Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ನೀಟ್ ಗೊಂದಲದ ಬಗ್ಗೆ ಪ್ರಧಾನಿಗಳು ಗಮನ ಹರಿಸಲಿ: ಸಿದ್ದರಾಮಯ್ಯ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Bengaluru City | ನೀಟ್ ಗೊಂದಲದ ಬಗ್ಗೆ ಪ್ರಧಾನಿಗಳು ಗಮನ ಹರಿಸಲಿ: ಸಿದ್ದರಾಮಯ್ಯ

Bengaluru City

ನೀಟ್ ಗೊಂದಲದ ಬಗ್ಗೆ ಪ್ರಧಾನಿಗಳು ಗಮನ ಹರಿಸಲಿ: ಸಿದ್ದರಾಮಯ್ಯ

Public TV
Last updated: June 7, 2024 4:41 pm
Public TV
Share
4 Min Read
Siddaramaiah 2
SHARE

– ಸರ್ಕಾರ ರಚನೆ, ಸಂಸದರ ಖರೀದಿ ಕಸರತ್ತು ಮುಗಿದಿದ್ದರೆ ನೊಂದ ನೀಟ್‌ ವಿದ್ಯಾರ್ಥಿಗಳ ಅಹವಾಲು ಆಲಿಸಲಿ: ಸಿಎಂ

ಬೆಂಗಳೂರು: ಪ್ರಧಾನಿ ಮೋದಿಯವರ (Narendra Modi) ಸರ್ಕಾರ ರಚನೆ ಮತ್ತು ಸಂಸದರ ಖರೀದಿಯ ಕಸರತ್ತು ಮುಗಿದಿದ್ದರೆ ನೊಂದ ನೀಟ್ ಪರೀಕ್ಷಾರ್ಥಿಗಳ ಅಹವಾಲು ಆಲಿಸಲಿ. ನೀಟ್ ಪರೀಕ್ಷಾ ಅಕ್ರಮದ ಬಗ್ಗೆ ತನಿಖೆಯಾಗಲಿ ಎಂದು ಸಿಎಂ ಸಿದ್ದರಾಮಯ್ಯ (Siddaramaiah) ಒತ್ತಾಯ ಮಾಡಿದ್ದಾರೆ.

ನೀಟ್‌ ಫಲಿತಾಂಶದಲ್ಲಿ (NEET) ಭಾರಿ ಅಕ್ರಮ ನಡೆದಿರಬಹುದಾದ ಶಂಕೆ ದೇಶಾದ್ಯಂತ ವ್ಯಕ್ತವಾಗುತ್ತಿದ್ದು, ಪರೀಕ್ಷೆ ಬರೆದಿರುವ 24 ಲಕ್ಷ ಯುವಜನರು, ಅವರ ಪೋಷಕರಲ್ಲಿ ಮೂಡಿರುವ ಆತಂಕಕ್ಕೆ, ಪರೀಕ್ಷೆಯ ವಿಶ್ವಾಸಾರ್ಹತೆ ಬಗ್ಗೆ ಎದ್ದಿರುವ ಪ್ರಶ್ನೆಗಳಿಗೆ ಎನ್‌ಟಿಎ ಆಗಲಿ, ಕೇಂದ್ರದ ನರೇಂದ್ರ ಮೋದಿಯವರ ಸರ್ಕಾರವಾಗಲೀ ಉತ್ತರಿಸದೆ ಲಕ್ಷಾಂತರ ಯುವಜನರ ಭವಿಷ್ಯವನ್ನು ಮಣ್ಣುಪಾಲು ಮಾಡಲು ಹೊರಟಿದೆ. NEET (ನೀಟ್) ಪರೀಕ್ಷೆಯಲ್ಲಿ 67 ಅಭ್ಯರ್ಥಿಗಳಿಗೆ 720ಕ್ಕೆ 720 ಅಂಕಗಳು ಬಂದಿವೆ. ಅಂದರೆ 100% ಅಂಕಗಳು‌ ಬಂದಿದೆ. ಆದರೆ ಈ ಹಿಂದೆ ಬಂದ ಟಾಪರ್‍‌ಗಳ ಸಂಖ್ಯೆ ಎಷ್ಟು? ಎಂಬುದನ್ನು ಹೋಲಿಕೆ ಮಾಡಿ ನೋಡಿದರೆ ಈ ಬಾರಿಯ ಫಲಿತಾಂಶದಲ್ಲಿ ಅಕ್ರಮದ ವಾಸನೆ ಬಡಿಯುತ್ತದೆ ಎಂದು ಆರೋಪಿಸಿದ್ದಾರೆ. ಇದನ್ನೂ ಓದಿ: ಕೆಪಿಸಿಸಿ ಸಭೆ ಹಗರಣ ಮುಚ್ಚಿಹಾಕೋದಕ್ಕಾ? ಸಿಎಂ ರಾಜೀನಾಮೆ ಪಡೆಯೋಕಾ? – ರಾಗಾಗೆ ಅಶ್ವಥ್‌ ನಾರಾಯಣ್‌ ಪ್ರಶ್ನೆ

Narendra Modi 1

2019ರಲ್ಲಿ ಒಬ್ಬ ವಿದ್ಯಾರ್ಥಿ, 2020ರಲ್ಲಿ ಒಬ್ಬ, 2021ರಲ್ಲಿ ಮೂವರು, 2022ರಲ್ಲಿ ಒಬ್ಬ, 2023ರಲ್ಲಿ ಇಬ್ಬರು ವಿದ್ಯಾರ್ಥಿಗಳು ನೂರಕ್ಕೆ ನೂರು ಪ್ರತಿಶತ ಅಂಕ ಪಡೆದಿದ್ದರೆ ಈ ವರ್ಷ – 67 ವಿದ್ಯಾರ್ಥಿಗಳು ಟಾಪರ್‌ಗಳಾಗಿ ಹೊರಹೊಮ್ಮಿದ್ದಾರೆ. ನೀಟ್‌ ಪರೀಕ್ಷೆಯಲ್ಲಿ ಪ್ರತಿ ತಪ್ಪು ಉತ್ತರಕ್ಕೆ ಋಣಾತ್ಮಕ ಅಂಕಗಳಿರುವ ಕಾರಣ ಇಷ್ಟೊಂದು ಮಂದಿ ನೂರು ಪ್ರತಿಶತ ಅಂಕ ಗಳಿಸುವುದು ಅಸಾಧ್ಯ ಎನ್ನಿಸುತ್ತದೆ. ಇದು ಕಾಕತಾಳೀಯವೋ ಅಥವಾ ಹೊಸ ಪ್ರಯೋಗವೋ? ಇದನ್ನು ಮೋದಿ ಸರ್ಕಾರವೇ ಸ್ಪಷ್ಟಪಡಿಸಬೇಕು ಎಂದಿದ್ದಾರೆ.

ನೀಟ್‌ನ 67 ಟಾಪರ್‌ಗಳಲ್ಲಿ 44 ಮಂದಿ ‘ಗ್ರೇಸ್‌ಮಾರ್ಕ್‌’ ಆಧಾರದ ಮೇಲೆ ಟಾಪರ್‌ಗಳಾಗಿದ್ದಾರೆ. ಗ್ರೇಸ್ ಅಂಕಗಳ ಆಧಾರದ ಮೇಲೆ ಇಷ್ಟೊಂದು ಪರೀಕ್ಷಾರ್ಥಿಗಳು ಟಾಪರ್‌ಗಳಾದಾಗ, ‘ಮಾರ್ಕಿಂಗ್ ಪ್ರಕ್ರಿಯೆ’ ಮತ್ತು ‘ಪರೀಕ್ಷಾ ವ್ಯವಸ್ಥೆಯ ವಿಶ್ವಾಸಾರ್ಹತೆ ಮತ್ತು ಸಿಂಧುತ್ವ’ದ ಮೇಲೆ ಪ್ರಶ್ನೆ ಹುಟ್ಟುಹಾಕುವುದಿಲ್ಲವೆ? ಇನ್ನೊಂದು ಅಚ್ಚರಿಯ ವಿಷಯವೇನೆಂದರೆ 62 ರಿಂದ 69 ರವರೆಗಿನ ಸರಣಿ ಸಂಖ್ಯೆಗಳೊಂದಿಗೆ ನೀಟ್‌ ಟಾಪರ್‌ಗಳು ಹರಿಯಾಣದ ಫರಿದಾಬಾದ್‌ನಲ್ಲಿರುವ ಒಂದೇ ಪರೀಕ್ಷಾ ಕೇಂದ್ರದಲ್ಲಿ ಪರೀಕ್ಷೆ ಬರೆದವರು. ಈ ಪೈಕಿ 6 ಜನರು 720/720 ಅಂಕಗಳೊಂದಿಗೆ ನೀಟ್‌ನಲ್ಲಿ ಅಗ್ರಸ್ಥಾನದಲ್ಲಿದ್ದಾರೆ. 718 ಮತ್ತು 719 ಅಂಕಗಳನ್ನು 2 ಮಂದಿ ಪಡೆದಿದ್ದಾರೆ. ಮೇಲ್ನೋಟಕ್ಕೆ ಪರೀಕ್ಷಾ ಅಕ್ರಮ ನಡೆದಿರುವುದು ಕಂಡುಬಂದರೂ ಎನ್‌ಟಿಎ ಮತ್ತು ಮೋದಿ ಸರ್ಕಾರ ಈ ಫಲಿತಾಂಶವನ್ನು ಸಮರ್ಥಿಸುತ್ತಿದೆ. ವಿದ್ಯಾರ್ಥಿಗಳ ಭವಿಷ್ಯದ ಜೊತೆಗೆ ಚೆಲ್ಲಾಟವಾಡಲು ಹೊರಟಿರುವ ಕೇಂದ್ರ ಬಿಜೆಪಿ ಸರ್ಕಾರವು ಚುನಾವಣಾ ಸೋಲಿನಿಂದಲೂ ಪಾಠ ಕಲಿತಂತೆ ಕಾಣುತ್ತಿಲ್ಲ ಎಂದು ವಾಗ್ದಾಳಿ ನಡೆಸಿದ್ದಾರೆ. ಇದನ್ನೂ ಓದಿ: ಪೆನ್‌ಡ್ರೈವ್ ಹಂಚಿದವರು ತನಿಖಾಧಿಕಾರಿ ಎದುರೇ ಸಂಭ್ರಮಾಚರಣೆ ಮಾಡ್ತಾರೆ: ವಕೀಲ ಗೋಪಾಲಗೌಡ ಆರೋಪ

ಫರಿದಾಬಾದ್‌ನ ನೀಟ್‌ ಪರೀಕ್ಷಾ ಕೇಂದ್ರದಲ್ಲಿ ತಪ್ಪು ಪತ್ರಿಕೆಯನ್ನು ವಿತರಿಸಲಾಗಿತ್ತು. ಇದರಿಂದಾಗಿ ಅಭ್ಯರ್ಥಿಗಳು 45 ನಿಮಿಷಗಳನ್ನು ಕಳೆದುಕೊಳ್ಳುವಂತಾಯಿತು. ಹಾಗಾಗಿ ಈ ಸಮಯಕ್ಕೆ ಪ್ರತಿಯಾಗಿ ಎನ್‌ಟಿಎ ಈ ಕೇಂದ್ರದ ಅಭ್ಯರ್ಥಿಗಳಿಗೆ ‘ಗ್ರೇಸ್‌ಮಾರ್ಕ್‌’ ನೀಡಿದೆ. ಇದು ನೂರು ಪ್ರತಿಶತ ಅಂಕ ಗಳಿಕೆಗೆ ಕಾರಣ ಎಂದು ಕೇಂದ್ರ ಸರ್ಕಾರ ಸಮಜಾಯಿಷಿ ನೀಡುತ್ತಿದೆ. ‘ಎನ್‌ಟಿಎ ಪ್ರಾಸ್ಪೆಕ್ಟಸ್’, ‘ನೀಟ್ ಬ್ರೋಷರ್’ ಮತ್ತು ‘ಸರ್ಕಾರಿ ಸೂಚನೆಗಳಲ್ಲಿ’ ಈ ರೀತಿಯಲ್ಲಿ ಗ್ರೇಸ್ ಅಂಕಗಳನ್ನು ನೀಡುವ ಅವಕಾಶ ಇರುವ ಕುರಿತು ಯಾವುದೇ ಮಾಹಿತಿ ಇಲ್ಲ. ಹಾಗಾದರೆ ಈ ಗ್ರೇಸ್ ಮಾರ್ಕ್‌ಗಳನ್ನು ಯಾವ ಆಧಾರದ ಮೇಲೆ ನೀಡಲಾಗಿದೆ? ಈ ಬಗ್ಗೆ ಮೋದಿ ಸರ್ಕಾರದಿಂದ ಸಾರ್ವಜನಿಕ ಸೂಚನೆ ಅಥವಾ ಜಾಹೀರಾತು ನೀಡಲಾಗಿದೆಯೇ? ಬೇರೆ ಯಾವುದಾದರೂ ಕೇಂದ್ರದಲ್ಲಿ ಇದೇ ರೀತಿ ಗ್ರೇಸ್ ಮಾರ್ಕ್ಸ್ ನೀಡಲಾಗಿದೆಯೇ? ಎಂಬಿತ್ಯಾದಿ ಮಾಹಿತಿಯನ್ನು ಆತಂಕದಲ್ಲಿರುವ ವಿದ್ಯಾರ್ಥಿಗಳಿಗೆ ಮತ್ತು ಅವರ ಪೋಷಕರಿಗೆ ನೀಡಬೇಕು ಎಂದಿದ್ದಾರೆ.

NEET

2019 ರಿಂದ 2023 ರವರೆಗೆ, ನೀಟ್‌ ಪರೀಕ್ಷೆಯಲ್ಲಿ 600 ಅಂಕಗಳನ್ನು ಗಳಿಸಿದವರು ಕೈಗೆಟುಕುವ ಶುಲ್ಕದಲ್ಲಿ ಸರ್ಕಾರಿ ವೈದ್ಯಕೀಯ ಕಾಲೇಜುಗಳಲ್ಲಿ ಸುಲಭವಾಗಿ ಪ್ರವೇಶ ಪಡೆದಿದ್ದರು. ಈ ವರ್ಷ ನೀಟ್ ಪರೀಕ್ಷೆಯ ಅಂಕಮಿತಿಯು 137 ಅಂಕಗಳಿಂದ 164 ಕ್ಕೆ ಏರಿಕೆಯಾಗಿದೆ. ಈ ಬಾರಿ 660 ಅಂಕ ಗಳಿಸಿದ ಅಭ್ಯರ್ಥಿಗಳು ಮಾತ್ರ ಕೈಗೆಟುಕುವ ಶುಲ್ಕದಲ್ಲಿ ಸರ್ಕಾರಿ ವೈದ್ಯಕೀಯ ಕಾಲೇಜುಗಳಲ್ಲಿ ಪ್ರವೇಶ ಪಡೆಯಬಹುದು. ನೀಟ್ ಪರೀಕ್ಷೆಗೆ ಹಾಜರಾಗಿರುವ 24 ಲಕ್ಷಕ್ಕೂ ಹೆಚ್ಚು ಯುವಕರು ಬಹುತೇಕ ಬಡ-ಮಧ್ಯಮ ವರ್ಗದ ಕುಟುಂಬಗಳಿಂದ ಬಂದವರು. ವೈದ್ಯರಾಗುವ ಹಂಬಲ ಹೊಂದಿದವರು. ಆದರೆ ಈ ಪರೀಕ್ಷಾ ಗೊಂದಲದಿಂದಾಗಿ ಲಕ್ಷಾಂತರ ಯುವಕರ ಕನಸುಗಳು ನುಚ್ಚುನೂರಾಗಿದೆ ಎಂದು ಕೇಂದ್ರದ ವಿರುದ್ಧ ಹರಿಹಾಯ್ದಿದ್ದಾರೆ. ಇದನ್ನೂ ಓದಿ: ಇವಿಎಂ ಸತ್ತಿದ್ಯಾ ಅಥವಾ ಬದುಕಿದ್ಯಾ? – ವಿಪಕ್ಷ ನಾಯಕರನ್ನ ಲೇವಡಿ ಮಾಡಿದ ಮೋದಿ

ನಿಗದಿತ ವೇಳಾಪಟ್ಟಿಯಂತೆ ನೀಟ್ ಪರೀಕ್ಷೆಯನ್ನು 2024 ರ ಮೇ 5 ರಂದು ನಡೆಸಲಾಯಿತು. ಅದರ ಫಲಿತಾಂಶವನ್ನು 2024 ರ ಜೂನ್ 14 ರಂದು ಪ್ರಕಟವಾಗಬೇಕಿತ್ತು. ಆದರೆ ಇದ್ದಕ್ಕಿದ್ದಂತೆ ಫಲಿತಾಂಶವನ್ನು 2024 ರ ಜೂನ್ 4 ರಂದು ಪ್ರಕಟಿಸಲಾಯಿತು. ಇದೇ ದಿನ ದೇಶದ ಸಂಸತ್ ಚುನಾವಣೆಯ ಫಲಿತಾಂಶ ಬಂದಿದ್ದು, ಇಡೀ ದೇಶವೇ ಲೋಕಸಭೆ ಚುನಾವಣೆಯ ಫಲಿತಾಂಶವನ್ನು ಕೇಳುವುದರಲ್ಲಿ ನಿರತವಾಗಿತ್ತು. ಈ ಗದ್ದಲದಲ್ಲಿ ನೀಟ್‌ ಫಲಿತಾಂಶವನ್ನು ತರಾತುರಿಯಲ್ಲಿ ಬಿಡುಗಡೆ ಮಾಡಿದ್ದು, ಪರೀಕ್ಷೆಯ ಅಕ್ರಮಗಳನ್ನು ಮುಚ್ಚಿಹಾಕಬಹುದು ಎಂಬ ಕಾರಣಕ್ಕಾಗಿಯೇ? ಅಲ್ಲದಿದ್ದರೆ ತರಾತುರಿಯಲ್ಲಿ ಫಲಿತಾಂಶ ಬಿಡುಗಡೆ ಮಾಡಿದ್ದು ಯಾಕೆ ಎಂದು ಪ್ರಶ್ನಿಸಿದ್ದಾರೆ.

ಕೇಂದ್ರ ಸರ್ಕಾರ ಮತ್ತು ಎನ್‌ಟಿಎ ಮಾಡಿರುವ ಯಡವಟ್ಟಿನಿಂದಾಗಿ ನೀಟ್ ಫಲಿತಾಂಶ ಪ್ರಕಟವಾದ ನಂತರ ದೌಸಾದಲ್ಲಿ ಅಜಿತ್ ಎಂಬ ವಿದ್ಯಾರ್ಥಿ ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಮಧ್ಯಪ್ರದೇಶದ ರೇವಾ ಯುವತಿ ಬಗೀಶಾ ತಿವಾರಿ ಕಟ್ಟಡದಿಂದ ಜಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾಳೆ. ಬರೀ ವಿವಾದಗಳಿಂದಲೇ ತುಂಬಿರುವ ಮತ್ತು ಯುವಜನರು ಆತ್ಮಹತ್ಯೆಗೆ ಶರಣಾಗುವಂತೆ ಮಾಡಿರುವ ಎನ್‌ಟಿಎಯ ನೀಟ್ ಪರೀಕ್ಷಾ ವ್ಯವಸ್ಥೆ ನಿಜಕ್ಕೂ ಎಂತಹದ್ದು ಎಂಬ ಪ್ರಶ್ನೆ ಕಾಡಲಾರಂಭಿಸಿದೆ. ನರೇಂದ್ರ ಮೋದಿಯವರ ಸರ್ಕಾರ ರಚನೆ ಮತ್ತು ಸಂಸದರ ಖರೀದಿಯ ಕಸರತ್ತು ಮುಗಿದಿದ್ದರೆ ಮತ್ತಷ್ಟು ಯುವಜನರು ಪ್ರಾಣ ಕಳೆದುಕೊಳ್ಳುವ ಮುನ್ನ ಪರೀಕ್ಷಾ ಅಕ್ರಮದ ಬಗ್ಗೆ ಸೂಕ್ತ ತನಿಖೆ ನಡೆಸಬೇಕು. ನೊಂದ ಪರೀಕ್ಷಾರ್ಥಿಗಳ ಅಹವಾಲು ಆಲಿಸಿ ಸಮಸ್ಯೆ ಬಗೆಹರಿಸಬೇಕು ಎಂದು ಆಗ್ರಹಿಸಿದ್ದಾರೆ.

TAGGED:narendra modiNEET examsiddaramaiahನರೇಂದ್ರ ಮೋದಿನೀಟ್ಸಿದ್ದರಾಮಯ್ಯ
Share This Article
Facebook Whatsapp Whatsapp Telegram

Cinema news

Anushka Shetty
ಸ್ವೀಟಿ ಅನುಷ್ಕಾಗೆ ಕಂಕಣ ಭಾಗ್ಯ – ಬೆಂಗಳೂರು ಮೂಲದ ಉದ್ಯಮಿ ಜೊತೆ ಮದ್ವೆ?
Cinema Latest South cinema
Hansika Motwani Sohael Khaturiya
ಉದ್ಯಮಿ‌ ಸೊಹೇಲ್‌ ಜೊತೆಗಿನ 4 ವರ್ಷಗಳ ದಾಂಪತ್ಯ ಜೀವನಕ್ಕೆ ಅಂತ್ಯಹಾಡಿದ ‘ಬಿಂದಾಸ್‌’ ನಟಿ
Cinema Latest South cinema Top Stories
d53acfe5 1562 41db 9d81 d5b390041c73
ಪ್ರಿಯಕರ ಫರ್ಮಾನ್‌ ಖಾನ್‌ ಜೊತೆ ಕುಂಭಮೇಳದ ವೈರಲ್‌ ತಾರೆ ಮೊನಾಲಿಸಾ ಮದುವೆ
Cinema Latest Main Post
Monalisa Viral Video
ಮದುವೆಗೆ ಬಲವಂತ ಆರೋಪ; ಪೊಲೀಸ್‌ ಠಾಣೆ ಮೆಟ್ಟಿಲೇರಿದ ‘ಕುಂಭಮೇಳ ಚೆಲುವೆ’ ಮೊನಾಲಿಸಾ
Cinema Latest Main Post

You Might Also Like

Pinarayi Vijayan
Latest

ಶಬರಿಮಲೆ ವಿಚಾರದಲ್ಲಿ ಪಿಣರಾಯಿ ಯೂಟರ್ನ್ – ಮಹಿಳೆಯರ ಪ್ರವೇಶ ಹಿಂದಿನ ನಿಲುವು ಬದಲಾಯಿಸಿದ ಸರ್ಕಾರ

Public TV
By Public TV
7 hours ago
Iran warned UAE residents
Latest

ಯುಎಇ ಬಂದರು ಪ್ರದೇಶಗಳಿಂದ ಹೊರಗೆ ಹೋಗಿ: ಜನರಿಗೆ ಇರಾನ್‌ ಎಚ್ಚರಿಕೆ

Public TV
By Public TV
7 hours ago
Crime 3
Latest

ಮಂಗ ಓಡಿಸಲು ಹೋದವನ ದುರಂತ ಅಂತ್ಯ – ಕೈಯಲ್ಲಿದ್ದ ಎರ್‌ಗನ್‌ನಿಂದ ಹಾರಿದ ಗುಂಡಿಗೆ ಯುವಕ ಬಲಿ

Public TV
By Public TV
7 hours ago
Stray Dogs 1
Crime

ತೆಲಂಗಾಣದಲ್ಲಿ ನೂರಾರು ಬೀದಿ ನಾಯಿಗಳ ಹತ್ಯೆ – ಪ್ರಕರಣ ದಾಖಲು

Public TV
By Public TV
8 hours ago
Donald Trump 1
Latest

ಶೀಘ್ರವೇ ಹಾರ್ಮುಜ್‌ ಜಲಸಂಧಿ ಓಪನ್‌: ಡೊನಾಲ್ಡ್‌ ಟ್ರಂಪ್‌

Public TV
By Public TV
8 hours ago
Ramesha Bandisiddegowda
Karnataka

ಶ್ರೀಗಳ ಹೆಜ್ಜೆ ಎಲ್ಲೆಲ್ಲೋ ದಾರಿ ತಪ್ಪುತ್ತಿದೆ: ನಿರ್ಮಲಾನಂದನಾಥ ಸ್ವಾಮೀಜಿ ಬಗ್ಗೆ ರಮೇಶ್ ಬಂಡಿಸಿದ್ದೇಗೌಡ ವಿವಾದಾತ್ಮಕ ಹೇಳಿಕೆ

Public TV
By Public TV
9 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?