ಹಾಸನ ಸೋಲು ಅನಿರೀಕ್ಷಿತ – ಮತ್ತೆ ಪಕ್ಷ ಸಂಘಟನೆ ಮಾಡ್ತೀವಿ: ನಿಖಿಲ್

Public TV
1 Min Read
Nikhil Kumaraswamy 1

ಬೆಂಗಳೂರು: ಹಾಸನ ಲೋಕಸಭೆ ಫಲಿತಾಂಶ (Hassan Lok Sabha Result) ಅನಿರೀಕ್ಷಿತ ಬೆಳವಣಿಗೆ. ಹಾಸನದಲ್ಲಿ ಮತ್ತೆ ಪಕ್ಷ ಕಟ್ಟುವ ಕೆಲಸ ಮಾಡುತ್ತೇವೆ ಎಂದು ಜೆಡಿಎಸ್ ಯುವ ಘಟಕದ ಅಧ್ಯಕ್ಷ ನಿಖಿಲ್ ಕುಮಾರಸ್ವಾಮಿ (Nikhil Kumaraswamy) ತಿಳಿಸಿದ್ದಾರೆ.

ಹಾಸನ ಸೋಲಿಗೆ ಪ್ರತಿಕ್ರಿಯೆ ನೀಡಿದ ಅವರು, ಹಾಸನದ ಬೆಳವಣಿಗೆ ಅನಿರೀಕ್ಷಿತ. ಇಂತಹ ಫಲಿತಾಂಶ ನಿರೀಕ್ಷೆ ಮಾಡಿರಲಿಲ್ಲ. ಪ್ರಜಾಪ್ರಭುತ್ವ ವ್ಯವಸ್ಥೆ, ಚುನಾವಣೆಯಲ್ಲಿ ಗೆಲುವು, ಸೋಲು ಸಾಮಾನ್ಯ. ದೇವೇಗೌಡರು ಸೋತಿರೋ ಇತಿಹಾಸ ಇದೆ. ಸೋತಿದ್ದಾರೆ ಅಂತ ಬೇಸರ ಮಾಡಿಕೊಂಡು ಮನೆಯಲ್ಲಿ ಕೂರೋದಿಲ್ಲ. ಸಾವಿರಾರು ಕಾರ್ಯಕರ್ತರು ಹಾಸನದಲ್ಲಿ ಇದ್ದಾರೆ. ಅವರಿಗಾಗಿ ನಾವು ಅವರ ಜೊತೆ ಇದ್ದೇವೆ. ಮತ್ತೆ ಪಕ್ಷ ಕಟ್ಟುವ ಕೆಲಸ ಹಾಸನದಲ್ಲಿ ಮಾಡುತ್ತೇವೆ ಎಂದರು. ಇದನ್ನೂ ಓದಿ: ಅಗತ್ಯ ಬಿದ್ದರೆ ಬಿಎಸ್‍ವೈ ಅರೆಸ್ಟ್: ಪರಮೇಶ್ವರ್

ಹಾಸನ ಸೋಲಿಗೆ ಕಾರಣ ಪಕ್ಷದ ಚೌಕಟ್ಟಿನಲ್ಲಿ ಮಾತನಾಡುತ್ತೇವೆ. ಆತ್ಮ ವಿಮರ್ಶೆ ಮಾಡಿಕೊಳುತ್ತೇವೆ. ಪ್ರಜ್ವಲ್‌ರಿಂದ ಸೋಲಾಯಿತು ಎಂದು ನಾನು ಮಾತಾಡಲ್ಲ. ಟಿಕೆಟ್ ಕೊಟ್ಟಿದ್ರು. ಚುನಾವಣೆ ಆಗಿದೆ, ಸೋಲಾಯ್ತು. ಅದರ ಬಗ್ಗೆ ನಾನೇನು ಮಾತಾಡಲ್ಲ ಎಂದು ತಿಳಿಸಿದರು. ಇದನ್ನೂ ಓದಿ: ರೇಣುಕಾಸ್ವಾಮಿ ಕೊಲೆ ಕೇಸ್: ತಪ್ಪಿತಸ್ಥರಿಗೆ ಶಿಕ್ಷೆಯಾಗೋವರೆಗೂ ಪ್ರಾಮಾಣಿಕ ತನಿಖೆ ನಡೆಸಬೇಕು: ಬೊಮ್ಮಾಯಿ

Share This Article