ಇಬ್ಬರು ಸಿಎಂ ಅರೆಸ್ಟ್‌ ಆದ್ರು.. ಬುಡಕಟ್ಟು ಸಿಎಂ ಇನ್ನೂ ಜೈಲಲ್ಲೇ ಇದ್ದಾರೆ: ರಾಹುಲ್‌ ಗಾಂಧಿ

Public TV
2 Min Read
rahul gandhi

– ಕೇಜ್ರಿವಾಲ್‌, ಹೇಮಂತ್‌ ಸೊರೆನ್‌ ಬಂಧನ ಹೋಲಿಸಿ ಕಾಂಗ್ರೆಸ್‌ ನಾಯಕ ಬೇಸರ

ಚಂಡೀಗಢ: ಇಬ್ಬರು ಮುಖ್ಯಮಂತ್ರಿಗಳ ಬಂಧನವಾಗಿದೆ. ಆದರೆ ಬುಡಕಟ್ಟು ಸಮುದಾಯದ ಸಿಎಂ ಮಾತ್ರ ಇನ್ನೂ ಜೈಲಿನಲ್ಲಿದ್ದಾರೆ ಎಂದು ಕಾಂಗ್ರೆಸ್‌ ನಾಯಕ ರಾಹುಲ್‌ ಗಾಂಧಿ (Rahul Gandhi) ಅಭಿಪ್ರಾಯಪಟ್ಟಿದ್ದಾರೆ.

ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ (Arvind Kejriwal) ಮತ್ತು ಜಾರ್ಖಂಡ್ ಮುಖ್ಯಮಂತ್ರಿ ಹೇಮಂತ್ ಸೊರೆನ್ (Hemant Soren) ಅವರ ಬಂಧನಗಳ ನಡುವೆ ಹೋಲಿಕೆ ಮಾಡಿದ ರಾಹುಲ್ ಗಾಂಧಿ ಮಾತನಾಡಿದ್ದಾರೆ. ಹರಿಯಾಣದ ಪಂಚಕುಲದಲ್ಲಿ ‘ಸಂವಿಧಾನ್ ಸಮ್ಮಾನ್ ಸಮ್ಮೇಳನ’ ಉದ್ದೇಶಿಸಿ ರಾಹುಲ್‌ ಗಾಂಧಿ ಮಾತನಾಡಿದ್ದಾರೆ. ಇದನ್ನೂ ಓದಿ: ಪೊಲೀಸರಿಗಾಗಿ ನಾನು, ನನ್ನ ಪೋಷಕರು, ಹೆಂಡತಿ ಕಾಯುತ್ತಿದ್ದೇವೆ: ಕೇಜ್ರಿವಾಲ್‌ ಪೋಸ್ಟ್‌

ARVIND KEJRIWAL q

ದೇಶದ ಪ್ರತಿಯೊಬ್ಬ ನಾಗರಿಕರನ್ನು ಸಮಾನವಾಗಿ ಕಾಣಬೇಕು ಎಂದು ನಮ್ಮ ಸಂವಿಧಾನದಲ್ಲಿ ಸ್ಪಷ್ಟವಾಗಿ ಉಲ್ಲೇಖಿಸಲಾಗಿದೆ. ಹಾಗಾದರೆ ನನ್ನ ಸರಳ ಪ್ರಶ್ನೆ, 90% ರಷ್ಟು ಜನರ ಭಾಗವಹಿಸುವಿಕೆ ಏನು? ಮಾಧ್ಯಮ ಅಥವಾ ಅಧಿಕಾರಶಾಹಿ ಯಾವುದೇ ಆಗಿರಲಿ. ಅಲ್ಲಿ 90% ರಷ್ಟು ಜನರು ಭಾಗವಹಿಸುವಿಕೆ ಇಲ್ಲ. ಅವರು ಅಸ್ತಿತ್ವದಲ್ಲಿಯೇ ಇಲ್ಲದಂತಾಗಿದೆ ಎಂದು ಬೇಸರ ವ್ಯಕ್ತಪಡಿಸಿದ್ದಾರೆ.

ಇಬ್ಬರು ಮುಖ್ಯಮಂತ್ರಿಗಳನ್ನು ಬಂಧಿಸಲಾಯಿತು. ಬುಡಕಟ್ಟು ಸಿಎಂ ಹೇಮಂತ್ ಸೋರೆನ್ ಇನ್ನೂ ಜೈಲಿನಲ್ಲಿದ್ದಾರೆ. ಅವರು ಮೊದಲು ಅರೆಸ್ಟ್‌ ಆದರು. ಇನ್ನೂ ಕಂಬಿಗಳ ಹಿಂದೆ ಇದ್ದಾರೆ. ರಾಷ್ಟ್ರೀಯ ಮಾಧ್ಯಮಗಳು ಅವರನ್ನು ಮರೆತಿವೆ. ಅವರ ಬಗ್ಗೆ ಮಾತನಾಡುವುದಿಲ್ಲ. ಮಾಯಾವತಿ ಭ್ರಷ್ಟ ಆದರೆ ನವೀನ್ ಪಟ್ನಾಯಕ್ ಅಲ್ಲ. ಯಾರಾದರೂ ಬುಡಕಟ್ಟು ಅಥವಾ ದಲಿತರಾಗಿದ್ದರೆ, ಅವರು ಸ್ವಯಂಚಾಲಿತವಾಗಿ ಚೌಕಟ್ಟಿಗೆ ಒಳಗಾಗುತ್ತಾರೆ ಎಂದು ತಾರತಮ್ಯ ಕುರಿತು ಪ್ರಶ್ನಿಸಿದ್ದಾರೆ. ಇದನ್ನೂ ಓದಿ: ರಾಗಾ ಒಬ್ಬ ಮಹಾನ್‌ ವ್ಯಕ್ತಿ, ಗಾಂಧೀಜಿ ಕನಸು ನನಸು ಮಾಡ್ತಿದ್ದಾರೆ: ಆಚಾರ್ಯ ಪ್ರಮೋದ್ ಕೃಷ್ಣಂ ಕಿಡಿ

Hemant Soren

ಭೂ ಹಗರಣದ ಅಕ್ರಮ ಹಣ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿದಂತೆ ಜಾರ್ಖಂಡ್ ಸಿಎಂ ಹೇಮಂತ್ ಸೋರೆನ್ ಅವರನ್ನು ಜಾರಿ ನಿರ್ದೇಶನಾಲಯ ಈ ವರ್ಷದ ಜನವರಿಯಲ್ಲಿ ಬಂಧಿಸಿತ್ತು. ಸದ್ಯ ಅವರು ನ್ಯಾಯಾಂಗ ಬಂಧನದಲ್ಲಿದ್ದಾರೆ. ನ್ಯಾಯಾಲಯದಿಂದ ಯಾವುದೇ ಮಧ್ಯಂತರ ಪರಿಹಾರ ಪಡೆಯಲು ಸಾಧ್ಯವಾಗಲಿಲ್ಲ.

ದೆಹಲಿ ಅಬಕಾರಿ ನೀತಿ ಹಗರಣಕ್ಕೆ ಸಂಬಂಧಿಸಿದಂತೆ ದೆಹಲಿ ಸಿಎಂ ಅರವಿಂದ್ ಕೇಜ್ರಿವಾಲ್ ಅವರನ್ನು ಮಾರ್ಚ್‌ನಲ್ಲಿ ಇಡಿ ಬಂಧಿಸಿತ್ತು. ಅವರಿಗೆ ಸುಪ್ರೀಂ ಕೋರ್ಟ್ ಜೂನ್ 1 ರ ವರೆಗೆ ಮಧ್ಯಂತರ ಜಾಮೀನು ನೀಡಿದೆ.

Share This Article