Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಸುಮಲತಾ ಅಕ್ಕ ಇದ್ದಂತೆ, ಸಂಘರ್ಷ ಮುಂದುವರಿಸಲ್ಲ: ಹೆಚ್‌ಡಿಕೆ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | ಸುಮಲತಾ ಅಕ್ಕ ಇದ್ದಂತೆ, ಸಂಘರ್ಷ ಮುಂದುವರಿಸಲ್ಲ: ಹೆಚ್‌ಡಿಕೆ

Districts

ಸುಮಲತಾ ಅಕ್ಕ ಇದ್ದಂತೆ, ಸಂಘರ್ಷ ಮುಂದುವರಿಸಲ್ಲ: ಹೆಚ್‌ಡಿಕೆ

Public TV
Last updated: March 15, 2024 5:36 pm
Public TV
Share
3 Min Read
Sumalatha Ambareesh HD Kumaraswamy
SHARE

ಮಂಡ್ಯ: ಸುಮಲತಾ ಅಂಬರೀಶ್ (Sumalatha Ambareesh) ಅವರು ನಮ್ಮ ಅಕ್ಕ ಇದ್ದಂತೆ. ರಾಜಕೀಯದಲ್ಲಿ ಆಗ ಏನೋ ಆಗಿತ್ತು. ಈಗ ನಾವು ಸಂಘರ್ಷ ಮುಂದುವರಿಸಲ್ಲ ಎಂದು ಮಾಜಿ ಮುಖ್ಯಮಂತ್ರಿ ಹೆಚ್‌ಡಿ ಕುಮಾರಸ್ವಾಮಿ (HD Kumaraswamy) ಹೇಳಿದ್ದಾರೆ.

ಮಂಡ್ಯ (Mandya) ಲೋಕಸಭಾ ಚುನಾವಣೆ (Lok Sabha Election) ಸಂಬಂಧ ಜೆಡಿಎಸ್ (JDS) ಪೂರ್ವಭಾವಿ ಸಭೆಯಲ್ಲಿ ಮಾತನಾಡಿದ ಅವರು, ಚುನಾವಣೆ ವಿಷಯದಲ್ಲಿ ಒಂದು ಮಾತು ಹೇಳುತ್ತೇನೆ. ಅಂಬರೀಶ್, ನಾವೆಲ್ಲ ಒಟ್ಟಾಗಿ, ಪ್ರೀತಿಯಿಂದ ಬೆಳೆದವರು. ನಮ್ಮ ಪಕ್ಷದಿಂದಲೇ ಅಂಬರೀಶ್ ಪಾರ್ಲಿಮೆಂಟ್ ಪ್ರವೇಶ ಮಾಡಿದ್ದರು. ನಾನು ಸಿಎಂ ಆಗಿದ್ದಾಗಲೇ ರಾಜ್‌ಕುಮಾರ್ ಹಾಗೂ ಅಂಬರೀಶ್ ನಿಧನರಾದರು. ರಾಜ್ ಸಮಾಧಿ ಮಾಡಿದ್ದು ನಾನೇ. ಅಂಬರೀಶ್ ಸಮಾಧಿಗೂ ಜಾಗ ಗುರುತಿಸಿ ಗೌರವ ಕೊಟ್ಟೆ. ವಿಷ್ಣುವರ್ಧನ್ ಸಮಾಧಿ ಸ್ಮಾರಕ ಸಮಸ್ಯೆ ಇನ್ನೂ ಬಗೆಹರಿದಿಲ್ಲ ಎಂದರು. ಇದನ್ನೂ ಓದಿ: ಹೃದಯಾಘಾತದಿಂದ ಸಾವು ತಡೆಗೆ ಸಿಗಲಿದೆ ಇಂಜಕ್ಷನ್: ಪುನೀತ್‌ ಹೆಸರಲ್ಲಿ ʻಹೃದಯ ಜ್ಯೋತಿʼ ಯೋಜನೆ ಜಾರಿ!

Sumalatha 1 1

ಅಂಬರೀಶ್ ನನ್ನ ಆತ್ಮೀಯ ಸ್ನೇಹಿತ. ಆತನಿಗೆ ನಮನ ಸಲ್ಲಿಸಬೇಕಾಗಿದ್ದು ನನ್ನ ಕರ್ತವ್ಯ. ಅಂಬರೀಶ್ ಬಡ ಕುಟುಂಬದಿಂದ ಸಿನಿಮಾರಂಗದಲ್ಲಿ ಸಾಧನೆ ಮಾಡಿದ ನಮ್ಮ ಸಮಾಜದ ವ್ಯಕ್ತಿ. ಅಂಬರೀಶ್‌ಗೆ ಗೌರವ ನೀಡುವ ಮೂಲಕ ಮಂಡ್ಯ ಜನರಿಗೂ ಗೌರವ ನೀಡಿದ್ದೇವೆ. 2019, 2023ರ ಚುನಾವಣೆಯಲ್ಲಿ ಮಂಡ್ಯ ಜಿಲ್ಲೆಯ ಜನತೆ ನಮಗೆ ಅನ್ಯಾಯ ಮಾಡಲಿಲ್ಲ. ಮಂಡ್ಯ ಜಿಲ್ಲೆಯ ಮತದಾರ ಬಂಧುಗಳೇ ನಮ್ಮ ತಂದೆ-ತಾಯಿಯಂದಿರು. ರಾಜಕೀಯವಾಗಿ ನಮ್ಮಿಂದ ಸಣ್ಣಪುಟ್ಟ ತಪ್ಪುಗಳಾಗಿರಬಹುದು. ಈ ಜಿಲ್ಲೆಯ ಜನತೆಗೆ ಸ್ಪಷ್ಟ ಮನವಿ ಮಾಡಲು ಬಯಸುತ್ತೇವೆ. ನಮ್ಮ ತಪ್ಪುಗಳನ್ನು ತಿದ್ದಿಕೊಳ್ಳಲು ನಾವು ಸಿದ್ಧರಿದ್ದೇವೆ. ತಪ್ಪು ತಿದ್ದಿಕೊಳ್ಳಲು ಈ ಚುನಾವಣೆಯಲ್ಲಿ ಅವಕಾಶ ಮಾಡಿಕೊಡಿ ಎಂದು ಮನವಿ ಮಾಡಿದರು. ಇದನ್ನೂ ಓದಿ: ಮಂಡ್ಯದಿಂದ ಮತ್ತೆ ನಿಖಿಲ್‌ ಸ್ಪರ್ಧೆ? – ಮಾರ್ಚ್‌ 25ಕ್ಕೆ ಘೋಷಣೆ ಸಾಧ್ಯತೆ

Sumalatha Ambareesh

 

ಮಂಡ್ಯ ಜಿಲ್ಲೆಯ ಜನರ ಜೊತೆ ಮೊದಲಿಂದಲೂ ನಾನು ಇದ್ದೇನೆ. 2019ರಲ್ಲಿ ಹೊಂದಾಣಿಕೆ ಎಂದು ಕುತ್ತಿಗೆ ಕೊಯ್ದರು. ಅದಕ್ಕೆ ಉತ್ತರ ಕೊಡುವ ಶಕ್ತಿ ಮಂಡ್ಯ ಜನರ ಕೈಯಲ್ಲಿ ಇದೆ. ನನ್ನ ಜನ್ಮ ಭೂಮಿ ಹಾಸನ. ರಾಜಕೀಯ ಭವಿಷ್ಯ ನೀಡಿದ್ದು ರಾಮನಗರ. ನನ್ನ ಜೀವ ಮಿಡಿಯುವುದು ಮಂಡ್ಯಗಾಗಿ. ಸ್ವಾಭಿಮಾನ ಎನ್ನುವುದು ಮಾತಿನಲ್ಲಿ ಅಲ್ಲ, ಕೆಲಸದಲ್ಲಿ ಇದೆ. ನಾಟಿ ಸ್ಟೈಲ್ ರಾಜಕೀಯ ಅಂತಾರೆ ಕೆಲವರು. ದುಡ್ಡಿನಿಂದ ರಾಜಕೀಯ ಮಾಡೋದು ಅಲ್ಲ. ಕೆಲವರಿಗೆ ಈ ಚುನಾವಣೆ ಕಲೆಕ್ಷನ್ ಮಾಡಿಕೊಳ್ಳಲು ಒಳ್ಳೆಯ ಅವಕಾಶ ಎಂದು ಕಿಡಿಕಾರಿದರು. ಇದನ್ನೂ ಓದಿ: ಮೈಸೂರು ಕಾಂಗ್ರೆಸ್ ಅಭ್ಯರ್ಥಿ ಇಂದೇ ಅಂತಿಮ? – ಯದುವೀರ್ ವಿರುದ್ಧ ಯಾರು ಕಣಕ್ಕೆ?

 

21ಕ್ಕೆ ನನಗೆ ಆಪರೇಷನ್ ಇದೆ. ನನಗೆ 84 ವರ್ಷ ಆಯಸ್ಸು ಎಂದು ಜ್ಯೋತಿಷಿಗಳು ಹೇಳಿದ್ದಾರೆ. ದೇವೇಗೌಡರು ಜ್ಯೋತಿಷಿಗಳ ಮಾತು ಕೇಳಿ ಬದುಕಿದ್ದಾರೆ. ಈ ಜೀವ ಭೂಮಿಗೆ ಇಷ್ಟು ಬೇಗ ಹೋಗಲ್ಲ. ಜನರು ಸರ್ಟಿಫಿಕೇಟ್ ನೀಡಿದ ಮೇಲೆ ಈ ಜೀವ ಭೂಮಿಗೆ ಹೋಗೋದು. ಜನರ ಋಣ ತೀರಿಸಿದ ಮೇಲೆ ನಾನು ಭೂಮಿಗೆ ಹೋಗೋದು. ಅಲ್ಲಿಯವರೆಗೆ ನಾನು ಭೂಮಿಗೆ ಹೋಗಲ್ಲ. ನಾನು ರಾಜಕೀಯಕ್ಕೆ ಬರಬೇಕು ಎಂದುಕೊಂಡವನಲ್ಲ. ಸಿನಿಮಾ ಹಂಚಿಕೆದಾರನಾಗಿ ನಾನು ಕೆಲಸ ಮಾಡುತ್ತಿದ್ದೆ. ಆಕಸ್ಮಿಕವಾಗಿ ನಾನು ರಾಜಕೀಯಕ್ಕೆ ಬಂದಿದ್ದು ಎಂದರು. ಇದನ್ನೂ ಓದಿ: ನಾಗಸಾಧು ಭೇಟಿ ಮಾಡಿ ಪ್ರಚಾರ ಆರಂಭ ಮಾಡಿದ ಶ್ರೀರಾಮುಲು

ಡಾ.ಮಂಜುನಾಥ್ ಅವರನ್ನು ಸ್ಪರ್ಧೆ ಮಾಡುವಂತೆ ನಾನು ಹೇಳಿಲ್ಲ. ಅವರು ಸಹ ಬಯಸಿರಲಿಲ್ಲ. ಜನರ ಒತ್ತಾಯದ ಮೇರೆಗೆ ಅವರು ರಾಜಕೀಯಕ್ಕೆ ಬಂದಿದ್ದಾರೆ. ಈಗ ಕಾಂಗ್ರೆಸ್ ಅವರು ದೇವೇಗೌಡರ ಕುಟುಂಬದ ಗುಲಾಮರಾಗೋದು ಬೇಡಾ ಎಂದು ಹೇಳುತ್ತಾರೆ. ನಾವು ರಾಮನಗರ ಜನರನ್ನು ಗುಲಾಮರನ್ನಾಗಿ ಮಾಡಿಕೊಂಡಿಲ್ಲ. ನಾವು ಅವರ ಸೇವಕರಾಗಿದ್ದೇವೆ. ರಾಮನಗರ ಜನರನ್ನು ಗುಲಾಮರನ್ನಾಗಿ ಕಾಣೋದು ಕಾಂಗ್ರೆಸ್‌ನವರು. ಮಾವನನ್ನೇ ಯಾಮಾರಿಸಿದ ಚತುರ ಅಳಿಯಾ ಅಂತಾರೆ ಆ ಮಹಾನುಭಾವ. ಪಾಪ ಡಾ.ಮಂಜುನಾಥ್ ಎಷ್ಟೋ ಜನರ ಪ್ರಾಣ ಉಳಿಸಿದ್ದಾರೆ. ಅಂತಹವರಿಗೆ ಲಘುವಾಗಿ ಇವರು ಮಾತನಾಡುತ್ತಿದ್ದಾರೆ. ಇವರು ಕಮಿಷನ್ ಪಡೆದು ರಾಜಕೀಯ ಮಾಡುತ್ತಿದ್ದಾರೆ ಎಂದು ಹರಿಹಾಯ್ದರು. ಇದನ್ನೂ ಓದಿ: ಬಿಜೆಪಿ ಟಿಕೆಟ್ ಕೈತಪ್ಪಿದ್ದಕ್ಕೆ ಸಂಸದ ಸಂಗಣ್ಣ ಕರಡಿ ಕಣ್ಣೀರು

TAGGED:hd kumaraswamyjdsLok Sabha electionmandyapoliticsSumalathaಜೆಡಿಎಸ್ಮಂಡ್ಯರಾಜಕೀಯಲೋಕಸಭಾ ಚುನಾವಣೆಸುಮಲತಾಹೆಚ್‍ಡಿ ಕುಮಾರಸ್ವಾಮಿ
Share This Article
Facebook Whatsapp Whatsapp Telegram

Cinema news

Rashmika Vijay 5
ಹನಿಮೂನ್ ಅಲ್ಲ ಬಡ್ಡೀಮೂನ್ – ರಶ್ಮಿಕಾ, ವಿಜಯ್ ಹೊಸ ಟ್ರೆಂಡ್
Cinema Latest South cinema Top Stories
Bhushan Kumar Vivek Agnihotri 2
ಸೆಟ್ಟೇರುತ್ತಿದೆ ʻಆಪರೇಷನ್‌ ಸಿಂಧೂರʼ ಸಿನಿಮಾ – ಭೂಷಣ್ ಕುಮಾರ್, ವಿವೇಕ್ ಅಗ್ನಿಹೋತ್ರಿ ಅಧಿಕೃತ ಘೋಷಣೆ
Bollywood Cinema Latest Main Post National
Zubeen Garg
ಮದ್ಯಪಾನ ಮಾಡಿ ಈಜಲು ತೆರಳಿದ್ದೇ ಗಾಯಕ ಜುಬೀನ್ ಗಾರ್ಗ್ ಸಾವಿಗೆ ಕಾರಣ: ಸಿಂಗಾಪುರ ಕೋರ್ಟ್‌
Bollywood Cinema Court Latest National Top Stories World
Harshil Kalia jaipur accident
ಡಿವೈಡರ್‌ಗೆ ಕಾರು ಡಿಕ್ಕಿ – ಭೀಕರ ಅಪಘಾತದಲ್ಲಿ ನಟಿ ಸಾವು
Cinema Latest Main Post National

You Might Also Like

KSRTC Bus Transport bus catches fire in front of Lulu Mall Bengaluru
Bengaluru City

ಲುಲು ಮಾಲ್‌ ಮುಂದೆ ಹೊತ್ತಿ ಉರಿದ ಬೆಂಗಳೂರು-ಶಿವಮೊಗ್ಗ KSRTC ಬಸ್‌

Public TV
By Public TV
4 hours ago
Accident
Crime

ಬಸ್, ಪಿಕಪ್ ನಡುವೆ ಭೀಕರ ಅಪಘಾತ – 10 ಮಂದಿ ದುರ್ಮರಣ, 20ಕ್ಕೂ ಹೆಚ್ಚು ಮಂದಿಗೆ ಗಾಯ

Public TV
By Public TV
4 hours ago
Donald Trump 2
Latest

ಪಾಕ್‌ ಧ್ವಜ ಇರುವ 10 ತೈಲ ಟ್ಯಾಂಕರ್‌ಗಳನ್ನು ಇರಾನ್‌ ನಮಗೆ ಗಿಫ್ಟ್‌ ನೀಡಿದೆ: ಟ್ರಂಪ್‌

Public TV
By Public TV
5 hours ago
Nelamangala Assistant Professor Propose to Student
Bengaluru City

ಕಾಲೇಜಿನಲ್ಲಿ ವಿದ್ಯಾರ್ಥಿನಿಗೆ ಪ್ರಪೋಸ್ ಮಾಡಿದ್ದ ಅಸಿಸ್ಟೆಂಟ್ ಪ್ರೊಫೆಸರ್ ಅರೆಸ್ಟ್

Public TV
By Public TV
6 hours ago
Mudigere Police Station
Chikkamagaluru

ಮೂಡಿಗೆರೆ ಲವ್ ಜಿಹಾದ್ ಆರೋಪ ಪ್ರಕರಣ – 1 ತಿಂಗಳು ಉಪವಾಸ, ಮನೆಯಲ್ಲೇ ನಮಾಜ್ ಮಾಡುತ್ತಿದ್ದ ಅಪ್ರಾಪ್ತೆ

Public TV
By Public TV
6 hours ago
Donald Trump 1 2
Latest

ಅಲಿ ಖಮೇನಿ ನಮ್ಮೊಂದಿಗೆ ಇಲ್ಲ, ಇರಾನ್‌ನಲ್ಲಿ ಈಗ ನಾಯಕರೇ ಇಲ್ಲ: ಟ್ರಂಪ್‌

Public TV
By Public TV
6 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?