ಬಾಡಿಗಾರ್ಡ್ ಮಾಡಿದ ಯಡವಟ್ಟು- ಅಂಗವಿಕಲ ಅಭಿಮಾನಿಗೆ ಕ್ಷಮೆಯಾಚಿಸಿದ ನಾಗಾರ್ಜುನ

Public TV
1 Min Read
nagarjuna

ಟಾಲಿವುಡ್ ನಟ ನಾಗಾರ್ಜುನರನ್ನು(Nagarjuna) ಭೇಟಿಯಾಗಲು ಬಂದ ಅಂಗವಿಕಲ ಅಭಿಮಾನಿಯನ್ನು ನಟನ ಬಾಡಿಗಾರ್ಡ್ ದೂಡಿದ ಘಟನೆ ಮುಂಬೈ ವಿಮಾನ ನಿಲ್ದಾಣ ನಡೆದಿತ್ತು. ಬಳಿಕ ಈ ವಿಡಿಯೋ ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಆಗಿತ್ತು. ಈಗ ಅದೇ ಅಂಗವಿಕಲ ಅಭಿಮಾನಿಯನ್ನು (Fan) ಭೇಟಿಯಾಗಿ ನಾಗಾರ್ಜುನ ಕ್ಷಮೆಯಾಚಿಸಿದ್ದಾರೆ. ಇದನ್ನೂ ಓದಿ:ಮದುವೆ ಬಳಿಕ 25 ಕೋಟಿ ಬೆಲೆ ಬಾಳುವ ಮನೆಗೆ ಸೋನಾಕ್ಷಿ ಸಿನ್ಹಾ ಶಿಫ್ಟ್

ಜೂನ್ 26ರಂದು ಅಂಗವಿಕಲ ಅಭಿಮಾನಿಯನ್ನು ಭೇಟಿಯಾಗಿ ಅಪ್ಪಿಕೊಂಡು ಫೋಟೋ ಕ್ಲಿಕ್ಕಿಸಿಕೊಂಡಿದ್ದಾರೆ. ಇದು ನಿನ್ನ ತಪ್ಪಲ್ಲ, ನನ್ನ ತಪ್ಪು ಕ್ಷಮಿಸಿಬಿಡು. ತಪ್ಪು ನನ್ನದು ಎಂದು ಫ್ಯಾನ್‌ ಕ್ಷಮೆಯಾಚಿಸಿದ್ದಾರೆ. ಈಗ ಇವರಿಬ್ಬರು ಭೇಟಿಯಾದ ವಿಡಿಯೋ ನೆಟ್ಟಿಗರ ಚರ್ಚೆಗೆ ಗ್ರಾಸವಾಗಿದೆ.

ಅಂದಹಾಗೆ, ಧನುಷ್ ಮತ್ತು ರಶ್ಮಿಕಾ ಮಂದಣ್ಣ ನಟನೆಯ ‘ಕುಬೇರ’ (Kubera) ಸಿನಿಮಾದಲ್ಲಿ ನಾಗಾರ್ಜುನ ಪ್ರಮುಖ ಪಾತ್ರದಲ್ಲಿ ಕಾಣಿಸಿಕೊಳ್ತಿದ್ದಾರೆ. ಸೌತ್‌ ಜೊತೆ ಬಾಲಿವುಡ್‌ ಸಿನಿಮಾಗಳಲ್ಲಿಯೂ ಬ್ಯುಸಿಯಾಗಿದ್ದಾರೆ.

Share This Article