Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ರಾಜ್ಯಾದ್ಯಂತ ರಂಜಾನ್‌ ಆಚರಣೆ – ಮುಸ್ಲಿಂ ಬಾಂಧವರಿಗೆ ಶುಭಕೋರಿದ ಸಿಎಂ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Bengaluru City | ರಾಜ್ಯಾದ್ಯಂತ ರಂಜಾನ್‌ ಆಚರಣೆ – ಮುಸ್ಲಿಂ ಬಾಂಧವರಿಗೆ ಶುಭಕೋರಿದ ಸಿಎಂ

Bengaluru City

ರಾಜ್ಯಾದ್ಯಂತ ರಂಜಾನ್‌ ಆಚರಣೆ – ಮುಸ್ಲಿಂ ಬಾಂಧವರಿಗೆ ಶುಭಕೋರಿದ ಸಿಎಂ

Public TV
Last updated: April 11, 2024 10:00 am
Public TV
Share
2 Min Read
Siddaramaiah
SHARE

ಬೆಂಗಳೂರು: ಹಿಂದೂಗಳ ಹೊಸ ವರ್ಷ ಎಂದೇ ಕರೆಯಲ್ಪಡುವ ಯುಗಾದಿಹಬ್ಬ ಮುಗಿಯುತ್ತಿದ್ದಂತೆ ಮುಸ್ಲಿಮರ ಪವಿತ್ರ ಆಚರಿಸಲಾಗುತ್ತಿದೆ. ಯುಗಾದಿ ಹಬ್ಬದಂದೇ ದೇಶಾದ್ಯಂತ ರಂಜಾನ್ ಚಾಂದ್ (ಚಂದ್ರ ದರ್ಶನ) ಕಾಣಿಸಿಕೊಂಡಿದ್ದು, ಮರುದಿನವೇ ಮುಸ್ಲಿಂ ಬಾಂಧವರು ಪವಿತ್ರ ರಂಜಾನ್‌ ಆಚರಿಸುತ್ತಿದ್ದಾರೆ. ಈ ಹಿನ್ನೆಲೆಯಲ್ಲಿ ಸಿಎಂ ಸಿದ್ದರಾಮಯ್ಯ ಅವರು ಮುಸ್ಲಿಂ ಬಾಂಧವರಿಗೆ ಶುಭ ಕೋರಿದ್ದಾರೆ.

ಶ್ರದ್ಧಾ ಭಕ್ತಿಯ ಪ್ರತೀಕವಾದ ರಂಜಾನ್ ಹಬ್ಬವು ನಾಡಿನ‌ಲ್ಲಿ ಸುಖ, ಶಾಂತಿ, ಸೌಹಾರ್ದತೆಯು ನೆಲೆಗೊಳ್ಳಲು ಪ್ರೇರಣೆಯಾಗಲಿ ಎಂದು ಹಾರೈಸುತ್ತೇನೆ. ಸಮಸ್ತ ಮುಸ್ಲಿಂ ಬಾಂಧವರಿಗೆ ರಂಜಾನ್ ಹಬ್ಬದ ಶುಭಾಶಯಗಳು ಎಂದು ತಮ್ಮ ಸೋಶಿಯಲ್‌ ಮೀಡಿಯಾ ಎಕ್ಸ್‌ ಖಾತೆಯಲ್ಲಿ ಶುಭಕೋರಿದ್ದಾರೆ.

Ramadan

ಈದ್ಗಾ ಮೈದಾನ ಸುತ್ತಮುತ್ತ ಪೊಲೀಸ್ ಭದ್ರತೆ:
ರಂಜಾನ್ ಹಿನ್ನೆಲೆ ಬೆಂಗಳೂರಿನ ಚಾಮರಾಚಪೇಟೆಯಲ್ಲಿರೋ ಈದ್ಗಾ ಮೈದಾನದ ಸುತ್ತಮುತ್ತ ಬಿಗಿ ಪೊಲೀಸ್‌ ಭದ್ರತೆಯ ವ್ಯವಸ್ಥೆ ಮಾಡಲಾಗಿದೆ. ಸುಮಾರು 5 ಸಾವಿರಕ್ಕೂ ಅಧಿಕ ಮಂದಿ ಮುಸ್ಲಿಂ ಬಾಂಧವರು ನಮಾಜ್‌ ಮಾಡುತ್ತಿದ್ದಾರೆ. ಅಲ್ಲದೇ ಸಿಎಂ ಸಹ ಈ ಕಾರ್ಯಕ್ರಮದಲ್ಲಿ ಭಾಗಿಯಾಗುತ್ತಿದ್ದಾರೆ. ಈ ಹಿನ್ನೆಲೆಯಲ್ಲಿ ಈದ್ಗಾ ಮೈದಾನದ ಸುತ್ತಮುತ್ತ ಒಬ್ಬ ಡಿಸಿಪಿ ಹಾಗೂ ನಾಲ್ಕು ಮಂದಿ ಎಸಿಪಿ ಎರಡು ಕೆಎಸ್‌ಆರ್‌ಪಿ ತುಕಡಿ ಸೇರಿ ಮುನ್ನೂರಕ್ಕೂ ಹೆಚ್ಚು ಪೊಲೀಸರನ್ನ ಭದ್ರತೆಗೆ ನಿಯೋಜನೆ ಮಾಡಲಾಗಿದೆ.

ರಂಜಾನ್ ಉಪವಾಸ ಆಚರಣೆ ಏಕೆ?
ರಂಜಾನ್‌ ಆಚರಣೆಗೂ ಮುನ್ನ ಈ ಮಾಸದಲ್ಲಿ ಮುಸ್ಲಿಮರು 30 ದಿನ ಉಪವಾಸ ಆಚರಿಸುವ ಜೊತೆಗೆ ದಾನ-ಧರ್ಮ, ವಿಶೇಷ ಪ್ರಾರ್ಥನೆಯಲ್ಲಿ ಪಾಲ್ಗೊಳ್ಳುತ್ತಾರೆ. ಇಸ್ಲಾಮಿನ ತರಾವೀಹ್, ನಮಾಜ್, ಉಪವಾಸ, ಝಕಾತ್ (ದಾನ), ಹಜ್ ಎಂಬ ಪಂಚಕರ್ಮಗಳನ್ನು ನೇರವೇರಿಸುವ ರಂಜಾನ್ ಪುಣ್ಯ ಸಂಪಾದಿಸುವ ಮಾಸವೂ ಎನಿಸಿಕೊಂಡಿದೆ.

Ramadan 02

ಈ ಸಮಯದಲ್ಲಿ ಆತ್ಮನಿಯಂತ್ರಣದ ಜತೆಗೆ ಸಂಯಮ ರೂಢಿಸಿಕೊಳ್ಳುವುದನ್ನು ಕಲಿಯುತ್ತಾರೆ. ಬಡವರ ಹಸಿವು ಅರಿಯುವ ಜೊತೆಗೆ ಒಂದು ಹೊತ್ತಿನ ಊಟಕ್ಕೆ ಕಷ್ಟಪಡುವವರ ಜೀವನ ಹೇಗಿರಬಹುದು? ಎಂಬ ಪಾಠವನ್ನೂ ಉಪವಾಸ ಕಲಿಸುತ್ತದೆ. ಅಲ್ಲದೆ ರಾತ್ರಿ ವೇಳೆ ನಡೆಯುವ ವಿಶೇಷ ತರಾವೀಹ್ ನಮಾಜ್‌ಗಳಲ್ಲಿ ಪವಿತ್ರ ಕುರಾನ್ ಪಠಿಸಲಾಗುತ್ತದೆ. ಕುರಾನ್‌ನನ್ನು ಸಂಪೂರ್ಣವಾಗಿ ಬಾಯಿಪಾಠ ಮಾಡಿರುವವರು ಈ ನಮಾಜ್‌ಗೆ ನೇತೃತ್ವ ವಹಿಸುತ್ತಾರೆ. ಮನುಷ್ಯನನ್ನು ಅನ್ಯಚಿತ್ತದೆಡೆಗೆ ಕೊಂಡೊಯ್ಯುವ ಮಾರ್ಗವನ್ನು ಮುಚ್ಚಿ, ಒಳಿತಿನ ಬಗ್ಗೆ ಮಾತ್ರ ಚಿಂತಿಸುವಂತೆ ಮಾಡುವುದು ರಂಜಾನ್ ಮಾಸದ ವಿಶೇಷ. ಹಾಗಾಗಿಯೇ ಈ ಮಾಸದಲ್ಲಿ ಅಲ್ಲಾನ ಪ್ರೀತಿಗಳಿಸುವ ಇಚ್ಛೆಯೊಂದಿಗೆ ಆಹಾರ, ಮದ್ಯ ಸೇವನೆಯನ್ನೂ ತ್ಯಜಿಸುತ್ತಾರೆ. ಕಾಮಾಸಕ್ತಿ, ಮನರಂಜನೆಯಿಂದ ದೂರವಿದ್ದು, ದುಡಿಮೆ ನಂಬಿ ಬದುಕುತ್ತಾರೆ.

ಈ ಮಾಹೆಯಲ್ಲಿ ದಾನ-ಧರ್ಮಕ್ಕೆ ಹೆಚ್ಚಿನ ಮಹತ್ವ ನೀಡಲಾಗುತ್ತದೆ. ದಾನ ಮಾಡುವುದರಿಂದ ಹೆಚ್ಚಿನ ಪುಣ್ಯ ಲಭಿಸುತ್ತದೆ. ಶ್ರೀಮಂತರು ಮತ್ತು ಉಳ್ಳವರು ತಮ್ಮ ಸಂಪತ್ತಿನ ಶೇ 2.5 ಪಾಲನ್ನು ಝಕಾತ್ (ದಾನ) ರೂಪದಲ್ಲಿ ಬಡವರಿಗೆ ನೀಡುವುದನ್ನು ಇಸ್ಲಾಂ ಕಡ್ಡಾಯಗೊಳಿಸಿದೆ.

ಸಹ್ರಿಯಿಂದ ಇಫ್ತಾರ್ ವರೆಗೆ:
ಉಪವಾಸವೂ ಸಹ್ರಿಯಿಂದ ಆರಂಭವಾಗಿ ಇಫ್ತಾರ್‌ನೊಂದಿಗೆ ಕೊನೆಗೊಳ್ಳುತ್ತದೆ. ಸೂರ್ಯೋದಯಕ್ಕೆ ಸುಮಾರು ಒಂದು ಗಂಟೆ ಮುನ್ನ ಸೇವಿಸುವ ಆಹಾರಕ್ಕೆ ಸಹ್ರಿ ಎನ್ನುವರು. ಮನೆಗಳಲ್ಲಿ ಇಫ್ತಾರ್‌ಗೆ ಖರ್ಜೂರ, ಹಣ್ಣುಗಳು ಮತ್ತು ಹಣ್ಣಿನ ರಸ ಸೇರಿದಂತೆ ವಿವಿಧ ರೀತಿಯ ಭಕ್ಷ್ಯಗಳನ್ನು ಸಿದ್ಧಪಡಿಸಲಾಗುತ್ತದೆ. ಮಸೀದಿಗಳಲ್ಲೂ ಸಾಮೂಹಿಕ ಇಫ್ತಾರ್ ಆಯೋಜನೆ ನಡೆಯುತ್ತದೆ. ಇದರೊಂದಿಗೆ ಈ ಮಾಹೆಯಲ್ಲಿ ಅಲ್ಲಲ್ಲಿ ಸೌಹಾರ್ದ ಇಫ್ತಾರ್ ಕೂಟಗಳೂ ನಡೆಯುತ್ತವೆ. ಆದರೆ ಕೆಲಸ ಮಾಡುವ ಬೆರಳೆಣಿಕೆಯ ಮಂದಿ ಮಾತ್ರ ಉಪವಾಸವನ್ನು ರದ್ದುಗೊಳಿಸಿ, ಸಂಜೆ ವೇಳೆ ಪ್ರಾರಂಭವಾಗುವ ಸಾಮೂಹಿಕ ಪ್ರಾರ್ಥನೆಗಳಲ್ಲಿ ಪಾಲ್ಗೊಳ್ಳುತ್ತಾರೆ.

TAGGED:IftarcootNamazRamadanSahrisiddaramaiahZakatಇಫ್ತಾರ್‌ಕೂಟಝಕಾತ್ನಮಾಜ್ರಂಜಾನ್ಸಹ್ರಿಸಿದ್ದರಾಮಯ್ಯ
Share This Article
Facebook Whatsapp Whatsapp Telegram

Cinema news

Ranbir Kapoor Yash Sai Pallavi
ಟೀಸರ್‌ ರಿಲೀಸ್‌ ಬೆನ್ನಲ್ಲೇ ‘ರಾಮಾಯಣ’ ನಟರ ಸಂಭಾವನೆ ಬಹಿರಂಗ – ರಣಬೀರ್‌ಗೆ 150 ಕೋಟಿ, ಯಶ್‌ಗೆ ಎಷ್ಟು?
Bollywood Cinema Latest Top Stories
Parliament House witnessed Azad Bharat screening in honor of Netaji Subhas Chandra Bose 1
ನೇತಾಜಿ ಗೌರವಾರ್ಥ ಆಜಾದ್ ಭಾರತ್ ಚಿತ್ರ ಪ್ರದರ್ಶನಕ್ಕೆ ಸಂಸತ್ ಭವನ ಸಾಕ್ಷಿ
Cinema Latest National Top Stories
Ramayana
`ರಾಮಾಯಣ’ ಟೀಸರ್ ರಿಲೀಸ್ – ಮರ್ಯಾದಾ ಪುರುಷೋತ್ತಮನ ಗೆಟಪ್‌ನಲ್ಲಿ ಕಂಗೊಳಿಸಿದ ರಣಬೀರ್
Bollywood Cinema Latest Top Stories
Malayalam director Ranjith
ನಟಿ ಮೇಲೆ ಲೈಂಗಿಕ ದೌರ್ಜನ್ಯ ಆರೋಪ – ಮಲಯಾಳಂ ನಿರ್ದೇಶಕ ರಂಜಿತ್ ಅರೆಸ್ಟ್
Cinema Latest Main Post National South cinema

You Might Also Like

Oman Tankers
Latest

ಇರಾನ್‌ ಸಮುದ್ರ ಬಳಸದೇ ಹಾರ್ಮುಜ್ ಜಲಸಂಧಿ ಪ್ರವೇಶಿಸಿದ ಮೂರು ಒಮಾನ್ ಹಡಗುಗಳು

Public TV
By Public TV
25 minutes ago
Justice Santosh Hegde
Bengaluru City

ನಿವೃತ್ತ ನ್ಯಾಯಮೂರ್ತಿ ಸಂತೋಷ್ ಹೆಗ್ಡೆ ಅಸ್ವಸ್ಥ – ಆಸ್ಪತ್ರೆಗೆ ದಾಖಲು

Public TV
By Public TV
27 minutes ago
Iranian Crude Oil
Latest

ಭಾರತದತ್ತ ಹೊರಟಿದ್ದ ಇರಾನ್ ಕಚ್ಚಾ ತೈಲ ಹೊತ್ತ ಹಡಗು ಚೀನಾದತ್ತ ಪ್ರಯಾಣ

Public TV
By Public TV
1 hour ago
Raw Bitumen Karwar
Latest

ಕಾರವಾರ| ಮಧ್ಯಪ್ರಾಚ್ಯದಿಂದ ಬರುತ್ತಿದ್ದ ಕಚ್ಚಾ ಡಾಂಬರ್ ಸಂಪೂರ್ಣ ಬಂದ್

Public TV
By Public TV
2 hours ago
Induction Stove
Bengaluru City

ಇಂಡಕ್ಷನ್‌ ಸ್ಟವ್‌ ಖರೀದಿ ಮುನ್ನ ಈ ಅಂಶಗಳನ್ನು ತಿಳಿದುಕೊಳ್ಳಿ

Public TV
By Public TV
2 hours ago
Hubli Love Jihad
Dharwad

ಜ್ಯೂಸ್‌ನಲ್ಲಿ ಮತ್ತಿನ ಔಷಧ ಬೆರಸಿಕೊಟ್ಟು ಸಮೀರ್‌ ಅತ್ಯಾಚಾರ ಮಾಡಿದ್ದಾನೆ – ಸಂತ್ರಸ್ತೆ ಸ್ಫೋಟಕ ಹೇಳಿಕೆ

Public TV
By Public TV
2 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?