Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಎಲ್ಲೇ ಇದ್ದರೂ ಕೂಡಲೇ ಸ್ವದೇಶಕ್ಕೆ ಬಾ, ನನ್ನ ತಾಳ್ಮೆ ಪರೀಕ್ಷಿಸಬೇಡ – ಪ್ರಜ್ವಲ್‌ಗೆ ಹೆಚ್‌ಡಿಡಿ ಸೂಚನೆ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Bengaluru City | ಎಲ್ಲೇ ಇದ್ದರೂ ಕೂಡಲೇ ಸ್ವದೇಶಕ್ಕೆ ಬಾ, ನನ್ನ ತಾಳ್ಮೆ ಪರೀಕ್ಷಿಸಬೇಡ – ಪ್ರಜ್ವಲ್‌ಗೆ ಹೆಚ್‌ಡಿಡಿ ಸೂಚನೆ

Bengaluru City

ಎಲ್ಲೇ ಇದ್ದರೂ ಕೂಡಲೇ ಸ್ವದೇಶಕ್ಕೆ ಬಾ, ನನ್ನ ತಾಳ್ಮೆ ಪರೀಕ್ಷಿಸಬೇಡ – ಪ್ರಜ್ವಲ್‌ಗೆ ಹೆಚ್‌ಡಿಡಿ ಸೂಚನೆ

Public TV
Last updated: May 23, 2024 4:39 pm
Public TV
Share
3 Min Read
HDDEVEGOWDA
SHARE

– ಕೂಡಲೇ ಪೊಲೀಸರ ಮುಂದೆ ಶರಣಾಗಿ ವಿಚಾರಣೆ ಎದುರಿಸು
– ಇದು ನಾನು ಆತನಿಗೆ ಕೊಡುತ್ತಿರುವ ಎಚ್ಚರಿಕೆ

ಬೆಂಗಳೂರು: ಪ್ರಜ್ವಲ್‌ ನೀನು ಎಲ್ಲಿಯೇ ಇದ್ದರೂ ಪೋಲಿಸರ ಮುಂದೆ ಶರಣಾಗಿ, ವಿಚಾರಣೆಯನ್ನು ಎದುರಿಸಬೇಕು ಎಂದು ಮಾಜಿ ಪ್ರಧಾನಿ ಹೆಚ್‌ಡಿ ದೇವೇಗೌಡ ಸೂಚನೆ ನೀಡಿದ್ದಾರೆ.

ಈ ಸಂಬಂಧ ಸಾಮಾಜಿಕ ಜಾಲತಾಣದಲ್ಲಿ ಎಚ್ಚರಿಕೆ ಪತ್ರವನ್ನು ಹಂಚಿಕೊಂಡಿರುವ ಅವರು, ಈ ಎಚ್ಚರಿಕೆಗೆ ತಲೆಬಾಗದಿದ್ದಲ್ಲಿ, ಅವನು ಮನೆಯವರ ಕಣ್ಣಲ್ಲಿ ಏಕಾಂಗಿಯಾಗುವುದರಲ್ಲಿ ಸಂದೇಹವಿಲ್ಲ. ನನ್ನ ಬಗ್ಗೆ ಅವನಿಗೆ ಏನಾದರೂ ಗೌರವವಿದ್ದಲ್ಲಿ ಕೂಡಲೇ ಹಿಂದಿರುಗಿ ಬರಬೇಕು ಎಂದು ಹೇಳಿದ್ದಾರೆ.

ಪತ್ರದಲ್ಲಿ ಏನಿದೆ?
ನಾನು ಮೇ 18ನೇ ತಾರೀಖಿನಂದು ದೇವಸ್ಥಾನಕ್ಕೆ ಹೊರಟಿದ್ದ ಸಂದರ್ಭದಲ್ಲಿ ಪ್ರಜ್ವಲ್ ರೇವಣ್ಣನ ಕುರಿತಾಗಿ ಮಾತನಾಡಿದ್ದೆ. ಆತ ನನಗೆ ನನ್ನ ಕುಟುಂಬಕ್ಕೆ, ನನ್ನ ಸಹೋದ್ಯೋಗಿಗಳಿಗೆ, ಸ್ನೇಹಿತರಿಗೆ ಮತ್ತು ನನ್ನ ಪಕ್ಷದ ಕಾರ್ಯಕರ್ತರಿಗೆ ತಂದೊಡ್ಡಿರುವ ಆಘಾತ ಮತ್ತು ನೋವಿನಿಂದ ಹೊರಬಂದು ಮಾತನಾಡಲು ಕೊಂಚ ಸಮಯ ಹಿಡಿಯಿತು.

 

I have issued a warning to @iPrajwalRevanna to return immediately from wherever he is and subject himself to the legal process. He should not test my patience any further. pic.twitter.com/kCMuNJOvAo

— H D Deve Gowda (@H_D_Devegowda) May 23, 2024

ನಾನು ಈಗಾಗಲೇ ಸ್ಪಷ್ಟಪಡಿಸಿರುವ ಹಾಗೆ ಕಾನೂನಿನ ಪ್ರಕಾರ ಅವನು ತಪ್ಪಿತಸ್ಥನಾದರೆ ಅವನಿಗೆ ಅತ್ಯಂತ ಕಠಿಣ ಶಿಕ್ಷೆ ವಿಧಿಸಬೇಕು. ನನ್ನ ಈ ನಿಲುವನ್ನು ನನ್ನ ಮಗ ಮತ್ತು ಕರ್ನಾಟಕದ ಮಾಜಿ ಮುಖ್ಯಮಂತ್ರಿ ಹೆಚ್.ಡಿ. ಕುಮಾರಸ್ವಾಮಿಯವರು ಹಗರಣ ಹೊರಬಿದ್ದ ಮೊದಲ ದಿನದಿಂದಲೇ ಪ್ರತಿಪಾದಿಸಿದ್ದಾರೆ.  ಇದನ್ನೂ ಓದಿ: ಆರೋಪಿ ಬಂಧನಕ್ಕೆ ಏಮ್ಸ್‌ ಒಳಗಡೆ ವಾಹನ ನುಗ್ಗಿಸಿದ ಪೊಲೀಸರು! 

ಈ ಕೆಲವು ವಾರಗಳಿಂದ ಜನರು ನನ್ನ ಮತ್ತು ನನ್ನ ಕುಟುಂಬದವರ ಕುರಿತಾಗಿ ಅತ್ಯಂತ ಅವಹೇಳನಕಾರಿಯಾಗಿ ಮಾತನಾಡಿದ್ದಾರೆ. ಇದೆಲ್ಲವೂ ನನಗೆ ತಿಳಿದಿದೆ. ನಾನು ಅವರು ಮಾತನಾಡುವುದನ್ನು ನಿಲ್ಲಿಸುವ ಪ್ರಯತ್ನ ಮಾಡುವುದಿಲ್ಲ. ನಾನು ಅವರನ್ನು ಟೀಕೆ ಮಾಡಲೂ ಹೋಗುವುದಿಲ್ಲ. ಈ ಹಗರಣದ ಎಲ್ಲಾ ಸತ್ಯಾಂಶಗಳು ಹೊರಬರುವವರೆಗೂ ಅವರು ತಾಳ್ಮೆಯಿಂದ ಕಾಯಬೇಕಿತ್ತು ಎಂದು ಅವರೊಂದಿಗೆ ವಾದಕ್ಕೆ ಇಳಿಯುವುದಿಲ್ಲ.

PRAJWAL REVANNA 4

ಪ್ರಜ್ವಲ್‌ನ ಚಟುವಟಿಕೆಗಳ ಬಗ್ಗೆ ನನಗೆ ಯಾವುದೇ ಮಾಹಿತಿ ಇರಲಿಲ್ಲ. ಅವನನ್ನು ರಕ್ಷಿಸುವ ಯಾವುದೇ ಇರಾದೆಯೂ ನನಗಿಲ್ಲ. ಅವನ ಈಗಿನ ಚಲನವಲನ ಮತ್ತು ಅವನ ವಿದೇಶಿ ಯಾತ್ರೆಯ ಬಗ್ಗೆ ನನಗೆ ಏನೂ ತಿಳಿದಿಲ್ಲ, ತಿಳಿದಿರಲಿಲ್ಲ. ನಾನು ನನ್ನ ಆತ್ಮಸಾಕ್ಷಿಗೆ ಮಾತ್ರ ಉತ್ತರಿಸಬಲ್ಲೆ. ನನಗೆ ದೇವರಲ್ಲಿ ನಂಬಿಕೆ ಇದೆ ಮತ್ತು ಆ ದೇವರಿಗೆ ಎಲ್ಲಾ ಸತ್ಯ ತಿಳಿದಿದೆ ಎಂದು ನಾನು ನಂಬಿದ್ದೇನೆ.

ನಾನು ಈಚಿನ ದಿನಗಳಲ್ಲಿ ನಡೆದಿರುವ ರಾಜಕೀಯ ಪಿತೂರಿಗಳು, ಚಿತಾವಣೆಗಳು, ಉತ್ತೇಕ್ಷೆಗಳು ಮತ್ತು ಮಿಥ್ಯಾರೋಪಗಳ ಬಗ್ಗೆ ಈಗ ವಿಶ್ಲೇಷಣೆ ಮಾಡಲು ಹೋಗುವುದಿಲ್ಲ. ಅವುಗಳನ್ನು ಮಾಡಿದವರು ದೇವರಿಗೆ ಉತ್ತರಿಸಬೇಕಾಗುತ್ತದೆ ಮತ್ತು ತಾವು ಎಸಗಿದ ಕೃತ್ಯಗಳಿಗೆ ಸೂಕ್ತ ಬೆಲೆ ತೆರಬೇಕಾಗುತ್ತದೆ ಎಂದು ನಂಬಿದ್ದೇನೆ. ನನ್ನ ಸತ್ಯ ಮತ್ತು ನೋವಿನ ಹೊರೆಯನ್ನು ಭಗವಂತನ ಪದತಳದಲ್ಲಿ ಇರಿಸಿದ್ದೇನೆ.

ಈ ಸಂದರ್ಭದಲ್ಲಿ ನಾನು ಈಗ ಒಂದು ಕೆಲಸವನ್ನಷ್ಟೇ ಮಾಡಬಲ್ಲೆ. ಅದೇನೆಂದರೆ, ಪ್ರಜ್ವಲ್‌ ಎಲ್ಲಿದ್ದರೂ ಬಂದು ಪೋಲಿಸರ ಮುಂದೆ ಶರಣಾಗಿ, ವಿಚಾರಣೆಯನ್ನು ಎದುರಿಸಬೇಕು. ಇದನ್ನು ನಾನು ಯಾವುದೇ ಮುಲಾಜು, ಮರ್ಜಿಯಿಲ್ಲದೆ ಹೇಳುತ್ತಿದ್ದೇನೆ. ಇದು ನಾನು ಅವನಿಗೆ ಕೊಡುತ್ತಿರುವ ಎಚ್ಚರಿಕೆ ಎಂದು ಕೂಡ ತಿಳಿಯಬೇಕು. ಅವನು ಈ ಎಚ್ಚರಿಕೆಗೆ ಮನ್ನಣೆ ಕೊಡದಿದ್ದಲ್ಲಿ ಅವನು ನನ್ನ ಮತ್ತು ಕುಟುಂಬದವರೆಲ್ಲರ ಕೋಪವನ್ನೂ ಎದುರಿಸಬೇಕಾಗುತ್ತದೆ. ಅವನು ಎಸಗಿದ್ದಾನೆ ಎನ್ನಲಾದ ತಪ್ಪುಗಳನ್ನು ತೀರ್ಮಾನಿಸಲು ಕಾನೂನು ಇದೆ. ಆದರೆ ಈ ಎಚ್ಚರಿಕೆಗೆ ಅವನು ತಲೆಬಾಗದಿದ್ದಲ್ಲಿ, ಅವನು ಮನೆಯವರ ಕಣ್ಣಲ್ಲಿ ಏಕಾಂಗಿಯಾಗುವುದರಲ್ಲಿ ಸಂದೇಹವಿಲ್ಲ. ನನ್ನ ಬಗ್ಗೆ ಅವನಿಗೆ ಏನಾದರೂ ಗೌರವವಿದ್ದಲ್ಲಿ ಅವನು ಕೂಡಲೇ ಹಿಂದಿರುಗಿ ಬರಬೇಕು.

ನಾನಾಗಲಿ, ನನ್ನ ಕುಟುಂಬದವರಾಗಲಿ ಈ ವಿಚಾರಣೆಯಲ್ಲಿ ಹಸ್ತಕ್ಷೇಪ ಮಾಡುವುದಿಲ್ಲ ಎಂದು ಭರವಸೆ ಕೊಡುತ್ತೇನೆ. ಇದರಲ್ಲಿ ಯಾವುದೇ ಭಾವನೆಗೆ ಸಿಲುಕದೆ, ಅವನು ಎಸಗಿದ್ದಾನೆ ಎನ್ನಲಾದ ಕೃತ್ಯಗಳು ಮತ್ತು ತಪ್ಪುಗಳಿಂದ ನೊಂದಿರುವ, ಅನ್ಯಾಯಕ್ಕೆ ಒಳಗಾಗಿರುವ ಎಲ್ಲರಿಗೂ ನ್ಯಾಯ ಸಿಗುವುದಷ್ಟೇ ನನಗೆ ಮುಖ್ಯ. ಜನರ ವಿಶ್ವಾಸವನ್ನು ಮರಳಿ ಪಡೆಯುವುದಷ್ಟೇ ನನ್ನ ಗುರಿ. ಜನರು ಆರು ದಶಕಗಳ ಕಾಲದ ನನ್ನ ರಾಜಕೀಯ ಜೀವನದುದ್ದಕ್ಕೂ ನನ್ನ ಜೊತೆಗೆ ನಿಂತಿದ್ದಾರೆ. ಅವರಿಗೆ ನಾನು ಸದಾ ಋಣಿ ಮತ್ತು ನಾನು ಬದುಕಿರುವವರೆಗೂ ಅವರ ಹಿತದ ವಿರುದ್ಧ ನಡೆದುಕೊಳ್ಳುವುದಿಲ್ಲ.

TAGGED:HD Devegowdapoliceprajwal revannaಜರ್ಮನಿಪೊಲೀಸ್ಪ್ರಜ್ವಲ್ ರೇವಣ್ಣಹೆಚ್‍ಡಿ ದೇವೇಗೌಡ
Share This Article
Facebook Whatsapp Whatsapp Telegram

Cinema news

ChetanKumar Ahimsa
ರಾಜ್‌ಕುಮಾರ್‌ ಸಮಾಧಿ ಬಗ್ಗೆ ವಿವಾದಾತ್ಮಕ ಪೋಸ್ಟ್‌ – ಅಭಿಮಾನಿಗಳು ಮುತ್ತಿಗೆ ಹಾಕುತ್ತಿದ್ದಂತೆ ಕ್ಷಮೆಯಾಚಿಸಿದ ಚೇತನ್‌
Cinema Karnataka Latest Top Stories
chetan 13 5
ರಾಜ್‌ಕುಮಾರ್‌ ಸಮಾಧಿಗೆ 2.5 ಎಕರೆ ಜಾಗ ನೀಡಿದ್ದು ಸರಿಯೇ? – ನಟ‌ ಚೇತನ್ ವಿರುದ್ಧ ಡಾಕ್ಟರ್ ರಾಜ್‌ ಅಭಿಮಾನಿಗಳಿಂದ ದೂರು
Bengaluru City Cinema Latest Sandalwood Top Stories
Akshay Kumar 1
ನಟ ಅಕ್ಷಯ್ ಕುಮಾರ್ ಅಪ್ರಾಪ್ತ ಪುತ್ರಿಯ ಬೆತ್ತಲೆ ಫೋಟೋಗೆ ಬೇಡಿಕೆಯಿಟ್ಟಿದ್ದ ವ್ಯಕ್ತಿ ಅರೆಸ್ಟ್
Bollywood Cinema Crime Latest Top Stories
ranveer singh 2
ದೈವಕ್ಕೆ ಅಪಮಾನ – ಇನ್ಮುಂದೆ ಧಾರ್ಮಿಕ ಭಾವನೆಗಳಿಗೆ ಧಕ್ಕೆ ತರಲ್ಲ: ಕ್ಷಮೆಯಾಚಿಸಿದ ರಣವೀರ್ ಸಿಂಗ್
Cinema Court Latest South cinema Top Stories

You Might Also Like

Namma Metro Network Problem
Bengaluru City

ನಮ್ಮ ಮೆಟ್ರೋ ನಿಲ್ದಾಣಗಳಲ್ಲಿ ನೆಟ್‌ವರ್ಕ್ ಸಮಸ್ಯೆ – ಆನ್‌ಲೈನ್ ಪೇಮೆಂಟ್, ಬುಕ್ಕಿಂಗ್‌ಗೆ ಭಾರೀ ಪ್ರಾಬ್ಲಂ

Public TV
By Public TV
22 minutes ago
Poultry industry Summer
Bellary

ಬಿಸಿಲ ಬೇಗೆಗೆ ಕಾದ ಕೆಂಡವಾದ ಕರ್ನಾಟಕ: ಸಂಕಷ್ಟದಲ್ಲಿ ಕುಕ್ಕುಟೋದ್ಯಮ, ಮೀನುಗಳ ಮಾರಣಹೋಮ

Public TV
By Public TV
30 minutes ago
Iran US
Latest

ಇರಾನ್-ಅಮೆರಿಕ ಕದನ ವಿರಾಮ ಆಟ; ಮಧ್ಯಸ್ಥಗಾರ ಪಾಕ್‌ಗೆ ಲಾಭವಿದ್ಯಾ?- ಭಾರತ ಇದನ್ನ ಹೇಗೆ ನೋಡ್ತಿದೆ?

Public TV
By Public TV
7 hours ago
Rinku Singh Sunil Narine
Cricket

IPL: ಸೂಪರ್‌ ಓವರ್‌ನಲ್ಲಿ ಮಿಂಚಿದ ನರೈನ್‌, ರಿಂಕು – ಲಕ್ನೋ ವಿರುದ್ಧ ಕೋಲ್ಕತ್ತಾಗೆ ‘ಸೂಪರ್’ ಜಯ

Public TV
By Public TV
8 hours ago
Johar Valley
Latest

ಹಿಮಾಲಯದ ಮಡಿಲಲ್ಲಿ ಮುತ್ತಿನಂತೆ ಮಿನುಗುತ್ತಿದೆ ಈ ತಾಣ – ಬೇಸಿಗೆಯ ಕನಸಿನ ಯಾನಕ್ಕೆ ಜೋಹಾರ್ ಕಣಿವೆ ಬೆಸ್ಟ್‌

Public TV
By Public TV
8 hours ago
Shots Heard During Press Dinner At White House Donald Tump Evacuated Correspondents Dinner
Latest

ಟ್ರಂಪ್, ಸರ್ಕಾರದ ಮುಖ್ಯ ಅಧಿಕಾರಿಗಳೇ ಹಂತಕನ ಟಾರ್ಗೆಟ್ – ತನಿಖೆಯಲ್ಲಿ ಸ್ಫೋಟಕ ಮಾಹಿತಿ ಬಯಲು‌

Public TV
By Public TV
9 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?