Public TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Font ResizerAa
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
  • National
  • World
  • Cinema
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Latest

4 ಬಾರಿ ಸಿಎಂ, 6 ಬಾರಿ ಸಂಸದ – ಮಧ್ಯಪ್ರದೇಶದ ಮಾಮಾ ಈಗ ಕೇಂದ್ರ ಸಚಿವ

Public TV
Last updated: June 9, 2024 8:44 pm
Public TV
Share
4 Min Read
Shivaraj Singh Chouhan
SHARE

– ಇದೇ ಮೊದಲ ಬಾರಿ ಮೋದಿ ಕ್ಯಾಬಿನೆಟ್‌ ಪ್ರವೇಶಿಸಿದ ಶಿವರಾಜ್‌ ಸಿಂಗ್‌ ಚೌಹಾಣ್

ನವದೆಹಲಿ: ಮಧ್ಯಪ್ರದೇಶದಲ್ಲಿ ‘ಮಾಮಾ’ ಎಂದೇ ಖ್ಯಾತರಾಗಿರುವ ಮಾಜಿ ಮುಖ್ಯಮಂತ್ರಿ ಶಿವರಾಜ್ ಸಿಂಗ್ ಚೌಹಾಣ್ (Shivaraj Singh Chouhan) ಈ ಬಾರಿಯ ಮೋದಿ ಸಂಪುಟದಲ್ಲಿ (Modi Cabinet) ಸಚಿವ ಸ್ಥಾನ ಪಡೆದಿದ್ದಾರೆ. 4 ಬಾರಿ ಸಿಎಂ ಹಾಗೂ 6 ಬಾರಿ ಸಂಸದರಾಗಿರುವ ಹೆಗ್ಗಳಿಕೆಯೂ ʻಮಾಮಾʼ ಹೆಸರಿನಲ್ಲಿದೆ.

ರಾಷ್ಟ್ರಪತಿ ಭವನದಲ್ಲಿ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಅವರು ಇಂದು ಅಧಿಕಾರ ಮತ್ತು ಗೌಪ್ಯತೆಯ ಪ್ರಮಾಣ ವಚನ ಸ್ವೀಕರಿಸಿದರು. 1990ರಲ್ಲಿ ಬುಧ್ನಿಯಿಂದ ಚುನಾವಣೆಯಲ್ಲಿ ಗೆದ್ದು ಮೊದಲ ಬಾರಿಗೆ ಶಾಸಕರಾದ ಶಿವರಾಜ್ ಸಿಂಗ್ ಚೌಹಾಣ್ ಅವರು ಬಿಜೆಪಿಯ ಪ್ರಬಲ ನಾಯಕರಾಗಿದ್ದಾರೆ. 90ರ ದಶಕದಲ್ಲಿ ಅಖಿಲ ಭಾರತ ಕೇಶರಿಯ ವಾಹಿನಿಯ ಸಂಚಾಲಕರಾಗಿ ರಾಜಕೀಯ ಜೀವನ ಆರಂಭಿಸಿದ್ದರು.

ಬಳಿಕ ಶಿವರಾಜ್ ಸಿಂಗ್ ಚೌಹಾಣ್ 1990 ರಲ್ಲಿ ಬುಧ್ನಿ ವಿಧಾನಸಭಾ ಕ್ಷೇತ್ರದಿಂದ ಚುನಾವಣೆಯಲ್ಲಿ ಗೆಲ್ಲುವ ಮೂಲಕ ಮೊದಲ ಬಾರಿಗೆ ಶಾಸಕರಾದರು. ಮುಂದಿನ ವರ್ಷ 1991 ರಲ್ಲಿ, ಅವರು 10 ನೇ ಲೋಕಸಭೆಯ ಚುನಾವಣೆಯಲ್ಲಿ ವಿದಿಶಾದಿಂದ ಗೆಲ್ಲುವ ಮೂಲಕ ಮೊದಲ ಬಾರಿಗೆ ಸಂಸದರಾದರು. 1996ರಲ್ಲಿ ಅವರು 11 ನೇ ಲೋಕಸಭೆ ಚುನಾವಣೆಯಲ್ಲಿ ಸಂಸದರಾಗಿ ಆಯ್ಕೆಯಾದರು. ಜೊತೆಗೆ ಮಾನವ ಸಂಪನ್ಮೂಲ ಅಭಿವೃದ್ಧಿ ಸಚಿವಾಲಯದಲ್ಲಿ ಸಲಹಾ ಸಮಿತಿಯ ಸದಸ್ಯರಾಗಿ ಕೆಲಸ ಮಾಡಿದರು. ನಂತರ, ಚೌಹಾಣ್‌ ಅವರು 1996 ರಿಂದ 1997 ರವರೆಗೆ ಮಧ್ಯಪ್ರದೇಶದಲ್ಲಿ ಪಕ್ಷದ ಪ್ರಧಾನ ಕಾರ್ಯದರ್ಶಿ ಹುದ್ದೆಯನ್ನು ಅಲಂಕರಿಸಿದರು.

SHIVARAJ SINGH CHOUHAN 1

1998ರಲ್ಲಿ, ಅವರು ಸತತ ಮೂರನೇ ಬಾರಿಗೆ ಲೋಕಸಭೆ ಚುನಾವಣೆಯಲ್ಲಿ ಗೆದ್ದರು ಮತ್ತು ನಗರ ಮತ್ತು ಗ್ರಾಮೀಣಾಭಿವೃದ್ಧಿ ಸಚಿವಾಲಯದಲ್ಲಿ ಉಪಸಮಿತಿ ಸದಸ್ಯರಾಗಿ ಕೆಲಸ ಮಾಡಿದರು. 13ನೇ ಲೋಕಸಭೆ ಚುನಾವಣೆಯಲ್ಲಿ ಮತ್ತೊಮ್ಮೆ ಚುನಾವಣೆಯಲ್ಲಿ ಗೆದ್ದು ಸಂಸತ್ತನ್ನು ತಲುಪಿದರು. ಇದೇ ವೇಳೆ ಅವರು ಭಾರತೀಯ ಜನತಾ ಯುವ ಮೋರ್ಚಾದ ರಾಷ್ಟ್ರೀಯ ಅಧ್ಯಕ್ಷರಾಗಿ ಮತ್ತು 2000 ರಿಂದ 2003ರವರೆಗೆ ಪಕ್ಷದ ರಾಷ್ಟ್ರೀಯ ಕಾರ್ಯದರ್ಶಿಯಾಗಿಯೂ ಕೆಲಸ ಮಾಡಿದರು.

ಡಿಸೆಂಬರ್ 2003ರ ವಿಧಾನಸಭಾ ಚುನಾವಣೆಯಲ್ಲಿ ಮಧ್ಯಪ್ರದೇಶವನ್ನು ಬಿಜೆಪಿ ಗೆದ್ದಾಗ, ಶಿವರಾಜ್ ಸಿಂಗ್ ಹಾಲಿ ಮುಖ್ಯಮಂತ್ರಿ ದಿಗ್ವಿಜಯ್ ಸಿಂಗ್ ವಿರುದ್ಧ ರಾಘೋಗಢದಿಂದ ಸ್ಪರ್ಧಿಸಿದರು. ಆದರೆ ಈ ಚುನಾವಣೆಯಲ್ಲಿ ʼಮಾಮಾʼ ಸೋತರು. ನಂತರ ಅವರು 2000 ರಿಂದ 2004 ರವರೆಗೆ ಸಂವಹನ ಸಚಿವಾಲಯದ ಸಲಹಾ ಸಮಿತಿಯ ಸದಸ್ಯರಾದರು ಮತ್ತು 2004 ರಲ್ಲಿ ಐದನೇ ಬಾರಿಗೆ ಚುನಾವಣೆಯಲ್ಲಿ ಗೆದ್ದು 14 ನೇ ಲೋಕಸಭೆಯಲ್ಲಿ ಮತ್ತೊಮ್ಮೆ ಸಂಸದರಾದರು.

ಹ್ಯಾಟ್ರಿಕ್ ಗೆಲುವಿನ ನಂತರ ಶಿವರಾಜ್ ಸಿಎಂ!
ಆದರೆ, ಮುಂದಿನ ವರ್ಷ 2005ರಲ್ಲಿ ಅವರ ಅದೃಷ್ಟ ಖುಲಾಯಿತು. ಬಿಜೆಪಿಯಿಂದ ಮುಖ್ಯಮಂತ್ರಿ ಸ್ಥಾನಕ್ಕೆ ಆಯ್ಕೆಯಾದರು. ಇದಾದ ನಂತರ 2006ರಲ್ಲಿ ಬುಧ್ನಿ ವಿಧಾನಸಭಾ ಕ್ಷೇತ್ರದಿಂದ ಉಪಚುನಾವಣೆಯಲ್ಲಿ ಸ್ಪರ್ಧಿಸಿ ತಮ್ಮ ಹಳೆಯ ಕ್ಷೇತ್ರದಿಂದ 36,000ಕ್ಕೂ ಹೆಚ್ಚು ಮತಗಳ ಅಂತರದಿಂದ ಗೆಲುವು ಸಾಧಿಸಿದರು.

Shivaraj Singh Chouhan 1

2008ರಲ್ಲಿ, ಚೌಹಾಣ್ ತಮ್ಮ ಬುಧ್ನಿ ಸ್ಥಾನವನ್ನು 41,000 ಕ್ಕಿಂತ ಹೆಚ್ಚು ಮತಗಳಿಂದ ಉಳಿಸಿಕೊಂಡರು. ಇದು ರಾಜ್ಯದಲ್ಲಿ ಬಿಜೆಪಿಯ ಸತತ ಎರಡನೇ ಗೆಲುವಿಗೆ ಕಾರಣವಾಯಿತು. 12 ಡಿಸೆಂಬರ್ 2008ರಂದು ಅವರು ಎರಡನೇ ಬಾರಿಗೆ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಿದರು. 8 ಡಿಸೆಂಬರ್ 2013ರಂದು ಚೌಹಾಣ್ ಮತ್ತೆ ವಿಧಾನಸಭಾ ಚುನಾವಣೆಯಲ್ಲಿ ಗೆದ್ದರು ಮತ್ತು ಮೂರನೇ ಬಾರಿಗೆ ಸಿಎಂ ಹುದ್ದೆಗೆ ಆಯ್ಕೆಯಾದರು.

2018ರ ಡಿಸೆಂಬರ್ 12 ರಂದು ಮಧ್ಯಪ್ರದೇಶ ವಿಧಾನಸಭಾ ಚುನಾವಣೆಯಲ್ಲಿ ಬಹುಮತವನ್ನು ಪಡೆಯಲು ವಿಫಲವಾದ ನಂತರ, ಚೌಹಾಣ್ ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಿದರು ನಂತರ ಅವರು ಮತ್ತೊಮ್ಮೆ 23 ಮಾರ್ಚ್ 2020 ರಂದು ನಾಲ್ಕನೇ ಬಾರಿಗೆ ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸಿದರು. 2023ರ ಡಿಸೆಂಬರ್‌ನಲ್ಲಿ ನಡೆದ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿಯ ದೊಡ್ಡ ಗೆಲುವು ಸಾಧಿಸಿದರೂ ಶಿವರಾಜ್ ಸಿಂಗ್ ಅವರನ್ನು ಬಿಜೆಪಿ ರಾಜ್ಯದ ಮುಖ್ಯಮಂತ್ರಿಯನ್ನಾಗಿ ಮಾಡಲಿಲ್ಲ. ಬದಲಿಗೆ ಬಿಜೆಪಿ ಹೈಮಾಂಡ್‌ ಮೋಹನ್ ಯಾದವ್‌ಗೆ ಅವಕಾಶ ನೀಡಿತು.

ಈ ಬಾರಿ ಗೆಲುವು, ದೆಹಲಿಗೆ ಬುಲಾವ್!
ಚುನಾವಣೆ ಬಳಿಕ ಮುಖ್ಯಮಂತ್ರಿಯಾಗಿ ಆಯ್ಕೆ ಮಾಡದೇ ಇದ್ದಾಗ ಕೇಂದ್ರ ನಾಯಕತ್ವವು ಶಿವರಾಜ್ ಸಿಂಗ್ ಚೌಹಾಣ್ ಅವರನ್ನು ದೆಹಲಿಗೆ ಕರೆಸಿ ಉನ್ನತ ಹುದ್ದೆ ನೀಡುತ್ತದೆ ಎಂಬ ಊಹಾಪೋಹವು ಪ್ರಾರಂಭವಾಯಿತು. ಚುನಾವಣೆ ಕಳೆದ ಬಳಿಕ ಹಾಗೇನೂ ಆಗಲಿಲ್ಲ. ಆದರೆ, ಈ ಬಾರಿಯ ಲೋಕಸಭೆ ಚುನಾವಣೆಯಲ್ಲಿ, ಶಿವರಾಜ್ ಸಿಂಗ್ ಚೌಹಾಣ್ ಮತ್ತೊಮ್ಮೆ ವಿದಿಶಾದಿಂದ ಸ್ಪರ್ಧಿಸಿ 8,17,429 ಮತಗಳ ಅಂತರದಿಂದ ದೊಡ್ಡ ಗೆಲುವು ದಾಖಲಿಸಿದರು. ಇದು ಲೋಕಸಭೆ ಚುನಾವಣೆಯಲ್ಲಿ ಶಿವರಾಜ್‌ ಸಿಂಗ್‌ ಚೌಹಾಣ್‌ ಅವರ 6ನೇ ಗೆಲುವು.

ವಿದ್ಯಾಭ್ಯಾಸದಲ್ಲೂ ಶಿವರಾಜ್ ಸಿಂಗ್‌ಗೆ ಅಗ್ರಸ್ಥಾನ!
ಶಿವರಾಜ್ ಸಿಂಗ್ ಅವರು ಭೋಪಾಲ್‌ನ ಬರ್ಕತುಲ್ಲಾ ವಿಶ್ವವಿದ್ಯಾಲಯದಲ್ಲಿ ತಮ್ಮ ಶಿಕ್ಷಣವನ್ನು ಪೂರ್ಣಗೊಳಿಸಿದ್ದಾರೆ ಮತ್ತು ಅವರು ಎಂ.ಎ. (ಫಿಲಾಸಫಿ) ನಲ್ಲಿ ಚಿನ್ನದ ಪದಕವನ್ನೂ ಗೆದ್ದಿದ್ದಾರೆ. ಸೆಹೋರ್ ಜಿಲ್ಲೆಯ ಜೈಟ್ ಗ್ರಾಮದಲ್ಲಿ ಪ್ರೇಮ್ ಸಿಂಗ್ ಚೌಹಾಣ್ ಮತ್ತು ಸುಂದರ್ ಬಾಯಿ ಚೌಹಾಣ್ ದಂಪತಿಗೆ ಜನಿಸಿದರು. ಶಿವರಾಜ್ ಸಿಂಗ್‌ ಚೌಹಾಣ್ ರೈತ ಕುಟುಂಬದಿಂದ ಬಂದಿದ್ದು, ಕಿರಾರ್ ಸಮುದಾಯಕ್ಕೆ ಸೇರಿದವರು.‌ ಶಿವರಾಜ್ ಸಿಂಗ್ ಅವರ ಪತ್ನಿ ಸಾಧನಾ ಸಿಂಗ್ ಚೌಹಾಣ್. ದಂಪತಿಗೆ ಇಬ್ಬರು ಮಕ್ಕಳಿದ್ದಾರೆ.

TAGGED:Caninet MinistersModi cabinetNew DelhiOath Takingshivaraj singh chouhan
Share This Article
Facebook Whatsapp Whatsapp Telegram

Cinema Updates

Thug Life Trisha Kamal Haasan
ತ್ರಿಷಾ ಜೊತೆ ರೊಮ್ಯಾನ್ಸ್.. ಅಭಿರಾಮಿಗೆ ಲಿಪ್‌ಲಾಕ್ – ಕಮಲ್ ಹಾಸನ್ ʻಥಗ್ ಲೈಫ್‌ʼ!
1 hour ago
Poonam Pandey
ತುಂಡು ಬಟ್ಟೆಯಿಲ್ಲದೇ ಪೇಪರ್‌ನಿಂದ ಮೈಮುಚ್ಚಿಕೊಂಡ ಪೂನಂ ಪಾಂಡೆ – ಓದ್ಬಿಟ್ಟು ಕೊಡ್ತೀನಿ ಕೊಡಿ ಅಂದ್ರು ನೆಟ್ಟಿಗರು
8 hours ago
prithwi bhat reception
ಪೋಷಕರ ವಿರೋಧದ ನಡುವೆಯೂ ಗಾಯಕಿ ಪೃಥ್ವಿ ಭಟ್‌ ಅದ್ದೂರಿ ರಿಸೆಪ್ಷನ್‌
11 hours ago
pawan kalyan
ಆಪರೇಷನ್ ಸಿಂಧೂರದ ಬಗ್ಗೆ ಸೆಲೆಬ್ರಿಟಿಗಳು ಮಾತಾಡ್ತಿಲ್ಲ: ಪವನ್ ಕಲ್ಯಾಣ್ ಅಸಮಾಧಾನ
12 hours ago

You Might Also Like

Kopala Murder
Latest

100 ರೂಪಾಯಿಗೆ ಅಜ್ಜಿಯನ್ನೇ ಕೊಂದ ಮೊಮ್ಮಗ

Public TV
By Public TV
18 minutes ago
Accident Hulikal
Crime

ನಿಯಂತ್ರಣ ತಪ್ಪಿ ನದಿಗೆ ಉರುಳಿದ ಲಾರಿ – ಚಾಲಕ ಪಾರು

Public TV
By Public TV
19 minutes ago
WEATHER 3
Bengaluru City

ರಾಜ್ಯದಲ್ಲಿ ಭಾರೀ ಮಳೆ – 16 ಜಿಲ್ಲೆಗಳಲ್ಲಿ ಯೆಲ್ಲೋ ಅಲರ್ಟ್‌ ಜಾರಿ

Public TV
By Public TV
24 minutes ago
Rain
Bengaluru City

ಸಿಲಿಕಾನ್ ಸಿಟಿಯಲ್ಲಿ ಅಬ್ಬರಿಸಿದ ವರುಣರಾಯ – ಎಲ್ಲೆಲ್ಲಿ ಏನಾಗಿದೆ?

Public TV
By Public TV
47 minutes ago
virat kohli rcb 2025
Bengaluru City

ಮಳೆಯಿಂದ ಪಂದ್ಯ ರದ್ದು, ಕೋಲ್ಕತ್ತಾ ಔಟ್‌ – ಪ್ಲೇ ಆಫ್‌ ಸನಿಹದಲ್ಲಿ ಆರ್‌ಸಿಬಿ

Public TV
By Public TV
1 hour ago
RCB 4
Bengaluru City

ಆರ್‌ಸಿಬಿ, ಕೆಕೆಆರ್‌ ಪಂದ್ಯ 5 ಓವರ್‌ಗೆ ಸೀಮಿತವಾಗುತ್ತಾ?

Public TV
By Public TV
1 hour ago
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?