಂಡಾಗ ಬಹಳ ಬೇಜಾರಾಯ್ತು: ಮಾಜಿ ಮ್ಯಾನೇಜರ್‌ ಮಲ್ಲಿಕಾರ್ಜುನ್‌ ಮಾತು
Bengaluru City Cinema Latest Sandalwood Top Stories
darshan ex manager mallikarjun
8 ವರ್ಷ ನಾಪತ್ತೆಯಾಗಿದ್ದ ದರ್ಶನ್‌ ಮಾಜಿ ಮ್ಯಾನೇಜರ್‌ ದಿಢೀರ್‌ ಪ್ರತ್ಯಕ್ಷ – ನಡೆದಿದ್ದೇನು ಅಂತ ಎಳೆಎಳೆಯಾಗಿ ಬಿಚ್ಚಿಟ್ಟ ಮಲ್ಲಿ
Bengaluru City Cinema Latest Main Post Sandalwood
Udupi Rishab Shetty Home Bhajane Kunitha Yakshagana Harake
ನಟ ರಿಷಬ್ ಶೆಟ್ಟಿ ಮನೆಯಲ್ಲಿ ಕುಣಿತ ಭಜನೆ, ಯಕ್ಷಗಾನ ಹರಕೆ ಪ್ರದರ್ಶನ
Cinema Districts Karnataka Latest Sandalwood Top Stories Udupi

You Might Also Like

Yogesh Gowda Wife Mallamma
Dharwad

ನಾನು 10 ವರ್ಷ ಪಟ್ಟ ಕಷ್ಟಕ್ಕೆ ನ್ಯಾಯ ಸಿಕ್ಕಿದೆ, ನ್ಯಾಯಾಲಯದ ತೀರ್ಪನ್ನು ಸ್ವಾಗತ ಮಾಡ್ತೀನಿ: ಯೋಗೀಶ್ ಗೌಡ ಪತ್ನಿ

Public TV
By Public TV
34 minutes ago
Rahul Gandhi 1
Latest

ನನಗೂ, ಮೋದಿಯವರಿಗೂ ʻಹೆಂಡ್ತಿʼ ಚಿಂತೆ ಇಲ್ಲ!, ಆದ್ರಿಂದ ನಮ್ಗೆ ಆ ಮಾಹಿತಿ ಸಿಗಲ್ಲ: ರಾಗಾ ಹಾಸ್ಯ

Public TV
By Public TV
35 minutes ago
DK Shivakumar 11
Latest

ಮುಸ್ಲಿಂ ನಾಯಕರಿಗೆ ಕಾಂಗ್ರೆಸ್‌ ಸಹಾಯ ಮಾಡಿದಷ್ಟು ಯಾರೂ ಮಾಡಿಲ್ಲ, ಮಾಡೋದಿಲ್ಲ: ಡಿಕೆಶಿ

Public TV
By Public TV
1 hour ago
DK Shivakumar 1 1
Latest

ವಿನಯ್ ಕುಲಕರ್ಣಿ ತಪ್ಪು ಮಾಡಿಲ್ಲ ಅಂತ ಭಾವಿಸಿದ್ದೇನೆ: ಡಿಕೆಶಿ

Public TV
By Public TV
1 hour ago
SR Mahesh
Districts

ಸ್ಥಳೀಯ ಸಂಸ್ಥೆ ಚುನಾವಣೆ ಮಾಡಲು ರಾಜ್ಯ ಸರ್ಕಾರಕ್ಕೆ ಭಯ: ಸಾರಾ ಮಹೇಶ್

Public TV
By Public TV
2 hours ago
Vinay Kulkarni 2
Bengaluru City

ವಿನಯ್ ಕುಲಕರ್ಣಿಗೆ ಜೀವಾವಧಿ ಶಿಕ್ಷೆ – ಶಾಸಕ ಸ್ಥಾನ ರದ್ದು

Public TV
By Public TV
2 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?