Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಯಾವ ರೀತಿ ಜಾಹೀರಾತು ಪ್ರಕಟಿಸಿದ್ದೀರಿ ಅದೇ ಗಾತ್ರದಲ್ಲಿ ಪತ್ರಿಕೆಯಲ್ಲಿ ಕ್ಷಮೆ ಕೇಳಿ: ಪತಂಜಲಿಗೆ ಸುಪ್ರೀಂ ಸೂಚನೆ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Court | ಯಾವ ರೀತಿ ಜಾಹೀರಾತು ಪ್ರಕಟಿಸಿದ್ದೀರಿ ಅದೇ ಗಾತ್ರದಲ್ಲಿ ಪತ್ರಿಕೆಯಲ್ಲಿ ಕ್ಷಮೆ ಕೇಳಿ: ಪತಂಜಲಿಗೆ ಸುಪ್ರೀಂ ಸೂಚನೆ

Court

ಯಾವ ರೀತಿ ಜಾಹೀರಾತು ಪ್ರಕಟಿಸಿದ್ದೀರಿ ಅದೇ ಗಾತ್ರದಲ್ಲಿ ಪತ್ರಿಕೆಯಲ್ಲಿ ಕ್ಷಮೆ ಕೇಳಿ: ಪತಂಜಲಿಗೆ ಸುಪ್ರೀಂ ಸೂಚನೆ

Public TV
Last updated: April 23, 2024 1:46 pm
Public TV
Share
2 Min Read
PATANJALI
SHARE

– ಪತಂಜಲಿ ವಿರುದ್ಧ ಕ್ರಮ ಕೈಗೊಳ್ಳದ್ದಕ್ಕೆ ಕೇಂದ್ರದ ವಿರುದ್ಧವೂ ತರಾಟೆ

ನವದೆಹಲಿ: ಯಾವ ರೀತಿ ಜಾಹೀರಾತು (Advertisements) ಪ್ರಕಟಿಸಿದ್ದೀರಿ ಅದೇ ಗಾತ್ರದಲ್ಲಿ ಪತ್ರಿಕೆಯಲ್ಲಿ ಕ್ಷಮೆಯನ್ನು ಕೇಳಬೇಕೆಂದು ಪತಂಜಲಿ (Patanjali) ಸಂಸ್ಥೆಗೆ ಸುಪ್ರೀಂ ಕೋರ್ಟ್‌ (Supreme Court) ಆದೇಶಿಸಿದೆ. ಅದೇ ರೀತಿಯಾಗಿ ಪತಂಜಲಿ ವಿರುದ್ಧ ಕ್ರಮ ಕೈಗೊಳ್ಳದ್ದಕ್ಕೆ ಕೇಂದ್ರ ಸರ್ಕಾರವನ್ನು (Union Government) ಸುಪ್ರೀಂ ತರಾಟೆಗೆ ತೆಗೆದುಕೊಂಡಿದೆ.

ಯೋಗ ಗುರು ಬಾಬಾ ರಾಮದೇವ್ (Baba Ramdev) ಮತ್ತು ಆಚಾರ್ಯ ಬಾಲಕೃಷ್ಣ (Acharya Balkrishna) ವಿರುದ್ಧದ ನ್ಯಾಯಾಂಗ ನಿಂದನೆ ಅರ್ಜಿ ವಿಚಾರಣೆ ಇಂದು ನ್ಯಾ.ಹಿಮಾ ಕೊಹ್ಲಿ ಮತ್ತು ನ್ಯಾ. ಅಮಾನುಲ್ಲಾ ಅವರಿದ್ದ ದ್ವಿಸದಸ್ಯ ಪೀಠದಲ್ಲಿ ನಡೆಯಿತು.

ಬಾಬಾ ರಾಮ್‌ದೇವ್ ಪರ ವಾದ ಮಂಡಿಸಿದ ವಕೀಲ ಮುಕುಲ್ ರೋಹಟಗಿ, ಪತ್ರಿಕೆಗಳಲ್ಲಿ ಕ್ಷಮಾಪಣೆ ಪ್ರಕಟವಾಗಿದೆ ಎಂದು ಕೋರ್ಟ್‌ ಗಮನಕ್ಕೆ ತಂದರು. ಈ ವೇಳೆ ನಿನ್ನೆ ಯಾಕೆ ಕ್ಷಮಾಪಣೆ ಪ್ರಕಟವಾಗಿದೆ ಎಂದು ಪ್ರಶ್ನಿಸಿದ ಪೀಠ ಜಾಹೀರಾತು ಯಾವ ಗಾತ್ರದಲ್ಲಿ ಪ್ರಕಟವಾಗಿದೆಯೇ ಅದೇ ರೀತಿಯಾಗಿ ಕ್ಷಮೆ ಕೇಳಬೇಕೆಂದು ಆದೇಶಿಸಿತು. ಇದನ್ನೂ ಓದಿ: ಕಾಂಗ್ರೆಸ್ ಆಡಳಿತದಲ್ಲಿ ಹನುಮಾನ್ ಚಾಲೀಸಾ ಕೇಳೋದು ಅಪರಾಧ: ಬೆಂಗ್ಳೂರಿನ ಹಲ್ಲೆ ಪ್ರಸ್ತಾಪಿಸಿ ಮೋದಿ ಕಿಡಿ

Patanjali

ಇಂಡಿಯನ್ ಮೆಡಿಕಲ್ ಅಸೋಷಿಯನ್ (IMA) ಸಲ್ಲಿಸಿದ್ದ ಅರ್ಜಿ ವಿಚಾರಣೆ ಮುಂದುವರಿಸಿದ ಪೀಠ ತಪ್ಪುದಾರಿಗೆಳೆಯುವ ಜಾಹೀರಾತುಗಳನ್ನು ನೀಡುವ ಇತರ FMCG ಕಂಪನಿಗಳ ವಿರುದ್ಧ ಕ್ರಮ ಕೈಗೊಂಡಿರುವ ಬಗ್ಗೆ ಕೇಂದ್ರವನ್ನು ಈ ವೇಳೆ ಪ್ರಶ್ನಿಸಿತು.

ಪತಂಜಲಿ ವಿರುದ್ಧ ಕ್ರಮ ಕೈಗೊಳ್ಳುವ ಬದಲು 1945 ರ ಡ್ರಗ್ಸ್ ಮತ್ತು ಕಾಸ್ಮೆಟಿಕ್ಸ್ ನಿಯಮಗಳ 170ನೇ ನಿಯಮದ ಅಡಿಯಲ್ಲಿ ಯಾವುದೇ ಕ್ರಮ ತೆಗೆದುಕೊಳ್ಳದಂತೆ ಆಯುಷ್ ಸಚಿವಾಲಯವು 2023 ರಲ್ಲಿ ಎಲ್ಲಾ ರಾಜ್ಯ ಸರ್ಕಾರಗಳಿಗೆ ಪತ್ರವನ್ನು ಕಳುಹಿಸಿದೆ ಎಂದು ಆಕ್ರೋಶ ವ್ಯಕ್ತಪಡಿಸಿತು.

ಅಧಿಕಾರಿಗಳು ಆದಾಯವನ್ನು ನೋಡುವಲ್ಲಿ ನಿರತರಾಗಿದ್ದಂತೆ ತೋರುತ್ತಿದೆ ಎಂದು ನ್ಯಾ. ಕೊಹ್ಲಿ ಅಸಮಾಧಾನ ವ್ಯಕ್ತಪಡಿಸಿದರು. ಒಂದು ಸುದ್ದಿಟಿವಿಯಲ್ಲಿ ಆಂಕರ್ ಪತಂಜಲಿ ಪ್ರಕರಣದಲ್ಲಿ ನ್ಯಾಯಾಲಯದಲ್ಲಿ ಏನಾಯಿತು ಎಂಬುದರ ಕುರಿತು ಓದುತ್ತಿದ್ದಾರೆ. ಇದೆ ಅವಧಿಯಲ್ಲಿ ಜಾಹೀರಾತು ಪತಂಜಲಿ ಕೂಡಾ ಚಾಲನೆಯಲ್ಲಿದೆ ಎಂತಹ ಪರಿಸ್ಥಿತಿ ಎಂದು ನ್ಯಾ. ಅಮಾನುಲ್ಲಾ ಟೀಕಿಸಿದರು. ಇದನ್ನೂ ಓದಿ: ನೇಹಾ ಹಿರೇಮಠ ತಂದೆಯ ಬಳಿ ಕ್ಷಮೆಯಾಚಿಸಿದ ಸಿಎಂ!

 

ಪತಂಜಲಿ ವಿರುದ್ಧ ಯಾವುದೇ ಕ್ರಮ ತೆಗೆದುಕೊಳ್ಳದಂತೆ ಸರ್ಕಾರ ಹೇಗೆ ಪತ್ರ ಬರೆಯಿತು ಎಂಬುದನ್ನು ವಿವರಿಸಬೇಕು ಎಂದು ಹೇಳಿದ ಪೀಠ, ಡ್ರಗ್ಸ್ ಮತ್ತು ಕಾಸ್ಮೆಟಿಕ್ಸ್ ಆಕ್ಟ್ ಮತ್ತು ಡ್ರಗ್ಸ್ ಮತ್ತು ಮ್ಯಾಜಿಕ್ ರೆಮಿಡೀಸ್ (ಆಕ್ಷೇಪಾರ್ಹ ಜಾಹೀರಾತುಗಳು) ಕಾಯಿದೆಯಂತಹ ಕಾನೂನುಗಳ ಅನುಷ್ಠಾನವನ್ನು ಸೂಕ್ಷ್ಮವಾಗಿ ಗಮನಿಸುವುದಾಗಿ ಕೋರ್ಟ್‌  ತಿಳಿಸಿತು.

ತಪ್ಪುದಾರಿಗೆಳೆಯುವ ಜಾಹೀರಾತುಗಳಿಂದ ಪ್ರಭಾವಿತರಾಗಿ ಔಷಧಗಳನ್ನು ಸೇವಿಸುವ ಶಿಶುಗಳು ಮತ್ತು ಮಕ್ಕಳು ಮತ್ತು ವೃದ್ಧರ ಆರೋಗ್ಯದ ಮೇಲೆ ಇದು ಹೇಗೆ ಪರಿಣಾಮ ಬೀರುತ್ತದೆ. ನಾವು ನಿರ್ದಿಷ್ಟವಾಗಿ ಒಬ್ಬರ ಮೇಲೆ ಅರೋಪಿಸುತ್ತಿಲ್ಲ, ಗ್ರಾಹಕರು/ಸಾರ್ವಜನಿಕರನ್ನು ಹೇಗೆ ದಾರಿ ತಪ್ಪಿಸಲಾಗುತ್ತಿದೆ ಎಂಬುದರ ಕುರಿತು ಹೆಚ್ಚಿನ ಹಿತಾಸಕ್ತಿಯಾಗಿದೆ ಎಂದು ಎಂದು ನ್ಯಾಯಾಲಯ ಹೇಳಿತು. ಅಲ್ಲದೇ ಕೇಂದ್ರ ಗ್ರಾಹಕ ವ್ಯವಹಾರಗಳ ಇಲಾಖೆ, ಮಾಹಿತಿ ಮತ್ತು ಪ್ರಸಾರ ಸಚಿವಾಲಯ ಹಾಗೂ ಮಾಹಿತಿ ಮತ್ತು ಪ್ರಸಾರ ಸಚಿವಾಲಯವನ್ನು ಪ್ರಕರಣದಲ್ಲಿ ಕಕ್ಷಿದಾರರನ್ನಾಗಿ ಸೇರಿಸಲು ನ್ಯಾಯಾಲಯ ನಿರ್ಧರಿಸಿದೆ.

ಪ್ರಕರಣದ ಅರ್ಜಿ ವಿಚಾರಣೆಯನ್ನು ಏ.30ಕ್ಕೆ ಮುಂದೂಡಿದ ಪೀಠ ಅಂದು ನ್ಯಾಯಾಲಯಕ್ಕೆ ಪತಂಜಲಿ ಸಂಸ್ಥಾಪಕರಾದ ರಾಮ್‌ದೇವ್ ಮತ್ತು ಬಾಲಕೃಷ್ಣ ಹಾಜರಾಗಬೇಕೆಂದು ಸೂಚಿಸಿದೆ.

TAGGED:Acharya BalkrishnaadvertisementsBaba RamdevindiaPatanjaliಆಚಾರ್ಯ ಬಾಲಕೃಷ್ಣಪತಂಜಲಿಬಾಬಾ ರಾಮದೇವ್ಭಾರತ
Share This Article
Facebook Whatsapp Whatsapp Telegram

Cinema news

Director S Shankar
1,000 ಕೋಟಿ ಬಜೆಟ್‌ನಲ್ಲಿ ನಿರ್ಮಾಣವಾಗಲಿದೆ ನಿರ್ದೇಶಕ ಶಂಕರ್ ಸಿನಿಮಾ..!
Cinema Latest Top Stories
Actor Ravichandrans son plays a negative role in the film Kaunteya
ಕೌಂತೇಯ ಚಿತ್ರದಲ್ಲಿ ರವಿಚಂದ್ರನ್ ಪುತ್ರನ ನೆಗೆಟಿವ್ ಪಾತ್ರ
Cinema Latest Sandalwood South cinema
Veshagalu Movie Team
ಶ್ರೀನಗರ ಕಿಟ್ಟಿ ನಟನೆಯ ವೇಷಗಳು ಚಿತ್ರಕ್ಕೆ ಮುಹೂರ್ತ
Cinema Latest Top Stories TV Shows
Yash Radhika Pandit Ayra
ಯಶ್ ರಾಧಿಕಾ ಜೀವನದ `ಮೆಲೋಡಿ’ಗೆ ಹುಟ್ಟುಹಬ್ಬದ ಸಂಭ್ರಮ!
Cinema Latest Sandalwood Top Stories

You Might Also Like

marriage divorce 3
Bengaluru City

ಡಿವೋರ್ಸ್ ತಡೆಗೆ ರಾಜ್ಯ ಸರ್ಕಾರದಿಂದ ‘ಕೂಡಿ ಬಾಳೋಣ’ ಕೌನ್ಸಿಲಿಂಗ್ ಸೆಂಟರ್

Public TV
By Public TV
4 minutes ago
Bengaluru Kalaburagi Vande Bharat Express train
Bengaluru City

ಕಲಬುರಗಿ-ಬೆಂಗಳೂರು ವಂದೇ ಭಾರತ್ ಪ್ರಯಾಣಿಕರಿಗೆ ಹೊಸ ವರ್ಷದ ಉಡುಗೊರೆ

Public TV
By Public TV
8 minutes ago
Lok Sabha Winter Session
Latest

SIR ಗದ್ದಲಕ್ಕೆ ಎರಡನೇ ದಿನವೂ ಸಂಸತ್ ಕಲಾಪ ಬಲಿ

Public TV
By Public TV
26 minutes ago
PM Office Seva Teerth
Latest

ಪ್ರಧಾನಿ ಕಚೇರಿ ಇನ್ಮುಂದೆ ಸೇವಾ ತೀರ್ಥ; ರಾಜಭವನಗಳಿಗೆ ಲೋಕಭವನ ಎಂದು ಮರುನಾಮಕರಣ ಮಾಡಿದ ಕೇಂದ್ರ

Public TV
By Public TV
2 hours ago
Narendra Modi Putin
Latest

ಪುಟಿನ್ – ಮೋದಿ ನಡುವೆ ದ್ವಿಪಕ್ಷೀಯ ಮಾತುಕತೆ: ರಕ್ಷಣಾ ಒಪ್ಪಂದಗಳ ಬಗ್ಗೆ ಚರ್ಚೆ

Public TV
By Public TV
2 hours ago
Gilli nata Super Hit Kannada Movie Teaser released 1
Cinema

ಗಿಲ್ಲಿ ನಟ ನಾಯಕನಾಗಿ ನಟಿಸಿರೋ `ಸೂಪರ್ ಹಿಟ್’ ಟೀಸರ್ ಬಿಡುಗಡೆ!

Public TV
By Public TV
2 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?