Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಕೊನೆಯಲ್ಲಿ ಕ್ರೀಸ್‌ ಬಿಟ್ಟುಕೊಡದ ಮಹಿ – ಡೇರಿಲ್‌ ಮಿಚೆಲ್‌ಗೆ ದೊಡ್ಡ ಅವಮಾನ ಎಂದು ಫ್ಯಾನ್ಸ್‌ ಗರಂ!
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Sports | Cricket | ಕೊನೆಯಲ್ಲಿ ಕ್ರೀಸ್‌ ಬಿಟ್ಟುಕೊಡದ ಮಹಿ – ಡೇರಿಲ್‌ ಮಿಚೆಲ್‌ಗೆ ದೊಡ್ಡ ಅವಮಾನ ಎಂದು ಫ್ಯಾನ್ಸ್‌ ಗರಂ!

Cricket

ಕೊನೆಯಲ್ಲಿ ಕ್ರೀಸ್‌ ಬಿಟ್ಟುಕೊಡದ ಮಹಿ – ಡೇರಿಲ್‌ ಮಿಚೆಲ್‌ಗೆ ದೊಡ್ಡ ಅವಮಾನ ಎಂದು ಫ್ಯಾನ್ಸ್‌ ಗರಂ!

Public TV
Last updated: May 2, 2024 8:12 am
Public TV
Share
3 Min Read
MS Dhoni
SHARE

– ಅಂದು‌ ಮಹಿ ಯಡವಟ್ಟಿನಿಂದಲೇ ಇಂಗ್ಲೆಂಡ್‌ ವಿರುದ್ಧ ಸೋತಿದ್ದ ಭಾರತ

ಚೆನ್ನೈ: ತವರಿನಲ್ಲಿ ಪಂಜಾಬ್‌ ಕಿಂಗ್ಸ್ ಹಾಗೂ ಚೆನ್ನೈ ಸೂಪರ್‌ ಕಿಂಗ್ಸ್ ನಡುವಣ ಪಂದ್ಯದಲ್ಲಿ ಮಾಜಿ ನಾಯಕ ಮಹಿ (MS Dhoni) ನಡೆದುಕೊಂಡ ರೀತಿ ಅಭಿಮಾನಿಗಳಿಂದ ಭಾರೀ ಟೀಕೆಗೆ ಕಾರಣವಾಗಿದೆ.

ಚೆನ್ನೈ ಸೂಪರ್‌ಕಿಂಗ್ಸ್‌ ತಂಡದ ನಾಡಿ, ಕ್ರಿಕೆಟ್‌ ಅಭಿಮಾನಿಗಳ ಆರಾಧ್ಯ ದೈವ ಎನಿಸಿಕೊಂಡಿರುವ ಲೆಜೆಂಡ್‌ ಎಂ.ಎಸ್‌ ಧೋನಿ ಬ್ಯಾಟಿಂಗ್‌ ಸರದಿಯ ಕೊನೇ ಓವರ್‌ನಲ್ಲಿ ತೋರಿದ ವರ್ತನೆ ಅಭಿಮಾನಿಗಳ ಅಸಮಾಧಾನ ಸ್ಫೋಟಕ್ಕೆ ಕಾರಣವಾಗಿದೆ.

Shane Watson said, “I have never seen scenes like that in my entire life,” (On MS Dhoni avoiding a run)

pic.twitter.com/lhkHElR6x4

— Vipin Tiwari (@Vipintiwari952_) May 1, 2024

ಹೌದು. ಚೆನ್ನೈನ ಎಂ.ಎ ಚಿದಂಬರಂ ಕ್ರಿಕೆಟ್‌ ಕ್ರೀಡಾಂಗಣದಲ್ಲಿ ನಡೆದಿದ್ದ ಪಂದ್ಯದಲ್ಲಿ ಟಾಸ್‌ ಸೋತು ಮೊದಲು ಬ್ಯಾಟ್‌ ಮಾಡುವಂತಾಗಿದ್ದ ಚೆನ್ನೈ ಸೂಪರ್‌ ಕಿಂಗ್ಸ್ ತಂಡ ತನ್ನ ಪಾಲಿನ 20 ಓವರ್‌ಗಳಿಗೆ 7 ವಿಕೆಟ್‌ಗಳ ನಷ್ಟಕ್ಕೆ 162 ರನ್‌ಗಳನ್ನು ಕಲೆ ಹಾಕಿ ಪಂಜಾಬ್‌ ಕಿಂಗ್ಸ್‌ಗೆ 163 ರನ್‌ಗಳ ಗುರಿ ನೀಡಿತ್ತು.

ಮಿಚೆಲ್‌ಗೆ ಅವಮಾನ ಮಾಡಿದ್ರಾ ಮಹಿ?
ಚೆನ್ನೈ ಸೂಪರ್‌ ಕಿಂಗ್ಸ್ ಇನಿಂಗ್ಸ್‌ನ ಕೊನೇ ಓವರ್‌ನ ಮೊದಲ ಎಸೆತದಲ್ಲಿ ಎಂ.ಎಸ್‌ ಧೋನಿ, ಅರ್ಷದೀಪ್‌ ಸಿಂಗ್‌ಗೆ ಬೌಂಡರಿ ಬಾರಿಸಿದ್ದರು. ನಂತರ ಮುಂದಿನ 2 ಎಸೆತಗಳನ್ನು ಡಾಟ್‌ ಮಾಡಿದ್ದರು. 3ನೇ ಎಸೆತದಲ್ಲಿ ದೊಡ್ಡ ಹೊಡೆತಕ್ಕೆ ಕೈಹಾಕಿದ್ದ ಧೋನಿ, ಬೌಂಡರಿ ಅಥವಾ ಸಿಕ್ಸರ್‌ ಬಾರಿಸುವಲ್ಲಿ ವಿಫಲವಾಗಿದ್ದರು. ಆದ್ರೆ ಈ ವೇಳೆ ಸುಲಭವಾಗಿ ಒಂದು ರನ್‌ ಕದಿಯಬಹುದಿತ್ತು. ಆದರೆ, ಧೋನಿ ನಿರಾಕರಿಸಿದರು.

Chennai super kings csk 2024 team

ನಾನ್‌ಸ್ಟ್ರೈಕ್‌ ತುದಿಯಲ್ಲಿದ್ದ ಡೇರಿಲ್‌ ಮಿಚೆಲ್‌ (Daryl Mitchell) ರನ್‌ ಪಡೆಯಲು ಸ್ಟ್ರೈಕರ್‌ ತುದಿಗೆ ಓಡಿ ಬಂದರು. ಆದರೆ, ಧೋನಿ ನಿಂತಲ್ಲಿಯೇ ಡೇರಿಲ್‌ ಮಿಚೆಲ್‌ಗೆ ವಾಪಸ್‌ ಹೋಗುವಂತೆ ಹೇಳಿದರು. ಪುನಃ ಮಿಚೆಲ್‌ ನಾನ್‌ಸ್ಟ್ರೈಕ್‌ ತುದಿಗೆ ಓಡಿಬಂದರು ಈ ವೇಳೆ ಕೂದಲೆಳೆ ಅಂತರದಲ್ಲಿ ರನ್‌ಔಟ್‌ ಆಗುವುದನ್ನು ತಪ್ಪಿಸಿಕೊಂಡಿದ್ದರು. ನಂತರ 4ನೇ ಎಸತವನ್ನೂ ಡಾಟ್‌ ಮಾಡಿಕೊಂಡ ಧೋನಿ, 5ನೇ ಎಸೆತದಲ್ಲಿ ಸಿಕ್ಸರ್‌ ಬಾರಿಸಿದರು. ಕೊನೆಯ ಎಸೆತದಲ್ಲಿ 2ನೇ ರನ್‌ ಓಡುವ ವೇಳೆ ಧೋನಿ ತಾನೇ ರನ್‌ಔಟ್‌ ಆದರು.

MS Dhoni 3

ಅಂದು ಇದೇ ತಪ್ಪಿನಿಂದ ಭಾರತಕ್ಕೆ ಸೋಲಾಗಿತ್ತು:
2014ರ ಸೆಪ್ಟಂಬರ್‌ನಲ್ಲಿ ಇಂಗ್ಲೆಂಡ್‌ ವಿರುದ್ಧ ನಡೆದ ಅಂತಾರಾಷ್ಟ್ರೀಯ ಟಿ20 ಪಂದ್ಯದಲ್ಲಿ ಮಹಿ ಇದೇ ತಪ್ಪು ಮಾಡಿದ್ದರು. ಅಂದು 181ರನ್‌ಗಳ ಗುರಿ ಬೆನ್ನತ್ತಿದ್ದ ಭಾರತ 177 ರನ್‌ಗಳಿಸಿ, ಕೇವಲ 3 ರನ್‌ಗಳ ಅಂತರದಲ್ಲಿ ಸೋಲು ಕಂಡಿತ್ತು. ಕೊನೇ ಓವರ್‌ನಲ್ಲಿ ಭಾರತದ ಗೆಲುವಿಗೆ 16 ರನ್‌ ಬೇಕಿತ್ತು. ಮೊದಲ 2 ಎಸೆತಗಳಲ್ಲೇ 8 ರನ್‌ ಬಾರಿಸಿದ ಮಹಿ, 3ನೇ ಎಸೆತವನ್ನು ಡಾಟ್‌ ಮಾಡಿಕೊಂಡಿದ್ದರು. 4ನೇ ಎಸೆತದಲ್ಲಿ ಬೌಂಡರಿ ಸಿಡಿಸಿದ್ದರು. ಇನ್ನೆರಡು ಎಸೆತಗಳಲ್ಲಿ 5 ರನ್‌ ಬೇಕಿತ್ತು. 4ನೇ ಎಸೆತದಲ್ಲಿ ಮಹಿ ಹೊಡೆದರು, ಆದ್ರೆ ಸಿಂಗಲ್‌ ತೆಗೆದುಕೊಳ್ಳಲು ನಿರಾಕರಿಸಿದ್ದರು. ಅಲ್ಲದೇ ಇದು ನಾನ್‌ಸ್ಟ್ರೈಕ್‌ನಲ್ಲಿದ್ದ ಅಂಬಟಿ ರಾಯುಡು ಅವರನ್ನೂ ಟೀಕೆಗೆ ಗುರಿಯಾಗುವಂತೆ ಮಾಡಿತ್ತು. ಆದ್ರೆ ಕೊನೆ ಎಸೆತದಲ್ಲಿ ಬೌಂಡರಿ ಸಿಡಿಸುವಲ್ಲಿ ವಿಫಲರಾದ ಮಹಿ ಒಂದು ರನ್‌ ಮಾತ್ರವೇ ಗಳಿಸಿದ್ದರು. ಇದರಿಂದ ಭಾರತ ತಂಡ ವಿರೋಚಿತ ಸೋಲಿಗೆ ತುತ್ತಾಗಿತ್ತು. ಇದೀಗ ಧೋನಿ ಮತ್ತೆ ಅಂತಹದ್ದೇ ತಪ್ಪು ಮಾಡಿದ್ದಾರೆ.

MS Dhoni 2

ಧೋನಿ ವಿರುದ್ಧ ಫ್ಯಾನ್ಸ್ ಗರಂ:
ಡ್ಯಾರಿಲ್ ಮಿಚೆಲ್‌ ಬಗ್ಗೆ ನನಗೆ ನೋವಾಗಿದೆ, ಅವರು ಬ್ಯಾಟಿಂಗ್‌ ಗೊತ್ತಿಲ್ಲದ ಆಟಗಾರನೇನು ಅಲ್ಲ. ಅವರಿಗೆ ಸಿಂಗಲ್‌ ರನ್‌ ನಿರಾಕರಿಸಿರುವುದನ್ನು ಸ್ವೀಕರಿಸಲು ಸಾಧ್ಯವಿಲ್ಲ. ಮಿಚೆಲ್‌ ಅವರೇ 2 ರನ್‌ ಓಡಿದ್ದಾರೆ. ಧೋನಿ ಜಾಗದಲ್ಲಿ ಬೇರೆ ಯಾವುದೇ ಆಟಗಾರನಿದ್ದಿದ್ದರೇ ಅವರ ಜನ್ಮವನ್ನು ಜಾಲಾಡಲಾಗುತ್ತಿತ್ತು ಎಂದು ಅಭಿಮಾನಿಯೊಬ್ಬರು ಟ್ವೀಟ್‌ ಮಾಡಿ ಎಂಎಸ್‌ ಧೋನಿ ವಿರುದ್ಧ ಕಿಡಿಕಾರಿದ್ದಾರೆ. ಇನ್ನೂ ಕೆಲವರು ಧೋನಿ ಅಂತಹ ಆಟಗಾರರಿಂದ ಇಂತಹ ವರ್ತನೆಯನ್ನು ನಿರೀಕ್ಷೆ ಮಾಡಿರಲಿಲ್ಲ. ಇದು ಆಟಗಾರನೊಬ್ಬನಿಗೆ ಮಾಡಿದ ಅವಮಾನ ಎಂದು ಕಿಡಿ ಕಾರಿದ್ದಾರೆ.

TAGGED:Chennai Super KingsDaryl MitchellIPLms dhoniPunjab Kingsಐಪಿಎಲ್ಚೆನ್ನೈ ಸೂಪರ್ ಕಿಂಗ್ಸ್ಪಂಜಾಬ್ ಕಿಂಗ್ಸ್
Share This Article
Facebook Whatsapp Whatsapp Telegram

Cinema news

Kavya
BBK 12 | ಧ್ರುವಂತ್‌ ಔಟ್‌ – Top 6 ಸ್ಪರ್ಧಿಯಾಗಿ ಕಾವ್ಯ ಸೇಫ್‌
Cinema Latest Main Post TV Shows
Shri Mahadev
ಅಮೂಲ್ಯ ನಟನೆಯ ಪೀಕಬೂ ಚಿತ್ರಕ್ಕೆ ಶ್ರೀರಾಮ್ ಹೀರೋ
Cinema Latest Sandalwood Top Stories
bigg boss 1
Bigg Boss: ಇಂದು ಮಿಡ್‌ ವೀಕ್‌ ಎಲಿಮಿನೇಷನ್‌ – ಮನೆಯಿಂದ ಹೊರ ಹೋಗೋದ್ಯಾರು?
Cinema Latest Top Stories TV Shows
Mango Pachcha Movie
ಮ್ಯಾಂಗೋ ಪಚ್ಚ ಸಿನಿಮಾದ ಅರಗಿಣಿಯೇ ಹಾಡಿಗೆ ಕಿಚ್ಚನ ಪುತ್ರಿಯ ಧ್ವನಿ
Cinema Latest Sandalwood Top Stories

You Might Also Like

Gadag Lakkundi Excavation
Districts

ನಿಧಿ ಪತ್ತೆ ಪ್ರಕರಣ – ಐತಿಹಾಸಿಕ ಲಕ್ಕುಂಡಿಯಲ್ಲಿ ಉತ್ಖನನಕ್ಕೆ ಮುಂದಾದ ಸರ್ಕಾರ

Public TV
By Public TV
3 minutes ago
Siddharamananda Swamiji of Kanakaguru Peetha Kaginele passes away
Districts

ಕಾಗಿನೆಲೆ ಕನಕಗುರು ಪೀಠದ ಸಿದ್ದರಾಮನಂದ ಸ್ವಾಮೀಜಿ ವಿಧಿವಶ

Public TV
By Public TV
23 minutes ago
Sankranti KR Market
Bengaluru City

ನಾಡಿನೆಲ್ಲೆಡೆ ಸಂಕ್ರಾಂತಿ ಹಬ್ಬದ ಸಂಭ್ರಮ – ಕೆ.ಆರ್ ಮಾರ್ಕೆಟ್‌ನಲ್ಲಿ ಖರೀದಿ ಭರಾಟೆ ಜೋರು

Public TV
By Public TV
49 minutes ago
Makar Sankranti 2026 Why did Bhishma leave his body on Uttarayana
Bengaluru City

ಮಕರ ಸಂಕ್ರಾಂತಿ – ಉತ್ತರಾಯಣದಲ್ಲೇ ಭೀಷ್ಮ ದೇಹ ತ್ಯಜಿಸಿದ್ದು ಯಾಕೆ?

Public TV
By Public TV
51 minutes ago
daily horoscope dina bhavishya
Astrology

ದಿನ ಭವಿಷ್ಯ 15-01-2026

Public TV
By Public TV
2 hours ago
Shakuntala Nataraj 3
Court

ಬಿಜೆಪಿ ಕಾರ್ಯಕರ್ತೆ ಶಕುಂತಲಾ ನಟರಾಜ್ ವಿರುದ್ಧದ ಪ್ರಕರಣಕ್ಕೆ ಹೈಕೋರ್ಟ್ ತಡೆ

Public TV
By Public TV
9 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?