ನವದೆಹಲಿ: ಏರ್ಸೆಲ್ ಮ್ಯಾಕ್ಸಿಸ್ ಹಗರಣಕ್ಕೆ ಸಂಬಂಧಿಸಿದಂತೆ ಕೇಂದ್ರದ ಮಾಜಿ ದೂರಸಂಪರ್ಕ ಸಚಿವ ದಯಾನಿಧಿ ಮಾರನ್ ಹಾಗೂ ಇವರ ಸೋದರ ಕಲಾನಿಧಿ ಮಾರನ್ ಎಲ್ಲ ಆರೋಪದಿಂದ ಮುಕ್ತರಾಗಿದ್ದಾರೆ.
ಸಾಕ್ಷ್ಯಧಾರದ ಕೊರತೆಯಿಂದಾಗಿ ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಎಲ್ಲ ಆರೋಪಿಗಳನ್ನು ವಿಶೇಷ ನ್ಯಾಯಾಲಯದ ನ್ಯಾಯಾಧೀಶರು ಖುಲಾಸೆಗೊಳಿಸಿ ಆದೇಶ ಪ್ರಕಟಿಸಿದ್ದಾರೆ.
- Advertisement -
ಇದು ಅಪಾಯಕಾರಿ ವಿದ್ಯಮಾನ, ಈ ರೀತಿಯ ಆರೋಪ ಮಾಡಿದರೆ ಸರ್ಕಾರದಲ್ಲಿರುವ ಎಲ್ಲರನ್ನೂ ವಿಚಾರಣೆಗೆ ಒಳಪಡಿಸಬೇಕಾದಿತು ಎಂದು ಜಡ್ಜ್ ಒ.ಪಿ. ಶೈನಿ ಆದೇಶದಲ್ಲಿ ಹೇಳಿದ್ದಾರೆ.
- Advertisement -
ಏನಿದು ಪ್ರಕರಣ?
ಏರ್ಸೆಲ್ ಮ್ಯಾಕ್ಸಿಸ್ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾರನ್ ಹಾಗೂ ಇವರ ಸೋದರ ಕಲಾನಿಧಿ ಮಾರನ್ ವಿರುದ್ಧದ ಜಾರಿ ನಿರ್ದೇಶನಾಲಯ ಮತ್ತು ಸಿಬಿಐ ತನಿಖೆ ನಡೆಸಿತ್ತು.
- Advertisement -
2006ರಲ್ಲಿ ದೂರಸಂಪರ್ಕ ಸಚಿವರಾಗಿದ್ದ ದಯಾನಿಧಿ ಮಾರನ್ ಅವರು ತಮ್ಮ ಅಧಿಕಾರ ದುರ್ಬಳಕೆ ಮಾಡಿಕೊಂಡು ಮಲೇಷ್ಯಾದ ಮ್ಯಾಕ್ಸಿಸ್ ಕಂಪೆನಿಗೆ ಅನುಕೂಲ ಮಾಡಿಕೊಡಲು ಡೀಲ್ ನಡೆಸಿದ್ದರು. ಈ ಡೀಲ್ ನಡೆಸಿದ್ದಕ್ಕೆ ಮಾರನ್ ಅವರಿಗೆ ಮ್ಯಾಕ್ಸಿಸ್ ಕಡೆಯಿಂದ 700 ಕೋಟಿ ರೂ. ಹಣ ಸಂದಾಯವಾಗಿದೆ. ಈ ಪೈಕಿ ಸ್ವಲ್ಪ ಹಣವನ್ನು ತಮ್ಮ ಸೋದರ ಕಲಾನಿಧಿ ಒಡೆತನದಲ್ಲಿರುವ ಸನ್ ಸಮೂಹ ಕಂಪನಿಯಲ್ಲಿ ಹೂಡಿಕೆ ಮಾಡಿದ್ದರು ಎಂದು ಎನ್ನುವ ಆರೋಪ ಮಾರನ್ ಸಹೋದರರ ಮೇಲೆ ಕೇಳಿ ಬಂದಿತ್ತು. ಈ ಪ್ರಕರಣದಲ್ಲಿ ದಯಾನಿಧಿ ಮಾರನ್ ಹಾಗೂ ಕಲಾನಿಧಿ ಮಾರನ್ ಸೇರಿ 8 ಮಂದಿ ಆರೋಪಿಗಳೆಂದು ಹೆಸರಿಸಲಾಗಿತ್ತು.
- Advertisement -
ಆರೋಪ ಕೇಳಿ ಬಂದ ಬಳಿಕ ದಯಾನಿಧಿ ಮಾರನ್ ಕೇಂದ್ರ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿದ್ದರು.