Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಸಿನಿಮಾದಲ್ಲಿ ರೀಲ್ ಬಿಟ್ಟಂತೆ ರಾಜಕೀಯದಲ್ಲೂ ರೀಲ್ ಬಿಟ್ಟರೇ ಜನ ಒಪ್ಪಲ್ಲ: ಡಿಕೆ ಸುರೇಶ್
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | ಸಿನಿಮಾದಲ್ಲಿ ರೀಲ್ ಬಿಟ್ಟಂತೆ ರಾಜಕೀಯದಲ್ಲೂ ರೀಲ್ ಬಿಟ್ಟರೇ ಜನ ಒಪ್ಪಲ್ಲ: ಡಿಕೆ ಸುರೇಶ್

Districts

ಸಿನಿಮಾದಲ್ಲಿ ರೀಲ್ ಬಿಟ್ಟಂತೆ ರಾಜಕೀಯದಲ್ಲೂ ರೀಲ್ ಬಿಟ್ಟರೇ ಜನ ಒಪ್ಪಲ್ಲ: ಡಿಕೆ ಸುರೇಶ್

Public TV
Last updated: March 28, 2024 6:50 pm
Public TV
Share
3 Min Read
DK Suresh
SHARE

ರಾಮನಗರ: ನನ್ನನ್ನು ಸೋಲಿಸಬೇಕು ಎಂದು ನಿರ್ದೇಶಕ, ನಿರ್ಮಾಪಕ, ಚಿತ್ರಕತೆ ಬರೆಯುವವರು, ನಟ, ಬಂಡವಾಳ ಹೂಡಿಕೆ ಮಾಡುವವರು ಎಲ್ಲಾ ಒಂದಾಗಿದ್ದಾರಂತೆ. ಸಿನಿಮಾದಲ್ಲಿ ರೀಲ್ ಬಿಟ್ಟಂತೆ ಇಲ್ಲಿ ಬಿಟ್ಟರೇ ಜನ ಒಪ್ಪುವುದಿಲ್ಲ ಎಂದು ಬೆಂಗಳೂರು ಗ್ರಾಮಾಂತರ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಡಿ.ಕೆ. ಸುರೇಶ್ (DK Suresh) ಬಿಜೆಪಿ-ಜೆಡಿಎಸ್ ನಾಯಕರ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.

ಲೋಕಸಭೆ ಚುನಾವಣೆಗೆ (Lok Sabha Election) ನಾಮಪತ್ರ ಸಲ್ಲಿಕೆ ಮಾಡಿದ ಬಳಿಕ ಬಹಿರಂಗ ಸಮಾವೇಶ ಉದ್ದೇಶಿಸಿ ಮಾತನಾಡಿದ ಅವರು, ಎಲ್ಲರು ಒಂದಾಗಿ ನನ್ನನ್ನು ಸೋಲಿಸುತ್ತಾರಂತೆ. ಯಾಕೆ ನನ್ನನ್ನು ಸೋಲಿಸುತ್ತೀರಾ? ಬಡವರ ಪರವಾಗಿ, ರೈತರ ಪರವಾಗಿ, ಕನ್ನಡಿಗರ ಪರವಾಗಿ ಧ್ವನಿ ಎತ್ತಿದ್ದಕ್ಕಾ? ನಿಮ್ಮ ಭ್ರಷ್ಟಾಚಾರದ ವಿರುದ್ಧ ಧ್ವನಿ ಎತ್ತಿದ್ದಕ್ಕೆ ನನ್ನನ್ನು ಸೋಲಿಸಲು ಹೊರಟಿದ್ದೀರಾ? ಅವರಿಗೆ ನಿಜ ಜೀವನಕ್ಕೂ, ಸಿನಿಮಾಗೂ ವ್ಯತ್ಯಾಸ ಗೊತ್ತಿಲ್ಲ. ನಿಜ ಜೀವನದಲ್ಲಿ ಸೋಲಿಸಬೇಕೇ ಹೊರತು ಸಿನಿಮಾದಲ್ಲಿ ಅಲ್ಲ. ನೀವು ಬಿಟ್ಟಿರುವ ಎಲ್ಲಾ ರೀಲುಗಳು ಡಬ್ಬ ಸೇರಿಕೊಂಡಿವೆ. ಡಿಕೆ ಶಿವಕುಮಾರ್ (DK Shivakumar) ಕಾಲಿಗೆ ಬೀಳಲು ಬಂದಿದ್ದರು ಎಂದು ಯಾರೋ ಹೇಳುತ್ತಿದ್ದರು. ಇದೇ ಡಿ.ಕೆ.ಶಿವಕುಮಾರ್ ಅವರ ಕಾಲಿಗೆ ಬಿದ್ದು ಶಾಸಕರಾಗಲು ಭಿಕ್ಷೆ ಬೇಡಿದವರು, ಆಸ್ತಿ ಉಳಿಸಿಕೊಂಡವರು ಯಾರು ಎಂದು ಈ ಕ್ಷೇತ್ರದ ಜನ ನೋಡಿದ್ದಾರೆ ಎಂದು ಪರೋಕ್ಷವಾಗಿ ಮಾಜಿ ಸಚಿವ ಸಿಪಿ ಯೋಗೇಶ್ವರ್‌ಗೆ ಟಾಂಗ್ ನೀಡಿದರು. ಇದನ್ನೂ ಓದಿ: ಅರವಿಂದ್ ಕೇಜ್ರಿವಾಲ್ ಇಡಿ ಕಸ್ಟಡಿ 4 ದಿನ ವಿಸ್ತರಣೆ

DK Suresh

ಮುಂದಿನ ಮೂವತ್ತು ದಿನಗಳ ಕಾಲ ಯಾರು, ಯಾರು ಏನು ಮಾತನಾಡುತ್ತಾರೆ ಎಂಬುದನ್ನು ನಾವು, ನೀವು ಕೇಳಬೇಕಾಗಿದೆ. ಅದಕ್ಕೆ ಉತ್ತರ ಕೊಡುವ ಕಾಲ ಮುಂದಿದೆ. ಕಣ್ಣೀರು ಹಾಕುವವರಿಗೆ ಈ ಚುನಾವಣೆ ಒಂದು ಕರ್ಮಭೂಮಿ. ಇನ್ನೊಂದು ಚುನಾವಣೆಗೆ ಮತ್ತೊಂದು ಕರ್ಮಭೂಮಿ. ಯಾವ, ಯಾವ ಕರ್ಮಭೂಮಿಯಲ್ಲಿ ಏನೇನು ಸುಳ್ಳು ಹೇಳಿದ್ದಾರೋ ಗೊತ್ತಿಲ್ಲ. ನಾವು ಮುಂದಿನ 4 ವರ್ಷಗಳ ಕಾಲ ರಾಜ್ಯದ ಜನರ ಕಷ್ಟಗಳನ್ನು ಪರಿಹರಿಸಲು ಬದ್ಧರಾಗಿದ್ದೇವೆ. ಸುಳ್ಳಿನ ಗ್ಯಾರಂಟಿಗಳನ್ನು ಹೊತ್ತುಕೊಂಡು ಬಿಜೆಪಿಯವರು ಮತ ಕೇಳಲು ಬರುತ್ತಿದ್ದಾರೆ. ಸುಳ್ಳು ಹೇಳುವವರ ಜೊತೆ ಕಣ್ಣೀರು ಹಾಕುವವರು ಸೇರಿಕೊಂಡಿದ್ದಾರೆ. ಆದರೆ ಕಾಂಗ್ರೆಸ್ (Congress) ಕೊಟ್ಟ ಮಾತನ್ನು ಉಳಿಸಿಕೊಂಡಿದೆ ಎಂದರು. ಇದನ್ನೂ ಓದಿ: ರಾಜಕೀಯವಾಗಿ ಜೆಡಿಎಸ್-ಬಿಜೆಪಿ ಮುಖಂಡರು ಪರಸ್ಪರರ ಮೇಲೆ ಹಾಕಿರುವ ಕೇಸ್‌ ಹಿಂಪಡೆಯಲು ನಿರ್ಧಾರ

d.k.suresh nomination 1

ಚುನಾವಣೆಗಳು, ಸರ್ಕಾರಗಳು ಬರುತ್ತವೆ ಹೋಗುತ್ತವೆ. ಆದರೆ ಯಾರು ಸುಳ್ಳು ಹೇಳುತ್ತಾರೆ, ಯಾರು ಸತ್ಯವನ್ನು ಹೇಳುತ್ತಾರೆ, ಸತ್ಯದಿಂದ ನಡೆದುಕೊಳ್ಳುತ್ತಾರೆ ಎನ್ನುವುದು ಈ ಚುನಾವಣೆಯ ಪ್ರಸ್ತುತ ವಿಚಾರ. ಈ ಚುನಾವಣೆ ಮಾಧ್ಯಮದವರಿಗೆ ಹೊಸದಾಗಿ ಕಾಣಿಸುತ್ತಿದೆ. ಆದರೆ ನಮ್ಮ ರೈತರು, ಬಡವರು, ಹಿಂದುಳಿದವರಿಗೆ, ಮಹಿಳೆಯರಿಗೆ, ಯುವಕರಿಗೆ ಈ ಚುನಾವಣೆ ಹೊಸದಲ್ಲ. ಇಂದು ಇತಿಹಾಸ ಬದಲಾಗಿದೆ. ಐದು ಗ್ಯಾರಂಟಿಗಳನ್ನು ರಾಜ್ಯದ ಎಲ್ಲಾ ಜನರಿಗೆ ನೀಡಿದ್ದೇವೆ. ಜೆಡಿಎಸ್, ಬಿಜೆಪಿ ಸೇರಿದಂತೆ ಎಲ್ಲಾ ಪಕ್ಷಗಳಿಗೆ ಮತಹಾಕಿದ ಜನರಿಗೂ ನಮ್ಮ ಗ್ಯಾರಂಟಿಗಳು ತಲುಪುತ್ತಿವೆ. ಎಲ್ಲರ ಮನೆಯಲ್ಲಿ ವಿದ್ಯುತ್ ದೀಪ ಉರಿಯುತ್ತಿದೆ. ಗೃಹಲಕ್ಷ್ಮಿ ತಲುಪುತ್ತಿದೆ. ಅಕ್ಕಿ, ಹಣ, ಯುವನಿಧಿ ತಲುಪುತ್ತಿದೆ. ಇವು ಮೋದಿ ಗ್ಯಾರಂಟಿಯಿಂದಾಗಿಲ್ಲ. ಕಾಂಗ್ರೆಸ್ ಗ್ಯಾರಂಟಿಯಿಂದ ಆಗಿದೆ ಎಂದು ಹೇಳಿದರು. ಇದನ್ನೂ ಓದಿ: ಡಿಕೆ ಸುರೇಶ್‌ ಬರೋಬ್ಬರಿ 593 ಕೋಟಿ ರೂ. ಆಸ್ತಿಗೆ ಒಡೆಯ!

ಮೋದಿ ಗ್ಯಾರಂಟಿ ಎಂದರೆ ಕೇವಲ ಸುಳ್ಳು. ನಿರುದ್ಯೋಗಿ ಯುವಕರನ್ನು ಪಕೋಡ ಮಾರಲು ಹೇಳಿದ ಸುಳ್ಳು. ನಮ್ಮ ತಾಯಂದಿರಿಗೆ ಗ್ಯಾಸ್ ಸಿಲಿಂಡರ್ ಅನ್ನು ಪೂಜೆ ಮಾಡಿ ಎಂದು ಹೇಳಿದ ಸುಳ್ಳು. ಜಿಎಸ್ಟಿ ತೆಗೆಯುತ್ತೇನೆ ಎಂದು ಹೇಳಿದ ಸುಳ್ಳು. ಬಿಜೆಪಿಯವರು ಕಾಂಗ್ರೆಸ್ ಗ್ಯಾರಂಟಿಗಳು ಸುಳ್ಳು ಎಂದು ಬಿಂಬಿಸಲು ಪ್ರಯತ್ನ ಮಾಡಿದರು. ನೀವು ಕಮಿಷನ್ ಪಡೆಯುವ ಹಣದಲ್ಲೇ ನಾವು ಗ್ಯಾರಂಟಿ ನೀಡುತ್ತೇವೆ ಎಂದು ಸಿದ್ದರಾಮಯ್ಯ ಅವರು ತಿರುಗೇಟು ನೀಡಿದರು. ಇದನ್ನೂ ಓದಿ: ಇವಿಎಂ ಯಂತ್ರದಿಂದ ಮೋದಿ ಚುನಾವಣೆ ಗೆಲ್ಲುತ್ತಿದ್ದಾರೆ: ಸಿ.ಎಂ ಇಬ್ರಾಹಿಂ

ಕಳೆದ ಸರ್ಕಾರದಲ್ಲಿ ಸಿದ್ದರಾಮಯ್ಯ ಅವರು ಅನೇಕ ಭಾಗ್ಯಗಳನ್ನು ಕೊಟ್ಟು ಕರ್ನಾಟಕದಲ್ಲಿ ಬದಲಾವಣೆ ತಂದರು. ಹಸಿದವರ, ರೈತರ ಕಷ್ಟಗಳನ್ನು ಅರಿತು ಕೆಲಸ ಮಾಡಿದರು. ನಂತರ ಬಂದಂತಹ ಬಿಜೆಪಿ ಸರ್ಕಾರ 40% ಕಮಿಷನ್‌ಗಾಗಿ ಈ ರಾಜ್ಯವನ್ನು ದಿವಾಳಿ ಮಾಡಿದರು. ವಿರೋಧ ಪಕ್ಷದಲ್ಲಿ ಇದ್ದ ಸಿದ್ದರಾಮಯ್ಯ, ಡಿ.ಕೆ.ಶಿವಕುಮಾರ್ ರಾಜ್ಯದಾದ್ಯಂತ ಪ್ರವಾಸ ಮಾಡಿ ಗ್ಯಾರಂಟಿಗಳನ್ನು ಘೋಷಣೆ ಮಾಡಿದರು. ಇಕ್ಬಾಲ್ ಅವರನ್ನು ಗೆಲ್ಲಿಸಲು ಗ್ಯಾರಂಟಿ ಸುಳ್ಳು ಹೇಳುತ್ತಿದ್ದಾರೆ. ಕುಸುಮ ಅವರನ್ನು, ಡಾ.ರಂಗನಾಥ್ ಅವರನ್ನು ಗೆಲ್ಲಿಸಿದರೆ ಏನು ಸಿಗುವುದಿಲ್ಲ ಎಂದರು. ಎಲ್ಲಿದೆ ಹಣ? ಎಂದು ಕೇಳಿದರು. ಆದರೆ ಇಂದು ನಮ್ಮ ಪಕ್ಷ ಅಧಿಕಾರಕ್ಕೆ ಬಂದು ಜನರಿಗೆ ಈ ಎಲ್ಲಾ ಗ್ಯಾರಂಟಿ ಯೋಜನೆಗಳನ್ನು ತಲುಪಿಸಿದೆ ಎಂದರು. ಇದನ್ನೂ ಓದಿ: ರಂಗೇರಿದ ಬೆಂಗಳೂರು ಗ್ರಾಮಾಂತರ ಕ್ಷೇತ್ರ – ಬೃಹತ್ ಮೆರವಣಿಗೆ ಮೂಲಕ ಡಿ.ಕೆ.ಸುರೇಶ್ ನಾಮಪತ್ರ ಸಲ್ಲಿಕೆ

TAGGED:bjpcongressdk sureshLok Sabha electionramanagaraಕಾಂಗ್ರೆಸ್ಡಿಕೆ ಸುರೇಶ್ಬಿಜೆಪಿರಾಮನಗರಲೋಕಸಭಾ ಚುನಾವಣೆ
Share This Article
Facebook Whatsapp Whatsapp Telegram

Cinema news

Karunya Ram 1
ಸಿಸಿಬಿಯಿಂದ ನನಗೆ ನ್ಯಾಯ ಸಿಕ್ಕಿದೆ: ಕಾರುಣ್ಯ ರಾಮ್‌
Cinema Latest Sandalwood Top Stories
indira film 1
ಇಂದಿರಾ ಇದು ಗಾಂಧಿ ಕಥೆಯಲ್ಲ: ಕುತೂಹಲ ಮೂಡಿಸಿದ ಸಿನಿಮಾ
Cinema Latest Sandalwood
Muddu Gumma Karavali Movie
ಕರಾವಳಿ ಮುದ್ದು ಗುಮ್ಮನಿಗಾಗಿ ಹಾಡಿದ ಸಿದ್ ಶ್ರೀರಾಮ್
Cinema Latest Sandalwood Top Stories
Rakshita Shetty 2
ಮನೆಮಗಳು ತರ ನೋಡಿದ್ದೀರಿ, ಇದಕ್ಕಿಂತ ಹೆಚ್ಚೇನು ಬೇಕಿಲ್ಲ: ರಕ್ಷಿತಾ ಶೆಟ್ಟಿ
Cinema Latest Main Post Sandalwood TV Shows

You Might Also Like

Suryakumar Yadav
Cricket

ಒಂದೇ ಓವರ್‌ನಲ್ಲಿ 24 ರನ್‌ ಚಚ್ಚಿ 24 ಇನ್ನಿಂಗ್ಸ್‌ ಬಳಿಕ ಫಿಫ್ಟಿ ಹೊಡೆದ ಸ್ಕೈ

Public TV
By Public TV
2 hours ago
ed enters into nagamangala land scam
Crime

ನಾಗಮಂಗಲ ಭೂ ಹಗರಣಕ್ಕೆ ಇಡಿ ಎಂಟ್ರಿ

Public TV
By Public TV
3 hours ago
PREGNENT
Bengaluru City

ಭ್ರೂಣ ಹತ್ಯೆ ತಡೆಗೆ ಸರ್ಕಾರದ  ದಿಟ್ಟ ಕ್ರಮ – ಮಾಹಿತಿ ಕೊಟ್ಟವರಿಗೆ 1 ಲಕ್ಷ ರೂ. ಬಹುಮಾನ

Public TV
By Public TV
3 hours ago
Ishan Kishan Suryakumar Yadav
Cricket

ಸೂರ್ಯ, ಕಿಶನ್‌ ಸ್ಫೋಟಕ ಆಟಕ್ಕೆ ಪಾಕ್‌ ದಾಖಲೆ ಉಡೀಸ್‌ – ರನ್‌ ಮಳೆಯಲ್ಲಿ ಗೆದ್ದ ಭಾರತ

Public TV
By Public TV
3 hours ago
Chickpea
Dharwad

ರಾಜ್ಯ ಕಡಲೆ ಬೆಳೆಗಾರರ ಬೆನ್ನಿಗೆ ನಿಂತ ಕೇಂದ್ರ – 1 ಲಕ್ಷ ಮೆಟ್ರಿಕ್ ಟನ್ ಖರೀದಿಗೆ ಅಸ್ತು

Public TV
By Public TV
4 hours ago
Lakkundi Excavation Gadag 2
Districts

ಲಕ್ಕುಂಡಿಯಲ್ಲಿ ಕಬ್ಬಿಣದ ಉಂಡೆ, ಪಚ್ಚೆ ಕಲ್ಲು ಪತ್ತೆ

Public TV
By Public TV
5 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?