Public TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Font ResizerAa
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
  • National
  • World
  • Cinema
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • Live TV
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Latest

ʻಡಿʼ ಗ್ಯಾಂಗ್‌ ವಿರುದ್ಧ 9 ಸೆಕ್ಷನ್‌ಗಳ ಅಡಿಯಲ್ಲಿ ಕೇಸ್‌ ದಾಖಲು – ಏನ್‌ ಹೇಳುತ್ತೆ ಸೆಕ್ಷನ್ಸ್‌?

Public TV
Last updated: June 20, 2024 9:44 am
Public TV
Share
2 Min Read
Darshan 2 2
SHARE

ಬೆಂಗಳೂರು: ರೇಣುಕಾಸ್ವಾಮಿ ಹತ್ಯೆ ಪ್ರಕರಣದ ಆರೋಪಿಗಳಾದ ನಟ ದರ್ಶನ್‌ (Darshan) ಮತ್ತು ಗ್ಯಾಂಗ್‌ ವಿರುದ್ಧ ಪೊಲೀಸರು ಒಟ್ಟು 9 ಸೆಕ್ಷನ್‌ಗಳ (IPC Sections) ಅಡಿಯಲ್ಲಿ ಪ್ರಕರಣ ದಾಖಲಿಸಿದ್ದಾರೆ.

ಆರಂಭದಲ್ಲಿ 302, 201 ಅಡಿಯಲ್ಲಿ ಪ್ರಕರಣ ದಾಖಲಾಗಿತ್ತು. ಆದ್ರೆ ತನಿಖೆ ವೇಳೆ ಮಹತ್ವದ ಸಾಕ್ಷ್ಯಗಳನ್ನು ಕಲೆಹಾಕಿರುವ ಪೊಲೀಸರು 9 ಸೆಕ್ಷನ್‌ಗಳ ಅಡಿಯಲ್ಲಿ ಪ್ರಕರಣ ದಾಖಲಿಸಿಕೊಂಡಿದ್ದಾರೆ. ಆರೋಪಿಗಳ ವಿರುದ್ಧ ಐಪಿಸಿ ಸೆಕ್ಷನ್‌ 302, 201, 120-ಬಿ, 355, 384, 143,147,148, ರೆ/ವಿ 149 ಅಡಿಯಲ್ಲಿ ಪ್ರಕರಣಗಳನ್ನ ದಾಖಲಿಸಲಾಗಿದೆ ಎಂದು ʻಪಬ್ಲಿಕ್‌ ಟಿವಿʼಯಲ್ಲಿ ಲಭ್ಯವಾದ ರಿಮ್ಯಾಂಡ್‌ ಕಾಪಿಯಲ್ಲಿ ಪೊಲೀಸರು (Bengaluru Police) ತಿಳಿಸಿದ್ದಾರೆ. ಯಾವ ಸೆಕ್ಷನ್‌ಗಳು ಏನು ಹೇಳುತ್ತವೆ ಎಂಬುದನ್ನು ನಾವಿಲ್ಲಿ ನೋಡಬಹುದು…

ಸೆಕ್ಷನ್‌ 302 – ಕೊಲೆಗೆ ದಂಡನೆ
ಸೆಕ್ಷನ್‌ 201 – ಅಪರಾಧಿಯನ್ನು ರಕ್ಷಿಸುವುದಕ್ಕಾಗಿ ತಪ್ಪು ಮಾಹಿತಿ ಕೊಡುವುದು, ಸಾಕ್ಷ್ಯ ನಾಶ
ಸೆಕ್ಷನ್‌ 120(ಬಿ) – ಕೊಲೆ ಮಾಡಲು ಮಾಡಿಕೊಂಡ ಅಪರಾಧಿಕ ಒಳ ಸಂಚು. ಕೃತ್ಯದಲ್ಲಿ ಭಾಗಿಯಾಗಿರುವ ಪ್ರತಿಯೊಬ್ಬರಿಗೂ ಶಿಕ್ಷೆ ವಿಧಿಸಬೇಕು
ಸೆಕ್ಷನ್‌ 355 – ತೀವ್ರ ಉದ್ರೇಕದಿಂದಲ್ಲದೇ ವ್ಯಕ್ತಿಗೆ ಅವಮಾನ ಮಾಡಲು ಅವನ ಮೇಲೆ ಹಲ್ಲೆ, ಅಥವಾ ಅಪರಾಧಿಕ ಬಲಪ್ರಯೋಗ ಮಾಡುವುದು
ಸೆಕ್ಷನ್‌ 384 – ಬಲಾಗ್ದ್ರ ಹಣಕ್ಕಾಗಿ ದಂಡನೆ / ಸುಲಿಗೆ
ಸೆಕ್ಷನ್‌ 143 – ಕಾನೂನು ಬಾಹಿರ ಕೃತ್ಯ ಎಸಗಿದವರಿಗೆ 6 ತಿಂಗಳ ವರೆಗೆ ಜೈಲು ಅಥವಾ ಸಮಾನಾಂತರ ದಂಡ ವಿಧಿಸಬಹುದಾದ ದಂಡನೆ
ಸೆಕ್ಷನ್‌ 147 – ದೊಂಬಿ ಗಲಾಟೆ ಮಾಡಿದರೆ ದಂಡನೆ
ಸೆಕ್ಷನ್‌ 148 – ಮಾರಕ ಆಯುಧಗಳನ್ನು ಬಳಸಿ ದೊಂಬಿ ಮಾಡುವುದು
ಸೆಕ್ಷನ್‌ 149 – ಒಂದೇ ಉದ್ದೇಶ ಈಡೇರಿಸಲು ಮಾಡಲಾದ ಅಪರಾಧಗಳ ಬಗ್ಗೆ ವಿಧಿಸಿರುವ ಕೂಟದ ಪ್ರತಿಯೊಬ್ಬ ಸದಸ್ಯನೂ ತಪ್ಪಿತಸ್ಥನಾಗುವುದು / ಕೃತ್ಯಕ್ಕೆ ಒಳ ಸಂಚು

ʻಡಿ’ ಗ್ಯಾಂಗ್ ಪೊಲೀಸ್ ಕಸ್ಟಡಿ ಇಂದು ಅಂತ್ಯ:
ಆರೋಪಿಗಳಾಗಿರುವ ನಟ ದರ್ಶನ್, ಪವಿತ್ರಾ ಗೌಡ, ವಿನಯ್ ಸೇರಿದಂತೆ ಹಲವರ ಪೊಲೀಸ್ ಕಸ್ಟಡಿ ಅವಧಿ ಇಂದು (ಗುರುವಾರ) ಮುಕ್ತಾಯಗೊಳ್ಳಲಿದೆ. ಜೂನ್ 11ರಂದು ಆರೋಪಿಗಳನ್ನು ಬಂಧಿಸಲಾಗಿದ್ದು, ಈವರೆಗೆ ಪೊಲೀಸರು ವಿವಿಧ ರೀತಿಯಲ್ಲಿ ವಿಚಾರಣೆ ನಡೆಸಿ ಸಾಕ್ಷ್ಯಗಳನ್ನು ಸಂಗ್ರಹಿಸಿದ್ದಾರೆ. ಇಂದಿಗೆ 17 ಆರೋಪಿಗಳ ಪೊಲೀಸ್ ಕಸ್ಟಡಿ ಅಂತ್ಯವಾಗಲಿದೆ. ಹೀಗಾಗಿ, ಜೂನ್ 20ರ ಮಧ್ಯಾಹ್ನದ ನಂತರ ಆರೋಪಿಗಳನ್ನು ಪೊಲೀಸರು ನ್ಯಾಯಾಲಯಕ್ಕೆ ಹಾಜರುಪಡಿಸಲಿದ್ದಾರೆ. ಈಗಾಗಲೇ ದರ್ಶನ್ ಮತ್ತವರ ಗ್ಯಾಂಗ್‌ನ ಆರೋಪಿಗಳನ್ನ ಪೊಲೀಸರು ವಿವಿಧ ಆಯಾಮಗಳಲ್ಲಿ ವಿಚಾರಣೆ ನಡೆಸಿದ್ದಾರೆ. ಸ್ಥಳ ಮಹಜರು ನಡೆಸಿ, ಮಹತ್ವದ ಸಾಕ್ಷ್ಯಗಳನ್ನು ಸಂಗ್ರಹಿಸಿದ್ದಾರೆ, ಸ್ವಇಚ್ಚಾ ಹೇಳಿಕೆ ದಾಖಲಿಸಿಕೊಂಡಿದ್ದಾರೆ. ಹೀಗಾಗಿ ಮತ್ತೆ ಡಿ ಗ್ಯಾಂಗ್ ನ ಪೊಲೀಸ್ ಕಸ್ಟಡಿಗೆ ಕೇಳದಿರಲು ತೀರ್ಮಾನಿಸಿದ್ದು, ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲು ಮನವಿ ಮಾಡಲು ಮುಂದಾಗಿದ್ದಾರೆ ಎಂದು ತಿಳಿದುಬಂದಿದೆ.

TAGGED:bengalurudarshanDNAIPC Sectionvictoria hospitalಐಪಿಸಿ ಸೆಕ್ಷನ್ಡಿಎನ್‍ಎದರ್ಶನ್ಬೆಂಗಳೂರುವಿಕ್ಟೋರಿಯಾ ಆಸ್ಪತ್ರೆ
Share This Article
Facebook Whatsapp Whatsapp Telegram

Cinema Updates

Arjun Janya
ಅರ್ಜುನ್ ಜನ್ಯ ನಿರ್ದೇಶನದ ಚಿತ್ರಕ್ಕೆ ಉಗಾಂಡ ಕಲಾವಿದರ ಮೆರಗು
1 hour ago
Timmana Mottegalu 4
ತಿಮ್ಮನ ಮೊಟ್ಟೆಗಳು ಟ್ರೈಲರ್‌ಗೆ ಭಾರೀ ಮೆಚ್ಚುಗೆ
1 hour ago
Kamal Haasan
ಕಮಲ್ `ಕನ್ನಡ’ ವಿವಾದ – ಜೂ.20ಕ್ಕೆ ವಿಚಾರಣೆ ಮುಂದೂಡಿದ ಕೋರ್ಟ್
18 hours ago
Kangana Ranaut to bengaluru
ಬೆಂಗಳೂರಿನ ಶಿವೋಹಂ ಶಿವ ದೇವಸ್ಥಾನಕ್ಕೆ ಭೇಟಿ ನೀಡಿದ ಕಂಗನಾ ರಣಾವತ್‌
20 hours ago

You Might Also Like

Samir Kumar Sinha plane crash
Latest

ದುರಂತಕ್ಕೂ ಮುನ್ನ ಇದೇ ವಿಮಾನ ಪ್ಯಾರಿಸ್‌ನಿಂದ ದೆಹಲಿಗೆ ಹಾರಾಟ ನಡೆಸಿತ್ತು!

Public TV
By Public TV
10 minutes ago
Suhas Shetty Mangaluru copy
Crime

ಸುಹಾಸ್ ಶೆಟ್ಟಿ ಹತ್ಯೆ ಕೇಸ್ – ಮಂಗಳೂರಿಗೆ ಆಗಮಿಸಿದ ಎನ್‍ಐಎ ತಂಡ

Public TV
By Public TV
18 minutes ago
neet topper mahesh kumar
Latest

NEET-UG 2025 ಫಲಿತಾಂಶ ಪ್ರಕಟ; ರಾಜಸ್ಥಾನದ ಅಭ್ಯರ್ಥಿ ಟಾಪರ್‌, ಕರ್ನಾಟಕದ ನಿಖಿಲ್‌ಗೆ 17ನೇ ರ‍್ಯಾಂಕ್‌

Public TV
By Public TV
32 minutes ago
Rajasthan Youth Tea Selling 1
Latest

ಅತ್ತೆ ಮನೆ ಮುಂದೆ ಅಳಿಯನ ಟೀ ಅಂಗಡಿ – ಕೈಗೆ ಕೋಳ ಧರಿಸಿ ಚಹಾ ಮಾರಾಟ

Public TV
By Public TV
1 hour ago
Nikhil Kumaraswamy 1 2
Bengaluru City

ಕೇಂದ್ರ ಜಾತಿಗಣತಿ ಮಾಡೋವಾಗ ರಾಜ್ಯ ಸರ್ಕಾರದಿಂದ ಜಾತಿಗಣತಿ ಬೇಡ: ನಿಖಿಲ್ ಕುಮಾರಸ್ವಾಮಿ

Public TV
By Public TV
1 hour ago
Nikhil Kumaraswamy
Bengaluru City

ರಾಜ್ಯಕ್ಕೆ ಅನುದಾನದ ಕೊರತೆ ಆಗಿದ್ದರೆ ಪ್ರಧಾನಿಗಳ ಜೊತೆ ಸಿಎಂ ಮಾತಾಡಲಿ: ನಿಖಿಲ್ ಕುಮಾರಸ್ವಾಮಿ

Public TV
By Public TV
1 hour ago
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?