Public TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Font ResizerAa
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
  • National
  • World
  • Cinema
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • Live TV
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Election News

ನಮ್ಮ ಕುಟುಂಬ ಮೊಸಳೆ ಕಣ್ಣೀರು ಹಾಕಲ್ಲ: ನಿಖಿಲ್ ಕುಮಾರಸ್ವಾಮಿ

Public TV
Last updated: March 30, 2024 2:23 pm
Public TV
Share
2 Min Read
nikhil kumaraswamy 1
SHARE

– ಹೆಚ್‌ಡಿಕೆ ಹೃದಯ ಶಸ್ತ್ರಚಿಕಿತ್ಸೆ ಅನುಮಾನಿಸಿದ್ದ ‘ಕೈ’ ಶಾಸಕನ ಹೇಳಿಕೆಗೆ ಬೇಸರ
– ತಂದೆ ಆಪರೇಷನ್ ವಿಚಾರ ಮಾತನಾಡುತ್ತ ನಿಖಿಲ್ ಭಾವುಕ

ಮಂಡ್ಯ: ಹೆಚ್.ಡಿ.ಕುಮಾರಸ್ವಾಮಿ (H.D.Kumaraswamy) ಅವರ ಹೃದಯ ಶಸ್ತ್ರಚಿಕಿತ್ಸೆಯನ್ನು ಅನುಮಾನಿಸಿ ಕಾಂಗ್ರೆಸ್ ಶಾಸಕ ರಮೇಶ ಬಂಡೀಸಿದ್ದೇಗೌಡ ನೀಡಿದ್ದ ಹೇಳಿಕೆಗೆ ನಿಖಿಲ್ ಕುಮಾರಸ್ವಾಮಿ (Nikhil Kumaraswamy) ಬೇಸರ ವ್ಯಕ್ತಪಡಿಸಿದ್ದಾರೆ. ನಮ್ಮ ಕುಟುಂಬ ಮೊಸಳೆ ಕಣ್ಣೀರು ಹಾಕಲ್ಲ ಎಂದು ‘ಕೈ’ ಶಾಸಕನಿಗೆ ತಿರುಗೇಟು ನೀಡಿದ್ದಾರೆ.

ಮಂಡ್ಯದ ನಾಗಮಂಗಲದಲ್ಲಿ ಮಾತನಾಡಿದ ಜೆಡಿಎಸ್ ಯುವ ಘಟಕದ ರಾಜ್ಯಾಧ್ಯಕ್ಷ ನಿಖಿಲ್, ರಮೇಶ್ ಬಾಬು ಅವರ ಹಿರಿತನಕ್ಕೆ ಈ ಮಾತು ಕ್ಷೋಭೆ ತರಲ್ಲ. ನಮ್ಮ ತಂದೆಯವರಿಗೆ ಆಗಿರುವ ಆಪರೇಶನ್‌ನ್ನು ಇವರ ಮುಂದೆ ಸಾಬೀತುಪಡಿಸುವ ಅಗತ್ಯವಿಲ್ಲ. ಆಪರೇಶನ್ ಆಗಿದೆ ಎಂಬ ಅನುಕಂಪದಲ್ಲಿ ಮತ ಕೇಳುವ ಪ್ರಮೇಯ ನಮಗೆ ಇಲ್ಲ. ನಮ್ಮ ತಂದೆಗೆ ಆಪರೇಶನ್ ಆಗಿರೋದು ನಿಜ. ಮೂರನೇ ಬಾರಿಗೆ ಅವರಿಗೆ ಹೃದಯದ ಶಸ್ತ್ರಚಿಕಿತ್ಸೆ ಆಗಿದೆ. ಇದನ್ನು ಪ್ರೂ ಮಾಡುವ ಅವಶ್ಯಕತೆ ನಮಗೆ ಇಲ್ಲ. 6 ವರ್ಷದಲ್ಲಿ ಮೂರನೇ ಬಾರಿ ಹೃದಯದ ಆಪರೇಶನ್ ಆಗಿರೋದು ನಮಗೆ ನೋವು ಆಗಿದೆ ಎಂದು ಭಾವುಕರಾದರು. ಇದನ್ನೂ ಓದಿ: ಚುನಾವಣೆ ಬಂದ್ರೆ ಸಾಕು ಆಸ್ಪತ್ರೆ ಸೇರ್ತಾರೆ: ಹೆಚ್‌ಡಿಕೆ ಹೃದಯ ಶಸ್ತ್ರಚಿಕಿತ್ಸೆ ಬಗ್ಗೆ ‘ಕೈ’ ಶಾಸಕ ಅನುಮಾನ

ramesh bandisiddegowda h.d.kumaraswamy

ನಮ್ಮ ಕುಟುಂಬ ಮೊಸಳೆ ಕಣ್ಣೀರು ಹಾಕಿಲ್ಲ. ಕುಮಾರಣ್ಣ ಭಾವನಾತ್ಮಕ ಜೀವಿ. ಜನರಿಗೆ ಕಷ್ಟಗಳಾದಗ ಕುಮಾಣ್ಣನಿಗೆ ಕಣ್ಣೀರು ಬರುತ್ತೆ. ಕುಮಾರಣ್ಣನ ಸ್ಪರ್ಧೆಯನ್ನು ಕಾಂಗ್ರೆಸ್ ಅವರಿಂದ ಸಹಿಸಿಕೊಳ್ಳಲು ಆಗುತ್ತಿಲ್ಲ. ಅದಕ್ಕಾಗಿ ಹೀಗೆ ಕಾಂಗ್ರೆಸ್ ನಾಯಕರು ಮಾತಾಡುತ್ತಾರೆ ಎಂದು ಬೇಸರ ಹೊರಹಾಕಿದರು.

ಜಿಲ್ಲೆಯ ಹಾಗೂ ರಾಜ್ಯದ ಜನರು ನೋಡುತ್ತಾ ಇದ್ದಾರೆ. ಮತದಾರ ತಂದೆ-ತಾಯಿಗಳ ಕೈಯಲ್ಲಿ ಇದಕ್ಕೆ ಉತ್ತರ ನೀಡುವ ಶಕ್ತಿ ಇದೆ. ನಾವು ಮೊದಲಿಗೆ ಭಾರತೀಯರು, ಕನ್ನಡಿಗರು. ಕುಮಾರಣ್ಣ ಎಲ್ಲೇ ಹೋಗಿ ಸ್ಪರ್ಧೆ ಮಾಡಲು ಈ ರಾಜ್ಯದ ಜನರು ಕೊಟ್ಟಿರುವ ಶಕ್ತಿ. ಜನರು ಕುಮಾರಣ್ಣನ ಸ್ಪರ್ಧೆ ನಿರ್ಧಾರ ಮಾಡ್ತಾರೆ. ಬೇರೆ ಯಾರು ಅವರ ಸ್ಪರ್ಧೆ ನಿರ್ಣಯ ಮಾಡಲ್ಲ. ಜನರ ಆಶಯದಂತೆ ಕುಮಾರಣ್ಣ ಮಂಡ್ಯದಲ್ಲಿ ಸ್ಪರ್ಧೆ ಮಾಡಿದ್ದಾರೆ. ನಾವು ಬಿಜೆಪಿ ಅವರನ್ನು ಹೊಂದಾಣಿಕೆ ಮಾಡಿಕೊಂಡಿದ್ದೇವೆ. ಎಲ್ಲರನ್ನೂ ವಿಶ್ವಾಸಕ್ಕೆ ತೆಗೆದುಕೊಂಡಿದ್ದೇವೆ. ಸುಮಲತಾ ಅವರನ್ನು ನಾವು ಬೆಂಬಲ ಕೇಳ್ತೀವಿ ಅವರನ್ನು ಹೋಗಿ ಮಾತಾಡಿಸುತ್ತೇವೆ ಎಂದು ತಿಳಿಸಿದರು. ಇದನ್ನೂ ಓದಿ: ಮೈಸೂರು-ಕೊಡಗು ಬಿಜೆಪಿ ಅಭ್ಯರ್ಥಿ ಯದುವೀರ್‌ ಒಡೆಯರ್‌ ಏ.3 ರಂದು ನಾಮಪತ್ರ ಸಲ್ಲಿಕೆ

Nikhil Kumaraswamy HD Kumaraswamy

ಕುಮಾರಸ್ವಾಮಿ ಆಪರೇಶನ್ ವಿಚಾರ ಮಾತನಾಡುವ ವೇಳೆ ಭಾವುಕರಾದ ನಿಖಿಲ್, ತಂದೆಯ ವಿಚಾರ ಮಾತಾಡುವಾಗ ಸಹಜ ಅಲ್ಲವೇ? ತಂದೆ-ಮಗನ ಸಂಬಂಧ ಎಂದರೆ ಭಾವನೆಗಳು. ಆ ವಿಚಾರವನ್ನು ನಮ್ಮ ಮನೆಯಲ್ಲಿ ಕೂತು ಮಾತಾಡುತ್ತೇವೆ. ಬೇರೆಯವರು ಈ ಬಗ್ಗೆ ಮಾತಾಡುವ ಅವಶ್ಯಕತೆ ಇಲ್ಲ ಎಂದರು.


ಮೊದಲ ಹಂತದ ಸಭೆಯನ್ನು ಇಂದು ನಾಗಮಂಗಲದಲ್ಲಿ ಮಾಡ್ತಾ ಇದ್ದೀವಿ. ಪ್ರತಾಪ್ ಸಿಂಹ ಸಹ ನಮ್ಮ ಜೊತೆ ಇರ್ತಾರೆ. ಮೂರು ತಿಂಗಳಿಂದ ಹಲವು ಸಭೆಗಳು ನಡೆದಿವೆ. ಅನಿರೀಕ್ಷಿತ ಬೆಳವಣಿಗೆಯಲ್ಲಿ ಕುಮಾರಣ್ಣ ಮಂಡ್ಯ ಅಭ್ಯರ್ಥಿ ಆಗಿದ್ದಾರೆ. ಕಾರ್ಯಕರ್ತರ ಒತ್ತಾಸೆಗೆ ಸೋತು ಕುಮಾರಣ್ಣ ಸ್ಪರ್ಧೆ ಮಾಡ್ತಾ ಇದ್ದಾರೆ. ಎನ್‌ಡಿಎ ಮೈತ್ರಿ ಕೂಟದ ಅಭ್ಯರ್ಥಿ ಕುಮಾರಸ್ವಾಮಿ ಆಗಿದ್ದಾರೆ ಎಂದು ಹೇಳಿದರು. ಇದನ್ನೂ ಓದಿ: ಕೇಜ್ರಿವಾಲ್‌ ಬಂಧನ ಬೆನ್ನಲ್ಲೇ ಮತ್ತೊಬ್ಬ ದೆಹಲಿ ಸಚಿವರಿಗೆ ಇ.ಡಿ ಸಮನ್ಸ್‌

TAGGED:jdsmandyanikhil kumaraswamyRamesh Bandisiddegowda
Share This Article
Facebook Whatsapp Whatsapp Telegram

Cinema Updates

Kamal Haasan
ಕಮಲ್ `ಕನ್ನಡ’ ವಿವಾದ – ಜೂ.20ಕ್ಕೆ ವಿಚಾರಣೆ ಮುಂದೂಡಿದ ಕೋರ್ಟ್
8 hours ago
Kangana Ranaut to bengaluru
ಬೆಂಗಳೂರಿನ ಶಿವೋಹಂ ಶಿವ ದೇವಸ್ಥಾನಕ್ಕೆ ಭೇಟಿ ನೀಡಿದ ಕಂಗನಾ ರಣಾವತ್‌
9 hours ago
Timmana Mottegalu
ಜೂ.27ಕ್ಕೆ `ತಿಮ್ಮನ ಮೊಟ್ಟೆಗಳು’ ರಿಲೀಸ್
12 hours ago
Karisma Kapoor Sunjay Kapur
ನಟಿ ಕರಿಷ್ಮಾ ಕಪೂರ್‌ ಮಾಜಿ ಪತಿ ಸಂಜಯ್‌ ಹೃದಯಾಘಾತದಿಂದ ನಿಧನ
22 hours ago

You Might Also Like

Temba Bavuma Aiden Markram
Cricket

ಚೋಕರ್ಸ್‌ ಪಟ್ಟ ಕಳಚಿ ಚಾಂಪಿಯನ್‌ ಆಗಲು ಆಫ್ರಿಕಾಗೆ ಬೇಕಿದೆ ಕೇವಲ 69 ರನ್‌!

Public TV
By Public TV
7 hours ago
Vijayapura Rain
Districts

ವಿಜಯಪುರ | ಭಾರಿ ಮಳೆ – ತಗ್ಗು ಪ್ರದೇಶದ ಮನೆಗಳಿಗೆ ನುಗ್ಗಿದ ನೀರು

Public TV
By Public TV
7 hours ago
ಸಾಂದರ್ಭಿಕ ಚಿತ್ರ
Belgaum

ಬೆಳಗಾವಿ | ಧಾರಾಕಾರ ಮಳೆಗೆ ಕೊಚ್ಚಿಹೋದ ಆಟೋ – ಚಾಲಕ ದುರ್ಮರಣ

Public TV
By Public TV
7 hours ago
Leopard
Districts

ಗ್ರಾಮಸ್ಥರ ನಿದ್ದೆಗೆಡಿಸಿದ ಚಿರತೆ – ಡ್ರೋನ್ ಕ್ಯಾಮೆರಾದಲ್ಲಿ ಸೆರೆ

Public TV
By Public TV
7 hours ago
Hardhik Vibhuthi 2
Latest

ವಿಮಾನ ದುರಂತ – ನಿಶ್ಚಿತಾರ್ಥ ಮುಗಿಸಿ ಹೊರಟ ಜೋಡಿಯ ದಾರುಣ ಅಂತ್ಯ

Public TV
By Public TV
8 hours ago
Basavasagar dam
Districts

ಬಸವಸಾಗರ ಜಲಾಶಯದಿಂದ ಕೃಷ್ಣಾ ನದಿಗೆ 5 ಸಾವಿರ ಕ್ಯುಸೆಕ್ ನೀರು ಬಿಡುಗಡೆ

Public TV
By Public TV
8 hours ago
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?