Public TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Font ResizerAa
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
  • National
  • World
  • Cinema
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Latest

ಏನಿದು ಚಾಂದ್ರಮಾನ, ಸೌರಮಾನ ಯುಗಾದಿ?

Public TV
Last updated: April 9, 2024 3:04 pm
Public TV
Share
3 Min Read
Difference between chandramana and souramana ugadi
SHARE

ಸಂಸ್ಕೃತದ ʼಯುಗʼ ಮತ್ತು ʼಆದಿʼ ಎಂಬ ಎರಡು ಪದಗಳಿಂದ ಯುಗಾದಿ (Ugadi) ಎಂಬ ಪದ ವ್ಯುತ್ಪತ್ತಿಯಾಗಿದೆ. ಇದರ ಅರ್ಥ ಹೊಸ ಯುಗದ ಆರಂಭ. ಬ್ರಹ್ಮ ದೇವನು ಆ ದಿನದಿಂದಲೇ ಸೃಷ್ಟಿಯ ಕಾರ್ಯ ಆರಂಭಿಸಿದನೆಂಬ ನಂಬಿಕೆಯೂ ಇದೆ.

ಯುಗಾದಿ ಅಂದರೆ ಹೊಸ ವರ್ಷದ ಮೊದಲ ದಿನ ಎಂದರ್ಥ. ಇಡೀ ವರ್ಷಕ್ಕೆ ಬೇಕಾದ ಯೋಜನೆಯನ್ನು ಹಾಕಿಕೊಂಡು ಅದಕ್ಕೆ ಅನುಗುಣವಾಗಿ ನಡೆಯುವ ಶುಭಸಂಕಲ್ಪವನ್ನು ಮಾಡಿಕೊಳ್ಳುವ ದಿನವೇ ಯುಗಾದಿ. ವೇದಗಳ ಮಂತ್ರದಲ್ಲಿ ವರ್ಷವನ್ನು ರಥಕ್ಕೂ, ಉತ್ತರಾಯಣ, ದಕ್ಷಿಣಾಯಣಗಳನ್ನು ಅದರ ಚಕ್ರಗಳಿಗೂ ಹೋಲಿಸಲಾಗಿದೆ. ಆದ್ದರಿಂದ ವರ್ಷವನ್ನು ಯುಗ ಎಂದೂ, ಅದರ ಮೊದಲನೆಯ ದಿನವನ್ನು ಯುಗಾದಿ ಎಂದೂ ಕರೆಯಲಾಗುತ್ತದೆ.

ಕರ್ನಾಟಕದ ಹಲವೆಡೆ ಚಾಂದ್ರಮಾನ ಯುಗಾದಿ (Chandramana Ugadi) ಆಚರಣೆ ಇದ್ದರೆ ಕರಾವಳಿ, ಕೇರಳ ಭಾಗದಲ್ಲಿ ಸೌರಮಾನ ಯುಗಾದಿಯನ್ನು (Souramana Ugadi) ಆಚರಿಸಲಾಗುತ್ತದೆ. ಈ ಬಾರಿ ಚಾಂದ್ರಮಾನ ಯುಗಾದಿ ಏ.9 ರಂದು ಬಂದರೆ ಸೌರಮಾನ ಯುಗಾದಿ ಏ.14 ರಂದು ಬಂದಿದೆ.

YUGADI

ಚಾಂದ್ರಮಾನ ಯುಗಾದಿ
ಚಂದ್ರನ ಚಲನೆಯನ್ನು ಆಧರಿಸಿ ವರ್ಷದಲ್ಲಿನ ದಿನಗಳನ್ನು ಲೆಕ್ಕಮಾಡುವುದಕ್ಕೆ ಚಾಂದ್ರಮಾನ ಎಂದು ಕರೆಯಲಾಗುತ್ತದೆ. ಈ ವ್ಯವಸ್ಥೆಯ ಪ್ರಕಾರ, ಒಂದು ಅಮಾವಾಸ್ಯೆಯ ದಿನದಿಂದ ಮುಂದಿನ ಅಮಾವಾಸ್ಯೆಯ ದಿನದ ತನಕ ಒಂದು ತಿಂಗಳು ಎಂದು ಪರಿಗಣಿಸಲಾಗುತ್ತದೆ.

ಇಂತಹ 12 ತಿಂಗಳು ಸೇರಿ ಒಂದು ವರ್ಷ. ಈ ವ್ಯವಸ್ಥೆಯ ಪ್ರಕಾರ ವರ್ಷದಲ್ಲಿ 354 ದಿನಗಳಿವೆ. ಇದು ಸೌರಮಾನ ಮತ್ತು ಚಾಂದ್ರಮಾನ ವರ್ಷಗಳ ನಡುವೆ 11 ದಿನಗಳ ಕೊರತೆಗೆ ಕಾರಣವಾಗುತ್ತದೆ. ಆದ್ದರಿಂದ ಮೂರು ವರ್ಷಗಳಿಗೊಮ್ಮೆ, ವ್ಯತ್ಯಾಸವು 1 ತಿಂಗಳಿಗೆ ಸಮನಾಗಿರುವಾಗ ಒಂದು ತಿಂಗಳನ್ನು ಹೆಚ್ಚಾಗಿ ಸೇರಿಸಿ, ಆ ತಿಂಗಳನ್ನು ‘ಚಂದ್ರ ಅಧಿಕ ಮಾಸ’ ಎಂದು ಕರೆದು ಸೌರಮಾನ ವರ್ಷಕ್ಕೆ ಸೇರಿಸಲಾಗುತ್ತದೆ. ಮೂರು ವರ್ಷಗಳಿಗೊಮ್ಮೆ ಅಧಿಕ ಮಾಸ ಬಂದು ದಿನಗಳು ಹೊಂದಾಣಿಕೆಯಾಗುತ್ತವೆ. ಇದನ್ನೂ ಓದಿ: ಮರೆಯದಂಥ ಸವಿಸವಿ ಗಳಿಗೆ ತಂದಿತು ʻಯುಗಾದಿʼ

ಚಾಂದ್ರಮಾನವರ್ಷ ಚೈತ್ರ ಶುಕ್ಲ ಪ್ರಥಮೆಯ ದಿವಸ ಪ್ರಾರಂಭವಾಗುತ್ತದೆ. ಅಲ್ಲಿಂದ ಕ್ರಮವಾಗಿ ಚೈತ್ರ, ವೈಶಾಖ, ಜ್ಯೇಷ್ಠ, ಆಷಾಢ, ಶ್ರಾವಣ, ಭಾದ್ರಪದ, ಆಶ್ವಯುಜ, ಕಾರ್ತಿಕ, ಮಾರ್ಗಶೀರ್ಷ, ಪುಷ್ಯ, ಮಾಘ, ಫಾಲ್ಗುಣ ಎಂಬ ಹನ್ನೆರಡು ಚಾಂದ್ರಮಾನ ಮಾಸಗಳು ಕ್ರಮವಾಗಿ ಬಂದು ಮತ್ತೆ ಚೈತ್ರಮಾಸ ಬರುತ್ತದೆ. ಈ ಹನ್ನೆರಡು ತಿಂಗಳುಗಳ ಕಾಲಕ್ಕೆ ಒಂದು ಚಾಂದ್ರಮಾನವರ್ಷವೆಂದು ಹೆಸರು. ಈ ವರ್ಷಗಳನ್ನು ಪ್ರಭವ, ವಿಭವ ಮೊದಲಾದ ಅರುವತ್ತು ಸಂವತ್ಸರಗಳ ಹೆಸರುಗಳಿಂದ ಕರೆಯುತ್ತಾರೆ.

UGADI SPECIAL

ಸೌರಮಾನ ಯುಗಾದಿ
ಸೂರ್ಯನ ಮೇಷಾದಿ ಹನ್ನೆರಡು ರಾಶಿಚಕ್ರದಲ್ಲಿ ಸಂಚರಿಸುವ ಕಾಲವನ್ನು ಪರಿಗಣಿಸಿದ ಪದ್ಧತಿ ಸೌರಮಾನವಾಗಿದೆ. ಒಂದು ವರ್ಷಕ್ಕೆ 364 ¼ ದಿನಗಳು ಬರುತ್ತವೆ. ಇದನ್ನು ಸಂವತ್ಸರ ಎನ್ನುತ್ತಾರೆ. ಭೂಮಿಯು ಸೂರ್ಯನ ಸುತ್ತ ಚಲಿಸುವುದು ಎಲ್ಲರಿಗೂ ತಿಳಿದಿರುವ ವಿಷಯ. ಸೂರ್ಯ ಮತ್ತು ಚಂದ್ರನ ಕಕ್ಷೆಯಲ್ಲಿ 27 ನಕ್ಷತ್ರಗಳಿವೆ. ಸೂರ್ಯ ಮತ್ತು ಚಂದ್ರ ಕಕ್ಷೆಯಲ್ಲಿ ಎರಡೂವರೆ ನಕ್ಷತ್ರಗಳ ಅಂತರವನ್ನು ಸರಿದೂಗಿಸಲು ತೆಗೆದುಕೊಳ್ಳುವ ಸಮಯವನ್ನು ರಾಶಿ ಎಂದು ಪರಿಗಣಿಸಲಾಗುತ್ತದೆ. ಸೂರ್ಯನ ಮೇಷಾದಿ ಹನ್ನೆರಡು ರಾಶಿಚಕ್ರದಲ್ಲಿ ಸಂಚರಿಸುವ ಕಾಲವನ್ನಾಧರಿಸಿದ ಪದ್ಧತಿ ಸೌರಮಾನವಾಗಿದೆ. ಒಂದು ವರ್ಷಕ್ಕೆ. 364 ¼ ದಿನಗಳು ಬರುತ್ತವೆ. ಇದನ್ನು ಸಂವತ್ಸರ ಎನ್ನುತ್ತಾರೆ.

ಒಂದು ನಕ್ಷತ್ರದ ಅಂತರವನ್ನು ಸರಿದೂಗಿಸಲು ಸೂರ್ಯ ಸುಮಾರು ಹದಿಮೂರು ದಿನಗಳನ್ನು ತೆಗೆದುಕೊಂಡರೆ ಒಂದು ರಾಶಿಯನ್ನು ಆವರಿಸಲು ಸೂರ್ಯ 30 ಅಥವಾ 31 ದಿನಗಳನ್ನು ತೆಗೆದುಕೊಳ್ಳುತ್ತಾನೆ. ಕೊನೆಯಲ್ಲಿ ಸೂರ್ಯ ಮತ್ತೊಂದು ನಕ್ಷತ್ರಕ್ಕೆ ದಾಟುತ್ತಾನೆ. ಆ ದಾಟುವ ಸಮಯವನ್ನು ‘ಸಂಕ್ರಮಣ’ ಎಂದು ಕರೆಯಲಾಗುತ್ತದೆ. ಈ ರೀತಿ, ಸೂರ್ಯ ಈ ಹನ್ನೆರಡು ರಾಶಿಗಳನ್ನು ದಾಟಲು 364 ¼ ದಿನಗಳನ್ನು ತೆಗೆದುಕೊಳ್ಳುತ್ತಾನೆ. ಸೂರ್ಯ,ರೇವತಿ ನಕ್ಷತ್ರದಿಂದ ಅಶ್ವಿನಿ ನಕ್ಷತ್ರಕ್ಕೆ ದಾಟಿದ ಮರುದಿನವನ್ನು ಹೊಸ ವರ್ಷದ ದಿನವೆಂದು ಕರೆಯಲಾಗುತ್ತದೆ.  ಇದನ್ನೂ ಓದಿ: ಪ್ರಕೃತಿಯ ರಮ್ಯಚೈತ್ರ ಕಾಲವೇ ‘ಯುಗಾದಿ’

vishu kani

ಏನಿದು ವಿಷು ಕಣಿ?
ಕರ್ನಾಟಕದ ಕರಾವಳಿ, ಕೇರಳದಲ್ಲಿ (Kerala) ಸೂರ್ಯಮಾನ ಯುಗಾದಿಯಂದು ವಿಷು ಕಣಿ (Vishu Kani) ಇಡಲಾಗುತ್ತದೆ. ವಿಷು ಹಬ್ಬದ ಹಿಂದಿನ ದಿನ ಸಂಜೆ ತರಕಾರಿ ಹೂವು ಹಣ್ಣುಗಳನ್ನು ದೇವರ ಮುಂದಿಟ್ಟು, ಒಂದು ಕನ್ನಡಿಯನ್ನು ಇಡುತ್ತಾರೆ. ಹಬ್ಬದ ದಿನ ಬೆಳಗ್ಗೆ ಬೇಗ ಎದ್ದು ಸ್ನಾನ ಮಾಡಿ ನೋಡುತ್ತಾರೆ. ಇದನ್ನೇ ವಿಷು ಕಣಿ ಎನ್ನುತ್ತಾರೆ. ವರ್ಷದ ಮೊದಲ ದಿನ ಈ ಕಣಿಯನ್ನು ನೋಡಿದರೆ ವರ್ಷಪೂರ್ತಿ ಸಮೃದ್ಧಿ, ಸಂಪತ್ತು ಮತ್ತು ಸಂತೋಷ ಪ್ರಾಪ್ತವಾಗುತ್ತದೆ ಎನ್ನುವ ನಂಬಿಕೆಯಿದೆ.

 

TAGGED:Chandramana UgadiSouramana UgadiugadiVishuಉಗಾದಿಚಾಂದ್ರಮಾನ ಯುಗಾಗಿಯುಗಾದಿವಿಷುಸೌರಮಾನ ಯಗಾದಿ
Share This Article
Facebook Whatsapp Whatsapp Telegram

Cinema News

Bigg Boss Kannada
BBK 12 | ಬಿಗ್‌ಬಾಸ್ ಸೀಸನ್-12 – ಈ ಸಲ ಕಿಚ್ಚು ಹೆಚ್ಚು!
Cinema Latest Top Stories TV Shows
Darshan Bail Cancelled Supreme Court order sends a good message to society Priya Haasan
ಇವರೇ ಕರ್ಕೊಂಡು ಹೋಗಿ ಹೊಡಿ ಬಡಿ ಮಾಡಿದ್ದು ತಪ್ಪು: ಪ್ರಿಯಾ ಹಾಸನ್‌
Cinema Latest Top Stories
Actor Shishir 1
ದುನಿಯಾ ವಿಜಯ್ ಜೊತೆಯಾದ ಡೇರ್ ಡೆವಿಲ್ ಹೀರೋ
Cinema Karnataka Latest Sandalwood Top Stories
Daali Dhananjaya 1
ಹಲಗಲಿ ಚಿತ್ರದ ಫಸ್ಟ್ ರೋರ್ ರಿಲೀಸ್ – ವಾರಿಯರ್ ಪಾತ್ರದಲ್ಲಿ ಧನಂಜಯ್
Cinema Latest Sandalwood
Actress Ramya 2
ದರ್ಶನ್ ಜೈಲಿಗೆ ಹೋಗಿದ್ದು ಬೇಸರ ತಂದಿದೆ, ಅಕ್ಕಪಕ್ಕದವ್ರ ಸಹವಾಸ ಬಿಡ್ಬೇಕು – ರಮ್ಯಾ ಸಾಫ್ಟ್ ಕಾರ್ನರ್
Cinema Latest Sandalwood Top Stories

You Might Also Like

Eshwar Khandre
Districts

ಚಿರತೆ ದಾಳಿ| ಬನ್ನೇರುಘಟ್ಟ ಸಫಾರಿ ವಾಹನದ ಮೇಲೆ ಜಾಲರಿ ಅಳವಡಿಸಲು ಖಂಡ್ರೆ ಸೂಚನೆ

Public TV
By Public TV
3 hours ago
West Bengal Accident
Crime

ರಸ್ತೆ ಬದಿಯಲ್ಲಿ ನಿಲ್ಲಿಸಿದ್ದ ಟ್ರಕ್‌ಗೆ ಬಸ್ ಡಿಕ್ಕಿ – 10 ಮಂದಿ ಯಾತ್ರಿಕರು ಸಾವು

Public TV
By Public TV
3 hours ago
Dharmasthala Mass Burial Case Youth arrested for insulting Jainism
Karnataka

ಧರ್ಮಸ್ಥಳ ಕೇಸ್‌| ಜೈನ ಧರ್ಮದ ಬಗ್ಗೆ ಅವಹೇಳನ – ಯುವಕ ಅರೆಸ್ಟ್‌

Public TV
By Public TV
4 hours ago
SATISH JARKIHOLI 1
Belgaum

ರಾಜಕೀಯದ ಬಗ್ಗೆ ಚರ್ಚೆ ಬೇಡ – ರಾಜಣ್ಣ ಬಗ್ಗೆ ಕೇಳಿದ್ದಕ್ಕೆ ಜಾರಕಿಹೊಳಿ ಉತ್ತರ

Public TV
By Public TV
4 hours ago
H K Patil
Districts

ಗದಗ | ನೂತನ ಇಂದಿರಾ ಕ್ಯಾಂಟೀನ್ ಲೋಕಾರ್ಪಣೆ ಮಾಡಿದ ಸಚಿವ ಹೆಚ್.ಕೆ ಪಾಟೀಲ್

Public TV
By Public TV
4 hours ago
TB Dam
Districts

ತುಂಗಭದ್ರಾ ಡ್ಯಾಂನ 8 ಗೇಟ್ ಜಾಮ್, ಮೇಲೆತ್ತಲು ಸಾಧ್ಯವಾಗುತ್ತಿಲ್ಲ: ಶಿವರಾಜ ತಂಗಡಗಿ

Public TV
By Public TV
5 hours ago
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?