ಬೆಂಗಳೂರಲ್ಲಿ 17ರ ಯುವಕನ ಬರ್ಬರ ಹತ್ಯೆ!

Public TV
1 Min Read
Crime

ಬೆಂಗಳೂರು: 17 ವರ್ಷದ ಯುವಕನನ್ನು ಬರ್ಬರವಾಗಿ ಹತ್ಯೆಗೈದಿರುವ ಘಟನೆ ಗಂಗಮ್ಮ ಗುಡಿ ಪೊಲೀಸ್ ಠಾಣಾ (Gangamma Gudi Police Station) ವ್ಯಾಪ್ತಿಯಲ್ಲಿ ನಡೆದಿದೆ.

ಬೆಂಗಳೂರಿನ (Bengaluru) ಗಂಗಮ್ಮ ಗುಡಿ ಪೊಲೀಸ್ ಠಾಣಾ ವ್ಯಾಪ್ತಿಯ ವೈಮ್ಯಾಕ್ಸ್ ಸರ್ಕಲ್ ಬಳಿ ಘಟನೆ ನಡೆದಿದೆ. ಮಂಜುನಾಥ್ ಕೊಲೆಯಾದ ಯುವಕ. ಇದನ್ನೂ ಓದಿ: ಮೃತ ಹಜ್ ಯಾತ್ರಿಕರ ಸಂಖ್ಯೆ 1,300ಕ್ಕೆ ಏರಿಕೆ – ಘಟನೆಗೆ ಕಾರಣ ತಿಳಿಸಿದ ಸೌದಿ!

ತಡರಾತ್ರಿ ವೈಮ್ಯಾಕ್ಸ್ ವೃತ್ತದ ಬಳಿ ಬಂದಿದ್ದ ದುಷ್ಕರ್ಮಿಗಳು ಮಾರಕಾಸ್ತ್ರಗಳಿಂದ ಕೊಚ್ಚಿ ಕೊಲೆ ಮಾಡಿದ್ದಾರೆ. ಸದ್ಯ ಸ್ಥಳಕ್ಕೆ ಗಂಗಮ್ಮ ಗುಡಿ ಪೊಲೀಸರು ಭೇಟಿ ಪರಿಶೀಲನೆ ನಡೆಸಿದ್ದಾರೆ.

ಯುವಕನ ಭೀಕರ ಕೊಲೆ ನಿಖರ ಕಾರಣ ತಿಳಿದು ಬಂದಿಲ್ಲ. ತನಿಖೆ ನಡೆಯುತ್ತಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಇದನ್ನೂ ಓದಿ: ಸೂರಜ್‌ ಪರ ಇಂದು ಜಾಮೀನು ಅರ್ಜಿ ಸಲ್ಲಿಕೆ – ವಕೀಲ ನಿಖಿಲ್ ಕಾಮತ್ 

Share This Article