Public TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Font ResizerAa
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
  • National
  • World
  • Cinema
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Latest

ಭಾರತೀಯ ಸೇನೆಗೆ ಹೆಚ್ಚಿದ ಬಲ – ಶತ್ರು ಸೇನೆಗಳಿಗೆ ನಡುಕ!

Public TV
Last updated: June 19, 2024 3:05 pm
Public TV
Share
4 Min Read
01 5
SHARE

ರಕ್ಷಣಾ ವಲಯದಲ್ಲಿ ಸ್ವಾವಲಂಬನೆ ಸಾಧಿಸುವ ಗುರಿಯೊಂದಿಗೆ ಮುನ್ನುಗ್ಗುತ್ತಿರುವ ಭಾರತ ಶತ್ರು ಸೇನೆಗಳ ಹುಟ್ಟಡಗಿಸಲು ಸೂಕ್ತ ತಯಾರಿಯನ್ನು ಮಾಡಿಕೊಳ್ಳುತ್ತಿದೆ. ಈ ನಿಟ್ಟಿನಲ್ಲಿ ಮಹತ್ವದ ಹೆಜ್ಜೆಯನ್ನಿಟ್ಟಿರುವ ಭಾರತ ಸ್ವದೇಶಿ ನಿರ್ಮಿತ ಆಯುಧಗಳನ್ನೇ ಸೇನೆಗೆ ಸೇರ್ಪಡೆಗೊಳಿಸಲು ಸಿದ್ಧತೆ ನಡೆಸಿದೆ. ಕೆಲ ದಿನಗಳ ಹಿಂದೆಯಷ್ಟೇ ಭಾರತ ಅಗ್ನಿ-5 (AGNI – 5) ಕ್ಷಿಪಣಿಯ ಯಶಸ್ವಿ ಪರೀಕ್ಷಾರ್ಥ ಪ್ರಯೋಗ ನಡೆಸಿತ್ತು. 5,000 ಕಿಮೀ ದೂರದಲ್ಲಿರುವ ಗುರಿಯನ್ನು ತಲುಪಿ ಶತ್ರುಗಳನ್ನು ಕೊಲ್ಲುವ ಸಾಮರ್ಥ್ಯದ ಈ ಕ್ಷಿಪಣಿಯನ್ನು ರಕ್ಷಣಾ ಸಚಿವಾಲಯ ಸೇನೆಗೆ ಸೇರಿಸುವ ಸಿದ್ಧತೆ ನಡೆಸಿದೆ. ಅಲ್ಲದೇ ಮಹತ್ವದ ಬೆಳವಣಿಗೆಯೊಂದರಲ್ಲಿ ಸ್ವದೇಶಿ ನಿರ್ಮಿತ ಆಧುನಿಕ ತಂತ್ರಜ್ಞಾನ ಒಳಗೊಂಡಿರುವ ʻನಾಗಾಸ್ತ್ರʼವನ್ನು (ಆತ್ಮಹತ್ಯಾ ಡ್ರೋನ್‌) (Suicide Drone) ಭಾರತೀಯ ಸೇನೆಗೆ ಸೇರಿಸುವ ತಯಾರಿ ನಡೆದಿದೆ. ಇದಾದ ಒಂದೆರಡು ದಿನಗಳಲ್ಲೇ ಚೀನಾ ಮತ್ತು ಪಾಕ್‌ ಗಡಿಯಲ್ಲಿ ಭಾರತ ಗಸ್ತು ಹೆಚ್ಚಿಸಲು 156 ಲಘು ಯುದ್ಧ ಹೆಲಿಕಾಪ್ಟರ್‌ಗಳ ಖರೀದಿಗೆ ಮುಂದಾಗಿದೆ.

ಹಾಗಾದ್ರೆ ಭಾರತದ ರಕ್ಷಣಾ ವಲಯದಲ್ಲಿ (India’s Defense Sector) ಆಗುತ್ತಿರುವ ಬೆಳವಣಿಗೆಗಳು ಏನು? ಸೇನಾ ಸಾಮರ್ಥ್ಯ ಹೆಚ್ಚಿಸಲು ಯಾವೆಲ್ಲ ಕ್ರಮಗಳನ್ನು ಮತ್ತು ಏಕೆ ಕೈಗೊಳ್ಳಲಾಗುತ್ತಿದೆ? ಅನ್ನೋ ಬಗ್ಗೆ ತಿಳಿಯೋಣ…

02 9

ಚೀನಾ-ಪಾಕ್‌ಗೆ ಠಕ್ಕರ್‌ ಕೊಡಲು ಪ್ಲ್ಯಾನ್‌:
ಇತ್ತೀಚೆಗೆ ಚೀನಾ, ಭಾರತದ ಸಿಕ್ಕಿಂನಿಂದ ಸುಮಾರು 150 ಕಿಮೀ ಮೀಟರ್‌ಗಳಷ್ಟು ದೂರದ ಪ್ರದೇಶದಲ್ಲಿ 150ಕ್ಕೂ ಹೆಚ್ಚು ಅತ್ಯಾಧುನಿಕ ಫೈಟರ್‌ ಜೆಟ್‌ಗಳನ್ನ ನಿಯೋಜಿಸಿದೆ. ಅಲ್ಲದೇ ಚೀನಾ ನೆರವಿನಿಂದಲೇ ಎದುರಾಳಿ ಪಾಕಿಸ್ತಾನ ಗಡಿ ಭಾಗದಲ್ಲಿ ಭದ್ರತೆಯನ್ನು ಹೆಚ್ಚಿಸಿಕೊಳ್ಳುತ್ತಿದೆ. ಈ ಹಿನ್ನೆಲೆಯಲ್ಲಿ ಉಭಯ ರಾಷ್ಟ್ರಗಳಿಗೆ ಠಕ್ಕರ್‌ ಕೊಡಲು ಭಾರತ ಸಹ ತನ್ನ ಸೇನಾ ಸಾಮರ್ಥ್ಯ ಹೆಚ್ಚಿಸಿಕೊಳ್ಳಲು ಮುಂದಾಗಿದೆ. ಅದಕ್ಕಾಗಿ ಭಾರತೀಯ ಸೇನೆಗೆ 90 ಮತ್ತು ಭಾರತೀಯ ವಾಯುಸೇನೆಗೆ 66 ಲಘು ಯುದ್ಧ ಹೆಲಿಕಾಪ್ಟರ್‌ಗಳ (ಪ್ರಚಂಡ್‌) ಖರೀದಿಗಾಗಿ ಪ್ರಸ್ತಾವನೆ ಸಲ್ಲಿಸಿದೆ. ಹಿಂದೂಸ್ತಾನ್‌ ಏರೋನಾಟಿಕ್ಸ್‌ ಲಿಮಿಡೆಟ್‌ಗೆ (HAL) 45,000 ಕೋಟಿ ರೂ.ಗೆ ಟೆಂಡರ್‌ ನೀಡಿದೆ. `ಪ್ರಚಂಡ್‌ʼ ಹೇಲಿಕಾಪ್ಟರ್‌ (Prachand Helicopter) 5,000 ಮೀಟರ್ (16,400 ಅಡಿ) ಎತ್ತರದಲ್ಲಿ ಲ್ಯಾಂಡಿಂಗ್‌ ಮತ್ತು ಟೇಕಾಫ್‌ ಮಾಡುವ ಸಾಮರ್ಥ್ಯ ಹೊಂದಿದ್ದು, ಸಿಯಾಚಿನ್ ಹಿಮನದಿ ಮತ್ತು ಪೂರ್ವ ಲಡಾಖ್‌ ನಂತಹ ಎತ್ತರದ ಪ್ರದೇಶಗಳಲ್ಲಿ ಕಾರ್ಯನಿರ್ವಹಿಸಲು ಸೂಕ್ತವಾಗಿದೆ ಎಂದು ತಜ್ಞರು ಹೇಳಿದ್ದಾರೆ.

03 8

ಅಣ್ವಸ್ತ್ರಗಳ ಬಲ ಹೆಚ್ಚಿಸಿಕೊಂಡ ಭಾರತ:
ಹೌದು. ವಿಶ್ವದ 9 ರಾಷ್ಟ್ರಗಳು 2023ರಲ್ಲಿ ಅಣ್ವಸ್ತ್ರಗಳನ್ನು (Nuclear Weapons) ಆಧುನಿಕರಣಗೊಳಿಸುವುದರ ಜೊತೆಗೆ ಹೊಸ ಪರಮಾಣು ಸಾಮರ್ಥ್ಯದ ಶಸ್ತ್ರಾಸ್ತ್ರ ವ್ಯವಸ್ಥೆ ನಿಯೋಜಿಸಿವೆ. ಅಮೆರಿಕ, ರಷ್ಯಾ, ಫ್ರಾನ್ಸ್‌, ಚೀನಾ, ದಕ್ಷಿಣ ಕೊರಿಯಾ, ಇಸ್ರೇಲ್‌ ಅಲ್ಲದೇ ಭಾರತವೂ ಸಹ ಈ ರಾಷ್ಟ್ರಗಳ ಪಟ್ಟಿಯಲ್ಲಿದೆ. ಜಾಗತಿಕ ಮಟ್ಟದಲ್ಲಿ ಪರಮಾಣು ಶಸ್ತ್ರಾಸ್ತ್ರಗಳನ್ನು ಅಭಿವೃದ್ಧಿಪಡಿಸುವ ವಿಚಾರದಲ್ಲಿ ಮುನ್ನುಗ್ಗುತ್ತಿರುವ ಭಾರತ ಅಣ್ವಸ್ತ್ರಗಳ ಸಾಮರ್ಥ್ಯವನ್ನೂ ಹೆಚ್ಚಿಸಿಕೊಳ್ಳುತ್ತಿರುವುದು ಗಮನಾರ್ಹವಾಗಿದೆ. ಸದ್ಯ ಅತಿಹೆಚ್ಚು ಅಣ್ವಸ್ತ್ರಗಳನ್ನು ಹೊಂದಿರುವ ವಿಶ್ವದ ಅಗ್ರ ರಾಷ್ಟ್ರಗಳ ಪೈಕಿ ಭಾರತ 4ನೇ ಸ್ಥಾನಕ್ಕೆ ಏರಿಕೆ. ಅಮೆರಿಕ 5,044, ರಷ್ಯಾ 5,580, ಚೀನಾ 476, ಭಾರತ 172, ಪಾಕಿಸ್ತಾನ 170, ಇಸ್ರೇಲ್‌ 90, ಉತ್ತರ ಕೊರಿಯಾ 50 ಪರಮಾಣು ಅಸ್ತ್ರಗಳನ್ನು ಒಳಗೊಂಡಿವೆ.

04 4

ಶತ್ರುಗಳಲ್ಲಿ ನಡುಕ ಹುಟ್ಟಿಸಿದ ನಾಗಾಸ್ತ್ರ:
ನಾಗಾಸ್ತ್ರ-1 ಡ್ರೋನ್ (Nagastra – 1) ಅನ್ನು ಅತ್ಯಂತ ನಿಖರವಾದ ದಾಳಿ ನಡೆಸುವ ಉದ್ದೇಶದಿಂದ ವಿನ್ಯಾಸಗೊಳಿಸಲಾಗಿದ್ದು, ಜಿಪಿಎಸ್ ನಿರ್ದೇಶನದ ನೆರವಿನಿಂದ ಗುರಿಯ ಕೇವಲ 2 ಮೀಟರ್ ವ್ಯಾಪ್ತಿಯಲ್ಲಿ ನಿಖರ ದಾಳಿ ನಡೆಸಬಲ್ಲದು. ಅಲ್ಲದೇ ಇದು ಸ್ಥಿರ ರೆಕ್ಕೆಗಳನ್ನು ಹೊಂದಿದ್ದು, ಓರ್ವ ವ್ಯಕ್ತಿಯೇ ಕೊಂಡೊಯ್ಯುವಷ್ಟು ಹಗುರವಾಗಿದೆ. ಕೇವಲ 9 ಕೆಜಿ ತೂಕ ಹೊಂದಿದ್ದು, ಗರಿಷ್ಠ 30 ನಿಮಿಷಗಳಷ್ಟು ಕಾಲ ಹಾರಾಟ ನಡೆಸುವ ಸಾಮರ್ಥ್ಯ ಹೊಂದಿದೆ. ಡ್ರೋನ್ ಹೊಂದಿರುವ ಎಲೆಕ್ಟ್ರಿಕ್ ಪ್ರೊಪಲ್ಷನ್ ವ್ಯವಸ್ಥೆಯ ಕಾರಣದಿಂದ, ಇದು ಅತ್ಯಂತ ಕನಿಷ್ಠ ಪ್ರಮಾಣದ ಸದ್ದನ್ನು ಹೊರಹೊಮ್ಮಿಸುತ್ತದೆ. ಡ್ರೋನ್ 200 ಮೀಟರ್‌ಗಳಿಗಿಂತ ಎತ್ತರದಲ್ಲಿ ಹಾರಾಟ ನಡೆಸುವಾಗ ಅದನ್ನು ಗುರುತಿಸುವುದು ಶತ್ರುಗಳಿಗೆ ಕಷ್ಟಕರವಾಗುತ್ತದೆ.

05 4

ನಾಗಾಸ್ತ್ರ ಆತ್ಮಹತ್ಯಾ ಡ್ರೋನ್‌:
ನಾಗಾಸ್ತ್ರವನ್ನು ಆತ್ಮಹತ್ಯಾ ಡ್ರೋನ್‌ಗಳೆಂದೂ (ಸುಸೈಡ್ ಡ್ರೋನ್) ಕರೆಯಲಾಗುತ್ತದೆ. ಇವುಗಳು ಒಂದು ಬಾರಿ ಮಾತ್ರವೇ ಪ್ರಯೋಗಿಸಬಲ್ಲ ಆಯುಧಗಳಾಗಿವೆ. ನೇರವಾಗಿ ತಮ್ಮ ಗುರಿಯೆಡೆಗೆ ಸಾಗಿ, ತಮ್ಮನ್ನು ತಾವು ಸ್ಫೋಟಿಸಿಕೊಳ್ಳುತ್ತವೆ. ಇದು ಸರಿಯಾದ ಗುರಿಯನ್ನು ಗುರುತಿಸುವ ತನಕ ಮೇಲ್ಭಾಗದಲ್ಲಿ ಹಾರಾಡುವ ರೀತಿಯಲ್ಲಿ ವಿನ್ಯಾಸಗೊಳಿಸಲಾಗಿದ್ದು, ಅವಕಾಶ ಸಿಕ್ಕ ತಕ್ಷಣವೇ ಗುರಿಯ ಮೇಲೆ ದಾಳಿ ನಡೆಸುತ್ತವೆ. ಒಂದು ವೇಳೆ ಗುರಿಯನ್ನು ಗುರುತಿಸಲು ಸಾಧ್ಯವಾಗದಿದ್ದರೆ, ದಾಳಿ ಯೋಜನೆ ರದ್ದುಗೊಳಿಸಿದರೆ, ಗಾಳಿಯಲ್ಲಿ ಅಡ್ಡಾಡುವ ಡ್ರೋನ್ ಅನ್ನು ಮರಳಿ ಹಿಂದಕ್ಕೆ ಕರೆಸಿಕೊಳ್ಳಬಹುದು. ಅದಕ್ಕಾಗಿ ಅನುಕೂಲಕರ ಲ್ಯಾಂಡಿಂಗ್‌ ಮಾಡಲು ಪ್ಯಾರಾಚುಟ್‌ ರಿಕವರಿ ವ್ಯವಸ್ಥೆಯನ್ನೂ ಹೊಂದಿದೆ. ಇದರಿಂದಾಗಿ ಡ್ರೋನ್ ಮರುಬಳಕೆಗೆ ಲಭ್ಯವಾಗುತ್ತದೆ.

ಇಷ್ಟೇ ಅಲ್ಲ, ಕಳೆದ ವರ್ಷವೂ ಸಹ ಭಾರತದ ರಕ್ಷಣಾ ಸಚಿವಾಲಯ ಸುಮಾರು 45,000 ಕೋಟಿ ರೂ. ಮೌಲ್ಯದ ವಿವಿಧ ಆಯುಧಗಳ ಖರೀದಿಗೆ ಒಪ್ಪಿಗೆ ಸೂಚಿಸಿತ್ತು. ಧ್ರುವಾಸ್ತ್ರ ಕ್ಷಿಪಣಿಗಳು, ಭಾರತ ಸರ್ಕಾರಿ ಸ್ವಾಮ್ಯದ ಹಿಂದೂಸ್ತಾನ್ ಏರೋನಾಟಿಕ್ಸ್ ಲಿಮಿಟೆಡ್ ನಿರ್ಮಾಣದ 12 ಸುಖೋಯ್‌-30 MKI ಯುದ್ಧ ವಿಮಾನಗಳು, ಆರ್ಟಿಲರಿ ಗನ್‌ಗಳು ಮತ್ತು ರೇಡಾರ್‌ಗಳನ್ನ ಕ್ಷಿಪ್ರವಾಗಿ ಸಾಗಿಸಲು ಅತ್ಯವಶ್ಯಕವಾದ ಹೈ ಮೊಬಿಲಿಟಿ ವೆಹಿಕಲ್ ಹಾಗೂ ಗನ್ ಟೋವಿಂಗ್ ವೆಹಿಕಲ್ಸ್‌ಗಳನ್ನ ಖರೀದಿಸಲು ಅನುಮೋದನೆ ನೀಡಿತ್ತು.

06

ಗಾಳಿಯಿಂದ ಭೂಮಿಗೆ ದಾಳಿ ನಡೆಸುವ ʻಧ್ರುವಾಸ್ತ್ರʼ:
ಭಾರತದ ದೇಶೀಯ ನಿರ್ಮಾಣದ ಹೆಲಿಕಾಪ್ಟರ್ ಲಾಂಚ್ಡ್ ನಾಗ್ (ಹೆಲಿನಾ) ಆ್ಯಂಟಿ ಟ್ಯಾಂಕ್ ಗೈಡೆಡ್ ಮಿಸೈಲ್ (ATGM) ಎಲ್ಲ ಪರೀಕ್ಷೆಗಳನ್ನೂ ಯಶಸ್ವಿಯಾಗಿ ಪೂರ್ಣಗೊಳಿಸಿದೆ. ಹೆಲಿನಾ ಭಾರತೀಯ ಭೂಸೇನೆಯ ಆವೃತ್ತಿಯಾದರೆ, ಭಾರತೀಯ ವಾಯುಪಡೆಯ ಆವೃತ್ತಿಯನ್ನ ಧ್ರುವಾಸ್ತ್ರ ಎಂದು ಕರೆಯಲಾಗುತ್ತದೆ. ಈ ಧ್ರುವಾಸ್ತ್ರವೂ ತನ್ನ ಆರಂಭಿಕ ಪ್ರಾಯೋಗಿಕ ಪರೀಕ್ಷೆಗಳನ್ನ ಯಶಸ್ವಿಯಾಗಿ ಪೂರ್ಣಗೊಳಿಸಿದೆ. ಧ್ರುವಾಸ್ತ್ರ ಅವಳಿ ಲಾಂಚರ್‌ಗಳನ್ನ ಹೊಂದಿದ್ದು, ಒಟ್ಟು 8 ಕ್ಷಿಪಣಿಗಳನ್ನ ಒಯ್ಯುವ ಸಾಮರ್ಥ್ಯ ಹೊಂದಿದೆ. ಇದರ ಕ್ಷಿಪಣಿ ಗರಿಷ್ಠ 4 ಕಿಮೀ ಗಳಷ್ಟು ಎತ್ತರದಿಂದ ಉಡಾವಣೆಗೊಳಿಸಬಹುದಾಗಿದೆ. ಪ್ರತಿ ಗಂಟೆಗೆ 70 ಕಿಮೀ ಗಳಷ್ಟು ವೇಗದಲ್ಲಿ ನಿಖರವಾಗಿ ದಾಳಿ ನಡೆಸಬಲ್ಲದು. ಧ್ರುವಾಸ್ತ್ರ ಕ್ಷಿಪಣಿ 43 ಕೆಜಿ ತೂಕ ಹೊಂದಿರಲಿದೆ. ಇದು ಇದರ ಮೂಲ ವಿನ್ಯಾಸವಾದ ನಾಗ್ ಕ್ಷಿಪಣಿಯಷ್ಟೇ ತೂಕ ಹೊಂದಿದೆ. ಇದರ ಸಿಡಿತಲೆ 8 ಕೆಜಿಗಳಷ್ಟು ತೂಕವಿದೆ. ಇದು ಅಂದಾಜು 1.85 – 1.9 ಮೀಟರ್ (6 ಅಡಿ) ಉದ್ದವಿದ್ದು, 0.16-0.2 ಮೀಟರ್ (8 ಇಂಚ್) ಅಗಲ ಇರಲಿದೆ. ಧ್ರುವಾಸ್ತ್ರ ಸಹ ಈಗಾಗಲೇ ಪ್ರಾಯೋಗಿಕ ಪರೀಕ್ಷೆಗಳನ್ನ ಯಶಸ್ವಿಗೊಳಿಸಿದ್ದು, ಸೇನೆಗೆ ಸೇರಿಸುವ ಪ್ರಕ್ರಿಯೆ ನಡೆಯುತ್ತಿದೆ ಎಂದು ಉನ್ನತ ಮೂಲಗಳು ತಿಳಿಸಿವೆ.

TAGGED:HALIAFindian armyNagastraPrachand HelicopterSuicide Droneಐಎಂಎಫ್ಭಾರತೀಯ ಸೇನೆರಕ್ಷಣಾ ಸಚಿವಾಲಯಹೆಚ್‍ಎಎಲ್
Share This Article
Facebook Whatsapp Whatsapp Telegram

Cinema Updates

Sydney Sweeney
ಸ್ನಾನ ಮಾಡಿದ ನೀರನ್ನು ಸೋಪ್ ಮಾಡಿ 8 ಡಾಲರ್‌ಗೆ ಮಾರಾಟ ಮಾಡ್ತಿದ್ದಾಳೆ ಸಿಡ್ನಿ ಸ್ವೀನಿ!
6 hours ago
Darshan
ಕೊನೆಗೂ `ದಾಸ’ನಿಗೆ ವಿದೇಶಕ್ಕೆ ತೆರಳಲು ಅನುಮತಿ ಕೊಟ್ಟ ಕೋರ್ಟ್
8 hours ago
sanjana anand
ರಶ್ಮಿಕಾ, ಶ್ರೀಲೀಲಾ ಬಳಿಕ ತೆಲುಗಿನತ್ತ ಸಂಜನಾ ಆನಂದ್
9 hours ago
dhruva sarja sudeep
ಧ್ರುವ ಸರ್ಜಾ ನಟನೆಯ ‘ಕೆಡಿ’ ಸಿನಿಮಾದಲ್ಲಿ ಸುದೀಪ್?
10 hours ago

You Might Also Like

rohit sharma 2
Cricket

ರೋ’ಹಿಟ್‌’ ಆಟಕ್ಕೆ ಗಿಲ್‌ ಪಡೆ ಡಲ್‌; ಮುಂಬೈಗೆ 20 ರನ್‌ಗಳ ಜಯ – ಫೈನಲ್‌ ಸ್ಥಾನಕ್ಕೆ ಪಂಜಾಬ್‌ ವಿರುದ್ಧ ಫೈಟ್‌

Public TV
By Public TV
4 hours ago
KARAVE NARAYAN GOWDA
Bengaluru City

ಕಮಲ್ ಹಾಸನ್ ಚಿತ್ರ ರಿಲೀಸ್ ಆದ್ರೆ ಥಿಯೇಟರ್‌ಗಳಿಗೆ ಬೆಂಕಿ ಹಚ್ತೀವಿ: ನಾರಾಯಣಗೌಡ ಎಚ್ಚರಿಕೆ

Public TV
By Public TV
5 hours ago
AI ಚಿತ್ರ
Dakshina Kannada

ದ.ಕ ಜಿಲ್ಲೆಯಾದ್ಯಂತ ಭಾರೀ ಮಳೆ – ಶನಿವಾರ ಶಾಲೆಗಳಿಗೆ ರಜೆ ಘೋಷಣೆ

Public TV
By Public TV
5 hours ago
Pramod Tiwari
Latest

ರಾಹುಲ್‌ ಗಾಂಧಿ ಪ್ರಧಾನಿಯಾದ ದಿನ ಪಿಒಕೆ ಭಾರತದ ಭಾಗವಾಗಲಿದೆ: ʻಕೈʼ ಸಂಸದ ಪ್ರಮೋದ್ ತಿವಾರಿ

Public TV
By Public TV
5 hours ago
Dinesh Gundu Rao 2
Latest

ಮಂಗಳೂರಲ್ಲಿ ‘ಮರಣ ಮಳೆ’ಗೆ 5 ಬಲಿ – ಮೃತರ ಕುಟುಂಬಕ್ಕೆ ತಲಾ 5 ಲಕ್ಷ ಪರಿಹಾರ ಘೋಷಣೆ

Public TV
By Public TV
6 hours ago
rohit sharma 1
Cricket

ಐಪಿಎಲ್‌ನಲ್ಲಿ ಎರಡೆರಡು ದಾಖಲೆ ಬರೆದ ಹಿಟ್‌ಮ್ಯಾನ್‌

Public TV
By Public TV
7 hours ago
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?