ಬೆಂಗಳೂರು: ಅರಬ್ಬಿ ಸಮುದ್ರದ ಆಗ್ನೇಯ ಭಾಗದಲ್ಲಿ ಮೇಲ್ಮೈ ಸುಳಿಗಾಳಿ ಹಿನ್ನೆಲೆ ಇಂದಿನಿಂದ ರಾಜಧಾನಿಗೆ ಮುಂಗಾರು ಪ್ರವೇಶವಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.
ರಾಜ್ಯದಲ್ಲಿ ಇಂದಿನಿಂದ ಐದು ದಿನಗಳ ಕಾಲ ಭಾರೀ ಮಳೆಯಾಗುವ ಸಾಧ್ಯತೆ ಇದೆ. ಈ ಬಾರಿ ಅವಧಿಗೂ ಮೊದಲೇ ಮುಂಗಾರು ಪ್ರವೇಶ ಮಾಡುತ್ತಿದೆ. ಕಳೆದ ವರ್ಷ ಜೂನ್ 15ರಿಂದ ಮುಂಗಾರು ಪ್ರವೇಶವಾಗಿತ್ತು. ಆದರೆ ಈ ವರ್ಷ 15 ದಿನಗಳಿಗೂ ಮೊದಲೇ ಮುಂಗಾರು ಪ್ರವೇಶವಾಗುತ್ತಿದೆ. ಹೀಗಾಗಿ ದಕ್ಷಿಣ ಒಳನಾಡು, ಉತ್ತರ ಒಳನಾಡು, ಕರಾವಳಿ ಭಾಗಕ್ಕೆ ಹವಾಮಾನ ಇಲಾಖೆ ಅಲರ್ಟ್ ನೀಡಿದೆ.
ಬೆಂಗಳೂರಿಗೆ ಇಂದಿನಿಂದ ಐದು ದಿನಗಳ ಕಾಲ ಮಳೆಯಾಗುವ ಸಂಭವವಿದ್ದು, ಗುಡುಗು, ಮಿಂಚು ಸಹಿತ ಮಳೆಯಾಗುವ ಸಾಧ್ಯತೆ ಇದೆ. ಅಲ್ಲದೇ ಈ ಬಾರಿ ಉತ್ತಮ ಮಳೆಯಾಗುವ ಮುನ್ಸೂಚನೆಯನ್ನೂ ಹವಾಮಾನ ಇಲಾಖೆ ನೀಡಿದೆ.
ಬೆಂಗಳೂರಿನಲ್ಲಿ ಗರಿಷ್ಠ ತಾಪಮಾನ 28 ಡಿಗ್ರಿ ಸೆಲ್ಸಿಯಸ್ ಇರಲಿದ್ದು, ಕನಿಷ್ಠ ತಾಪಮಾನ 22 ಡಿಗ್ರಿ ಸೆಲ್ಸಿಯಸ್ ದಾಖಲಾಗಲಿದೆ. ಮಡಿಕೇರಿಯಲ್ಲಿ ಗರಿಷ್ಠ ತಾಪಮಾನ 25 ಡಿಗ್ರಿ ಸೆಲ್ಸಿಯಸ್ ಕನಿಷ್ಠ ತಾಪಮಾನ 19 ಡಿಗ್ರಿ ಸೆಲ್ಸಿಯಸ್ ದಾಖಲಾಗಲಿದೆ.
ನಗರಗಳ ಹವಾಮಾನ ವರದಿ:
ಬೆಂಗಳೂರು: 28-22
ಮಂಗಳೂರು: 30-26
ಶಿವಮೊಗ್ಗ: 31-23
ಬೆಳಗಾವಿ: 31-23
ಮೈಸೂರು: 30-22
ಮಂಡ್ಯ: 31-23
ಮಡಿಕೇರಿ: 25-19
ರಾಮನಗರ: 30-23
ಹಾಸನ: 28-21
ಚಾಮರಾಜನಗರ: 29-22
ಚಿಕ್ಕಬಳ್ಳಾಪುರ: 29-22
ಕೋಲಾರ: 30-23
ತುಮಕೂರು: 29-22
ಉಡುಪಿ: 31-26
ಕಾರವಾರ: 31-27
ಚಿಕ್ಕಮಗಳೂರು: 27-21
ದಾವಣಗೆರೆ: 33-24
ಹುಬ್ಬಳ್ಳಿ: 32-24
ಚಿತ್ರದುರ್ಗ: 31-23
ಹಾವೇರಿ: 32-24
ಬಳ್ಳಾರಿ: 34-26
ಗದಗ: 33-24
ಕೊಪ್ಪಳ: 34-25
ರಾಯಚೂರು: 36-27
ಯಾದಗಿರಿ: 36-27
ವಿಜಯಪುರ: 34-26
ಬೀದರ್: 35-26
ಕಲಬುರಗಿ: 36-27
ಬಾಗಲಕೋಟೆ: 35-26