ಎಲ್ಲರೂ ಪಶ್ಚಾತ್ತಾಪ ಪಡುತ್ತಾರೆ- ಚುನಾವಣಾ ಬಾಂಡ್ ಸಮರ್ಥಿಸಿಕೊಂಡ ಪ್ರಧಾನಿ ಮೋದಿ

Public TV
1 Min Read
PM NARENDRA MODI

ನವದೆಹಲಿ: ಚುನಾವಣೆಗಳಲ್ಲಿ ಕಪ್ಪು ಹಣ ನಿಗ್ರಹವೇ ಚುನಾವಣಾ ಬಾಂಡ್ ಉದ್ದೇಶವಾಗಿತ್ತು ಎಂದು ಪ್ರಧಾನಿ ನರೇಂದ್ರ ಮೋದಿ (Narendra Modi) ಹೇಳಿದ್ದಾರೆ.

ಖಾಸಗಿ ಸುದ್ದಿ ಸಂಸ್ಥೆ ಜೊತೆಗಿನ ಸಂದರ್ಶನದಲ್ಲಿ ಮಾತನಾಡುತ್ತಾ ಚುನಾವಣಾ ಬಾಂಡ್ (Electoral Bond) ಅನ್ನು ಸಮರ್ಥಿಸಿಕೊಂಡರು. ವಿಪಕ್ಷಗಳು ಚುನಾವಣೆಯಲ್ಲಿ ಸೋಲುತ್ತವೆ. ಅದನ್ನು ಮರೆಮಾಚಲು ಇವಿಎಂ (EVM) ಮೇಲೆ ಅನುಮಾನ ವ್ಯಕ್ತಪಡಿಸುತ್ತವೆ ಅಂತ ಕಿಡಿಕಾರಿದರು.

ELECTION COMMISSION OF INDIA

ಚುನಾವಣಾ ಬಾಂಡ್ ಯೋಜನೆಗಳ ಬಗ್ಗೆ ಪ್ರತಿಪಕ್ಷಗಳು ಸುಳ್ಳನ್ನು ಹಬ್ಬಿಸುತ್ತಿವೆ ಎಂದು ಆರೋಪಿಸಿದ ಅವರು, ಈ ವಿಷಯದಲ್ಲಿ ಪ್ರಾಮಾಣಿಕ ಅಭಿಪ್ರಾಯ ವ್ಯಕ್ತವಾದಾಗ ಎಲ್ಲರೂ ಪಶ್ಚಾತ್ತಾಪ ಪಡುತ್ತಾರೆ ಎಂದು ಹೇಳಿದರು. ಇದನ್ನೂ ಓದಿ: ಚುನಾವಣಾ ಬಾಂಡ್‌ಗಳ ಯೋಜನೆ ಅಸಂವಿಧಾನಿಕ: ಸುಪ್ರೀಂ ಕೋರ್ಟ್‌

ಚುನಾವಣೆಯಲ್ಲಿ ಹಣ ಖರ್ಚಾಗುತ್ತದೆ. ಕಪ್ಪು ಹಣ (Black Money) ಚುನಾವಣೆಯಲ್ಲಿ ದೊಡ್ಡ ಶಕ್ತಿಯಾಗಿದೆ. ಈ ಕಪ್ಪು ಹಣದಿಂದ ಚುನಾವಣೆ ಮುಕ್ತ ಮಾಡಬಹುದು ಎಂದು ಯೋಚಿಸಿದ್ದೆ. ಆಗ ಚುನಾವಣಾ ಬಾಂಡ್ ಚಿಂತನೆ ಬಂತು. ನಗದು ಹಣದ ವ್ಯವಹಾರಕ್ಕೆ ಅವಕಾಶ ನೀಡಬಾರದು ಎಂದು ಬಾಂಡ್ ವ್ಯವಸ್ಥೆ ಜಾರಿ ಮಾಡಲಾಯಿತು. ಮಾಹಿತಿ ಬಹಿರಂಗಗೊಳಿಸದಿರಲು ಹಲವು ಕಾರಣಗಳಿದೆ. ಯಾರು ಯಾರಿಗೆ ಹಣ ನೀಡಿದರು ಎಂದು ಗೊತ್ತಾದ್ರೆ ರಾಜಕೀಯ ಪಕ್ಷಗಳು ಸಮಸ್ಯೆ ಮಾಡಬಹುದು. ಅಥವಾ ಜನರು ಹಣ ಕೊಡಲು ಮುಂದೆ ಬಾರದಿರಬಹುದು. ಬಾಂಡ್ ನಿಂದ ಹಣ ಎಲ್ಲಿಂದ ಬಂತು ಲೆಕ್ಕ ಸಿಗುತ್ತದೆ ಎಂದರು.

NARENDRA MODI 3

3, 000 ಕಂಪನಿ ಬಾಂಡ್ ನೀಡಿದೆ. ಅದರಲ್ಲಿ 26 ಕಂಪನಿಗಳ ವಿರುದ್ಧ ಇಡಿ ತನಿಖೆ ನಡೆಯುತ್ತಿದೆ. ಈ 26 ಕಂಪನಿಗಳಲ್ಲಿ 16 ಕಂಪನಿಗಳು ದಾಳಿ ಸಮಯದಲ್ಲಿ ಬಾಂಡ್ ಖರೀದಿಸಿವೆ. ಈ ಬಾಂಡ್ ನಲ್ಲಿ 37% ಹಣ ಬಿಜೆಪಿಗೆ ಬಂದಿದೆ, 63% ರಷ್ಟು ಹಣ ವಿರೋಧ ಪಕ್ಷಗಳಿಗೆ ಹೋಗಿದೆ. ಆದರೆ ಆರೋಪ ನಮ್ಮ ಮೇಲೆ ಮಾಡಲಾಗುತ್ತಿದೆ ಎಂದು ಮೋದಿ ಹೇಳಿದರು. ಇದನ್ನೂ ಓದಿ: ಚುನಾವಣಾ ಬಾಂಡ್‌ಗಳ ಹೊಸ ದತ್ತಾಂಶ ರಿಲೀಸ್‌ – ಅತಿಹೆಚ್ಚು ದೇಣಿಗೆ ಪಡೆದ ಪಕ್ಷ ಯಾವುದು?

Share This Article