Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: Karnataka Rain Alert: ಬೆಂಗ್ಳೂರಲ್ಲಿ ಬಿಟ್ಟೂಬಿಡದ ಮಳೆ – ಬೋಟ್‌ಗಳಲ್ಲಿ ಜನ, ಸಾಕುಪ್ರಾಣಿಗಳ ರಕ್ಷಣೆ; ಎಲ್ಲೆಲ್ಲಿ ಏನಾಯ್ತು?
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Bengaluru City | Karnataka Rain Alert: ಬೆಂಗ್ಳೂರಲ್ಲಿ ಬಿಟ್ಟೂಬಿಡದ ಮಳೆ – ಬೋಟ್‌ಗಳಲ್ಲಿ ಜನ, ಸಾಕುಪ್ರಾಣಿಗಳ ರಕ್ಷಣೆ; ಎಲ್ಲೆಲ್ಲಿ ಏನಾಯ್ತು?

Bengaluru City

Karnataka Rain Alert: ಬೆಂಗ್ಳೂರಲ್ಲಿ ಬಿಟ್ಟೂಬಿಡದ ಮಳೆ – ಬೋಟ್‌ಗಳಲ್ಲಿ ಜನ, ಸಾಕುಪ್ರಾಣಿಗಳ ರಕ್ಷಣೆ; ಎಲ್ಲೆಲ್ಲಿ ಏನಾಯ್ತು?

Public TV
Last updated: July 8, 2024 9:48 pm
Public TV
Share
3 Min Read
Rain 2
SHARE

ಬೆಂಗಳೂರು: ಜುಲೈ ಮೊದಲ ವಾರದಲ್ಲೇ ರಾಜ್ಯದಲ್ಲಿ ಭರ್ಜರಿ ಮುಂಗಾರು ಮಳೆಯ (Mansoon) ಆರ್ಭಟ ಜೋರಾಗಿದೆ. ಸಾಮಾನ್ಯವಾಗಿ 58 ಮಿಲಿಮೀಟರ್‌ ಮಲೆಯಾಗುತ್ತಿದ್ದ ಜುಲೈ ಮೊದಲವಾರದಲ್ಲಿ ಈ ಬಾರಿ 78 ಮಿಲಿಮೀಟರ್‌ ಮಳೆಯಾಗಿದೆ (Karnaraka Rains). ಇದು ಹಿಂದಿನ ಪ್ರಮಾಣಕ್ಕಿಂತ ಶೇ.25ಕ್ಕೂ ಹೆಚ್ಚಾಗಿದೆ.

ಅದರಲ್ಲೂ ಕರಾವಳಿ ಭಾಗದಲ್ಲಿ ಕಳೆದೊಂದು ವಾರದಲ್ಲಿ ನಿರೀಕ್ಷೆಗಿಂತ ಹೆಚ್ಚು ಮಳೆ ಸುರಿದಿದೆ. ಕಳೆದ ಭಾನುವಾರ ಅಂತೂ, ರಾಜ್ಯದ ಕರಾವಳಿಯಲ್ಲಿ ಎಡಬಿಡದೇ ಮಳೆ ಸುರಿಯುತ್ತಿದೆ. ಕಳೆದ 24 ಗಂಟೆಗಳಲ್ಲಿ ಉತ್ತರ ಕನ್ನಡದಲ್ಲಿ 264 ಮಿಲಿಮೀಟರ್, ಉಡುಪಿಯಲ್ಲಿ 210 ಮಿಲಿಮೀಟರ್, ದಕ್ಷಿಣ ಕನ್ನಡ (Dakshina Kannada) ಜಿಲ್ಲೆಯಲ್ಲಿ 168 ಮಿಲಿಮೀಟರ್ ಮಳೆಯಾಗಿದೆ. ಪರಿಣಾಮ ಉಡುಪಿ, ದಕ್ಷಿಣ ಕನ್ನಡ ಮತ್ತು ಉತ್ತರ ಕನ್ನಡದಲ್ಲಿ ನದಿ ತೊರೆಗಳೆಲ್ಲಾ ಉಕ್ಕಿ ಹರಿಯುತ್ತಿದ್ದು, ಹಲವೆಡೆ ಪ್ರವಾಹ ಪರಿಸ್ಥಿತಿ ನಿರ್ಮಾಣವಾಗಿದೆ.

Mumbai Rains

ಸಾಕಷ್ಟು ಅವಾಂತರಗಳು ಉಂಟಾಗಿವೆ. ಮೂರು ಜಿಲ್ಲೆಗಳಿಗೆ ಆರೆಂಜ್ ಅಲರ್ಟ್ ಪ್ರಕಟಿಸಲಾಗಿದ್ದು, ಹಲವು ತಾಲೂಕುಗಳಲ್ಲಿ ಶಾಲೆ ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ. ಸಮುದ್ರಕ್ಕೆ ಇಳಿಯದಂತೆ ಸೂಚಿಸಲಾಗಿದೆ.

ಎಲ್ಲೆಲ್ಲಿ ಏನಾಯ್ತು?
* ಉಡುಪಿ ನಗರ ಜಲಾವೃತ: ಉಡುಪಿ ನಗರ ಜಲಾವೃತವಾಗಿದೆ. ಇಂದ್ರಾಣಿ ತೀರ್ಥ ನದಿ ಹರಿಯುವಲ್ಲೆಲ್ಲಾ ಜನಜೀವನ ಅಸ್ತವ್ಯಸ್ತವಾಗಿದೆ. ಮಗು, ವೃದ್ಧೆ ಮಹಿಳೆಯನ್ನು ರಕ್ಷಣೆ ಮಾಡಲಾಗಿದೆ. ಕೃಷ್ಣ ಮಠ ಪಾರ್ಕಿಂಗ್ ಏರಿಯಾ ಜಲಾವೃತವಾಗಿದೆ.
* ರಸ್ತೆಗೆ ನುಗ್ಗಿದ ಮಳೆ ನೀರು: ಉಡುಪಿಯ ಮೂಡುಬೆಟ್ಟು-ಕೊಡವೂರು ರಸ್ತೆ ಜಲಾವೃತವಾಗಿದೆ. ಭಾರೀ ಮಳೆ ನೀರಿನ ನಡುವೆ ಖಾಸಗಿ ಬಸ್ಸು ಓಡಾಟ ನಡೆಸಿದೆ.
* ಹೊಟೆಲ್, ದೇಗುಲ ಜಲಾವೃತ: ಉಡುಪಿಯ ಕಡಿಯಾಳಿಯಲ್ಲಿರುವ ಹೋಟೆಲ್ ಒಳಗೆಲ್ಲಾ ನೀರು ನುಗ್ಗಿದೆ, ಮಠದ ಬೆಟ್ಟು ವ್ಯಾಪ್ತಿಯ ಬನ್ನಂಜೆ ಶನೇಶ್ವರ ಮಂದಿರ ಜಲಾವೃತವಾಗಿದೆ.
* ಬೋಟ್‌ಗಳಲ್ಲಿ ರಕ್ಷಣೆ: ಉಡುಪಿಯ ಚಕ್ರತೀರ್ಥ-ಸಗ್ರಿ-ಗುಂಡಿಬೈಲು-ಕಲ್ಸಂಕ ವ್ಯಾಪ್ತಿಯಲ್ಲಿ ಪ್ರವಾಹ ಸ್ಥಿತಿಯಿದೆ. ಬೋಟ್‌ಗಳ ಮೂಲಕ ಜನರ ರಕ್ಷಣೆ ಮಾಡಲಾಗ್ತಿದೆ. ಜನರ ಜೊತೆ ನಾಯಿ ಬೆಕ್ಕುಗಳನ್ನು ಕಾಪಾಡಲಾಗ್ತಿದೆ.
* ಮಣಿಪಾಲ ಜಲಾವೃತ: ಉಡುಪಿಯ ಮಣಿಪಾಲದ ರಸ್ತೆಗಳಲ್ಲಿ ನದಿಯಂತೆ ನೀರು ಹರಿದಿದೆ. ಹಲವು ಲೇಔಟ್‌ಗಳು ಜಲಾವೃತವಾಗಿವೆ.
* ಗುಂಡಬಾಳ ಪ್ರವಾಹ: ಹೊನ್ನಾವರದ ಗುಂಡಬಾಳ ನದಿ ಉಕ್ಕೇರಿದ್ದು, ನದಿಪಾತ್ರದ ತೋಟ-ಮನೆಗಳಿಗೆ ನೀರು ನುಗ್ಗಿದೆ.. ಕ್ಷಣ ಕ್ಷಣಕ್ಕೂ ನೀರಿನ ಮಟ್ಟ ಹೆಚ್ಚಾಗ್ತಿದ್ದು, ಗುಡ್ಡೆಬಾಳೆ ಗ್ರಾಮದ ಜನ ಆತಂಕದಲ್ಲಿದ್ದಾರೆ.
* ರಕ್ಕಸ ಅಲೆಗಳಿಗೆ ಆಹುತಿ: ಅರಬ್ಬಿ ಸಮುದ್ರ ತೀರದಲ್ಲಿ ಅಲೆಗಳ ಆರ್ಭಟ ಹೆಚ್ಚಿದ್ದು, ಅಂಕೋಲದ ತರಂಗಮೇಟ್ ಭಾಗದಲ್ಲಿ ಕಡಲ ಕೊರೆತದಿಂದ ತೆಂಗಿನ ಮರಗಳು ಉರುಳಿವೆ. ತಡೆಗೋಡೆ ಕೊಚ್ಚಿಹೋಗಿದೆ.
* ಕದ್ರಾ ಡ್ಯಾಂನಿಂದ ನೀರು ರಿಲೀಸ್: ಉತ್ತರ ಕನ್ನಡದ ಕದ್ರಾ ಡ್ಯಾಂ ಬಹುತೇಕ ಭರ್ತಿಯಾಗಿದ್ದು, 4 ಕ್ರಸ್ಟ್ ಗೇಟ್‌ಗಳ ಮೂಲಕ 10,600 ಕ್ಯೂಸೆಕ್ ನೀರನ್ನು ರಿಲೀಸ್ ಮಾಡಲಾಗ್ತಿದೆ.

harangi dam

ಮಲೆನಾಡಿನಲ್ಲೂ ನಿಲ್ಲದ ಮಳೆ:
ಬರೀ ಕರಾವಳಿ ಮಾತ್ರವಲ್ಲ, ಮಲೆನಾಡು, ದಕ್ಷಿಣ ಒಳನಾಡು, ಉತ್ತರ ಒಳನಾಡಿನ ಹಲವೆಡೆ ಉತ್ತಮ ಮಳೆ ಬೀಳ್ತಿದೆ. ಶಿವಮೊಗ್ಗದಲ್ಲಿ 118 ಮಿಲಿಮೀಟರ್, ವಿಜಯಪುರದಲ್ಲಿ 89 ಮಿಲಿಮೀಟರ್, ಬೆಳಗಾವಿಯಲ್ಲಿ 87.5 ಮಿಲಿಮೀಟರ್, ಚಿಕ್ಕಮಗಳೂರಿನಲ್ಲಿ 67.5 ಮಿಲಿಮೀಟರ್, ಕೊಡಗಿನಲ್ಲಿ 58.5 ಮಿಲಿಮೀಟರ್ ಮಳೆಯಾಗಿದೆ. ಹಾರಂಗಿ ಜಲಾನಯನ ಪ್ರದೇಶದಲ್ಲಿ ಉತ್ತಮ ಮಳೆ ಆಗ್ತಿರುವ ಕಾರಣ ಮುನ್ನೆಚ್ಚರಿಕೆ ಕ್ರಮವಾಗಿ ಹಾರಂಗಿ ಜಲಾಶಯದ 4 ಕ್ರಸ್ಟ್ ಗೇಟ್ ಓಪನ್ ಮಾಡಿ, 1 ಸಾವಿರ ಕ್ಯೂಸೆಕ್ ನೀರು ನದಿಗೆ ಹರಿಸಲಾಗಿದೆ.

rain effects

ಇನ್ನೂ ಮಹಾರಾಷ್ಟ್ರದಲ್ಲಿ ಭಾರೀ ಮಳೆ ಕಾರಣ ನದಿಗಳ ಒಳ ಹರಿವಿನಲ್ಲಿ ಭಾರೀ ಹೆಚ್ಚಳವಾಗಿದೆ. ಬೆಳಗಾವಿ ಜಿಲ್ಲೆ ಯಕ್ಸಾಂಬಾ ಬಳಿಯ ಮುಲ್ಲಾಣಕಿ ದರ್ಗಾಗೆ ದೂದ್‌ಗಂಗಾ ನೀರು ನುಗ್ಗಿದೆ. ಮಲ್ಲಿಕವಾಡ-ದತ್ತವಾಡ ಸಂಪರ್ಕ ಸೇತುವೆ ಸೇರಿ 5 ಸೇತುವೆಗಳು ಮುಳುಗಡೆಯಾಗಿದೆ. ಹಾಸನ, ಚಿಕ್ಕಮಗಳೂರಲ್ಲಿ ಧಾರಕಾರ ಮಳೆಯಾಗ್ತಿದ್ದು, ಜನಜೀವನ ಅಸ್ತವ್ಯಸ್ತಗೊಂಡಿದೆ. ಹಲವೆಡೆ ಮರಗಳು ಉರುಳಿವೆ. ದಾವಣಗೆರೆಯಲ್ಲೂ ಮಳೆಯಾಗಿದೆ. ಇತ್ತ ಬೆಂಗಳೂರಿನಲ್ಲಿ ಬೆಳಗ್ಗೆಯಿಂದ ಮೋಡ ಕವಿದ ವಾತಾವರಣ ಇದ್ದು, ಆಗಾಗ ಮಳೆ ಆಗ್ತಿದ್ದು, ಜನಜೀವನ ಅಸ್ತವ್ಯಸ್ತಗೊಂಡಿದೆ.

TAGGED:bengalurucoastalkarnatakaKarnataka govtrainಕರಾವಳಿಕರ್ನಾಟಕಕರ್ನಾಟಕ ಸರ್ಕಾರಬೆಂಗಳೂರುಮಳೆ
Share This Article
Facebook Whatsapp Whatsapp Telegram

Cinema news

Dear Husband
Dear Husband ಚಿತ್ರದ ಟೈಟಲ್ ಲಾಂಚ್ ಮಾಡಿದ ಕಿಚ್ಚ
Cinema Latest Sandalwood Top Stories
Kichcha Sudeep
ಫಿನಾಲೆ ಹೊತ್ತಲ್ಲಿ ಕಿಚ್ಚ ಸುದೀಪ್‌ಗೆ ʻರಣ ಹದ್ದುʼ ತಂದ ಸಂಕಷ್ಟ – ಅರಣ್ಯಾಧಿಕಾರಿಗೆ ದೂರು
Cinema Districts Karnataka Latest Ramanagara Top Stories TV Shows
Romanchaka song release from the movie Landlord Ritanya Vijay
ಲ್ಯಾಂಡ್‌ಲಾರ್ಡ್ ಸಿನಿಮಾದ ರೋಮಾಂಚಕ ಸಾಂಗ್ ರಿಲೀಸ್
Cinema Latest Sandalwood
Mallamma Bigg Boss Kannada 12
ಬಿಗ್‌ಬಾಸ್ ಮನೆಗೆ ಮತ್ತೆ ಮರಳಿದ ಮಲ್ಲಮ್ಮ – ಧ್ರುವಂತ್‌ಗೆ ಶಾಕ್
Latest Top Stories TV Shows

You Might Also Like

H.D Revanna
Districts

ನಾನೇ ಸಾಕಿದ ಗಿಣಿ ಹದ್ದಾಗಿ ಕುಕ್ಕಿತು – ಶಿವಲಿಂಗೇಗೌಡಗೆ ರೇವಣ್ಣ ತಿರುಗೇಟು

Public TV
By Public TV
9 minutes ago
Mallikarjun kharge
Bengaluru City

G Ram G ಕಾಯ್ದೆ | ಕಾಂಗ್ರೆಸ್ ಹೋರಾಟ ನಿಲ್ಲಲ್ಲ, ಇಲ್ಲಿಗೆ ಬಿಡಲ್ಲ – ಮಲ್ಲಿಕಾರ್ಜುನ ಖರ್ಗೆ ವಾಗ್ದಾಳಿ

Public TV
By Public TV
31 minutes ago
veterinarian dies after drowning in sharavati backwater in sagar
Crime

ಸಾಗರ | ಶರಾವತಿ ಹಿನ್ನೀರಲ್ಲಿ ಮುಳುಗಿ ಪಶುವೈದ್ಯ ಸಾವು

Public TV
By Public TV
46 minutes ago
Mamata Banerjee 1
Latest

ಗ್ರೀನ್‌ ಫೈಲ್‌ ಕಾಂಟ್ರವರ್ಸಿ – ಮಮತಾ ಬ್ಯಾನರ್ಜಿ ವಿರುದ್ಧ ಸುಪ್ರೀಂ‌ ಕೋರ್ಟ್‌ ಮೆಟ್ಟಿಲೇರಿದ ED

Public TV
By Public TV
55 minutes ago
H. K. Patil
Bengaluru City

ಭೂಮಿಯ ಒಳಗೆ ಬೆಲೆ ಬಾಳುವ ವಸ್ತುಗಳು ಸಿಕ್ಕಿದರೆ ಅದು ಸರ್ಕಾರದ ಆಸ್ತಿ: ಹೆಚ್‌ಕೆ ಪಾಟೀಲ್‌

Public TV
By Public TV
1 hour ago
SIDDARAMAIAH DK SHIVAKUMAR MALLIKARJUN KHARGE
Bengaluru City

ಸಿಎಂ-ಡಿಸಿಎಂ ನಡ್ವೆ ಕಾಂಪ್ರಮೈಸ್ ಥಿಯರಿ – ʻಕೈʼ ಹೈಕಮಾಂಡ್ ಧರ್ಮಸಂಕಟದಿಂದ ಪಾರಾಗುತ್ತಾ..?

Public TV
By Public TV
1 hour ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?