Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಅರವಿಂದ್ ಕೇಜ್ರಿವಾಲ್ ಇಡಿ ಕಸ್ಟಡಿ 4 ದಿನ ವಿಸ್ತರಣೆ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Court | ಅರವಿಂದ್ ಕೇಜ್ರಿವಾಲ್ ಇಡಿ ಕಸ್ಟಡಿ 4 ದಿನ ವಿಸ್ತರಣೆ

Court

ಅರವಿಂದ್ ಕೇಜ್ರಿವಾಲ್ ಇಡಿ ಕಸ್ಟಡಿ 4 ದಿನ ವಿಸ್ತರಣೆ

Public TV
Last updated: March 28, 2024 8:17 pm
Public TV
Share
3 Min Read
Arvind Kejriwal 1
SHARE

– ವಿಚಾರಣೆಗೆ ಸಹಕರಿಸುತ್ತಿಲ್ಲ ಎಂದ ಇಡಿ
– ಪ್ರಕರಣದಲ್ಲಿ ನನ್ನ ಸಿಲುಕಿಸುವುದೇ ಇಡಿಯ ಏಕೈಕ ಉದ್ದೇಶ ಎಂದ ಕೇಜ್ರಿವಾಲ್

ನವದೆಹಲಿ: ಹೊಸ ಅಬಕಾರಿ ನೀತಿ ಹಗರಣದಲ್ಲಿ (Delhi Liquor Scam) ಬಂಧನಕ್ಕೊಳಪಟ್ಟಿರುವ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ (Arvind Kejriwal) ಅವರ ಇಡಿ (ED) ಕಸ್ಟಡಿಯನ್ನು ನಾಲ್ಕು ದಿನಗಳಿಗೆ ವಿಸ್ತರಿಸಿ ದೆಹಲಿಯ ರೋಸ್ ಅವೆನ್ಯೂ ಕೋರ್ಟ್ ಆದೇಶ ನೀಡಿದೆ. ಕೇಜ್ರಿವಾಲ್ ವಿಚಾರಣೆಗೆ ಸಹಕರಿಸುತ್ತಿಲ್ಲ, ಪ್ರಕರಣದ ನಾಲ್ಕು ಮಂದಿ ಇತರೆ ಆರೋಪಿಗಳೊಂದಿಗೆ ಕೇಜ್ರಿವಾಲ್ ಅವರ ತನಿಖೆ ನಡೆಸಲು ಸಮಯ ಕೋರಿದ ಇಡಿ ವಾದವನ್ನು ಕೋರ್ಟ್ ಪುರಸ್ಕರಿಸಿದೆ.

ಇದಕ್ಕೂ ಮುನ್ನ ಕಸ್ಟಡಿ ಅಂತ್ಯವಾದ ಹಿನ್ನಲೆ ಅರವಿಂದ್ ಕೇಜ್ರಿವಾಲ್ ಅವರನ್ನು ನ್ಯಾಯಲಯದ (Court) ಮುಂದೆ ಹಾಜರುಪಡಿಸಲಾಯಿತು. ಕೋರ್ಟ್ ಪ್ರವೇಶ ಮಾಡುವ ವೇಳೆ “ಉದ್ದೇಶಪೂರ್ವಕವಾಗಿ ಸಿಕ್ಕಿಹಾಕಿಸುವ ಪ್ರಯತ್ನ ಮಾಡಲಾಗುತ್ತಿದೆ ಜನರು ಇದಕ್ಕೆ ಉತ್ತರಿಸಲಿದ್ದಾರೆ” ಎಂದು ಅಲ್ಲಿದ್ದ ಮಾಧ್ಯಮಗಳಿಗೆ ಪ್ರತಿಕ್ರಿಯಿಸಿದರು.

Enforcement Directorate

ವಿಚಾರಣೆ ಆರಂಭವಾಗುತ್ತಿದ್ದಂತೆ ತಮ್ಮ ಪರವಾಗಿ ತಾವೇ ವಾದ ಮಂಡಿಸಿದ ಅರವಿಂದ್ ಕೇಜ್ರಿವಾಲ್, ನನ್ನನ್ನು ಸಿಕ್ಕಿ ಹಾಕಿಸುವುದು ಇಡಿಯ ಏಕೈಕ ಉದ್ದೇಶವಾಗಿದೆ ಎಂದು ಆರೋಪಿಸಿದರು. ನಾನು ರಿಮಾಂಡ್ ಅನ್ನು ವಿರೋಧಿಸುತ್ತಿಲ್ಲ ಇಡಿ ಅವರು ಎಲ್ಲಿಯವರೆಗೆ ನನ್ನನ್ನು ಕಸ್ಟಡಿಯಲ್ಲಿ ಇರಿಸಬಹುದು? ಆದರೆ ಇಡಿ ತನಿಖೆಯ ಹೆಸರಿನಲ್ಲಿ ಸುಲಿಗೆ ದಂಧೆ ನಡೆಸುತ್ತಿರುವುದು ನಿಜವಾದ ಹಗರಣ ಎಂದು ವಾದಿಸಿದರು. ಇದನ್ನೂ ಓದಿ: ಡಿಕೆ ಸುರೇಶ್‌ ಬರೋಬ್ಬರಿ 593 ಕೋಟಿ ರೂ. ಆಸ್ತಿಗೆ ಒಡೆಯ!

ಕೆಲವು ಆರೋಪಿಗಳು ತಮ್ಮನ್ನು ಬಂಧಿಸಿದ ನಂತರ ಭಾರತೀಯ ಜನತಾ ಪಕ್ಷಕ್ಕೆ ಎಲೆಕ್ಟ್ರೋಲ್ ಬಾಂಡ್ ಮೂಲಕ ಹಣವನ್ನು ದೇಣಿಗೆ ನೀಡಿದ್ದಾರೆ. ನಂತರ ಅವರು ಜಾಮೀನು ಪಡೆಯುವಲ್ಲಿ ಯಶಸ್ವಿಯಾಗಿದ್ದಾರೆ. ಈ ಪ್ರಕರಣದ ಓರ್ವ ಆರೋಪಿ ಶರತ್ ಚಂದ್ರ ರೆಡ್ಡಿ ಬಿಜೆಪಿಗೆ 55 ಕೋಟಿ ದೇಣಿಗೆ ನೀಡಿದ್ದಾರೆ. ದಂಧೆ ನಡೆಯುತ್ತಿದೆ ಎಂಬುದಕ್ಕೆ ನನ್ನ ಬಳಿ ಸಾಕ್ಷ್ಯವಿದೆ. ಹಣದ ಜಾಡು ಪತ್ತೆಯಾಗಿದೆ. ಬಂಧನದ ನಂತರ ಬಿಜೆಪಿಗೆ 50 ಕೋಟಿ ದೇಣಿಗೆ ನೀಡಿದ್ದಾರೆ ಎಂದು ಸಿಎಂ ಕೋರ್ಟ್ ಗಮನ ಸೆಳೆದರು.

#WATCH | Excise Case: Delhi CM Arvind Kejriwal says "This is a political conspiracy, the public will give an answer to this."

Delhi Court extended ED remand of Arvind Kejriwal till April 1. pic.twitter.com/iWONJzELGZ

— ANI (@ANI) March 28, 2024

ಪ್ರಕರಣದಲ್ಲಿ ನಾಲ್ಕು ಬಾರಿ ಹೆಸರು ಕಾಣಿಸಿಕೊಂಡಿದೆ. ಸಾಕ್ಷಿಯೊಬ್ಬರು ಅಂದಿನ ಡಿಸಿಎಂ ಮನೀಶ್ ಸಿಸೋಡಿಯಾ ಅವರ ಸಮ್ಮುಖದಲ್ಲಿ ನನಗೆ ದಾಖಲೆಗಳನ್ನು ನೀಡಿದ್ದಾರೆ ಎಂದು ಹೇಳಲಾಗಿದೆ. ಶಾಸಕರು ಪ್ರತಿದಿನ ನನ್ನ ಮನೆಗೆ ಬರುತ್ತಾರೆ. ನನ್ನನ್ನು ಆರೋಪಿಸಲು ಇಂತಹ ಹೇಳಿಕೆ ಸಾಕೇ? ಎಂದು ಕೇಜ್ರಿವಾಲ್ ಪ್ರಶ್ನಿಸಿದ್ದಾರೆ. ಏಳು ಸಾಕ್ಷಿಗಳ ಪೈಕಿ ಆರು ಸಾಕ್ಷಿಗಳು ನನ್ನ ಹೆಸರು ಉಲ್ಲೇಖಿಸಿಲ್ಲ, ಏಳನೇ ಸಾಕ್ಷಿ ನನ್ನ ಹೆಸರು ಉಲ್ಲೇಖಿಸಿದ ತಕ್ಷಣ ಬಾಕಿ ಆರು ಸಾಕ್ಷಿಗಳ ಹೇಳಿಕೆಯನ್ನು ಬದಿಗೆ ಸರಿಸಿದೆ. ಅಲ್ಲದೇ ನನ್ನ ಹೆಸರು ಉಲ್ಲೇಖಿಸಿದ ಸಾಕ್ಷಿಗೆ ಜಾಮೀನು ಮಂಜೂರಾಗಿದೆ ಎಂದು ಹೇಳಿದರು.

ಕೇಜ್ರಿ ವಾದಕ್ಕೆ ಆಕ್ಷೇಪ ವ್ಯಕ್ತಪಡಿಸಿದ ಇಡಿ ಪರ ವಕೀಲ ಹೆಚ್ಚುವರಿ ಸಾಲಿಸಿಟರ್ ಜನರಲ್ ಎಸ್‌ವಿ ರಾಜು ಇನ್ನೂ ಕೆಲವು ವ್ಯಕ್ತಿಗಳ ಹೇಳಿಕೆಗಳೊಂದಿಗೆ ಸಂಸ್ಥೆಯು ಸಿಎಂ ಅವರನ್ನು ವಿಚಾರಣೆ ನಡೆಸಬೇಕಿದೆ. ಹೀಗಾಗಿ ಇನ್ನೂ ಏಳು ದಿನ ಹೆಚ್ಚುವರಿ ಕಸ್ಟಡಿಗೆ ನೀಡಬೇಕಾಗುತ್ತದೆ ಎಂದರು. ಅವರ ಹೇಳಿಕೆಗಳನ್ನು ದಾಖಲಿಸಲಾಗಿದೆ. ಆದರೆ ಅವರು ತಪ್ಪಿಸಿಕೊಳ್ಳುವ ಉತ್ತರಗಳನ್ನು ನೀಡಿದರು. ನಾವು ಅವರನ್ನು ಇತರ ಕೆಲವು ಜನರೊಂದಿಗೆ ಎದುರಿಸಬೇಕಾಗಿದೆ. ಎಎಪಿ ಗೋವಾ ಅಭ್ಯರ್ಥಿಗಳ ಇನ್ನೂ ನಾಲ್ಕು ಹೇಳಿಕೆಗಳನ್ನು ದಾಖಲಿಸಲಾಗುತ್ತಿದೆ. ನಾವು ಅವರೊಂದಿಗೆ ಅವರನ್ನು ವಿಚಾರಣೆಗೆ ಒಳಪಡಿಸಬೇಕು ಎಂದು ಎಎಸ್‌ಜಿ ವಾದಿಸಿದರು.

#WATCH | Excise Case: Delhi CM Arvind Kejriwal brought to ED office after hearing in Delhi's Rouse Avenue Court.

Delhi Court extended ED remand of Arvind Kejriwal till April 1. pic.twitter.com/cggQf4ZALI

— ANI (@ANI) March 28, 2024

ಕೇಜ್ರಿವಾಲ್ ತಮ್ಮ ಖಾತೆಗಳ ಪಾಸ್‌ವರ್ಡ್‌ಗಳನ್ನು ಏಜೆನ್ಸಿಯೊಂದಿಗೆ ಹಂಚಿಕೊಳ್ಳಲು ನಿರಾಕರಿಸುತ್ತಿದ್ದಾರೆ ಇದರಿಂದ ನಮಗೆ ಡಿಜಿಟಲ್ ಡೇಟಾಗೆ ಪ್ರವೇಶ ಸಿಕ್ಕಿಲ್ಲ, ಅವರು ಉದ್ದೇಶಪೂರ್ವಕವಾಗಿ ಸಹಕರಿಸುತ್ತಿಲ್ಲ ಮತ್ತು ನಮಗೆ ಐಟಿಆರ್‌ಗಳನ್ನು ನೀಡುತ್ತಿಲ್ಲ‌ ಎಂದರು. ಇನ್ನು ಕೇಜ್ರಿವಾಲ್ ಆರೋಪಗಳಿಗೆ ಪ್ರತಿಕ್ರಿಯಿಸಿ ರಿಮಾಂಡ್ ಹಂತದಲ್ಲಿ ಅವು ಪ್ರಸ್ತುತವಲ್ಲ, ಮಾಹಿತಿಯೂ ಉತ್ಪಾದನೆಯ ಹಂತದಲ್ಲಿದೆ, ಈ ಎಲ್ಲಾ ವಿಷಯಗಳು ಹೇಗೆ ಸಂಬಂಧಿತವಾಗಿವೆ? ಯಾರಾದರೂ ಹೇಳಿಕೆ ನೀಡಲು ಒತ್ತಾಯಿಸಲಾಗಿದೆಯೇ ಎಂಬುದು ವಿಚಾರಣೆಯ ವಿಷಯವಾಗಿದೆ ಎಂದರು.

ಗೋವಾ ಚುನಾವಣೆಯಲ್ಲಿ ಕಿಕ್‌ಬ್ಯಾಕ್‌ಗಳನ್ನು ಸ್ವೀಕರಿಸಿದ್ದಾರೆ. ಹವಾಲಾ ಮೂಲಕ ಹಣ ಬಂದಿದೆ ಇದನ್ನು ಗೋವಾ ಪ್ರಚಾರಕ್ಕೆ ಹಣವನ್ನು ಬಳಸಲಾಗಿದೆ ಎಂದು ತೋರಿಸಲು ನಮ್ಮ ಬಳಿ ಹೇಳಿಕೆಗಳು ಮತ್ತು ದಾಖಲೆಗಳಿವೆ. ಕೇಜ್ರಿವಾಲ್ 100 ಕೋಟಿ ರೂ.ಗೆ ಬೇಡಿಕೆ ಇಟ್ಟಿದ್ದಾರೆ ಎಂಬುದನ್ನು ತೋರಿಸಲು ಇಡಿ ಬಳಿಯೂ ಸಾಕ್ಷಿಗಳಿದೆ ಎಂದು ಎಎಸ್‌ಜಿ ವಾದಿಸಿದರು. ವಾದ ಪ್ರತಿ ವಾದ ಆಲಿಸಿದ ಬಳಿಕ ನಾಲ್ಕು ದಿನಗಳ‌ ಕಸ್ಟಡಿಯನ್ನು ಕೋರ್ಟ್ ವಿಸ್ತರಿಸಿತು‌.

TAGGED:aapArvind KejriwalEDjailಅರವಿಂದ ಕೇಜ್ರಿವಾಲ್ಆಪ್ಇಂಡಿಜೈಲು
Share This Article
Facebook Whatsapp Whatsapp Telegram

Cinema news

Pavithra Gowda 1
ಪವಿತ್ರಗೌಡಗೆ ಮನೆ ಊಟ ನಿರಾಕರಿಸಿದ್ದು ಒಳ್ಳೆಯದು – ಅಲೋಕ್ ಕುಮಾರ್
Cinema Districts Karnataka Latest Sandalwood Shivamogga States Top Stories
CM Siddaramaiah congratulates Gilli Nata on winning Kannada Bigg Boss
ಬಿಗ್‌ಬಾಸ್‌ ಗೆದ್ದ ಗಿಲ್ಲಿಯನ್ನು ಅಭಿನಂದಿಸಿದ ಸಿಎಂ
Bengaluru City Cinema Districts Karnataka Latest Top Stories TV Shows
Payal Changappa
ʻಅಮೃತ ಅಂಜನ್‌ʼ ಸಿನಿಮಾದ ಫೀಲಿಂಗ್‌ ಸಾಂಗ್‌ ರಿಲೀಸ್‌
Cinema Latest Sandalwood
Life Ellind Ellige
`ಲೈಫ್ ಎಲ್ಲಿಂದ ಎಲ್ಲಿಗೆ’ ಅಂತ ಹಾಡಿದ ಟೀಮ್
Cinema Latest Sandalwood Top Stories

You Might Also Like

Rajeshwari Gayakwad
Cricket

ಕನ್ನಡತಿ ರಾಜೇಶ್ವರಿ ಮ್ಯಾಜಿಕ್‌, 45 ರನ್‌ಗಳ ಜಯ – ಕೊನೆಯಲ್ಲಿದ್ದ ಗುಜರಾತ್‌ 2ನೇ ಸ್ಥಾನಕ್ಕೆ ಜಂಪ್‌

Public TV
By Public TV
44 minutes ago
Leopard
Chamarajanagar

ಮಲೆ ಮಹದೇಶ್ವರ ಬೆಟ್ಟದಲ್ಲಿ ಭಕ್ತನ ಕೊಂದಿದ್ದ ಚಿರತೆ ಸೆರೆ – ಮೃತನ ಕುಟುಂಬಕ್ಕೆ 5 ಲಕ್ಷ ಪರಿಹಾರ ವಿತರಣೆ

Public TV
By Public TV
52 minutes ago
let recruitment case nia court sentences key accused to 10 years ri
Crime

ಉಗ್ರ ಸಂಘಟನೆಗೆ ಯುವಕರ ನೇಮಕಾತಿ ಪ್ರಕರಣ – ಶಿರಸಿಯ ವ್ಯಕ್ತಿಗೆ 10 ವರ್ಷ ಕಠಿಣ ಶಿಕ್ಷೆ

Public TV
By Public TV
1 hour ago
trump putin zelensky
Latest

ಯುಎಇಯಲ್ಲಿ ಉಕ್ರೇನ್‌, ರಷ್ಯಾ, ಅಮೆರಿಕದ ಮಧ್ಯೆ ಮೊದಲ ತ್ರಿಪಕ್ಷಿಯ ಸಭೆ – ಯುದ್ಧ ಅಂತ್ಯವಾಗುತ್ತಾ?

Public TV
By Public TV
2 hours ago
Nyamathi Moral Policing
Crime

ದಾವಣಗೆರೆ | ಸ್ನೇಹಿತೆಯೊಂದಿಗಿದ್ದ ಯುವಕನ ವಿಡಿಯೋ ಮಾಡಿ ಸುಲಿಗೆ – ಇಬ್ಬರು ಅರೆಸ್ಟ್‌

Public TV
By Public TV
2 hours ago
The Panchayat gave the site to the Ritti family who handed over the Treasure to the government
Districts

ಪಬ್ಲಿಕ್‌ ಟಿವಿ ಇಂಪ್ಯಾಕ್ಟ್‌ – ನಿಧಿಯನ್ನು ಸರ್ಕಾರಕ್ಕೆ ಹಸ್ತಾಂತರಿಸಿದ ರಿತ್ತಿ ಕುಟುಂಬಕ್ಕೆ ಪಂಚಾಯತ್‌ನಿಂದ ಸೈಟ್‌

Public TV
By Public TV
2 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?