Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಘರ್ಜಿಸುವ ಹುಲಿ ಸಂರಕ್ಷಣೆಗೆ ಬೇಕಿದೆ ಬಲ; ಸಹ್ಯಾದ್ರಿ-ಕೊಂಕಣ ಕಾರಿಡಾರ್‌ ಪ್ಲ್ಯಾನ್‌ ಹೇಗಿದೆ ನೋಡಿ..
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Latest | ಘರ್ಜಿಸುವ ಹುಲಿ ಸಂರಕ್ಷಣೆಗೆ ಬೇಕಿದೆ ಬಲ; ಸಹ್ಯಾದ್ರಿ-ಕೊಂಕಣ ಕಾರಿಡಾರ್‌ ಪ್ಲ್ಯಾನ್‌ ಹೇಗಿದೆ ನೋಡಿ..

Latest

ಘರ್ಜಿಸುವ ಹುಲಿ ಸಂರಕ್ಷಣೆಗೆ ಬೇಕಿದೆ ಬಲ; ಸಹ್ಯಾದ್ರಿ-ಕೊಂಕಣ ಕಾರಿಡಾರ್‌ ಪ್ಲ್ಯಾನ್‌ ಹೇಗಿದೆ ನೋಡಿ..

Public TV
Last updated: May 15, 2024 2:48 pm
Public TV
Share
5 Min Read
Tiger
SHARE

ʻʻಮೃತ ಹೆಂಗಸಿನ ಕಾಲುಗಳು ಮೆಲ್ಲನೆ ನನ್ನ ಕೆನ್ನೆ ತಟ್ಟಿದವು ಒಂದೇ ಒಂದು ಶಬ್ಧವೂ ಇಲ್ಲ. ಮತ್ತೆ ಕಾಲುಗಳು ಅಲ್ಲಾಡಿದವು ಶವ ಸಜೀವವಾಗುತ್ತಿದೆಯೇ? ಅಂತ ನನಗೆ ಗಾಬರಿಯಾಯ್ತು. ಕೋವಿ, ಟಾರ್ಚನ್ನು ತೆಗೆದುಕೊಂಡು ಅಲ್ಲಾಡುವ ಹೆಣದ ಪಕ್ಕದಿಂದೆದ್ದು ಓಡಬೇಕು. ಅಷ್ಟರಲ್ಲಿ ನನ್ನ ವಾಸ್ತವ ಪ್ರಜ್ಞೆ ಮರಳಿತು. ಆ ಕಾಲು ಮತ್ತು ವಾರಸುದಾರರು ಸಜೀವಗೊಂಡಿಲ್ಲ. ನರಭಕ್ಷಕ ಅನ್ನು ಸಜೀವಗೊಂಡಂತೆ ಅಲ್ಲಾಡಿಸುತ್ತಿದೆ. ಶವದ ಅಲುಗಾಟಕ್ಕೆ ಕಾರಣ ನನ್ನ ತಲೆಗೆ ಹೊಳೆಯುವ ಹೊತ್ತಿಗಾಗಲೇ ಬೆವರಿನಿಂದ ನನ್ನ ಮೈಯೆಲ್ಲಾ ತೊಯ್ದುಹೋಗಿತ್ತುʼʼ.

Contents
  • ಸಹ್ಯಾದ್ರಿ ಹುಲಿಸಂರಕ್ಷಿತ ಪ್ರದೇಶ ಹೇಗಿದೆ?
  • ದೇಶದಲ್ಲಿ ಹುಲಿಗಳ ಸಂಖ್ಯೆ ಎಷ್ಟಿದೆ?
  • ಹುಲಿಗಳ ಸ್ಥಳಾಂತರ ಉತ್ತಮ ವಿಧಾನವೇ?
  • ಜನರನ್ನೂ ಕೊಂದಿತ್ತು.. ಹುಲಿಯೂ ಸತ್ತಿತ್ತು..
  • ಸಹ್ಯಾದ್ರಿ-ಕೊಂಕಣ ಕಾರಿಡಾರ್‌ನ ಪ್ರಾಮುಖ್ಯತೆ ಏನು?
  • ಹುಲಿಗಳ ಯೋಜನೆಗೆ ಆಯ್ಕೆ ಹೇಗೆ?
  • ಹುಲಿ ಯೋಜನೆಯಿಂದ ಪ್ರಯೋಜನವೇನು?

ಅಬ್ಬಬ್ಬಾ ಪೂರ್ಣಚಂದ್ರ ತೇಜಸ್ವಿ ಅವರ ʻಬೆಳ್ಳಂದೂರಿನ ನರಭಕ್ಷಕʼ ಅನುವಾದ ಕೃತಿಯಲ್ಲಿ ಬರುವ ಈ ದೃಶ್ಯವನ್ನು ಓದಿದರೆ ಕಾಡಿನ ಬಗ್ಗೆ, ವನ್ಯಜೀವಿಗಳ ಬಗ್ಗೆ ನೂರಾರು ಕುತೂಹಲಗಳು ಹುಟ್ಟಿಕೊಳ್ಳುತ್ತವೆ. ಮೈ ರೋಮಾಂಚನಗೊಳ್ಳುತ್ತದೆ. ಆದ್ರೆ ಮನುಷ್ಯನಲ್ಲಿ ನಾಗರಿಕತೆ ಬೆಳೆದಂತೆ ವನ್ಯ ಜೀವಿಗಳ ಆವಾಸಸ್ಥಾನಕ್ಕೆ ಕುತ್ತು ಬರುತ್ತಿವೆ. ಅದರಲ್ಲೂ ರಾಷ್ಟ್ರೀಯ ಪ್ರಾಣಿ (National Animal) ಎಂದೇ ಗುರುತಿಸಿಕೊಂಡಿರುವ ಹುಲಿಗಳ ಸಂಖ್ಯೆ ವರ್ಷದಿಂದ ವರ್ಷಕ್ಕೆ ಗಣನೀಯವಾಗಿ ಏರಿಕೆಯಾಗುತ್ತಿದ್ದರೂ ಕೆಲವು ಕಾಡುಗಳಲ್ಲಿ ವಂಶಾಭಿವೃದ್ಧಿಯೇ ಅಳಿಸಿಹೋಗುತ್ತಿದೆ ಎಂದು ವನ್ಯಜೀವಿ (Wildlife) ತಜ್ಞರು ಅಭಿಪ್ರಾಯಪಟ್ಟಿದ್ದಾರೆ.

Tiger 3

ಮಹಾರಾಷ್ಟ್ರದ ಪಶ್ಚಿಮ ಪ್ರದೇಶದ ಏಕೈಕ ಹುಲಿ ಸಂರಕ್ಷಿತ ಪ್ರದೇಶವಾದ ಸಹ್ಯಾದ್ರಿ ಹುಲಿ ಸಂರಕ್ಷಿತ ಪ್ರದೇಶದಲ್ಲಿ (Sahyadri Tiger Reserve) ಹುಲಿಗಳ ಸಂತತಿಯನ್ನು ಪುನರುಜ್ಜೀವನಗೊಳಿಸಲು ರಾಜ್ಯದ ಅರಣ್ಯ ಇಲಾಖೆಯು ಹೊಸ ಯೋಜನೆಯೊಂದನ್ನು ಕೈಗೆತ್ತಿಕೊಂಡಿದೆ. ರಾಜ್ಯದ ಅರಣ್ಯ ಇಲಾಖೆಯು ಚಂದ್ರಾಪುರ ಜಿಲ್ಲೆಯ ತಡೋಬಾ-ಅಂಧಾರಿ ಹುಲಿ ಸಂರಕ್ಷತ ಪ್ರದೇಶದಿಂದ ಹುಲಿಗಳನ್ನು ಸ್ಥಳಾಂತರಿಸುವ ಕಾರಿಡಾರ್‌ ಯೋಜನೆಯನ್ನು ಕೈಗೆತ್ತಿಕೊಂಡಿದೆ. ಆದರೆ ʻಸಹ್ಯಾದ್ರಿ ಕೊಂಕಣ ವೈಲ್ಡ್‌ಲೈಫ್‌ ಕಾರಿಡಾರ್‌ʼ (Sahyadri-Konkan wildlife corridor) ಯೋಜನೆಗೆ ಮಹಾರಾಷ್ಟ್ರವೊಂದೇ ಅಲ್ಲ. ಕರ್ನಾಟಕ, ಗೋವಾ ಅರಣ್ಯ ಇಲಾಖೆಗಳೂ ಒಟ್ಟಾಗಿ ಕಾರ್ಯನಿರ್ವಹಿಸಿದ್ರೆ ಈ ಯೋಜನೆ ಯಶಸ್ವಿಯಾಗುತ್ತದೆ ಎಂದು ವನ್ಯಜೀವಿ ತಜ್ಞರು ಅಭಿಪ್ರಾಯಪಟ್ಟಿದ್ದಾರೆ.

ಅಷ್ಟಕ್ಕೂ ವನ್ಯಜೀವಿ ಕಾರಿಡಾರ್‌ ಯೋಜನೆಯ ಪ್ರಯೋಜನಗಳೇನು? ಮಹಾರಾಷ್ಟ್ರದ ಸಹ್ಯಾದ್ರಿ ಹುಲಿ ಸಂರಕ್ಷಿತ ಪ್ರದೇಶಕ್ಕೆ ಹುಲಿಗಳನ್ನು ಸ್ಥಳಾಂತರಿಸುವ ಯೋಜನೆ ಹಾಕಿಕೊಂಡಿದ್ದೇಕೆ? ಈ ಯೋಜನೆ ಹುಲಿ ಸಂರಕ್ಷಣೆಗೆ ಹೇಗೆ ಪಾತ್ರವಹಿಸುತ್ತದೆ? ಎಂಬುದನ್ನು ತಿಳಿಯುವ ಕುತೂಹಲ ನಿಮಗಿದ್ದರೆ ಮುಂದೆ ಓದಿ…

Tiger 2

ಸಹ್ಯಾದ್ರಿ ಹುಲಿಸಂರಕ್ಷಿತ ಪ್ರದೇಶ ಹೇಗಿದೆ?

ಉತ್ತರ ಭಾರತದ ಪಶ್ಚಿಮ ಘಟ್ಟಗಳಲ್ಲಿ ಸಹ್ಯಾದ್ರಿ ಹುಲಿ ಸಂರಕ್ಷಿತ ಪ್ರದೇಶ ನೆಲೆಗೊಂಡಿದೆ. 2010ರಲ್ಲಿ ಈ ಪ್ರದೇಶವನ್ನು ಹುಲಿ ಸಂರಕ್ಷಿತ ಪ್ರದೇಶವನ್ನಾಗಿ ಮಾಡಲಾಯಿತು. ಇದು ಮಹಾರಾಷ್ಟ್ರದ ಕೊಲ್ಲಾಪುರ, ಸತಾರಾ, ಸಾಂಗ್ಲಿ ಮತ್ತು ರತ್ನಗಿರಿ ಜಿಲ್ಲೆಗಳನ್ನು ವ್ಯಾಪಿಸಿದೆ. ಅಲ್ಲದೇ ಚಂದೋಲಿ ರಾಷ್ಟ್ರೀಯ ಉದ್ಯಾನವನ ಮತ್ತು ಕೊಯ್ನಾ ವನ್ಯಜೀವಿ ಅಭಯಾರಣ್ಯಗಳೊಂದಿಗೆ ತನ್ನ ವ್ಯಾಪ್ತಿಯನ್ನು ಹಂಚಿಕೊಂಡಿದೆ. ಕಳ್ಳಬೇಟೆ, ಬದಲಾಗುತ್ತಿರುವ ಆವಾಸಸ್ಥಾನ, ಸಂತಾನೋತ್ಪತ್ತಿ ಕುಂಠಿತಗೊಂಡಿದ್ದರಿಂದಾಗಿ ಈ ಪ್ರದೇಶದಲ್ಲಿ ಹುಲಿಗಳ ಸಂಖ್ಯೆ ಗಣನೀಯವಾಗಿ ಕಡಿಮೆಯಾಗಿದೆ. ಸದ್ಯಕ್ಕೆ ಸಿಕ್ಕಿರುವ ಫೋಟೋ ಸಾಕ್ಷ್ಯಗಳ ಪ್ರಕಾರ ಸಹ್ಯಾದ್ರಿ ಹುಲಿ ಸಂರಕ್ಷಿತ ಪ್ರದೇಶದಲ್ಲಿ ಕೇವಲ 7-8 ಹುಲಿಗಳು ಮಾತ್ರ ಇವೆ ಎಂದು ಅಂದಾಜಿಸಲಾಗಿದೆ. ಅದಕ್ಕಾಗಿಯೇ ಮಹಾರಾಷ್ಟ್ರ ಅರಣ್ಯ ಇಲಾಖೆಯು ಹುಲಿಗಳನ್ನು ಸ್ಥಳಾಂತರಿಸುವ ಯೋಜನೆಯನ್ನು ಕೈಗೆತ್ತಿಕೊಂಡಿದೆ. ಇಲ್ಲಿನ ಹುಲಿಗಳ ಸಂಖ್ಯೆ ಹೆಚ್ಚಿಸಲು ಕರ್ನಾಟಕ ಮತ್ತು ಗೋವಾ ಅರಣ್ಯ ಪ್ರದೇಶಗಳಿಂದ ಹುಲಿಗಳನ್ನು ಸ್ಥಳಾಂತರಿಸುವ ಕೆಲಸ ಆಗಬೇಕು. ಇದರೊಂದಿಗೆ ಹುಲಿಗಳ ಸಂತಾನೋತ್ಪತ್ತಿಗೆ ಸೂಕ್ತ ವಾತಾವರಣವನ್ನೂ ಕಲ್ಪಿಸಿಕೊಟ್ಟಲ್ಲಿ, ಈ ಯೋಜನೆ ಯಶಸ್ವಿಯಾಲಿದೆ ಎಂದು ತಜ್ಞರು ಹೇಳುತ್ತಾರೆ.

Tiger 4

ದೇಶದಲ್ಲಿ ಹುಲಿಗಳ ಸಂಖ್ಯೆ ಎಷ್ಟಿದೆ?

2006 ರಿಂದಲೂ ದೇಶದಲ್ಲಿ ಹುಲಿಗಳ ಸಂಖ್ಯೆ ಏರುಗತಿಯಲ್ಲಿ ಸಾಗುತ್ತಿದೆ. ಹೌದು. 2006ರಲ್ಲಿ ಹುಲಿಗಳ ಸಂಖ್ಯೆ 1,411 ಆಗಿತ್ತು. ಆ ನಂತರ 2010 ರಲ್ಲಿ 1,706, 2014ರಲ್ಲಿ 2,226, 2018ರಲ್ಲಿ 2,967 ಇದ್ದ ಹುಲಿಗಳ ಸಂಖ್ಯೆ 2022ರ ಅಂಕಿ ಅಂಶದ ಪ್ರಕಾರ 3,682ಕ್ಕೆ ಹುಲಿಗಳ ಸಂಖ್ಯೆ ಏರಿಕೆಯಾಗಿದೆ.

Tiger 5

ಹುಲಿಗಳ ಸ್ಥಳಾಂತರ ಉತ್ತಮ ವಿಧಾನವೇ?

ಭಾರತದಲ್ಲಿ 2008 ರಿಂದ ಹುಲಿಗಳ ಸ್ಥಳಾಂತರ (translocate tigers) ಯೋಜನೆಯನ್ನು ಪ್ರಾರಂಭಿಸಲಾಯಿತು. 2008ರಲ್ಲಿ ಸರಿಸ್ಕಾ ಹುಲಿ ಸಂರಕ್ಷಿತ ಪ್ರದೇಶ, 2009ರಲ್ಲಿ ಪನ್ನಾ ಹುಲಿ ಸಂರಕ್ಷಿತ ಪ್ರದೇಶದಲ್ಲಿ ಈ ಯೋಜನೆ ಯಶಸ್ವಿಯಾಗಿರುವ ಉದಾಹರಣೆಯೂ ಇದೆ. ಅಲ್ಲದೇ ದೇಶದಲ್ಲೇ ಮೊದಲ ಅಂತರರಾಜ್ಯ ಸ್ಥಳಾಂತರ ಯೋಜನೆಗೆ ಕೈಹಾಕಿ ಒಡಿಶಾದ ಸತ್ಕೋಸಿಯಾ ಹುಲಿ ಸಂರಕ್ಷಿತ ಪ್ರದೇಶದಲ್ಲಿ ಯೋಜನೆ ವೈಫಲ್ಯ ಅನುಭವಿಸಿದ ಉದಾಹರಣೆಯೂ ಇದೆ.

ಈ ಕುರಿತು ಪ್ರತಿಕ್ರಿಯೆ ನೀಡಿರುವ ರಾಷ್ಟ್ರೀಯ ಹುಲಿ ಸಂರಕ್ಷಣಾ ಪ್ರಾಧಿಕಾರದ ಮಾಜಿ ಸದಸ್ಯ ಕಾರ್ಯದರ್ಶಿ ಅನುಪ್ ನಾಯಕ್, ಹುಲಿಗಳ ಸ್ಥಳಾಂತರ ಉಪಕ್ರಮವು ದೀರ್ಘಾವಧಿ ಯೋಜನೆಯಾಗಿದ್ದು, ಕೊನೇ ಆಯ್ಕೆಯಾಗಿ ಇಟ್ಟುಕೊಳ್ಳಬೇಕು. ಮೊದಲಿಗೆ ಹುಲಿಗಳ ಆವಾಸಸ್ಥಾ ಸುಧಾರಣೆ, ಕಳ್ಳಬೇಟೆಯಿಂದ ರಕ್ಷಣೆ, ಹುಲಿ ಸಂರಕ್ಷಿತಾರಣ್ಯಗಳ ಅಭಿವೃದ್ಧಿಪಡಿಸುವಂತಹ ಆಯ್ಕೆಗಳನ್ನು ನಿರ್ಣಿಸಬೇಕು. ಹುಲಿಗಳನ್ನು ಸ್ಥಳಾಂತರಿಸುವುದರಿಂದ ಒಳ್ಳೆಯದ್ದು ಆಗಬಹುದು, ವಿಫಲವೂ ಆಗಬಹುದು. ಹಾಗಾಗಿ ಅದನ್ನು ಕೊನೇ ಆಯ್ಕೆಯಾಗಿ ಇಟ್ಟುಕೊಳ್ಳಬೇಕು. ಸ್ಥಳಾಂತರಿಸಿದ ನಂತರವು ಅವು ಜನವಸತಿ ಪ್ರದೇಶಗಳಿಂದ ಮುಕ್ತವಾಗಿವೆಯೇ ಎಂಬುದನ್ನು ಖಚಿತಪಡಿಸಿಕೊಳ್ಳಬೇಕು. ಬಳಿಕ ಅವರನ್ನೂ ವಿಶ್ವಾಸಕ್ಕೆ ತೆಗೆದುಕೊಂಡು ಯೋಜನೆಗೆ ಕೈಹಾಕಬೇಕು ಎಂದು ಸಲಹೆ ನೀಡಿದ್ದಾರೆ.

Tiger 6

ಜನರನ್ನೂ ಕೊಂದಿತ್ತು.. ಹುಲಿಯೂ ಸತ್ತಿತ್ತು..

ಈ ಹಿಂದೆ ಸತ್ಕೋಸಿಯಾ ಮೀಸಲು ಅರಣ್ಯದಲ್ಲಿ ಹುಲಿಗಳನ್ನು ಸ್ಥಳಾಂತರಿಸುವ ಯೋಜನೆ ವಿಫಲವಾಗಿತ್ತು. 2018ರಲ್ಲಿ ಕನ್ಹಾ ಸಂರಕ್ಷಿತ ಪ್ರದೇಶದಿಂದ ಒಂದು ಗಂಡು ಮತ್ತು ಒಂದು ಹೆಣ್ಣು ಹುಲಿಯನ್ನು ಸತ್ಕೋಸಿಯಾ ಪ್ರದೇಶಕ್ಕೆ ಸ್ಥಳಾಂತರಿಸಲಾಗಿತ್ತು. ಆದ್ರೆ ಕಳಪೆ ನಿರ್ವಹಣೆಯಿಂದಾಗಿ ಹುಲಿಗಳು ಸ್ಥಳೀಯರ ಮೇಲೆ ದಾಳಿ ಮಾಡತೊಡಗಿದ್ದವು, ಕೆಲವರನ್ನು ಕೊಂದುಹಾಕಿದ್ದವು. ಇದರಿಂದ ರೊಚ್ಚಿಗೆದ್ದ ಸ್ಥಳೀಯರು ಅರಣ್ಯ ಇಲಾಖೆ ವಿರುದ್ಧ ಹಿಂಸಾತ್ಮಕ ಪ್ರತಿಭಟನೆ ನಡೆಸಿದ್ದರು. ಕೊನೆಗೆ ಅಲ್ಲಿದ್ದ ʻಮಹಾವೀರ್‌ʼ ಎಂಬ ಗಂಡು ಹುಲಿ ಉರುಳಿಗೆ ಸಿಕ್ಕಿ ಸಾವನ್ನಪ್ಪಿತ್ತು. ಬಳಿಕ ಈ ಯೋಜನೆಯ ಪ್ರಸ್ತಾಪವನ್ನೇ ನಿಲ್ಲಿಸಲಾಗಿತ್ತು.

Tiger 7

ಸಹ್ಯಾದ್ರಿ-ಕೊಂಕಣ ಕಾರಿಡಾರ್‌ನ ಪ್ರಾಮುಖ್ಯತೆ ಏನು?

ಈ ಯೊಜನೆಯು ಸಹ್ಯಾದ್ರಿ ಹುಲಿ ಸಂರಕ್ಷಿತ ಪ್ರದೇಶದಲ್ಲಿ ಹುಲಿಗಳ ಸಂಖ್ಯೆಯನ್ನು ಹೆಚ್ಚಿಸುವ ಉದ್ದೇಶ ಹೊಂದಿದೆ. ಜೊತೆಗೆ ಸಹ್ಯಾದ್ರಿ, ರಾಧನಗರಿ, ಗೋವಾ, ಕರ್ನಾಟಕ, ಕಾರಿಡಾರ್‌ ಮತ್ತು ಪಶ್ಚಿಮ ಘಟ್ಟಗಳಲ್ಲಿ ದೀರ್ಘಾವಧಿವರೆಗೆ ಸಂರಕ್ಷಣೆ ಮಾಡುವ ಉದ್ದೇಶವಾಗಿದೆ. ಈ ಕಾರಿಡಾರ್‌ ಕರ್ನಾಟಕದ ʻಕಾಳಿʼ ಸಂರಕ್ಷಿತ ಪ್ರದೇಶ ಹಾಗೂ ಗೋವಾ ಒಳನಾಡಿನ ಕಾಡುಗಳನ್ನೂ ಸಂಪರ್ಕಿಸುತ್ತದೆ. ಜೊತೆಗೆ ರಾಧಾನಗರಿ ವನ್ಯಜೀವಿ ಅಭಯಾರಣ್ಯ, ಸಿಂಧುದುರ್ಗ ಜಿಲ್ಲೆಯ ಸಂರಕ್ಷಣಾ ಮೀಸಲು ಪ್ರದೇಶವನ್ನು ಸಂಪರ್ಕಿಸುತ್ತದೆ. ಈ ಕಾರಿಡಾರ್‌ಗಳು ವನ್ಯಜೀವಿಗಳಿಗೆ ಮಾತ್ರವಲ್ಲದೇ ಗೋವಾ ಮತ್ತು ಕರ್ನಾಟಕದ ಈ ಕಾಡುಗಳ ಸುತ್ತ ವಾಸಿಸುವ ಸಮುದಾಯಗಳ ನೀರಿನ ಸಂರಕ್ಷಣೆಗೂ ಸಹಾಯಕವಾಗಲಿದೆ. ಆದ್ದರಿಂದ ಮಹಾರಾಷ್ಟ್ರ, ಗೋವಾ ಮತ್ತು ಕರ್ನಾಟಕದ ನಡುವೆ ಉತ್ತಮ ಸಮನ್ವಯತೆಯ ಅಗತ್ಯವಿದೆ ಎಂದು ತಜ್ಞರು ಹೇಳಿದ್ದಾರೆ.

Tiger 8

ಹುಲಿಗಳ ಯೋಜನೆಗೆ ಆಯ್ಕೆ ಹೇಗೆ?

ಹುಲಿಯೋಜನೆ ಸಂರಕ್ಷಿತ ಪ್ರದೇಶ ಆಯ್ಕೆಗೆ ಮಾನಂದಡವಾಗಿದ್ದು ಹುಲಿಗಳ ಸಂಖ್ಯೆಯ ಜತೆಗೆ ವಾಸಕ್ಕೆ ಪೂರಕವಾದ ಅಲ್ಲಿನ ದಟ್ಟಾರಣ್ಯದ ಪ್ರಮಾಣ. ಇದನ್ನು ಗಮನಿಸಿಯೇ ಮೊದಲ ಹಂತದಲ್ಲಿ 9 ಪ್ರದೇಶ ಗುರುತಿಸಲಾಯಿತು. ಇನ್ನಷ್ಟು ಅರಣ್ಯಗಳಲ್ಲಿ ಹುಲಿ ಸಂರಕ್ಷಣೆ ಸಾಧ್ಯವಿದೆ ಎನ್ನುವ ಮಾಹಿತಿ ಆಧರಿಸಿ ವಿಸ್ತರಿಸಲಾಗಿದೆ. ಜನಸಮುದಾಯದಿಂದ ಮುಕ್ತವಾದ ವನ್ಯಜೀವಿಗಳಿಗೆ ಮಾತ್ರ ಮೀಸಲಾದ ಸ್ಥಳ ನಿಗದಿಪಡಿಸುವ (ಕೋರ್ ಬಫರ್) ಲೆಕ್ಕಾಚಾರದ ಮೇಲೆಯೇ ಹುಲಿ ಸಂರಕ್ಷಿತ ಪ್ರದೇಶ ಗುರುತಿಸಲಾಗಿದೆ.

Tiger 9

ಹುಲಿ ಯೋಜನೆಯಿಂದ ಪ್ರಯೋಜನವೇನು?

ಹುಲಿ ಯೋಜನೆ ಅನುಷ್ಠಾನಗೊಂಡ ನಂತರ ಸಂಪೂರ್ಣ ಅಳಿವಿನ ಅಂಚಿಗೆ ತಲುಪಿದ್ದ ಹುಲಿಯನ್ನು ಸಂರಕ್ಷಿಸಲು ಸಾಧ್ಯವಾಗಿದೆ. ಈಗ ಹುಲಿಗೂ ತನ್ನದೇ ಪ್ರದೇಶದಲ್ಲಿ ನೆಮ್ಮದಿಯಿಂದ ಬದುಕುವ ಅವಕಾಶ. ಬಂಡೀಪುರ, ನಾಗರಹೊಳೆ, ರಣ ತಂಭೋರ್‌, ಕನ್ಹಾ ಸೇರಿದಂತೆ ಹಲವು ಪ್ರದೇಶಗಳು ಹುಲಿ ಸಂರಕ್ಷಣೆ ಮತ್ತು ವಂಶಾಭಿವೃದ್ಧಿಗೆ ಯೋಗ್ಯವಾದ ಸ್ಥಳಗಳಾಗಿವೆ. ಹುಲಿ ಯೋಜನೆ ಜಾರಿಗೊಳಿಸಿದ ಕೆಲವೇ ವರ್ಷದಲ್ಲಿ ಸುರಕ್ಷಿತ ವಲಯ ರೂಪುಗೊಂಡು ಹುಲಿಗಳ ಸಂಖ್ಯೆಯಲ್ಲೂ ಗಣನೀಯ ಏರಿಕೆ ಕಂಡು ಬಂದಿದೆ.

– ಮೋಹನ ಬನ್ನಿಕುಪ್ಪೆ, ಮೈಸೂರು

TAGGED:maharashtraSahyadri Tiger ReserveTATRTiger reserveTiger Translocatewildlifeಕರ್ನಾಟಕಮಹಾರಾಷ್ಟ್ರಹುಲಿ ಯೋಜನೆಹುಲಿ ಸಂರಕ್ಷಿತ ಪ್ರದೇಶ
Share This Article
Facebook Whatsapp Whatsapp Telegram

Cinema news

shreyas manju
ಶ್ರೇಯಸ್ ಮಂಜುಗೆ ʻದಿಲ್‌ದಾರ್ʼ ಬರ್ತ್‌ಡೇ ಟೀಸರ್ ಗಿಫ್ಟ್‌!
Cinema Latest Sandalwood
sudeep 6
ಕ್ರಿಮಿನಲ್ ಮಾನನಷ್ಟ ಮೊಕದ್ದಮೆ ಹೂಡಿದ್ದ ಕಿಚ್ಚ ಸುದೀಪ್‌ – ನಟನಿಗೆ ಕಷ್ಟವಾಯ್ತಾ ಕ್ರಾಸ್ ಎಕ್ಸಾಮಿನೇಷನ್?
Bengaluru City Cinema Court Districts Karnataka Latest Sandalwood Top Stories
Ranbir Kapoor Yash Sai Pallavi
ಟೀಸರ್‌ ರಿಲೀಸ್‌ ಬೆನ್ನಲ್ಲೇ ‘ರಾಮಾಯಣ’ ನಟರ ಸಂಭಾವನೆ ಬಹಿರಂಗ – ರಣಬೀರ್‌ಗೆ 150 ಕೋಟಿ, ಯಶ್‌ಗೆ ಎಷ್ಟು?
Bollywood Cinema Latest Top Stories
Parliament House witnessed Azad Bharat screening in honor of Netaji Subhas Chandra Bose 1
ನೇತಾಜಿ ಗೌರವಾರ್ಥ ಆಜಾದ್ ಭಾರತ್ ಚಿತ್ರ ಪ್ರದರ್ಶನಕ್ಕೆ ಸಂಸತ್ ಭವನ ಸಾಕ್ಷಿ
Cinema Latest National Top Stories

You Might Also Like

4 Year Old Tied Up Thrashed By Ex Armyman For Plucking Guava From His Garden
Crime

ತೋಟದಲ್ಲಿ ಹಣ್ಣು ಕಿತ್ತ 4 ವರ್ಷದ ಮಗುವಿನ ಕೈಕಾಲು ಕಟ್ಟಿ ಥಳಿಸಿದ ಮಾಜಿ ಸೈನಿಕ – ವಿಡಿಯೋ ವೈರಲ್‌

Public TV
By Public TV
11 minutes ago
BOMB THREAT
Crime

ದೆಹಲಿ ವಿವಿಯ ಎರಡು ಕಾಲೇಜುಗಳಿಗೆ ಬಾಂಬ್ ಬೆದರಿಕೆ

Public TV
By Public TV
14 minutes ago
Majid Khademi
Latest

ಅಮೆರಿಕ – ಇಸ್ರೇಲಿ ದಾಳಿಯಲ್ಲಿ ಇರಾನ್‌ ಗುಪ್ತಚರ ಮುಖ್ಯಸ್ಥ ಮಜೀದ್ ಖಾದೇಮಿ ಹತ್ಯೆ

Public TV
By Public TV
30 minutes ago
Hubbali Love Jihda
Crime

6 ತಿಂಗಳ ಹಿಂದೆ ಮಾಡ್ಕೊಂಡಿದ್ದ ವೀಡಿಯೋ ಈಗ ವೈರಲ್ ಮಾಡುತ್ತಿದ್ದಾರೆ: ಹುಬ್ಬಳ್ಳಿ ಲವ್ ಜಿಹಾದ್ ಸಂತ್ರಸ್ತೆ

Public TV
By Public TV
50 minutes ago
Pema Khandu
Court

ಅರುಣಾಚಲ ಸಿಎಂ ಪೆಮಾ ಖಂಡು ಕುಟುಂಬದ ವಿರುದ್ಧ ಸಿಬಿಐ ತನಿಖೆಗೆ ಸುಪ್ರೀಂ ಆದೇಶ

Public TV
By Public TV
1 hour ago
chalavadi narayanaswamy 1
Davanagere

ಸಿದ್ದರಾಮಯ್ಯ ಮತ್ತೆ ಸಿಎಂ ಆಗಿ ದಾವಣಗೆರೆಗೆ ಬರಲ್ಲ: ಭವಿಷ್ಯ ನುಡಿದ ಛಲವಾದಿ ನಾರಾಯಣಸ್ವಾಮಿ

Public TV
By Public TV
1 hour ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?