Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಮೋದಿ ವಿರುದ್ಧ ಮಾತನಾಡಲು ಏನಿಲ್ಲವೆಂದು ಸಂವಿಧಾನ ಬದಲಾವಣೆಯ ಭಯ ಹುಟ್ಟಿಸುತ್ತಾರೆ: ಬೊಮ್ಮಾಯಿ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | ಮೋದಿ ವಿರುದ್ಧ ಮಾತನಾಡಲು ಏನಿಲ್ಲವೆಂದು ಸಂವಿಧಾನ ಬದಲಾವಣೆಯ ಭಯ ಹುಟ್ಟಿಸುತ್ತಾರೆ: ಬೊಮ್ಮಾಯಿ

Districts

ಮೋದಿ ವಿರುದ್ಧ ಮಾತನಾಡಲು ಏನಿಲ್ಲವೆಂದು ಸಂವಿಧಾನ ಬದಲಾವಣೆಯ ಭಯ ಹುಟ್ಟಿಸುತ್ತಾರೆ: ಬೊಮ್ಮಾಯಿ

Public TV
Last updated: April 13, 2024 4:54 pm
Public TV
Share
2 Min Read
Basavaraj Bommai
SHARE

– ಸಂವಿಧಾನ ಬದಲಾಯಿಸಲು ಯಾರಿಂದಲೂ ಸಾಧ್ಯವಿಲ್ಲ

ಹಾವೇರಿ: ಪ್ರಧಾನಿ ನರೇಂದ್ರ ಮೋದಿ (Narendra Modi) ವಿರುದ್ಧ ಸಿಎಂ ಸಿದ್ದರಾಮಯ್ಯನವರಿಗೆ (Siddaramaiah) ಮಾತನಾಡಲು ಏನೂ ಇಲ್ಲದ ಕಾರಣ ಸಂವಿಧಾನ ಬದಲಾಯಿಸುತ್ತಾರೆ ಎಂದು ರಾಜಕೀಯವಾಗಿ ಭಯ ಹುಟ್ಟಿಸುತ್ತಿದ್ದಾರೆ ಎಂದು ಮಾಜಿ ಮುಖ್ಯಮಂತ್ರಿ ಹಾಗೂ ಹಾವೇರಿ-ಗದಗ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಬಸವರಾಜ ಬೊಮ್ಮಾಯಿ (Basavaraj Bommai) ಹೇಳಿದ್ದಾರೆ.

ಸವಣೂರಿನಲ್ಲಿ ಚುನಾವಣಾ ಪ್ರಚಾರಕ್ಕೂ ಮುನ್ನ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಸಂವಿಧಾನ ಬದಲು ಮಾಡುವ ಬಿಜೆಪಿ ಪಕ್ಷಕ್ಕೆ ಮತ ಹಾಕಬೇಡಿ ಎಂಬ ಸಿಎಂ ಸಿದ್ದರಾಮಯ್ಯ ಮಾತಿಗೆ ಪ್ರತಿಕ್ರಿಯೆ ನೀಡಿದರು. ಸಿದ್ದರಾಮಯ್ಯ ಅವರಿಗೆ ಮೋದಿಯವರ ವಿರುದ್ಧ ಹೇಳಲು ಏನೂ ಇಲ್ಲ. ಕಳೆದ ಬಾರಿ ಇದನ್ನೇ ಹೇಳಿದ್ದರು. ಸಂವಿಧಾನ ಬದಲು ಮಾಡಲು ಯಾರ ಕೈಯಲ್ಲೂ ಆಗುವುದಿಲ್ಲ. ಎಲ್ಲದಕ್ಕೂ ಕಾನೂನು ಅಂತ ಇದೆ. ಸಂವಿಧಾನ ಬದಲು ಮಾಡಲು ಸಾಧ್ಯವಿಲ್ಲವೆಂದು ಸುಪ್ರೀಂ ಕೋರ್ಟ್ ಹೇಳಿದೆ. ಸಿದ್ದರಾಮಯ್ಯ ಸುಮ್ಮನೆ ರಾಜಕೀಯ ಭಯ ಹುಟ್ಟಿಸಲು ಈ ರೀತಿ ಹೇಳುತ್ತಿದ್ದಾರೆ. ಡಾ.ಬಿ.ಆರ್ ಅಂಬೇಡ್ಕರ್ ಸಂವಿಧಾನ ರಚನೆ ಮಾಡುವ ಶಾಶ್ವತ ಕೆಲಸ ಮಾಡಿದ್ದಾರೆ ಎಂದರು. ಇದನ್ನೂ ಓದಿ: ನಾಲ್ಕು ಹೋಟೆಲ್‌.. ನಾನಾ ವೇಷ; ಪಶ್ಚಿಮ ಬಂಗಾಳದಲ್ಲಿ ಕೆಫೆ ಬಾಂಬರ್‌ಗಳ ಕಣ್ಣಾಮುಚ್ಚಾಲೆ ಆಟ!

ಭಾರತ ಮಾತಾ ಕೀ ಜೈ ಎನ್ನುವುದು ಬಿಜೆಪಿಯ ಅಪ್ಪನ ಮನೆ ಆಸ್ತಿನಾ ಎಂಬ ಕಾಂಗ್ರೆಸ್ ಶಾಸಕ ಲಕ್ಷ್ಮಣ ಸವದಿ ಮಾತಿಗೆ ತಿರಗೇಟು ನೀಡಿದ ಅವರು, ಅವರ ಹೇಳಿಕೆ ಸರಿಯಾಗಿದೆ, ತಪ್ಪೇನೂ ಇಲ್ಲ. ಭಾರತ ಮಾತಾ ಕಿ ಜೈ ಎಂದು ಕೂಗಲು ಭಾರತದ ಮಕ್ಕಳಿಗೆ ಅಧಿಕಾರ ಇದೆ. ಕಾಂಗ್ರೆಸ್‌ನವರು ಕೂಗಲಿ ನಾವು ಸ್ವಾಗತ ಮಾಡುತ್ತೇವೆ. ಭಾರತ ಮಾತೆ ಇನ್ನೂ ಖುಷಿ ಆಗುತ್ತಾಳೆ ಎಂದರು. ಭಾರತ ಮಾತಾ ಕಿ ಜೈ ಎಂದು ಹೇಳಲು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆಯವರ ಅಪ್ಪಣೆ ಕೇಳಿರುವುದು ಅಲ್ಲಿರುವವರ ಮನಸ್ಥಿತಿ ಏನು ಎಂದು ಬಿಂಬಿಸುತ್ತದೆ ಎಂದು ಹೇಳಿದರು. ಇದನ್ನೂ ಓದಿ: ಕರೆ ಬಂದ ಮೂರೇ ನಿಮಿಷಕ್ಕೆ ಹಣವಿದ್ದ ಬೆಂಜ್ ಕಾರು ಬಳಿಗೆ ಬಂದ್ವಿ: ಮುನೀಶ್ ಮೌದ್ಗಿಲ್

ಬಿಜೆಪಿ 400 ಸೀಟು ಗೆಲ್ಲುವುದಿಲ್ಲ. ಅಧಿಕಾರಕ್ಕೆ ಬರುವುದಿಲ್ಲ ಎಂಬ ಸಿಎಂ ಹೇಳಿಕೆ ಕುರಿತು ಕೇಳಿದ ಪ್ರಶ್ನೆಗೆ ಪ್ರತಿಕ್ರಿಯಿಸಿದ ಅವರು, ಕಾಂಗ್ರೆಸ್‌ನವರ ಎಲೆಯೊಳಗೆ ಕಲ್ಲು ಬಿದ್ದಿದೆ. ಅವರು ಸ್ಪರ್ಧೆ ಮಾಡಿರುವುದೇ 230 ಸ್ಥಾನಗಳಿಗೆ. ಇನ್ನೊಬ್ಬರ ಬಗ್ಗೆ ಮಾತನಾಡುತ್ತಾರೆ. ನಾವು 100% 370 ಸೀಟು ದಾಟುತ್ತೇವೆ. ಕೇಂದ್ರದಲ್ಲಿ ಮತ್ತೆ ನಮ್ಮ ಬಿಜೆಪಿ ಸರ್ಕಾರ ಬರುತ್ತದೆ ಎಂದು ವಿಶ್ವಾಸ ವ್ಯಕ್ತಪಡಿಸಿದರು. ಇದನ್ನೂ ಓದಿ: ಕೇಜ್ರಿವಾಲ್ ನೇರ ಭೇಟಿಗೆ ಪತ್ನಿ ಸುನಿತಾಗೆ ಅನುಮತಿ ನಿರಾಕರಿಸಿದೆ: ತಿಹಾರ್ ಅಧಿಕಾರಿಗಳ ವಿರುದ್ಧ ಆಪ್ ಆರೋಪ

ಇದೇ ವೇಳೆ ಆದಿಚುಂಚನಗಿರಿ ಮಠದ ಪೀಠಾಧ್ಯಕ್ಷರಾದ ನಿರ್ಮಲಾನಂದ ನಾಥ ಸ್ವಾಮೀಜಿ ಅವರ ಫೋನ್ ಕದ್ದಾಲಿಕೆಯ ಆರೋಪದ ಕುರಿತು ಮಾತನಾಡಿದ ಅವರು, ಫೋನ್ ಕದ್ದಾಲಿಕೆಯ ಬಗ್ಗೆ ಆರೋಪ ಪ್ರತ್ಯಾರೋಪ ಇವೆ. ಯಾವುದಕ್ಕೂ ಸ್ಪಷ್ಟತೆ ಇಲ್ಲ. ಸ್ಪಷ್ಟತೆ ಇದ್ದಾಗ ಮಾತ್ರ ಅದರ ಬಗ್ಗೆ ಮಾತನಾಡಬೇಕು ಎಂದು ತಿಳಿಸಿದರು. ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಥರ ಸಿರಹಟ್ಟಿಯ ಫಕೀರೇಶ್ವರ ಮಠದ ಶ್ರೀ ದಿಂಗಾಲೇಶ್ವರ ಸ್ವಾಮೀಜಿ ಆಗುತ್ತಾರೆ ಎಂಬ ಮಾತಿಗೆ ಪ್ರತಿಕ್ರಿಯಿಸಿ, ಜನರು ತಿರ್ಮಾನ ಮಾಡಿದರೆ ಯಾಕೆ ಆಗಬಾರದು ಆಗಲಿ ಬಿಡಿ ಎಂದು ಹೇಳಿದರು. ಇದನ್ನೂ ಓದಿ: ಇಡಿ ಬಂಧನ ಪ್ರಶ್ನಿಸಿ ಅರವಿಂದ್ ಕೇಜ್ರಿವಾಲ್ ಅರ್ಜಿ – ಸೋಮವಾರ ವಿಚಾರಣೆ ನಡೆಸಲಿರುವ ಸುಪ್ರೀಂ ಕೋರ್ಟ್

TAGGED:Basavaraj BommaibjpcongresshaveriLok Sabha electionnarendra modisiddaramaiahನರೇಂದ್ರ ಮೋದಿಬಸವರಾಜ ಬೊಮ್ಮಾಯಿಲೋಕಸಭಾ ಚುನಾವಣೆಸಿದ್ದರಾಮಯ್ಯಹಾವೇರಿ
Share This Article
Facebook Whatsapp Whatsapp Telegram

Cinema news

ChetanKumar Ahimsa
ರಾಜ್‌ಕುಮಾರ್‌ ಸಮಾಧಿ ಬಗ್ಗೆ ವಿವಾದಾತ್ಮಕ ಪೋಸ್ಟ್‌ – ಅಭಿಮಾನಿಗಳು ಮುತ್ತಿಗೆ ಹಾಕುತ್ತಿದ್ದಂತೆ ಕ್ಷಮೆಯಾಚಿಸಿದ ಚೇತನ್‌
Cinema Karnataka Latest Top Stories
chetan 13 5
ರಾಜ್‌ಕುಮಾರ್‌ ಸಮಾಧಿಗೆ 2.5 ಎಕರೆ ಜಾಗ ನೀಡಿದ್ದು ಸರಿಯೇ? – ನಟ‌ ಚೇತನ್ ವಿರುದ್ಧ ಡಾಕ್ಟರ್ ರಾಜ್‌ ಅಭಿಮಾನಿಗಳಿಂದ ದೂರು
Bengaluru City Cinema Latest Sandalwood Top Stories
Akshay Kumar 1
ನಟ ಅಕ್ಷಯ್ ಕುಮಾರ್ ಅಪ್ರಾಪ್ತ ಪುತ್ರಿಯ ಬೆತ್ತಲೆ ಫೋಟೋಗೆ ಬೇಡಿಕೆಯಿಟ್ಟಿದ್ದ ವ್ಯಕ್ತಿ ಅರೆಸ್ಟ್
Bollywood Cinema Crime Latest Top Stories
ranveer singh 2
ದೈವಕ್ಕೆ ಅಪಮಾನ – ಇನ್ಮುಂದೆ ಧಾರ್ಮಿಕ ಭಾವನೆಗಳಿಗೆ ಧಕ್ಕೆ ತರಲ್ಲ: ಕ್ಷಮೆಯಾಚಿಸಿದ ರಣವೀರ್ ಸಿಂಗ್
Cinema Court Latest South cinema Top Stories

You Might Also Like

mangaluru cooker blast case auto driver
Dakshina Kannada

ಉಗ್ರ ಶಾರಿಕ್‌ಗೆ ಜೀವಾವಧಿ ಶಿಕ್ಷೆ ನೀಡಬೇಕಿತ್ತು: ಕುಕ್ಕರ್‌ ಬ್ಲಾಸ್ಟ್‌ನಿಂದ ಗಾಯಗೊಂಡಿದ್ದ ಆಟೋ ಚಾಲಕ ಮಾತು

Public TV
By Public TV
9 minutes ago
E Khata
Bengaluru City

ಇನ್ಮುಂದೆ ಆನ್‌ಲೈನ್ ಮೂಲಕವೇ ಇ-ಖಾತಾ ಡೌನ್‌ಲೋಡ್‌ಗೆ ಅವಕಾಶ

Public TV
By Public TV
14 minutes ago
Mangaluru Blast Case The Shariq cooker bomb capable of blowing up the bus FSL Investigation report 1
Bengaluru City

ಮಂಗಳೂರು ಕುಕ್ಕರ್‌ ಬ್ಲಾಸ್ಟ್‌ ಕೇಸ್‌ – ಉಗ್ರ ಶಾರಿಕ್‌ಗೆ 10 ವರ್ಷ ಜೈಲು ಶಿಕ್ಷೆ

Public TV
By Public TV
25 minutes ago
SCADA center
Bengaluru City

ಏಷ್ಯಾ ಖಂಡದ ಅತಿದೊಡ್ಡ ‘ಸ್ಕಾಡಾ ಕೇಂದ್ರ’ ಉದ್ಘಾಟನೆಗೆ ಸಜ್ಜು

Public TV
By Public TV
51 minutes ago
4 Of Mumbai Family Die Of Suspected Food Poisoning After Eating Biryani Watermelon
Crime

ಫುಡ್‌ ಪಾಯಿಸನ್‌ನಿಂದ ಒಂದೇ ಕುಟುಂಬದ ನಾಲ್ವರು ಸಾವು

Public TV
By Public TV
52 minutes ago
delay in compensation for farmer dharwad taluk office computer furniture seized
Court

ರೈತನಿಗೆ ಪರಿಹಾರ ವಿಳಂಬ – ಧಾರವಾಡ ಉಪವಿಭಾಗಾಧಿಕಾರಿ ಕಚೇರಿ ಕಂಪ್ಯೂಟರ್‌, ಪೀಠೋಪಕರಣಗಳು ಜಪ್ತಿ

Public TV
By Public TV
1 hour ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?