Public TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Font ResizerAa
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
  • National
  • World
  • Cinema
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Bengaluru City

ರಾಜ್ಯ ಹಾಗೂ ಜನರ ಧ್ವನಿಯಾಗಿ ಕೆಲಸ ಮಾಡಲು, ಮತ ಹಾಕದವರ ಮನಗೆಲ್ಲಲು ರಾಗಾ ಸಲಹೆ: ಡಿಕೆಶಿ

Public TV
Last updated: June 7, 2024 5:34 pm
Public TV
Share
3 Min Read
DK Shivakumar 1 2
SHARE

ಬೆಂಗಳೂರು: ನೂತನ ಸಂಸದರು ಜನರ ಧ್ವನಿಯಾಗಿ ಕರ್ನಾಟಕ ರಾಜ್ಯಕ್ಕೆ ಆಗುತ್ತಿರುವ ಅನ್ಯಾಯ, ಮಲತಾಯಿ ಧೋರಣೆ ವಿರುದ್ಧ ಧ್ವನಿ ಎತ್ತಬೇಕು. ಕಾಂಗ್ರೆಸ್‌ಗೆ ಮತ ಹಾಕದವರ ಮನ ಗೆಲ್ಲಬೇಕು ಎಂದು ರಾಹುಲ್ ಗಾಂಧಿ (Rahul Gandhi) ಅವರು ಸಲಹೆ ನೀಡಿದ್ದಾರೆ ಎಂದು ಡಿಸಿಎಂ ಡಿ.ಕೆ ಶಿವಕುಮಾರ್ ಹೇಳಿದ್ದಾರೆ.

ರಾಹುಲ್ ಗಾಂಧಿ ಭೇಟಿ ಬಳಿಕ ಪತ್ರಿಕಾಗೋಷ್ಠಿ ನಡೆಸಿದ ಅವರು, ರಾಹುಲ್ ಗಾಂಧಿ ಅವರು ಕರ್ನಾಟಕದ 28 ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿಗಳ ಜೊತೆ ಚರ್ಚೆ ಮಾಡಿದರು. ಲೋಕಸಭೆಗೆ ಆಯ್ಕೆಯಾದ 9 ಸಂಸದರಿಗೆ ಅಭಿನಂದನೆ ಸಲ್ಲಿಸಿ ಯಾವ ರೀತಿ ಕಾರ್ಯನಿರ್ವಹಿಸಬೇಕು ಎಂದು ಕಿವಿಮಾತು ಹೇಳಿದರು.

ಮೊದಲ ಬಾರಿಗೆ ಗೆದ್ದವರು ಕ್ಷೇತ್ರದಿಂದ ದೂರ ಉಳಿಯಬಾರದು. ಬೆಂಗಳೂರು ಹಾಗೂ ದೆಹಲಿಗಿಂತ ಹೆಚ್ಚಾಗಿ ಕ್ಷೇತ್ರದ ಜನರ ಸಂಪರ್ಕದಲ್ಲಿ ಇರಬೇಕು. ನಮ್ಮದೇ ಸರ್ಕಾರ ರಾಜ್ಯದಲ್ಲಿದ್ದು, ಅದರ ನೆರವು ಪಡೆದು ಜನರ ಪರವಾಗಿ ಕೆಲಸ ಮಾಡಬೇಕು ಎಂದು ಸಲಹೆ ನೀಡಿದರು.

ಈ ಹಿಂದೆ ಇದ್ದ ಸಂಸದರ ಪೈಕಿ ಒಬ್ಬರ ಹೊರತಾಗಿ ಉಳಿದವರು ರಾಜ್ಯದ ಪರವಾಗಿ ಧ್ವನಿ ಎತ್ತಲಿಲ್ಲ. ತೆರಿಗೆ ಅನ್ಯಾಯ, ಕಳಸಾ ಬಂಡೂರಿ, ಮೇಕೆದಾಟು, ಭದ್ರ ಮೇಲ್ದಂಡೆ ಯೋಜನೆ ಅನುದಾನ, ಹಣಕಾಸು ಆಯೋಗದ ಅನುದಾನ, ಫೆರಿಫೆರಲ್ ರಿಂಗ್ ರಸ್ತೆ ಸೇರಿದಂತೆ ರಾಜ್ಯಕ್ಕೆ ಬರಬೇಕಾದ ಅನುದಾನ ಹಾಗೂ ಯೋಜನೆಗಳು ಹಾಗೂ ಕೇಂದ್ರದ ಮಲತಾಯಿ ಧೋರಣೆ ವಿರುದ್ಧ ಧ್ವನಿ ಎತ್ತಬೇಕು. ರಾಜ್ಯಕ್ಕೆ ಹಾಗೂ ಮತದಾರರಿಗೆ ನ್ಯಾಯ ಒದಗಿಸಬೇಕು ಎಂದು ರಾಹುಲ್ ಗಾಂಧಿ ಸಲಹೆ ನೀಡಿದ್ದಾರೆ.

Rahul Gandhi 2

ಪರಾಭವಗೊಂಡ ಅಭ್ಯರ್ಥಿಗಳಿಗೂ ಧೈರ್ಯ ತುಂಬಿದ ರಾಹುಲ್ ಗಾಂಧಿ ಅವರು, ನೀವು ಸೋತರೂ ಜನರ ಮಧ್ಯೆ ಇರಬೇಕು ಹಾಗೂ ನಮಗೆ ಮತ ನೀಡದವರ ಹೃದಯ ಗೆಲ್ಲಬೇಕು ಎಂದು ನಮಗೆ ಮಾರ್ಗದರ್ಶನ ನೀಡಿದ್ದಾರೆ. ನಂತರ ಕೆಲ ಸಚಿವರನ್ನು ಭೇಟಿ ಮಾಡಿದ ರಾಹುಲ್ ಗಾಂಧಿ ಅವರು, ಸಚಿವರ ಕ್ಷೇತ್ರದಲ್ಲಿ ಚುನಾವಣೆ ಫಲಿತಾಂಶ ಏನಾಯಿತು ಎಂದು ಚರ್ಚೆ ಮಾಡಿದರು. ರಾಜ್ಯದಲ್ಲಿ ಇನ್ನೂ 5-6 ಸೀಟುಗಳ ನಿರೀಕ್ಷೆ ಇತ್ತು. ಎಲ್ಲರ ಮೇಲೂ ಹೊಣೆಗಾರಿಕೆ ಇರಬೇಕು. ಎಲ್ಲೆಲ್ಲಿ ಹಿನ್ನಡೆಯಾಗಿದೆ ಅಲ್ಲಿ ಸರಿಪಡಿಸಿಕೊಳ್ಳಬೇಕು. ಮತ್ತೆ ಜನರ ಬಳಿಗೆ ಹೋಗಬೇಕು ಎಂದು ಜವಾಬ್ದಾರಿ ನೀಡಿದ್ದಾರೆ ಎಂದರು.

ಇನ್ನು ಎಲ್ಲ ನಾಯಕರ ಜೊತೆ ಚರ್ಚೆ ಮಾಡಿ ಕಾರ್ಯಸೂಚಿ ಸಿದ್ಧಪಡಿಸುವಂತೆ ನನಗೆ ಹಾಗೂ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಸೂಚಿಸಿದ್ದಾರೆ. ಇನ್ನು ಶನಿವಾರ (ಜೂನ್ 8) ನಡೆಯಲಿರುವ ಎಐಸಿಸಿ ಕಾರ್ಯಕಾರಿ ಸಮಿತಿ ಸಭೆಗೆ ನನಗೆ ಹಾಗೂ ಸಿದ್ದರಾಮಯ್ಯ ಅವರಿಗೆ ಆಹ್ವಾನ ನೀಡಿದ್ದು, ಈ ಸಭೆಯಿಂದ ಮರಳಿದ ನಂತರ ಮುಂದಿನ ವಾರ ನಮ್ಮ ನಾಯಕರ ಜೊತೆ ಚರ್ಚೆ ಮಾಡುತ್ತೇವೆ. ಕಲ್ಯಾಣ ಕರ್ನಾಟಕ ನಮಗೆ ಶಕ್ತಿಯಾಗಿದ್ದು, ಖರ್ಗೆ ಅವರು 371ಜೆ ಮೂಲಕ ನಮಗೆ ಶಕ್ತಿ ತುಂಬಿದ್ದು, ಅದರಿಂದ 5ಕ್ಕೆ 5 ಕ್ಷೇತ್ರ ಗೆದ್ದಿದ್ದೇವೆ. ಇದೆಲ್ಲವನ್ನು ಗಮನದಲ್ಲಿಟ್ಟುಕೊಂಡು ಮುಂದಿನ ಕಾರ್ಯಯೋಜನೆ ರೂಪಿಸುತ್ತೇವೆ ಎಂದಿದ್ದಾರೆ.

ರಾಹುಲ್ ಗಾಂಧಿ ಅವರು ನ್ಯಾಯಾಲಯ ಹಾಗೂ ಕಾನೂನಿಗೆ ಗೌರವ ಕೊಟ್ಟು ವಿಚಾರಣೆಗೆ ಹಾಜರಾಗಿದ್ದಾರೆ. ಬಿಜೆಪಿ ನಾಯಕರಾದ ಯತ್ನಾಳ್ ಅವರೇ ಸಿಎಂ ಹುದ್ದೆಗೆ 2,500 ಕೋಟಿ ಹಾಗೂ ಮಾಧ್ಯಮಗಳಲ್ಲಿ ಬಂದಿದ್ದ ವರದಿ ಅನುಸಾರ ಸರ್ಕಾರಿ ಹುದ್ದೆಗೆ ಹಿಂದಿನ ಸರ್ಕಾರದ ರೇಟ್ ಕಾರ್ಡ್ ಅನ್ನು ಜಾಹೀರಾತು ರೂಪದಲ್ಲಿ ಕೊಟ್ಟಿದ್ದೆವು. ಈ ವಿಚಾರದಲ್ಲಿ ರಾಹುಲ್ ಗಾಂಧಿ ಅವರಿಗೂ ಈ ಪ್ರಕರಣಕ್ಕೂ ಸಂಬಂಧವೇ ಇಲ್ಲ. ಆದರೂ ಉದ್ದೇಶಪೂರ್ವಕವಾಗಿ ಅವರನ್ನು ಎಳೆದು ತರಲಾಗಿದೆ ಎಂದರು.

ಬಿಜೆಪಿಯವರಲ್ಲಿ ದ್ವೇಷ ಹಾಗೂ ಸೇಡು ತುಂಬಿ ತುಳುಕುತ್ತಿದೆ. ಹೀಗಾಗಿ ಸುಳ್ಳು ಪ್ರಕರಣ ದಾಖಲಿಸಿದ್ದು, ಅದಕ್ಕೆ ಈ ಪ್ರಕರಣವೇ ಉದಾಹರಣೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ರಾಹುಲ್ ಗಾಂಧಿ ಅವರು ಆಗಮಿಸಿ ನ್ಯಾಯಾಲಯದ ಮುಂದೆ ಹಾಜರಾಗಿದ್ದಾರೆ. ಡಿ.ಕೆ. ಸುರೇಶ್ ಅವರು ಜಾಮೀನು ನೀಡಿದ್ದಾರೆ. ಕಾರ್ಯಕರ್ತರು ಹಾಗೂ ಅಭಿಮಾನಿಗಳು ಬಂದು ಬೆಂಬಲ ನೀಡಿದ್ದಾರೆ. ಅವರೆಲ್ಲರಿಗೂ ಧನ್ಯವಾದಗಳು. ಆರು ವಿಧಾನ ಪರಿಷತ್ ಕ್ಷೇತ್ರಗಳಿಗೆ ನಡೆದ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷ ಮೂರು ಕ್ಷೇತ್ರಗಳಲ್ಲಿ ಗೆದ್ದಿದ್ದು, ಅವರಿಗೆ ಪಕ್ಷದ ಪರವಾಗಿ ಅಭಿನಂದನೆ ಸಲ್ಲಿಸುತ್ತೇನೆ ಎಂದಿದ್ದಾರೆ.

TAGGED:bengalurucongressDK ShivakumarRahul Gandhiಡಿಕೆ ಶಿವಕುಮಾರ್ಬೆಂಗಳೂರುರಾಹುಲ್ ಗಾಂಧಿ
Share This Article
Facebook Whatsapp Whatsapp Telegram

Cinema News

Actress Sumalatha condoles the death of Malayalam Actor Shanawas
`ಕ್ಯಾರಮ್, ಬ್ಯಾಡ್ಮಿಂಟನ್ ಆಡುವಾಗ ಸೆಕೆಂಡ್‍ನಲ್ಲಿ ಸೋಲಿಸುತ್ತಿದ್ದರು’- ಸುಮಲತಾ ನೆನಪು ಹಂಚಿಕೊಂಡಿದ್ದು ಯಾರ ಬಗ್ಗೆ?
Cinema Latest South cinema Top Stories
janaki vs state of kerala
ಜಾನಕಿ V v/s ಸ್ಟೇಟ್ ಆಫ್ ಕೇರಳ ಚಿತ್ರ ಸ್ಟ್ರೀಮಿಂಗ್: ಸ್ವಾತಂತ್ರ್ಯ ದಿನಕ್ಕೆ ಗಿಫ್ಟ್
Cinema Latest South cinema Top Stories
Santhosh balaraj 1
ಸ್ಯಾಂಡಲ್‌ವುಡ್‌ನ ಯುವ ನಟ ಸಂತೋಷ್ ಬಾಲರಾಜ್ ನಿಧನ
Cinema Latest Sandalwood Top Stories
Ramya Prajwal Devaraj
ರಮ್ಯಾಗೆ ಅಶ್ಲೀಲ ಮೆಸೇಜ್ ಕೇಸ್: ಪ್ರಜ್ವಲ್ ಕಿಡಿ
Cinema Latest Sandalwood Top Stories
Ramya Case 2 arrested by ccb police
ನಟಿ ರಮ್ಯಾಗೆ ಅಶ್ಲೀಲ ಕಾಮೆಂಟ್ – ಸಿಸಿಬಿ ಪೊಲೀಸರಿಂದ ಇನ್ನಿಬ್ಬರು ಅರೆಸ್ಟ್
Cinema Latest Sandalwood Top Stories

You Might Also Like

Amit shah
Latest

ಎಲ್.ಕೆ ಅಡ್ವಾಣಿ ಹಿಂದಿಕ್ಕಿ ದೀರ್ಘಾವಧಿಯ ಗೃಹ ಸಚಿವರಾಗಿ ಸೇವೆ ಸಲ್ಲಿಸಿದ ಅಮಿತ್ ಶಾ

Public TV
By Public TV
6 minutes ago
SATYAPAL MALIK
Latest

ಜಮ್ಮು-ಕಾಶ್ಮೀರದ ಮಾಜಿ ರಾಜ್ಯಪಾಲ ಸತ್ಯಪಾಲ್ ಮಲಿಕ್ ನಿಧನ

Public TV
By Public TV
8 minutes ago
Trump 1
Latest

ಟ್ರಂಪ್ ಸುಂಕ ಬೆದರಿಕೆ ನಡ್ವೆ ಅಮೆರಿಕಕ್ಕೆ ತಿವಿದ ಇಂಡಿಯನ್ ಆರ್ಮಿ – ಪಾಕ್‌ಗೆ ಶಸ್ತ್ರಾಸ್ತ್ರ ಪೂರೈಕೆ ಬಗ್ಗೆ 1971ರ ಪೇಪರ್ ಕಟಿಂಗ್‌ ಪೋಸ್ಟ್

Public TV
By Public TV
23 minutes ago
HD Revanna
Chikkamagaluru

ಜೈಲಲ್ಲಿರೋ ಪ್ರಜ್ವಲ್ ಹುಟ್ಟುಹಬ್ಬ – ಶೃಂಗೇರಿ ಶಾರದಾಂಬೆಗೆ ವಿಶೇಷ ಪೂಜೆ ಸಲ್ಲಿಸಿದ ರೇವಣ್ಣ

Public TV
By Public TV
1 hour ago
America
Latest

ವೀಸಾ ಅವಧಿ ಮೀರಿ ವಾಸ್ತವ್ಯ; ಭಾರತ ಸೇರಿ ವಿದೇಶಿ ಪ್ರಜೆಗಳಿಗೆ ಅಮೆರಿಕ ಗಡೀಪಾರು ಎಚ್ಚರಿಕೆ

Public TV
By Public TV
2 hours ago
Raichur 1
Districts

ಸಾರಿಗೆ ಮುಷ್ಕರದಿಂದ ಹೈರಾಣಾದ ಜನ – ರಾಯಚೂರಿನಲ್ಲಿ ಆಂಧ್ರ, ತೆಲಂಗಾಣದ ಬಸ್‌ ಬಳಕೆ

Public TV
By Public TV
2 hours ago
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?