ಉತ್ತರಾಖಂಡ ದುರಂತ- ಬದುಕುಳಿದ ಚಾರಣಿಗರು ಇಂದು ರಾತ್ರಿ ಬೆಂಗ್ಳೂರಿಗೆ ವಾಪಸ್

Public TV
1 Min Read
KRISHNA BYREGOWDA

ಬೆಂಗಳೂರು: ಉತ್ತರಾಖಂಡ (Uttarakhand) ಸಹಸ್ತ್ರ ತಾಲ್ ಶಿಖರದ ಟ್ರೆಕ್ಕಿಂಗ್‍ನಲ್ಲಿ  ಸಿಲುಕಿ ಬದುಕುಳಿದ ಚಾರಣಿಗರು ಇಂದು ರಾತ್ರಿ ಬೆಂಗಳೂರಿಗೆ ವಾಪಸ್ಸಾಗಲಿದ್ದಾರೆ ಎಂದು ಸಚಿವ ಕೃಷ್ಣಬೈರೇಗೌಡ (Krishna Byre Gowda)  ಮಾಹಿತಿ ನೀಡಿದ್ದಾರೆ.

ಈ ಸಂಬಂಧ ಎಕ್ಸ್ ನಲ್ಲಿ ಬರೆದುಕೊಂಡಿರುವ ಅವರು, ಇಂದು ಸಂಜೆ 5.50 ರ ವಿಮಾನದಲ್ಲಿ ಬದುಕುಳಿದ ಎಲ್ಲಾ 13 ಮಂದಿ ಚಾರಣಿಗರು ಬೆಂಗಳೂರಿಗೆ ಹಿಂದಿರುಗಲು ಟಿಕೆಟ್ ಕಾಯ್ದಿರಿಸಲಾಗಿದೆ ಎಂದಿದ್ದಾರೆ. ಇದನ್ನೂ ಓದಿ: ಉತ್ತರಾಖಂಡದಲ್ಲಿ ಸಾವನ್ನಪ್ಪಿದ 9 ಚಾರಣಿಗರ ಮೃತದೇಹಗಳು ಚಾರ್ಟರ್ ಫ್ಲೈಟ್ ಮೂಲಕ ಬೆಂಗಳೂರಿಗೆ: ಕೃಷ್ಣಬೈರೇಗೌಡ

ಇನ್ನು ಮೃತ 9 ಜನ ಚಾರಣಿಗರ ದೇಹಗಳನ್ನು ಎಂಬಾಮಿಂಗ್‍ಗಾಗಿ ವಿಮಾನ ನಿಲ್ದಾಣದಿಂದ ಆಸ್ಪತ್ರೆಗೆ ಸ್ಥಳಾಂತರಿಸಿದ್ದೇವೆ. ಎಂಬಾಮಿಂಗ್ ನಂತರ ಮೃತದೇಹಗಳನ್ನು ಅಂಬುಲೆನ್ಸ್‍ಗಳ ಮೂಲಕ ದೆಹಲಿ ವಿಮಾನ ನಿಲ್ದಾಣಕ್ಕೆ ಸಾಗಿಸಲಾಗುತ್ತದೆ. ಶುಕ್ರವಾರ ಬೆಳಗ್ಗೆ ದೆಹಲಿ-ಬೆಂಗಳೂರು ವಿಮಾನಗಳಲ್ಲಿ ಮೃತ ದೇಹಗಳನ್ನು ರವಾನಿಸಲು ಸ್ಥಳವನ್ನು ಕಾಯ್ದಿರಿಸಿದ್ದೇವೆ ಎಂದಿದ್ದಾರೆ.

 

ಈ ಪ್ರಕಾರ, ಈಗಾಗಲೇ ಡೆಹ್ರಾಡೂನ್ ತಲುಪಿರುವ ಬದುಕಿರುವ ಚಾರಣಿಗರು ಇಂದು ರಾತ್ರಿ 8:45 ಕ್ಕೆ ಬೆಂಗಳೂರು ಅಂತರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಬಂದಿಳಿಯಲಿದ್ದಾರೆ. ಟರ್ಮಿನಲ್ 1 ಗೆ ಸಚಿವ ಕೃಷ್ಣ ಬೈರೇಗೌಡ ಜೊತೆಗೆ 13 ಮಂದಿ ಚಾರಣಿಗರು ಬರುತ್ತಾರೆ.

Share This Article