Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ವಿಚಾರಣೆಗೆ ಬನ್ನಿ – ಹರೀಶ್‌ ಪೂಂಜಾ ಬಂಧನ ಮಾಡದೇ ತೆರಳಿದ ಪೊಲೀಸರು
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Dakshina Kannada | ವಿಚಾರಣೆಗೆ ಬನ್ನಿ – ಹರೀಶ್‌ ಪೂಂಜಾ ಬಂಧನ ಮಾಡದೇ ತೆರಳಿದ ಪೊಲೀಸರು

Dakshina Kannada

ವಿಚಾರಣೆಗೆ ಬನ್ನಿ – ಹರೀಶ್‌ ಪೂಂಜಾ ಬಂಧನ ಮಾಡದೇ ತೆರಳಿದ ಪೊಲೀಸರು

Public TV
Last updated: May 22, 2024 8:08 pm
Public TV
Share
3 Min Read
Harish Poonja 1
SHARE

– ಇದು ಕಾರ್ಯಕರ್ತರ ಗೆಲುವು ಎಂದ ಕಟೀಲ್‌
– ಬೆಳಗ್ಗೆಯಿಂದ ಪೂಂಜಾ ನಿವಾಸದಲ್ಲಿ ಭಾರೀ ಹೈಡ್ರಾಮಾ

ಮಂಗಳೂರು: ಬೆಳ್ತಂಗಡಿ ಬಿಜೆಪಿ ಶಾಸಕ ಹರೀಶ್‌ ಪೂಂಜಾ (Beltangady BJP MLA Harish Poonja) ಅವರನ್ನು ಬಂಧನ ಮಾಡದೇ ಇರಲು ಪೊಲೀಸರು ನಿರ್ಧರಿಸಿದ್ದಾರೆ. ನೋಟಿಸ್‌ ನೀಡಿ ವಿಚಾರಣೆಗೆ ಹಾಜರಾಗುವಂತೆ ಶಾಸಕರಿಗೆ ತಿಳಿಸಿ ತೆರಳಿದ್ದಾರೆ.

ಸಂಜೆ ಮಾಧ್ಯಮಗಳ ಜೊತೆ ಮಾತನಾಡಿದ ಹರೀಶ್‌ ಪೂಂಜಾ, ಅಕ್ರಮ ಕಲ್ಲಿನ ಕೋರೆ ಪ್ರಕರಣದಲ್ಲಿ ಬಿಜೆಪಿ ಯುವ ಮೋರ್ಚಾ (BJP Yuva Morcha) ಅಧ್ಯಕ್ಷ ಶಶಿಧರ್‌ ಶೆಟ್ಟಿಯನ್ನು ಪೊಲೀಸರು ಬಂಧಿಸಿದ್ದಾರೆ. ಈ ಪ್ರಕರಣಕ್ಕೂ ಶಶಿಧರ್‌ ಶೆಟ್ಟಿಗೂ ಯಾವುದೇ ಸಂಬಂಧವಿಲ್ಲ. ಉದ್ದೇಶಪೂರ್ವಕವಾಗಿ ಪ್ರಕರಣದಲ್ಲಿ ಸಿಲುಕಿಸಿದ್ದಾರೆ. ಈ ಕಾರಣಕ್ಕೆ ನಾನು ಪ್ರತಿಭಟಿಸಿದ್ದೆ ಎಂದು ತಿಳಿಸಿದರು.

ಅಂದು ಅಧಿಕಾರಕ್ಕಾಗಿ ಸಿದ್ದರಾಮಯ್ಯನವರು ಬಿದರಿ ಅವರ ಕಾಲರ್‌ ಪಟ್ಟಿ ಹಿಡಿದಿದ್ದರು. ನಾನು ಅಧಿಕಾರಕ್ಕೆ ಪೊಲೀಸರ ವಿರುದ್ಧ ಮಾತನಾಡಿಲ್ಲ. ಕಾರ್ಯಕರ್ತನ ಪರವಾಗಿ ನಾನು ಮಾತನಾಡಿದ್ದೇನೆ. ಅಮಾಯಕನನ್ನು ಪ್ರಕರಣದಲ್ಲಿ ಸಿಲುಕಿಸಲಾಗಿದೆ. ಮುಂಚೂಣಿಯಲ್ಲಿ ನಿಂತು ಕೆಲಸ ಮಾಡುತ್ತಾನೆ ಎಂಬ ಕಾರಣಕ್ಕೆ ಕೇಸ್‌ ಹಾಕಲಾಗಿದೆ. ಕಾಂಗ್ರೆಸ್‌ನ ದ್ವೇಷದ ರಾಜಕಾರಣವನ್ನು ನಾವು ಸಹಿಸುವುದಿಲ್ಲ ಎಂದು ಹೇಳಿದರು.

ಬಿಜೆಪಿ ಮಾಜಿ ರಾಜ್ಯಾಧ್ಯಕ್ಷ ನಳಿನ್‌ ಕುಮಾರ್‌ ಕಟೀಲ್‌ ಮಾತನಾಡಿ, ದಕ್ಷಿಣ ಕನ್ನಡದ ಎಲ್ಲಾ ಬಿಜೆಪಿ ಶಾಸಕರು, ಹಾಲಿ ಬಿಜೆಪಿ ಅಭ್ಯರ್ಥಿ ಬ್ರಿಜೇಶ್‌ ಚೌಟ ಇಲ್ಲಿಗೆ ಆಗಮಿಸಿದ್ದಾರೆ. ನೋಟಿಸ್‌ ನೀಡದೇ ಬಂಧನ ಮಾಡುವ ಪ್ರಯತ್ನ ನಡೆದಿತ್ತು. ಈಗ ನೋಟಿಸ್‌ ನೀಡಿ ಹೋಗಿದ್ದಾರೆ. ಮೊದಲ ಹಂತದ ಗೆಲುವು ಕಾರ್ಯಕರ್ಯರಿಗೆ ಮತ್ತು ಪೂಂಜಾ ಅವರಿಗೆ ಸಿಕ್ಕಿದೆ ಎಂದರು.

ಇವತ್ತು ಬೆಳಗ್ಗೆಯೇ ಹರೀಶ್ ಪೂಂಜಾ ಬಂಧಿಸಲು ಪೊಲೀಸರು ಅವರ ಗರ್ಡಾಡಿಯ ಮನೆಗೆ ಬಂದಿದ್ದರು. ಹರೀಶ್ ಪೂಂಜಾ ಮಾತ್ರ ನಾನು ಬರುವುದಿಲ್ಲ ಎಂದು ಹೇಳಿದರು. ಹರೀಶ್ ಪೂಂಜಾ ಮಾತ್ರ ನಾನು ಬರುವುದಿಲ್ಲ ಎಂದು ಹೇಳಿದರು. ವಿಷಯ ತಿಳಿದ ಪೂಂಜಾ ಬೆಂಬಲಿಗರು ಭಾರೀ ಸಂಖ್ಯೆಯಲ್ಲಿ ಸೇರಿದರು.

ಪೊಲೀಸರು ಮತ್ತು ಕಾರ್ಯಕರ್ತರ ಮಧ್ಯೆ ವಾಗ್ವಾದ ನಡೆಯುತ್ತಿದ್ದಂತೆ ಹರೀಶ್ ಪೂಂಜಾ ಮನೆಗೆ ಹೆಚ್ಚುವರಿ ಪೋಲಿಸರು ಆಗಮಿಸಿದರು. ಪುತ್ತೂರು ಡಿವೈಎಸ್ ಪಿ ಅರುಣ್ ನಾಗೇಗೌಡ ನೇತೃತ್ವದಲ್ಲಿ 150 ಕ್ಕೂ ಅಧಿಕ ಪೊಲೀಸ ಆಗಮಿಸಿದರು. ಆದರೆ ಪೊಲಿಸರನ್ನು ಮನೆಯ ಒಳಗೆ ಹೋಗಲು ಕಾರ್ಯಕರ್ತರು ಬಿಡಲಿಲ್ಲ.

ಈ ಸಂದರ್ಭದಲ್ಲಿ ಡಿವೈಎಸ್‌ಪಿ ಹಾಗೂ ಸರ್ಕಲ್ ಪೋಲಿಸ್ ಅಧಿಕಾರಿಗಳು ಹರೀಶ್‌ ಪೂಂಜಾ ಜೊತೆ ಮಾತುಕತೆ ನಡೆಸಿದರು. ವಕೀಲರು ಸ್ಥಳಕ್ಕೆ ಆಗಮಿಸಿ ನೋಟಿಸ್‌ ನೀಡದೇ ಬಂಧನ ಮಾಡುವುದು ಎಷ್ಟು ಸರಿ. ಈ ಪ್ರಕರಣಕ್ಕೆ ಜಾಮೀನು ರಹಿತ ಸೆಕ್ಷನ್‌ ಸೇರಿಸಿದ್ದು ಎಷ್ಟು ಸರಿ ಎಂದು ಪ್ರಶ್ನಿಸಿದರು. ಬೆಳಗ್ಗೆಯಿಂದ ಸಂಜೆಯವರೆಗೂ ಭಾರೀ ಹೈಡ್ರಾಮಾ ನಡೆದು ಪೊಲೀಸರು ವಿಚಾರಣೆಗೆ ಹಾಜರಾಗುವಂತೆ ನೋಟಿಸ್‌ ನೀಡಿ ಬಂಧನ ಮಾಡದೇ ತೆರಳಿದರು.

ಶಾಸಕರು ಏನೋ ಉದ್ವೇಗದಿಂದ ಮಾತಾಡಿದ್ದಾರೆ. ಆದರೆ ದುರುದ್ದೇಶದಿಂದ ಕೂಡಿಲ್ಲ. ಇದನ್ನೇ ನೆಪ ಮಾಡಿಕೊಂಡು ಶಾಸಕರ ಬಂಧನಕ್ಕೆ ಮುಂದಾಗಿರುವುದು ಸರಿಯಲ್ಲ. ಮುಂದೆ ಆಗುವ ಅನಾಹುತಗಳಿಗೆ ಪೊಲೀಸರೇ ಹೊಣೆಯಾಗುತ್ತಾರೆ ಎಂದು ಎಚ್ಚರಿಕೆ ನೀಡಿದ್ದರು.

 

ಹರೀಶ್‌ ಪೂಂಜಾ ಅವರನ್ನು ಬಂಧನ ಮಾಡಿದರೆ ನಾಳೆ ದಕ್ಷಿಣ ಕನ್ನಡ ಬಂದ್‌ಗೆ ಕರೆ ನೀಡಲಾಗುವುದು ಎಂದು ನಳಿನ್‌ ಕುಮಾರ್‌ ಕಟೀಲ್‌ ಹೇಳಿದ್ದರು.

ಏನಿದು ಪ್ರಕರಣ?
ಅನುಮತಿ ಪಡೆಯದೇ ಪ್ರತಿಭಟನೆ (Protest) ನಡೆಸಿ ಬೆಳ್ತಂಗಡಿ ಪೊಲೀಸರಿಗೆ ಬೆದರಿಕೆ ಅರೋಪದ ಮೇಲೆ ಹರೀಶ್ ಪೂಂಜಾ ವಿರುದ್ಧ ಕೇಸ್ ದಾಖಲಾಗಿತ್ತು. ಅರೆಸ್ಟ್ ಆಗಿರುವ ಕಾರ್ಯಕರ್ತರಿಗಾಗಿ ಪೊಲೀಸರ ಕಾಲರ್ ಹಿಡಿಯಲು ಸಿದ್ದ ಬೆಂಗಳೂರಿನ ಡಿ.ಜೆ ಹಳ್ಳಿ, ಕೆ.ಜೆ ಹಳ್ಳಿಯ ಪೊಲೀಸ್ ಠಾಣೆಗೆ ಆದ ಗತಿಯನ್ನು ಬೆಳ್ತಂಗಡಿ ಠಾಣೆಗೂ ಕಾಣಿಸ್ತೇನೆ ಎಂದು ಹರೀಶ್ ಪೂಂಜಾ ಬೆದರಿಕೆ ಹಾಕಿದ್ದರು. ಈ ಸಂಬಂಧ ಬೆಳ್ತಂಗಡಿ ಬಿಜೆಪಿ ಶಾಸಕರ ವಿರುದ್ಧ ಐಪಿಸಿ 143, 147, 341, 504, 506 ಜೊತೆಗೆ 149 ಸೆಕ್ಷನ್‌ಗಳ ಅಡಿ ಒಟ್ಟು ಎರಡು ಕೇಸ್ ದಾಖಲಾಗಿತ್ತು.

TAGGED:BelthangadybjpNalin Kumar Kateelprotestಪ್ರತಿಭಟನೆಬಿಜೆಪಿಬೆಳ್ತಂಗಡಿಹರೀಶ್ ಪೂಂಜಾ
Share This Article
Facebook Whatsapp Whatsapp Telegram

Cinema news

high court ranveer singh
ದೈವಕ್ಕೆ ಅಪಮಾನ ಆರೋಪ – ಮತ್ತೊಮ್ಮೆ ಅಫಿಡವಿಟ್ ಸಲ್ಲಿಸಲು ರಣವೀರ್ ಸಿಂಗ್‌ಗೆ ಹೈಕೋರ್ಟ್ ಸೂಚನೆ
Cinema Court Latest Top Stories
Thalapathy Vijay
Kill Piracy | ʻಜನನಾಯಗನ್ʼ ರಿಲೀಸ್‌ಗೂ ಮುನ್ನವೇ HD ವಿಡಿಯೋ ಲೀಕ್‌ – ಹಿಂದಿದ್ಯಾ ದೊಡ್ಡ ಸಂಚು?
Cinema Latest Main Post South cinema
Monalisa
ಕುಂಭಮೇಳದ ಮೊನಾಲಿಸಾ ಮದುವೆಗೆ ಟ್ವಿಸ್ಟ್‌ – ಪತಿ ಫರ್ಮಾನ್ ಖಾನ್ ವಿರುದ್ಧ ಪೋಕ್ಸೋ ಕೇಸ್
Cinema Latest Main Post National
rashmika mandanna
ಮದುವೆಯಂದು ರಶ್ಮಿಕಾ ಮಿನಿಮಲ್ ಮೇಕಪ್ ಹಾಕಿದ್ದು ಯಾಕೆ – ಗುಟ್ಟು ಬಿಚ್ಚಿಟ್ಟ ಮೇಕಪ್ ಆರ್ಟಿಸ್ಟ್‌
Cinema Latest Sandalwood South cinema

You Might Also Like

Bidar Eshwar Khandre
Bidar

ಬೀದರ್‌ನ ವಿವಿಧ ಮಠಗಳಿಗೆ ಸರ್ಕಾರದ ದೇಣಿಗೆ ವಿತರಿಸಿದ ಈಶ್ವರ್‌ ಖಂಡ್ರೆ‌‌

Public TV
By Public TV
40 minutes ago
Dharwad 1
Dharwad

ಧಾರವಾಡ | ಯುವ ಕಾಂಗ್ರೆಸ್‌ ಪ್ರಧಾನ ಕಾರ್ಯದರ್ಶಿ ಫೈರೋಜ್ ಪಠಾಣ್ ಕೊಲೆ

Public TV
By Public TV
41 minutes ago
Donald Trump Angry
Latest

ಮದ್ದುಗುಂಡುಗಳನ್ನ ಯುದ್ಧನೌಕೆಗೆ ತುಂಬಿಸ್ತಿದ್ದೇವೆ – ಮಾತುಕತೆಗೆ ಒಪ್ಪದಿದ್ರೆ ಇರಾನ್‌ ಮೇಲೆ ಭೀಕರ ದಾಳಿ: ಟ್ರಂಪ್‌ ಕೊನೇ ವಾರ್ನಿಂಗ್‌

Public TV
By Public TV
59 minutes ago
Artemis 2 Crew
Latest

5 ದಶಕಗಳ ಬಳಿಕ ಚಂದ್ರಯಾನ ಕೈಗೊಂಡಿದ್ದ ಆರ್ಟೆಮಿಸ್-2 ತಂಡ ಶನಿವಾರ ಭೂಮಿಗೆ

Public TV
By Public TV
2 hours ago
andhra girl death
Latest

ಜಲಪಾತದ ಬಳಿ ರೀಲ್ಸ್ ಮಾಡಲು ಹೋಗಿ ಮೂವರು ಸಾವು – ಕ್ಯಾಮೆರಾ ಮುಂದೆಯೇ ಪ್ರಾಣಬಿಟ್ಟ ಯುವತಿಯರು

Public TV
By Public TV
2 hours ago
kea
Bengaluru City

CET-2026ರ ಪ್ರವೇಶ ಪತ್ರ ಬಿಡುಗಡೆ: ಕೆಇಎ

Public TV
By Public TV
3 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?