ಬೆಂಗಳೂರು: ಕೇರಳದಲ್ಲಿ ಈಗಾಗಲೇ ಮುಂಗಾರು ಮಳೆ ಪ್ರಾರಂಭಗೊಂಡ ಹಿನ್ನೆಲೆ ಇಂದಿನಿಂದ ಕರ್ನಾಟಕದಲ್ಲೂ ಮಳೆಯ ಅಲರ್ಟ್ ನೀಡಿದೆ.
ಈ ಹಿನ್ನೆಲೆ ರಾಜ್ಯದ ಎಂಟು ಜಿಲ್ಲೆಗಳಲ್ಲಿ ಭಾರೀ ಮಳೆಯ ನಿರೀಕ್ಷೆ ಇದೆ. ಬೆಂಗಳೂರು, ಬೆಂಗಳೂರು ಗ್ರಾಮಾಂತರ, ರಾಮನಗರ, ಶಿವಮೊಗ್ಗ, ತುಮಕೂರು, ಉಡುಪಿ, ದಕ್ಷಿಣ ಕನ್ನಡ ಹಾಗೂ ಉತ್ತರ ಕನ್ನಡದಲ್ಲಿ ಭಾರೀ ಮಳೆಯಾಗುವ ಸಾಧ್ಯತೆಯಿದೆ.
ಇಂದಿನಿಂದ ಐದು ದಿನಗಳ ಕಾಲ ಭಾರೀ ಪ್ರಮಾಣದಲ್ಲಿ ಬಿರುಗಾಳಿ ಸಹಿತ ಮಳೆಯ ಎಚ್ಚರಿಕೆ ನೀಡಿದ್ದು, ಮುಂಗಾರು ಪ್ರವೇಶದಿಂದ ಕ್ರಮೇಣ ಧಗೆಯ ತಾಪಮಾನ ಇಳಿಕೆಯಾಗುವ ಸಂಭವವಿದೆ.
ಬೆಂಗಳೂರಿನಲ್ಲಿ ಗರಿಷ್ಠ ತಾಪಮಾನ 30 ಡಿಗ್ರಿ ಸೆಲ್ಸಿಯಸ್ ಇರಲಿದ್ದು, ಕನಿಷ್ಠ ತಾಪಮಾನ 21 ಡಿಗ್ರಿ ಸೆಲ್ಸಿಯಸ್ ದಾಖಲಾಗಲಿದೆ. ಮಡಿಕೇರಿಯಲ್ಲಿ ಗರಿಷ್ಠ ತಾಪಮಾನ 26 ಡಿಗ್ರಿ ಸೆಲ್ಸಿಯಸ್ ಕನಿಷ್ಠ ತಾಪಮಾನ 18 ಡಿಗ್ರಿ ಸೆಲ್ಸಿಯಸ್ ದಾಖಲಾಗಲಿದೆ.
ನಗರಗಳ ಹವಾಮಾನ ವರದಿ:
ಬೆಂಗಳೂರು: 30-21
ಮಂಗಳೂರು: 31-26
ಶಿವಮೊಗ್ಗ: 32-23
ಬೆಳಗಾವಿ: 33-23
ಮೈಸೂರು: 32-22
ಮಂಡ್ಯ: 33-22
ಮಡಿಕೇರಿ: 26-18
ರಾಮನಗರ: 32-22
ಹಾಸನ: 28-21
ಚಾಮರಾಜನಗರ: 32-22
ಚಿಕ್ಕಬಳ್ಳಾಪುರ: 32-22
ಕೋಲಾರ: 32-22
ತುಮಕೂರು: 32-22
ಉಡುಪಿ: 31-26
ಕಾರವಾರ: 32-27
ಚಿಕ್ಕಮಗಳೂರು: 28-20
ದಾವಣಗೆರೆ: 34-23
ಹುಬ್ಬಳ್ಳಿ: 34-23
ಚಿತ್ರದುರ್ಗ: 33-22
ಹಾವೇರಿ: 34-23
ಬಳ್ಳಾರಿ: 27-25
ಗದಗ: 35-23
ಕೊಪ್ಪಳ: 36-24
ರಾಯಚೂರು: 39-26
ಯಾದಗಿರಿ: 38-26
ವಿಜಯಪುರ: 37-25
ಬೀದರ್: 37-25
ಕಲಬುರಗಿ: 38-27
ಬಾಗಲಕೋಟೆ: 37-25