ಸೂರಜ್‌ ರೇವಣ್ಣ ಪ್ರಕರಣ ಸಿಐಡಿ ತನಿಖೆಗೆ – ರಾಜ್ಯ ಸರ್ಕಾರ ಆದೇಶ

Public TV
1 Min Read
suraj revanna 4

ಬೆಂಗಳೂರು: ಯುವಕನ ಮೇಲೆ ಅಸಹಜ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದಲ್ಲಿ ಬಂಧನಕ್ಕೊಳಗಾಗಿರುವ ಎಂಎಲ್‌ಸಿ ಸೂರಜ್‌ ರೇವಣ್ಣ (Suraj Revanna) ಪ್ರಕರಣದ ತನಿಖೆಯನ್ನು ಸಿಐಡಿಗೆ (CID) ವಹಿಸಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ.

SURAJ REVANNA 1

ಸೂರಜ್‌ ರೇವಣ್ಣ ವಿರುದ್ಧ ಹಾಸನ ಜಿಲ್ಲೆಯ ಹೊಳೆ ನರಸೀಪುರ ಗ್ರಾಮಾಂತರ ಪೊಲೀಸ್‌ ಠಾಣೆಯಲ್ಲಿ ಶನಿವಾರ ಪ್ರಕರಣ ದಾಖಲಾಗಿತ್ತು. ಐಪಿಸಿ ಸೆಕ್ಷನ್‌ 377, 342, 506, 34 ರ ಅಡಿ ಸೂರಜ್‌ ವಿರುದ್ಧ ದಾಖಲಾಗಿರುವ ಪ್ರಕರಣದ ತನಿಖೆಯನ್ನು ಸಿಐಡಿಗೆ ವರ್ಗಾವಣೆ ಮಾಡಲಾಗಿದೆ. ಇದನ್ನೂ ಓದಿ: ತಪ್ಪು ಮಾಡಿದ್ದರೆ ಸೂರಜ್ ಯಾಕೆ ದೂರು ಕೊಡೋಕೆ ಹೋಗ್ತಿದ್ರು? – ಹೆಚ್‌.ಡಿ ರೇವಣ್ಣ ಪ್ರಶ್ನೆ

ಅಸಹಜ ಲೈಂಗಿಕ ದೌರ್ಜನ್ಯ ಆರೋಪದಲ್ಲಿ ಸೂರಜ್‌ ರೇವಣ್ಣ ಅವರನ್ನು ಹಾಸನದಲ್ಲಿ ಪೊಲೀಸರು ಬಂಧಿಸಿದ್ದಾರೆ. ವೈದ್ಯಕೀಯ ಪರೀಕ್ಷೆಗಾಗಿ ಅವರನ್ನು ಇಂದು ಆಸ್ಪತ್ರೆಗೆ ಹಾಜರುಪಡಿಸಲಾಗಿದೆ.

Share This Article