Public TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Font ResizerAa
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
  • National
  • World
  • Cinema
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Bengaluru City

ಚುನಾವಣಾ ಬಾಂಡ್ ಎನ್ನುವುದು ಬಿಜೆಪಿಯ ಕೈಯಲ್ಲಿರುವ ರಾಜಕೀಯ ಸುಲಿಗೆಯ ಬ್ರಹ್ಮಾಸ್ತ್ರವೇ? – ಸಿಎಂ

Public TV
Last updated: March 16, 2024 1:51 pm
Public TV
Share
2 Min Read
Siddaramaiah Politics Congress BJP Rameshwaram Cafe
SHARE

– ಚುನಾವಣಾ ಬಾಂಡ್ ಹಗರಣ – ಉನ್ನತ ಮಟ್ಟದ ತನಿಖೆಗೆ ಸಿದ್ದರಾಮಯ್ಯ ಆಗ್ರಹ
– ಬಿಜೆಪಿ ಬ್ಯಾಂಕ್ ಖಾತೆ ಸ್ಥಗಿತಗೊಳಿಸಿ

ಬೆಂಗಳೂರು: ಸುಪ್ರೀಂ ಕೋರ್ಟ್ (Supreme Court) ಉನ್ನತ ಮಟ್ಟದ ಸಮಿತಿಯನ್ನು ರಚಿಸಿ ಚುನಾವಣಾ ಬಾಂಡ್ ಹಗರಣದ (Electoral Bonds case) ತನಿಖೆ ನಡೆಸಬೇಕು ಮತ್ತು ಅಲ್ಲಿಯ ವರೆಗೆ ಬಿಜೆಪಿಯ  (BJP) ಬ್ಯಾಂಕ್ ಖಾತೆಗಳನ್ನು ಸ್ಥಗಿತಗೊಳಿಸಬೇಕು ಎಂದು ಸಿಎಂ ಸಿದ್ದರಾಮಯ್ಯ (Siddaramaiah) ಆಗ್ರಹಿಸಿದ್ದಾರೆ.

ಈ ಬಗ್ಗೆ ಪತ್ರಿಕಾ ಪ್ರಕಟಣೆ ಹೊರಡಿಸಿರುವ ಅವರು, ಕರ್ನಾಟಕಕ್ಕೆ ಬರುತ್ತಿರುವ ಪ್ರಧಾನಿ ನರೇಂದ್ರ ಮೋದಿಯವರಿಗೆ (Narendra Modi) ಸ್ವಾಗತ ಕೋರುತ್ತೇನೆ. ಜಗತ್ತಿನ ಅತ್ಯಂತ ದೊಡ್ಡ ಭ್ರಷ್ಟಾಚಾರ ಹಗರಣವಾಗಿ ಹೊರಹೊಮ್ಮುತ್ತಿರುವ ಚುನಾವಣಾ ಬಾಂಡ್ ಸುಲಿಗೆ ಬಗ್ಗೆ ಬಿಜೆಪಿ ಯಾಕೆ ಮೌನವಾಗಿದೆ? ಸ್ವಿಸ್ ಬ್ಯಾಂಕ್‍ನಲ್ಲಿರುವ ಕಪ್ಪು ಹಣ ತಂದು ಜನರಿಗೆ ಹಂಚುತ್ತೇವೆ. ನೋಟ್ ಬ್ಯಾನ್ ಮಾಡಿ ಕಪ್ಪುಹಣದ ಮೂಲ ಹುಡುಕುತ್ತೇವೆ. ನಾ ಖಾವೂಂಗಾ – ನಾ ಖಾನೆ ದೂಂಗಾ, ದೇಶದ ಸಂಪತ್ತಿಗೆಲ್ಲ ನಾನೇ ಚೌಕಿದಾರ ಎಂದೆಲ್ಲ ಹೇಳಿ ಹತ್ತು ವರ್ಷಗಳಿಂದ ಅಧಿಕಾರದಲ್ಲಿರುವ ಮೋದಿಯವರೇ ಕನಿಷ್ಠ ಚುನಾವಣಾ ಬಾಂಡ್ ಹಗರಣದ ಬಗ್ಗೆಯಾದರೂ ಉತ್ತರಿಸಿ ಎಂದು ಸವಾಲು ಹಾಕಿದ್ದಾರೆ. ಇದನ್ನೂ ಓದಿ: ಈಶ್ವರಪ್ಪ ಹಿರಿಯ ನಾಯಕರು, ಅವರ ಮನವೊಲಿಸುತ್ತೇವೆ: ಪ್ರಹ್ಲಾದ್ ಜೋಶಿ

Narendra Modi

ಸುಪ್ರೀಂ ಕೋರ್ಟ್ ಆದೇಶದ ಹೊರತಾಗಿಯೂ ಭಾರತೀಯ ಸ್ಟೇಟ್ ಬ್ಯಾಂಕ್ ಸಂಪೂರ್ಣ ಮಾಹಿತಿ ನೀಡಲು ಯಾಕೆ ಹಿಂಜರಿಯುತ್ತಿದೆ? ಚುನಾವಣಾ ಬಾಂಡ್‍ಗಳ ಮಾರಾಟ ಮತ್ತು ಖರೀದಿ ವ್ಯವಹಾರ ಕಾನೂನುಬದ್ಧವಾಗಿ ನಡೆದಿದ್ದರೆ ಎಸ್‍ಬಿಐ ಯಾಕೆ ಮಾಹಿತಿ ಮುಚ್ಚಿಡಲು ಪ್ರಯತ್ನಿಸುತ್ತಿದೆ? ಎಸ್‍ಬಿಐ ಮೇಲೆ ಒತ್ತಡ ಹೇರುತ್ತಿರುವವರು ಯಾರು? ಪ್ರಧಾನಿ ನರೇಂದ್ರ ಮೋದಿಯವರೇ ದಯವಿಟ್ಟು ಉತ್ತರಿಸಬೇಕು ಎಂದು ಅವರು ಆಗ್ರಹಿಸಿದ್ದಾರೆ.

SBI

ಮಾಧ್ಯಮಗಳು ವಿಶ್ಲೇಷಿಸುತ್ತಿರುವ ಚುನಾವಣಾ ಆಯೋಗ ಪ್ರಕಟಿಸಿರುವ ಮಾಹಿತಿಯನ್ನು ನೋಡಿದರೆ ಕೇಂದ್ರ ಸರ್ಕಾರ ಉದ್ಯಮಿಗಳ ಬ್ಲಾಕ್ ಮೇಲ್ ಮಾಡುತ್ತಿರುವಂತೆ ಕಾಣುತ್ತಿದೆ. ಉದ್ಯಮಿಗಳ ಮೇಲೆ ನಡೆದಿರುವ ಐಟಿ, ಇಡಿ, ಸಿಬಿಐ ದಾಳಿಗಳ ದಿನಾಂಕ ಮತ್ತು ಆ ಉದ್ಯಮಿಗಳು ಚುನಾವಣಾ ಬಾಂಡ್‍ಗಳ ಖರೀದಿ ದಿನಾಂಕಗಳನ್ನು ನೋಡಿದರೆ ಇದೊಂದು ಪಕ್ಕಾ ಬ್ಲ್ಯಾಕ್‍ಮೇಲ್ ಹಗರಣದಂತೆ ಕಾಣುತ್ತಿದೆ. ದೇಣಿಗೆ ವಸೂಲಿಗಾಗಿ ಕೇಂದ್ರ ಸರ್ಕಾರ ತನ್ನ ಅಧೀನದಲ್ಲಿರುವ ತನಿಖಾ ಸಂಸ್ಥೆಗಳನ್ನು ದುರುಪಯೋಗಪಡಿಸಿಕೊಳ್ಳುತ್ತಿದೆಯೇ? ಚುನಾವಣಾ ಬಾಂಡ್ ಎನ್ನುವುದು ಬಿಜೆಪಿಯ ಕೈಯಲ್ಲಿರುವ ರಾಜಕೀಯ ಸುಲಿಗೆಯ ಬ್ರಹ್ಮಾಸ್ತ್ರವೇ? ಎಂದು ಅವರು ಪ್ರಶ್ನಿಸಿದ್ದಾರೆ.

ಬಯಲಾಗುತ್ತಿರುವ ಮಾಹಿತಿಗಳನ್ನು ನೋಡಿದರೆ ಚುನಾವಣಾ ಬಾಂಡ್ ಹಗರಣದಲ್ಲಿ ದೊಡ್ಡ ಸಂಖ್ಯೆಯಲ್ಲಿ ಭಾಗಿಯಾಗಿರುವವರು ಮೂಲಭೂತ ಸೌಕರ್ಯ ನಿರ್ಮಾಣದ ಎಂಜನಿಯರಿಂಗ್ ಸಂಸ್ಥೆಗಳು ಮತ್ತು ಔಷಧಿ ಉತ್ಪಾದನಾ ಕಂಪನಿಗಳು, ಇಂತಹ ಭ್ರಷ್ಟ, ವಂಚಕ ಸಂಸ್ಥೆಗಳು ನಿರ್ಮಾಣ ಮಾಡಿರುವ ರಸ್ತೆ, ಸೇತುವೆ, ಕಟ್ಟಡಗಳು ಎಷ್ಟು ಸುಭದ್ರ? ಇಂತಹ ಭ್ರಷ್ಟ-ವಂಚಕ ಸಂಸ್ಥೆಗಳು ತಯಾರಿಸಿದ ಔಷಧಿಗಳು ಎಷ್ಟು ಸುರಕ್ಷಿತ? ಇದಕ್ಕೆ ಉತ್ತರಿಸಬೇಕಾದವರು ನೀವಲ್ಲವೇ ಪ್ರಧಾನಿಗಳೇ? ಎಂದು ಅವರು ಆಕ್ರೋಶ ಹೊರಹಾಕಿದ್ದಾರೆ.

ಸುಪ್ರೀಂ ಕೋರ್ಟ್ ಖುದ್ದಾಗಿ ಮುಂದೆ ನಿಂತು ಬಯಲು ಮಾಡುತ್ತಿರುವ ಚುನಾವಣಾ ಬಾಂಡ್ ಹಗರಣದ ಬಗ್ಗೆ ದೇಶದ ಪ್ರತಿಯೊಬ್ಬ ಪ್ರಜೆಯಲ್ಲಿಯೂ ಅನುಮಾನ ಹುಟ್ಟಿಕೊಂಡಿದೆ. ತಮ್ಮ ತೆರಿಗೆ ಹಣದ ದುರುಪಯೋಗ ನಡೆದಿದೆ. ಇದರಲ್ಲಿ ಕೇಂದ್ರ ಸರ್ಕಾರದ ಪಾತ್ರವಿದೆ ಎಂದು ಜನತೆ ನಂಬಿದ್ದಾರೆ. ಈ ಅನುಮಾನವನ್ನು ಹೋಗಲಾಡಿಸಲು ಸುಪ್ರೀಂ ಕೋರ್ಟ್ ಉನ್ನತಾಧಿಕಾರದ ಸಮಿತಿಯನ್ನು ರಚಿಸಿ ಚುನಾವಣಾ ಬಾಂಡ್ ಹಗರಣದ ತನಿಖೆ ನಡೆಸಬೇಕು ಎಂದು ಅವರು ಒತ್ತಾಯಿಸಿದ್ದಾರೆ. ಇದನ್ನೂ ಓದಿ: ಸಿಎಂ ಕೇಜ್ರಿವಾಲ್‌ಗೆ ಬಿಗ್ ರಿಲೀಫ್ – ಹೊಸ ಅಬಕಾರಿ ನೀತಿ ಪ್ರಕರಣದಲ್ಲಿ ನಿರೀಕ್ಷಣಾ ಜಾಮೀನು

TAGGED:bjpElectoral Bonds casenarendra modisiddaramaiahSupreme Courtಚುನಾವಣಾ ಬಾಂಡ್ನರೇಂದ್ರ ಮೋದಿಬಿಜೆಪಿಸಿದ್ದರಾಮಯ್ಯ
Share This Article
Facebook Whatsapp Whatsapp Telegram

Cinema News

Sumalatha
ಕೋರ್ಟ್‌ ಆದೇಶದ ಮುಂದೆ ನಾವೆಲ್ಲ ನಿಸ್ಸಹಾಯಕರು – ವಿಷ್ಣು ಸಮಾಧಿ ತೆರವಿಗೆ ನಟಿ ಸುಮಲತಾ ಬೇಸರ
Bengaluru City Cinema Districts Karnataka Latest Main Post Sandalwood
CHOWKIDAR
ಚೌಕಿದಾರ್ ಜಾಲಿ ಹಾಡಿಗೆ ಕುಣಿದ ಪೃಥ್ವಿ ಅಂಬಾರ್, ಸಾಥ್‌ ಕೊಟ್ಟ ಸಾಯಿ ಕುಮಾರ್
Cinema Latest Sandalwood Top Stories
Siri Ravikumar
`ಶೋಧ’ಕ್ಕಾಗಿ ಪವನ್ ಕುಮಾರ್ ಜೊತೆ ಒಂದಾದ ಸಿರಿ ರವಿಕುಮಾರ್
Cinema Latest
Sudeep
ವಿಷ್ಣು ಸ್ಮಾರಕಕ್ಕಾಗಿ ಕೋರ್ಟಿಗೆ ಬೇಕಾದ್ರೂ ಹೋಗ್ತೀನಿ, ಹಣಕಾಸು ಕೊಡಲು ರೆಡಿ ಇದ್ದೀನಿ: ಕಿಚ್ಚ ಸುದೀಪ್‌
Bengaluru City Cinema Latest Main Post Sandalwood
Anirudh
ವಿಷ್ಣು ಸಮಾಧಿ ನೆಲಸಮ; ಯಾರದ್ದೋ ಮಾತು ಕೇಳಿ ಕುಟುಂಬದ ವಿರುದ್ಧ ಮಾತನಾಡ್ಬೇಡಿ – ಫ್ಯಾನ್ಸ್‌ಗೆ ಅನಿರುದ್ಧ್ ಮನವಿ
Bengaluru City Cinema Districts Karnataka Latest Sandalwood Top Stories

You Might Also Like

PM Modi In Bengaluru
Bengaluru City

3ನೇ ಹಂತದ ಮೆಟ್ರೋ ಮಾರ್ಗಕ್ಕೆ ಶಂಕುಸ್ಥಾಪನೆ ನೆರವೇರಿಸಿದ ಮೋದಿ – Live Coverage

Public TV
By Public TV
4 minutes ago
Mantralaya Aradhana Mahotsava 3
Districts

ಮಂತ್ರಾಲಯದಲ್ಲಿ ಪೂರ್ವಾರಾಧನೆ ಸಂಭ್ರಮ – ಸಂಜೆ ಗುರು ಅನುಗ್ರಹ ಪ್ರಶಸ್ತಿ ಪ್ರದಾನ

Public TV
By Public TV
31 minutes ago
Narenda modi siddaramaiah dk shivakumar 1
Bengaluru City

ಮೋದಿ ಹಾಸ್ಯಕ್ಕೆ ಸಿದ್ದು, ಡಿಕೆಶಿಗೆ ನಗುವೋ ನಗು!

Public TV
By Public TV
48 minutes ago
plane
Latest

ಭಾರತೀಯ ವಿಮಾನಗಳಿಗೆ ನಿರ್ಬಂಧ – ಪಾಕಿಗೆ 1,240 ಕೋಟಿ ನಷ್ಟ

Public TV
By Public TV
1 hour ago
Yellow Line Metro
Bengaluru City

ಬೆಂಗಳೂರಿನಲ್ಲಿ ಮೋದಿ – ಇಂದು ಹಲವೆಡೆ ವಾಹನ ಸಂಚಾರ ಬಂದ್‌, ಪರ್ಯಾಯ ಮಾರ್ಗ ಯಾವುದು?

Public TV
By Public TV
2 hours ago
PM Modi Launches Vande Bharat Express Bengaluru Belagavi KSR Railway station 2
Karnataka

ಬೆಂಗಳೂರು-ಬೆಳಗಾವಿ ವಂದೇಭಾರತ್‌ ರೈಲಿಗೆ ಮೋದಿ ಹಸಿರು ನಿಶಾನೆ

Public TV
By Public TV
2 hours ago
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?