Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ‘ಕೆಂಡ’ದಿಂದ ಹೊರಬಂತು ತಾಜಾ ಸುದ್ದಿಯ ಲಿರಿಕಲ್ ವೀಡಿಯೋ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Cinema | ‘ಕೆಂಡ’ದಿಂದ ಹೊರಬಂತು ತಾಜಾ ಸುದ್ದಿಯ ಲಿರಿಕಲ್ ವೀಡಿಯೋ

Cinema

‘ಕೆಂಡ’ದಿಂದ ಹೊರಬಂತು ತಾಜಾ ಸುದ್ದಿಯ ಲಿರಿಕಲ್ ವೀಡಿಯೋ

Public TV
Last updated: March 15, 2024 11:59 am
Public TV
Share
3 Min Read
Blink 1
SHARE

`ಗಂಟುಮೂಟೆ’ ಚಿತ್ರತಂಡದ ಕಡೆಯಿಂದ ರೂಪುಗೊಂಡಿರುವ `ಕೆಂಡ’ (Kenda) ಚಿತ್ರ ಹಂತ ಹಂತವಾಗಿ ಕುತೂಹಲದ ಕಾವೇರಿಸಿಕೊಂಡು ಸಾಗಿ ಬಂದಿತ್ತು. ಇದೀಗ ಕೆಂಡ ಬಿಡುಗಡೆಯ ಹೊಸ್ತಿಲಿನಲ್ಲಿ ನಿಂತಿದೆ. ಈ ಹೊತ್ತಿನಲ್ಲಿ ಜಯಂತ್‍ಕಾಯ್ಕಣಿ ರಚಿಸಿದ `ತಾಜಾ ತಾಜಾ ಸುದ್ದಿ’ ಗೀತೆಗೆ ಪುತ್ರ ರಿತ್ವಿಕ್‍ಕಾಯ್ಕಣಿ ಪ್ರಥಮ ಬಾರಿ ಸಂಗೀತ ಸಂಯೋಜಿಸಿರುವ ಲಿರಿಕಲ್ ವಿಡಿಯೋ ಹಾಡಿನ ಬಿಡುಗಡೆ ಕಾರ್ಯಕ್ರಮ ಎಸ್‍ಆರ್‍ವಿ ಚಿತ್ರಮಂದಿರದಲ್ಲಿ ಅದ್ದೂರಿಯಾಗಿ ನಡೆಯಿತು. ತಂಡಕ್ಕೆ ಶುಭಹಾರೈಸಲು ಯೋಗರಾಜಭಟ್, ಸಂಗೀತ ಸಂಯೋಜಕ ವಿ.ಹರಿಕೃಷ್ಣ, ಡಿ.ಬೀಟ್ಸ್‍ನ ಶೈಲಜಾನಾಗ್ ಮತ್ತು ಜಯಂತ್‍ಕಾಯ್ಕಣಿ ಆಗಮಿಸಿದ್ದರು. ರೂಪಾ ರಾವ್ ಕೆಂಡ ಚಿತ್ರದ ಮೂಲಕ ನಿರ್ಮಾಪಕಿಯಾಗಿದ್ದಾರೆ. ಸಹದೇವ ಕೆಲವಡಿ ಛಾಯಾಗ್ರಹಣ, ನಿರ್ದೇಶನದ ಜೊತೆಗೆ ನಿರ್ಮಾಣದಲ್ಲಿಯೂ ಭಾಗಿಯಾಗಿದ್ದಾರೆ.

Blink 2

ವಿಕಟ ಕವಿ ಯೋಗರಾಜಭಟ್ ಮಾತನಾಡಿ, ಎರಡನೇ ಲಾಕ್‍ಡೌನ್ ಸಂದರ್ಭದಲ್ಲಿ ರಿತ್ವಿಕ್‍ಕಾಯ್ಕಣಿ ಜೊತೆ ದೋಸ್ತಿ ಶುರುವಾಯಿತು. ಸದ್ಯದ ಪರಿಸ್ಥಿತಿಯಲ್ಲಿ ಹಾಡು ಇಲ್ಲದೆ ಸಿನಿಮಾ ಬಿಡುಗಡೆ ಅಂತ ಬಂದಾಗ ಎರಡು ತರದ ಅಪಾಯದಲ್ಲಿ ತಗಲಾಕೊಳ್ತಾರೆ. ಬೆಳಿಗ್ಗೆ ಸ್ನಾನದ ಮನೆಯಲ್ಲಿ ಇರುವಾಗ ನನ್ನ ಹಾಡು ಇಡೀ ಪ್ರಪಂಚ ತಿರುಗಿ ನೋಡುತ್ತೆ ಎನ್ನುವ ಕನಸು. ಹೊರಗೆ ಬಂದಾಗ ಯಾರಿಗೂ ಗೊತ್ತಿಲ್ಲವೆಂಬ ದುಗುಡ. ಒಂದು ವರ್ಷ ಕಷ್ಟಪಟ್ಟು ಚಿತ್ರ ಬಿಡುಗಡೆ ಮಾಡಿದ ನಂತರ, ಚಿತ್ರಮಂದಿರದಿಂದ ಆಚೆ ಬರುವ ಪ್ರೇಕ್ಷಕ ಮುಂದೆ ಯಾವುದು ಅಂತ ಕೇಳುತ್ತಾನೆ. ಆಗ ಅದಕ್ಕಿಂತಲೂ ಉತ್ತಮವಾದುದನ್ನು ಕೊಡಬೇಕು ಎನ್ನುವ ಛಲ ಹುಟ್ಟಿಕೊಳ್ಳುವುದು ಒಂಥರ ಡೇಂಜರ್. ನಾನು ಅಂದುಕೊಂಡಿದ್ದು ಏನು ಇಲ್ಲ. ಹಾಗೆ ನಾಲ್ಕು ಮಂದಿ ತಿರುಗಿ ನೋಡುವಂತೆ ಮಾಡೋದು ತುಂಬ ಕಷ್ಟದ ಕೆಲಸ. ಅಲ್ಲಿ ಸಕ್ಸಸ್ ಕಂಡರೆ, ಇಲ್ಲಿ ವಿರುದ್ಧವಾಗಿರುತ್ತದೆ. ಪ್ರತಿ ಸಿನಿಮಾವು ಇವರೆಡು ಡೇಂಜರ್‍ಗೆ ಬದುಕಬೇಕು. ಇವರೆಡು ಡೇಂಜರ್‍ಗಳ ಮಧ್ಯೆ ಇರೋದು ಸೃಜನಾತ್ಮಕ ಕ್ರಿಯೆ. ಇವೆಲ್ಲವು ನಿಮ್ಮೋಂದಿಗೆ ಸದಾ ಕಾಲ ಕಾಡಲಿ ಎಂದು ಮಾತಿಗೆ ವಿರಾಮ ಹಾಕಿದರು.

Blink 4

ಹಾಡು ಅನ್ನೋದು ಮಾರ್ಕೆಟ್‍ದಲ್ಲಿ ಎಷ್ಟು ಇದೆ ಅಂದರೆ, ನೂರಾರು ಹಾಡುಗಳ ಮಧ್ಯೆ ನಮ್ಮ ಗೀತೆಯನ್ನು ಹುಡುಕುವುದು ಸವಾಲಿನ ಕೆಲಸ ಆಗಿರುತ್ತದೆ. ಅವುಗಳ ಮಧ್ಯೆ ನಮ್ಮ ಸಾಂಗ್ ಗುರುತಿಸಿಕೊಳ್ಳಬೇಕೆಂಬುದು ಪ್ರತಿಯೊಬ್ಬ ಸಂಗೀತ ನಿರ್ದೇಶಕನ ಆಸೆಯಾಗಿರುತ್ತದೆ. ಬರಹಗಾರನ ಶ್ರಮ ಗೆದ್ದಾಗ ಖುಷಿ ಕೊಡುತ್ತೆ. ಸೋತಾಗ ಜವಬ್ದಾರಿ ಹೆಚ್ದಾಗುತ್ತದೆ. ಇದರಲ್ಲಿರುವ ಮೂರು ಗೀತೆಗಳು ಯಾವುದೇ ಸಂಗೀತದ ಛಾಯೆ ಕಾಣಿಸುವುದಿಲ್ಲ. ಅದೇ ತಂಡದ ಮೊದಲ ಗೆಲುವು ಎನ್ನಬಹದು. ಅದನ್ನು ಆಲಿಸಿದಾಗ ಹೊಸತನ ಕಂಡುಬರುತ್ತದೆ. ಹೀಗೆ ನಿಮ್ಮಗಳ ವಿನೂತನ ಪ್ರಯತ್ನ ಯಶಸ್ವಿಯಾಗಲಿ ಅಂತಾರೆ ವಿ.ಹರಿಕೃಷ್ಣ. ಶೈಲಜಾನಾಗ್ ಹೇಳುವಂತೆ ಪ್ರತಿಯೊಂದು ಸಿನಿಮಾದ ಹಿಂದೆ ಶ್ರಮ ಇದ್ದೇ ಇರುತ್ತದೆ. ಯಾವುದೇ ನಿರ್ಮಾಪಕ ಹಣ ವಾಪಸ್ಸು ಬರಲೆಂದೇ ಬಂಡವಾಳ ಹೂಡುತ್ತಾನೆ. ಸುಮ್ಮನೆ ತಮಾಷೆಗೆ ಮಾಡುವುದಿಲ್ಲ. ಇದು ಕೂಡ ವ್ಯಾಪಾರ. ಬೇರೆ ಭಾಷೆಗಳ ನಡುವೆ ನಮ್ಮ ಚಿತ್ರ ಗುರುತಿಸಿಕೊಳ್ಳುವಂತೆ ಮಾಡಬೇಕಾಗಿದೆ. ಆಗ ಮಾತ್ರ ಎಲ್ಲಾ ಕಡೆ ಗುರುತಿಸಿಕೊಳ್ಳಲು ಸಾಧ್ಯವಾಗುತ್ತದೆ ಎಂಬುದು ಅವರ ಅಭಿಪ್ರಾಯವಾಗಿತ್ತು.

Blink 3

ಕೆಲವು ಸಲ ಹಾಡು ಬರೆಯುವಾಗ, ಈ ಸಾಲು ಎಲ್ಲೋ ಬಂದಿದೆಯೆಲ್ಲಾ ಅಂತ ಪಕ್ಕಕ್ಕೆ ಇಟ್ಟಿದ್ದುಂಟು. ಆಮೇಲೆ ನಾನೇ ಬರೆದುದಲ್ವ ಅಂತ ಗೊತ್ತಾಗುತ್ತದೆ. ತಂತ್ರಜ್ಞಾನ ಬದಲಾದಂತೆ ಮೂಲ ಹಾಡನ್ನು ಯಾರು ಕೇಳುವುದಿಲ್ಲ. ಕೇವಲ ನಾಲ್ಕು ಸಾಲುಗಳನ್ನು ಆಲಿಸುತ್ತಾರೆ. ಇದರಿಂದ ಕಲೆಯ ಮೇಲೆ ಜವಬ್ದಾರಿ ಮತ್ತು ಚ್ಯಾಲೆಂಜ್ ಬಹಳ ಜಾಸ್ತಿ ಇರುತ್ತದೆ. ಇದಕ್ಕಾಗಿ ತಂಡಕ್ಕೆ ಅಭಿನಂದನೆಗಳನ್ನು ಹೇಳ್ತನೆ. ಮಗ ತನಗೆ ಇಷ್ಟವಾದುದನ್ನು ಮಾಡಿದ್ದರಿಂದ ಖುಷಿಯಾಗಿದೆ. ನಿರ್ದೇಶಕರು ಹಾಡು ಬರೆದುಕೊಡಿ ಎಂದು ಕೇಳಿಕೊಂಡು ಬಂದಾಗ, ನನ್ನ ಹಾಡು ಹಿಟ್ ಆಗಲೆಂದು ಬರೆಯುತ್ತೇನೆ. ಅದರಿಂದ ನಿಮ್ಮ ಚಿತ್ರಕ್ಕೆ ಸಹಾಯವಾಗಲಿ. ಹಾಡು ಚಿತ್ರದ ನಿರೂಪಣೆಯ ಭಾಗವಾಗಿರುತ್ತದೆ. ಇಂತಹ ಹೊಸ ತಲೆಮಾರಿನ ಚಿತ್ರಗಳು ಜನರಿಗೆ ತಲುಪಲಿ ಎಂದು ಜಯಂತ್ ಕಾಯ್ಕಿಣಿ ಹೇಳಿದರು.

ಬೆಂಗಳೂರಿನಂಥ ಮಹಾನಗರಿಯಲ್ಲಿ ನಿರಾಸೆಗೊಳಗಾದ ಯುವ ಸಮೂಹ. ರಾಜಕೀಯ, ಅಪರಾಧ ಸೇರಿದಂತೆ ಒಂದಷ್ಟು ಸಾಮಾಜಿಕ ಅಂಶಗಳು ಚಿತ್ರದಲ್ಲಿದೆ.   ಕಾರ್ಖಾನೆಯಲ್ಲಿ ಕೆಲಸ ಮಾಡುತ್ತಿದ್ದ ಕಥಾನಾಯಕ ಹೇಗೆ ಈ ವ್ಯವಸ್ಥೆಯ ಚಕ್ರವ್ಯೂಹಕ್ಕೆ ಸಿಲುಕುತ್ತಾನೆ. ಆತನನ್ನು ಪಟ್ಟಭದ್ರರು ಹೇಗೆಲ್ಲಾ ಬಳಸಿಕೊಳ್ಳುತ್ತಾರೆ. ಆ ಕ್ಷಣದೊಂದು ನಿರ್ಧಾರ ಆತನ ಬದುಕನ್ನು ಯಾವ ದಿಕ್ಕಿನತ್ತ ಮುನ್ನಡೆಸುತ್ತೆ ಎಂಬಂತಹ ಸನ್ನಿವೇಶಗಳನ್ನು ತೋರಿಸಲಾಗುತ್ತಿದೆ. ಒಟ್ಟಾರೆಯಾಗಿ ಈ ದಿನಮಾನದ ಮಟ್ಟಿಗೆ ವಿಭಿನ್ನ ಚಿತ್ರವಾಗಲಿದೆಯಂತೆ. ನಾಯಕನಾಗಿ ಬಿ.ವಿ.ಭರತ್, ಪ್ರಣವ್‍ಶ್ರೀಧರ್, ವಿನೋದ್‍ರವೀಂದ್ರನ್, ಗೋಪಾಲ್ ಕೃಷ್ಣ ದೇಶಪಾಂಡೆ ಉಳಿದಂತೆ ಬಹುತೇಕ ರಂಗಭೂಮಿ ಪ್ರತಿಭೆಗಳಿಗೆ ಅವಕಾಶ ಮಾಡಿಕೊಡಲಾಗಿದೆ.  ಆಸ್ಕರ್ ಪ್ರಶಸ್ತಿ ವಿಜೇತ ಎಲಿಫೆಂಟ್ ವಿಸ್ಪರ್ಸ್ ಚಿತ್ರದ ಭಾಗವಾಗಿದ್ದ ಶ್ರೇಯಾಂಕ್ ನಂಜಪ್ಪ ಶಬ್ಧ ಸಂಯೋಜನೆ ಮಾಡಿದ್ದಾರೆ. ಬೆಂಗಳೂರು ಸುತ್ತಮುತ್ತ, ಕೋಲಾರದಲ್ಲಿ ಚಿತ್ರೀಕರಣ ನಡೆಸಲಾಗಿದೆ.

TAGGED:KendaRithvik Kaikiniಕೆಂಡರಿತ್ವಿಕ್ ಕಾಯ್ಕಿಣಿಲಿರಿಕಲ್ ವಿಡಿಯೋ
Share This Article
Facebook Whatsapp Whatsapp Telegram

Cinema news

TVK Vijay
ಅಫಿಡವಿಟ್‌ನಲ್ಲಿ 105 ಕೋಟಿ ವ್ಯತ್ಯಾಸ – ನಾಮಪತ್ರ ತಿರಸ್ಕಾರ ಆತಂಕದಲ್ಲಿ ವಿಜಯ್‌
Cinema Court Latest Main Post National
Maharashtra Man Arrest
ಮಹಾರಾಷ್ಟ್ರ ‘ಲವ್ ಟ್ರ್ಯಾಪ್’ ಸಂತ್ರಸ್ತೆ ಆತ್ಮಹತ್ಯೆಗೆ ಯತ್ನ – ಮತ್ತೋರ್ವ ಆರೋಪಿ ಅಂದರ್
Cinema Latest National Top Stories
Atlee
ಹೆಣ್ಣು ಮಗು ಜನಿಸಿದ ಸಂಭ್ರಮದಲ್ಲಿ ನಿರ್ದೇಶಕ ಅಟ್ಲೀ ದಂಪತಿ
Cinema Latest Top Stories
Deepika Padukone Ranveer Singh
2ನೇ ಮಗುವಿನ ನಿರೀಕ್ಷೆಯಲ್ಲಿ ದೀಪಿಕಾ ಪಡುಕೋಣೆ, ರಣವೀರ್‌ ಸಿಂಗ್‌ ದಂಪತಿ
Bollywood Cinema Latest Top Stories

You Might Also Like

Chitradurga Ganja Arrest
Chitradurga

ಜಮೀನಿನಲ್ಲಿ ಅಕ್ರಮವಾಗಿ ಗಾಂಜಾ ಬೆಳೆದ ಆರೋಪಿ ಬಂಧನ

Public TV
By Public TV
3 minutes ago
Germany Gurdwara
Latest

ಜರ್ಮನಿಯ ಗುರುದ್ವಾರದಲ್ಲಿ ಬಂದೂಕು, ಕಿರ್ಪಾನ್‌, ಪೆಪ್ಪರ್‌ ಸ್ಪ್ರೇ ಹಿಡಿದು ಘರ್ಷಣೆ – 11 ಮಂದಿಗೆ ಗಾಯ

Public TV
By Public TV
26 minutes ago
Nelamangala KTM Bike Theft
Bengaluru City

ಸಾಲ ಮಾಡಿ ತೆಗೆದುಕೊಂಡಿದ್ದ KTM ಬೈಕ್ ಕಳ್ಳತನ

Public TV
By Public TV
36 minutes ago
US student
Latest

ನಮ್ಮ ಕಾಲೇಜಿನ ಮೇಲೆ ಬಾಂಬ್‌ ಹಾಕಿ: ನೆತನ್ಯಾಹುಗೆ ಕೇಳಿಕೊಂಡು ಪೋಸ್ಟ್‌ ಹಾಕಿದ್ದ ವಿದ್ಯಾರ್ಥಿನಿ ಬಂಧನ

Public TV
By Public TV
1 hour ago
Iran America War
Latest

ಕದನ ವಿರಾಮಕ್ಕೆ ಇನ್ನೊಂದೇ ದಿನ ಬಾಕಿ – ಅಮೆರಿಕ ಹಠ ಬಿಟ್ಟರಷ್ಟೇ ಚರ್ಚೆ ಎಂದ ಇರಾನ್

Public TV
By Public TV
1 hour ago
Tilak Varma
Cricket

ತಿಲಕ್‌ ವರ್ಮಾ 101, ಗುಜರಾತ್‌ 100 – ಸತತ 4 ಸೋಲಿನ ಬಳಿಕ ಮುಂಬೈಗೆ ವಿಜಯದ ತಿಲಕ

Public TV
By Public TV
10 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?