Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ವಾಲ್ಮೀಕಿ ನಿಗಮ ಅಕ್ರಮ – ಸಿಎಂ ರಾಜೀನಾಮೆಗೆ ಎನ್.ರವಿಕುಮಾರ್ ಒತ್ತಾಯ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Bengaluru City | ವಾಲ್ಮೀಕಿ ನಿಗಮ ಅಕ್ರಮ – ಸಿಎಂ ರಾಜೀನಾಮೆಗೆ ಎನ್.ರವಿಕುಮಾರ್ ಒತ್ತಾಯ

Bengaluru City

ವಾಲ್ಮೀಕಿ ನಿಗಮ ಅಕ್ರಮ – ಸಿಎಂ ರಾಜೀನಾಮೆಗೆ ಎನ್.ರವಿಕುಮಾರ್ ಒತ್ತಾಯ

Public TV
Last updated: June 2, 2024 5:42 pm
Public TV
Share
3 Min Read
N. Ravikumar
SHARE

ಬೆಂಗಳೂರು: ವಾಲ್ಮೀಕಿ ನಿಗಮ ಅಕ್ರಮದ (Valmiki Corporation Scam) ವಿಚಾರವಾಗಿ, ಮುಖ್ಯಮಂತ್ರಿ ಸಿದ್ದರಾಮಯ್ಯನವರಿಗೆ (Siddaramaiah) ಘನತೆ, ಗೌರವ ಹಾಗೂ ನೈತಿಕತೆ ಇದ್ದರೆ ಮೊದಲು ಸಿಎಂ ಸ್ಥಾನಕ್ಕೆ ರಾಜೀನಾಮೆ ನೀಡಬೇಕು ಎಂದು ವಿಧಾನಪರಿಷತ್‍ನ ವಿಪಕ್ಷದ ಮುಖ್ಯ ಸಚೇತಕ ಎನ್.ರವಿಕುಮಾರ್ (N.Ravikumar) ಅವರು ಆಗ್ರಹಿಸಿದ್ದಾರೆ.

ಮಲ್ಲೇಶ್ವರದ ಬಿಜೆಪಿ (BJP) ಕಚೇರಿಯಲ್ಲಿ ಪತ್ರಿಕಾಗೋಷ್ಠಿ ನಡೆಸಿದ ಅವರು, ಬ್ಯಾಂಕ್ ಆಫ್ ಬರೋಡದಿಂದ 144 ಕೋಟಿ ರೂ. ಓವರ್ ಡ್ರಾಫ್ಟ್ (ಸಾಲ) ಪಡೆಯಲಾಗಿದೆ. ವಾಲ್ಮೀಕಿ ಅಭಿವೃದ್ಧಿ ನಿಗಮದ ಹಗರಣ ಸಂಬಂಧ ವಿವಿಧ ಬ್ಯಾಂಕ್ ಖಾತೆಗಳಿಗೆ ಹಣ ವರ್ಗಾವಣೆಗೆ ಇದನ್ನು ಪಡೆಯಲಾಯಿತೇ? ಆ ಕಂಪನಿಗಳಿಗೆ ಚುನಾವಣೆ ವೇಳೆ ಯಾಕೆ ಹಣ ಹಾಕಿದ್ದೀರಿ? ಆ ಕಂಪನಿಗಳ ಮಾಲೀಕರು ಯಾರು? ಆ ಕಂಪನಿಗಳಿಗೆ, ಡಿ.ಕೆ ಶಿವಕುಮಾರ್ (D.K Shivakumar), ನಾಗೇಂದ್ರರಿಗೆ ಹಾಗೂ ಸಿದ್ದರಾಮಯ್ಯ ಅವರಿಗೆ ಏನು ಸಂಬಂಧ ಎಂದು ಅವರು ಪ್ರಶ್ನಿಸಿದ್ದಾರೆ. ಇದನ್ನೂ ಓದಿ: ವಿಧಾನ ಪರಿಷತ್ ಚುನಾವಣೆ – ಸಿಎಂ ಪುತ್ರ ಯತೀಂದ್ರ ಸಿದ್ದರಾಮಯ್ಯ ಸೇರಿ 8 ಮಂದಿಗೆ ಟಿಕೆಟ್‌

valmiki corporation superintendent shivamogga

ಈ ಓವರ್ ಡ್ರಾಫ್ಟ್ ಪಡೆಯಲು ಕ್ಯಾಬಿನೆಟ್ ನಿರ್ಣಯ ಏಕೆ ಮಾಡಿಲ್ಲ? ಇದರೊಳಗೆ ನಾಗೇಂದ್ರ ಮಾತ್ರವಲ್ಲದೆ ಅನೇಕ ಅಧಿಕಾರಿಗಳಿದ್ದಾರೆ. ತೆಲಂಗಾಣದಲ್ಲಿ ಚುನಾವಣೆಗೆ ನಿಂತ ಅನೇಕ ಅಭ್ಯರ್ಥಿಗಳೂ ಇದರಲ್ಲಿದ್ದಾರೆ. ಹಣ ಕೊಟ್ಟ ಅನೇಕ ಮಂತ್ರಿಗಳೂ ಕರ್ನಾಟಕದಲ್ಲಿದ್ದಾರೆ. ಇದೊಂದು ಅಂತರರಾಜ್ಯ ಭ್ರಷ್ಟಾಚಾರ. ಆದ್ದರಿಂದ ಸಿಬಿಐ ತನಿಖೆ ನಡೆಸಬೇಕಿದೆ ಎಂದು ಅವರು ಆಗ್ರಹಿಸಿದ್ದಾರೆ.

ಪರಿಶಿಷ್ಟ ಪಂಗಡದ ಜನರ ಅಭಿವೃದ್ಧಿಗಾಗಿ ಇರುವ ವಾಲ್ಮೀಕಿ ಅಭಿವೃದ್ಧಿ ನಿಗಮವು ಸಿದ್ದರಾಮಯ್ಯನವರು ಮುಖ್ಯಮಂತ್ರಿಯಾದ ಬಳಿಕ ವ್ಯಾಪಾರ ಮಾಡುವ ನಿಗಮವಾಗಿ ಪರಿವರ್ತನೆಯಾಗಿದೆ. ನಿಗಮವು ಐಟಿ ಕಂಪನಿಗೆ ಸಾಲ ಕೊಡುವ ಕೆಲಸ ಮಾಡುವುದಿಲ್ಲ. ಆದರೆ, ಈ ನಿಗಮವು 6+9 ಕಂಪನಿಗಳಿಗೆ ಹಣ ಕೊಟ್ಟಿದೆ. ಆ ಕಂಪನಿಗಳು ಯಾವುವು? ಅವರ ಟ್ರ್ಯಾಕ್ ರೆಕಾರ್ಡ್ ಏನು? ಅವರಿಗೆ ಯಾಕೆ ಹಣ ಕೊಟ್ಟಿದ್ದೀರಿ ಎಂದು ಸಿಎಂಗೆ ಪ್ರಶ್ನಿಸಿದ್ದಾರೆ.

ಸಾಲ ಕೊಡಲು ಅನುಮತಿ ಕೊಟ್ಟವರು ಯಾರು? ಈ ಬಗ್ಗೆ ಸಚಿವ ಸಂಪುಟದಲ್ಲಿ ನಿರ್ಧಾರ ಆಗಿತ್ತೇ? ಸಿಎಂ, ಡಿಸಿಎಂಗೆ ಗೊತ್ತಿದ್ದೇ ಇದು ನಡೆದಿದೆ. ಅದನ್ನು ಮುಚ್ಚಿಡುತ್ತಿದ್ದಾರೆ. ಪ್ರಾಮಾಣಿಕ ಅಧಿಕಾರಿ ಚಂದ್ರಶೇಖರ್ ಅವರು ಆತ್ಮಹತ್ಯೆ ಮಾಡಿಕೊಂಡ ಬಳಿಕ ಇದು ಹೊರಕ್ಕೆ ಬಂದಿದೆ. ಈ ಸರ್ಕಾರ ಒಬ್ಬ ಪ್ರಾಮಾಣಿಕ ಅಧಿಕಾರಿಯನ್ನು ಬಲಿ ಪಡೆದಿದೆ ಎಂದು ಅವರು ಕಟುವಾಗಿ ಟೀಕಿಸಿದ್ದಾರೆ.

ಉಗ್ರಗಾಮಿಗಳನ್ನು ಸಾಕಿ ಬೆಳೆಸುವ ಸರ್ಕಾರ
ಕಳ್ಳರು, ಖದೀಮರು, ಭಯೋತ್ಪಾದಕರು, ಉಗ್ರಗಾಮಿಗಳನ್ನು ಸಾಕಿ ಬೆಳೆಸುವ ಸರ್ಕಾರ ಇದು. ಪ್ರಾಮಾಣಿಕ ಅಧಿಕಾರಿ- ಸಿಬ್ಬಂದಿಗೆ ಸಹಾಯ ಮಾಡುವ ಸರ್ಕಾರ ಇದಲ್ಲ. ಇದು ಗೂಂಡಾಗಳ, ಭಯೋತ್ಪಾದಕರ ಕೇಸು ರದ್ದು ಮಾಡುವ ಸರ್ಕಾರ. ಕಳ್ಳ ಖದೀಮರ ಸರಕಾರ ಎಂದು ಅವರು ಕಿಡಿಕಾರಿದ್ದಾರೆ.

ಕಾಂಗ್ರೆಸ್ಸಿನ ಅನುಕೂಲ ಸಿಂಧು ನೀತಿ
ಭಾರತದಲ್ಲಿ ನಡೆದ ಚುನಾವಣೆಗಳ ಬಗ್ಗೆ ಚುನಾವಣೋತ್ತರ ಸಮೀಕ್ಷೆ ಫಲಿತಾಂಶ ಶನಿವಾರ ಪ್ರಕಟವಾಗಿದೆ. ಬಿಜೆಪಿ ನೇತೃತ್ವದ ಎನ್‍ಡಿಎಗೆ ಸ್ಪಷ್ಟ ಬಹುಮತ ಬರಲಿದ್ದು, 350 ಸೀಟು ದಾಟಿ 401 ಸೀಟುಗಳವರೆಗೆ ಎನ್‍ಡಿಎ ಪಡೆಯಬಹುದೆಂದು ತಿಳಿಸಲಾಗಿದೆ. ದೇಶದ ಹೆಮ್ಮೆಯ ಪ್ರಧಾನಿ ನರೇಂದ್ರ ಮೋದಿಜೀ ಅವರನ್ನು ಮತ್ತೊಮ್ಮೆ ಪ್ರಧಾನಮಂತ್ರಿಯನ್ನಾಗಿ ಮಾಡಲು ಜನರು ಮುಂದಾಗಿದ್ದಾರೆ. ಎಲ್ಲಾ ರಾಜ್ಯಗಳಲ್ಲಿ ಬಿಜೆಪಿ- ಎನ್‍ಡಿಎ ಗೆಲ್ಲುವ ಮುನ್ಸೂಚನೆ ಲಭಿಸಿದೆ. ಇದು ದೇಶದ 140 ಕೋಟಿ ಜನರಿಗೆ ಹೆಮ್ಮೆಯ ವಿಷಯ. ಎಕ್ಸಿಟ್ ಪೋಲ್ ನಂಬುವುದಿಲ್ಲ ಎಂಬ ಅನುಕೂಲ ಸಿಂಧು ನೀತಿಯನ್ನು ಕಾಂಗ್ರೆಸ್ ಹೊಂದಿದೆ. ಹಿಂದೆ ರಾಹುಲ್ ಗಾಂಧಿ, ಪ್ರಿಯಾಂಕ ಗಾಂಧಿ, ಸಿದ್ದರಾಮಯ್ಯ, ಡಿ.ಕೆ ಶಿವಕುಮಾರ್ ಅವರು ಕರ್ನಾಟಕದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬರಲಿದೆ, ಬಿಜೆಪಿ ಸೋಲಲಿದೆ ಎಂದು ಎಕ್ಸಿಟ್ ಪೋಲ್ ಉಲ್ಲೇಖಿಸಿ ಹೇಳಿದ್ದರು ಎಂದು ಅವರು ಟೀಕಿಸಿದ್ದಾರೆ.

ಲೋಕಸಭಾ ಚುನಾವಣೆಯ ಹೆಮ್ಮೆಯ ಫಲಿತಾಂಶಕ್ಕೆ ಪ್ರಧಾನಿ ನರೇಂದ್ರ ಮೋದಿ, ಅಮಿತ್ ಶಾ, ನಡ್ಡಾ, ಬಿಜೆಪಿಯ ಕೋಟ್ಯಂತರ ಕಾರ್ಯಕರ್ತರೇ ಕಾರಣ ಎಂದರು. ಇದನ್ನೂ ಓದಿ: ನಾನು ಹಿಂಗೆಲ್ಲ ಬದುಕಿಲ್ಲ, ಮಲಗಲು ಒಳ್ಳೆ ರೂಮ್ ಕೊಡಿ: ಅಧಿಕಾರಿಗಳೊಂದಿಗೆ ಪ್ರಜ್ವಲ್ ಕಿರಿಕ್!

Share This Article
Facebook Whatsapp Whatsapp Telegram

Cinema news

Varanasi movie
ರಾಜಮೌಳಿ ನಿರ್ದೇಶನದ ‘ವಾರಣಾಸಿ’ ರಿಲೀಸ್‌ ಡೇಟ್‌ ಔಟ್‌
Cinema Latest South cinema Top Stories
Bengaluru 17th Film Festival
17ನೇ ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವಕ್ಕೆ ಸಿಎಂ ಚಾಲನೆ
Bengaluru City Cinema Districts Karnataka Latest Sandalwood Top Stories
PRAJWAL DEVARAJ 2
ಸಹೋದರನ ಚಿತ್ರಕ್ಕೆ ನಿರ್ಮಾಪಕನಾದ ಪ್ರಜ್ವಲ್ ದೇವರಾಜ್ – ಚಿತ್ರದ ಫಸ್ಟ್ ಲುಕ್ ಲಾಂಚ್
Cinema Latest Sandalwood Top Stories
actor mayur patel car accident
ಕುಡಿದು ವಾಹನ ಚಲಾಯಿಸಿ ಕಾರುಗಳಿಗೆ ಸರಣಿ ಅಪಘಾತ; ನಟ ಮಯೂರ್ ಪಟೇಲ್ ವಿರುದ್ಧ FIR
Cinema Crime Latest Main Post Sandalwood

You Might Also Like

CJ Roy
Bengaluru City

ಐಟಿ ದಾಳಿಗೆ ಹೆದರಿ ಶೂಟ್ ಮಾಡಿಕೊಂಡು ಕಾನ್ಫಿಡೆಂಟ್ ಗ್ರೂಪ್ ಮುಖ್ಯಸ್ಥ ಸಿಜೆ ರಾಯ್ ಆತ್ಮಹತ್ಯೆ!

Public TV
By Public TV
17 minutes ago
Rajeev Gowda 1
Chikkaballapur

ಶಿಡ್ಲಘಟ್ಟ ಕೇಸ್‌ – ಆರೋಪಿ ರಾಜೀವ್‌ ಗೌಡಗೆ ಜಾಮೀನು

Public TV
By Public TV
34 minutes ago
Plane Crash
Latest

ಇತಿಹಾಸ ಕಂಡ ಘೋರ ವಿಮಾನ ದುರಂತಗಳು – ಎಂದೂ ಮಾಸದ ಗಾಯ!

Public TV
By Public TV
1 hour ago
Hotel
Bengaluru City

ಹರಿಯಾಣ | ಹೋಟೆಲ್‌ನ ಬಾತ್‌ರೂಮ್‌ನಲ್ಲಿ ಬೆಂಗಳೂರಿನ ಟೆಕ್ಕಿ ಶವವಾಗಿ ಪತ್ತೆ

Public TV
By Public TV
1 hour ago
MLA Vishwanath
Bengaluru City

ಬೆಂಗಳೂರಲ್ಲಿ ಭೂಕಬಳಿಕೆ; ಬಿಜೆಪಿ ಮಾಜಿ ಎಂಎಲ್‌ಸಿಗೆ 1 ವರ್ಷ ಜೈಲು ಶಿಕ್ಷೆ

Public TV
By Public TV
2 hours ago
gold silver 1
Latest

ಚಿನ್ನ – ಬೆಳ್ಳಿ ಬೆಲೆ ದಿಢೀರ್‌ ಕುಸಿತ; ಒಂದೇ ದಿನದಲ್ಲಿ ಬೆಳ್ಳಿ 15%, ಚಿನ್ನ 10% ಬೆಲೆ ಕುಸಿತ

Public TV
By Public TV
2 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?