46 ವರ್ಷಗಳ ಬಳಿಕ ತೆರೆದ ಪುರಿ ಜಗನ್ನಾಥ ‘ರತ್ನ ಭಂಡಾರ’ದ ಬಾಗಿಲು

Public TV
1 Min Read
Puri Jagannath temple Ratna Bhandar

ಭುವನೇಶ್ವರ: 46 ವರ್ಷಗಳ ಬಳಿಕ ಪುರಿ ಜಗನ್ನಾಥ ದೇವಾಲಯದ (Puri Jagannath Temple) ರತ್ನ ಭಂಡಾರದ ಬಾಗಿಲು ತೆರೆದಿದೆ. ಇಂದು ಮಧ್ಯಾಹ್ನ 1:28 ರತ್ನ ಭಂಡಾರ ತೆರೆಯಲಾಯಿತು ಎಂದು ಮುಖ್ಯಮಂತ್ರಿ ಕಚೇರಿ ತಿಳಿಸಿದೆ.

12ನೇ ಶತಮಾನದ ಪುರಿ ಜಗನ್ನಾಥ ದೇವಾಲಯದಲ್ಲಿರುವ ರತ್ನ ಭಂಡಾರವು (Ratna Bhandar) ಆಭರಣಗಳು ಹಾಗೂ ಇತರೆ ಬೆಲೆಬಾಳುವ ವಸ್ತುಗಳನ್ನು ಒಳಗೊಂಡಿದೆ. ಮೊದಲು ಹೊರ ಖಜಾನೆ ತೆರೆಯಲಾಗಿದೆ. ನಂತರ ಒಳ ಖಜಾನೆ ತೆರೆಯಲಾಗುತ್ತದೆ. ಇದನ್ನೂ ಓದಿ: 46 ವರ್ಷದ ನಂತರ ತೆರೆಯಲಿದೆ ಪುರಿ ಜಗನ್ನಾಥ ದೇಗುಲ ರತ್ನ ಭಂಡಾರದ ಬಾಗಿಲು!

ratna bhandar puri jagannath temple

ಎಲ್ಲವನ್ನೂ ಸ್ಟ್ಯಾಂಡರ್ಡ್ ಆಪರೇಟಿಂಗ್ ಕಾರ್ಯವಿಧಾನದ ಪ್ರಕಾರ ನಡೆಸಲಾಗುತ್ತಿದೆ. ಉನ್ನತ ಮಟ್ಟದ ಸಮಿತಿ ಮತ್ತು ಅದರ ಸದಸ್ಯರು ಹೊರಬಂದ ನಂತರ ವಿವರಗಳನ್ನು ನೀಡುತ್ತಾರೆ ಎಂದು ಪುರಿ ಎಸ್‌ಪಿ ಪಿನಾಕ್ ಮಿಶ್ರಾ ತಿಳಿಸಿದ್ದಾರೆ. ಬೆಲೆಬಾಳುವ ವಸ್ತುಗಳನ್ನು ತಾತ್ಕಾಲಿಕ ಸ್ಟ್ರಾಂಗ್ ರೂಮ್‌ಗೆ ಸ್ಥಳಾಂತರಿಸಲು ವಿಶೇಷ ಪೆಟ್ಟಿಗೆಗಳನ್ನು ದೇವಸ್ಥಾನಕ್ಕೆ ತರಲಾಯಿತು.

ಒರಿಸ್ಸಾ ಹೈಕೋರ್ಟ್‌ನ ನ್ಯಾಯಮೂರ್ತಿ ಬಿಸ್ವನಾಥ್ ರಾತ್ ನೇತೃತ್ವದ ಉನ್ನತ ಮಟ್ಟದ ಸಮಿತಿಯು ಈ ಪ್ರಕ್ರಿಯೆಗೆ ಹಸಿರು ನಿಶಾನೆ ತೋರಿತು. ಸರ್ಕಾರದ ಅನುಮೋದನೆಯನ್ನು ಪಡೆದ ನಂತರ, ದಾಸ್ತಾನುಗಳಿಗೆ ಮಾರ್ಗದರ್ಶನ ನೀಡಲು ಪ್ರಮಾಣಿತ ಕಾರ್ಯಾಚರಣಾ ಕಾರ್ಯವಿಧಾನಗಳನ್ನು ಸ್ಥಾಪಿಸಲಾಯಿತು. ಜಗನ್ನಾಥ ದೇವಸ್ಥಾನದ ಆಡಳಿತವು ಅದರ ಮುಖ್ಯ ಆಡಳಿತಾಧಿಕಾರಿ ನೇತೃತ್ವದಲ್ಲಿ ಕಾರ್ಯಾಚರಣೆಯನ್ನು ನೋಡಿಕೊಳ್ಳುತ್ತಿದೆ. ಇದನ್ನೂ ಓದಿ: 4 ವರ್ಷಗಳಲ್ಲಿ 8 ಕೋಟಿ ಉದ್ಯೋಗ ಸೃಷ್ಟಿ – ಲೆಕ್ಕಕೊಟ್ಟ ಮೋದಿ ವಿರುದ್ಧ ಖರ್ಗೆ ಕಿಡಿ!

ಪುರಿ ಜಿಲ್ಲಾಡಳಿತದ ಬಳಿಯಿದ್ದ ನಕಲಿ ಕೀ ಬಳಸಿ ಖಜಾನೆ ತೆರೆಯಲಾಗಿದೆ. ಯಾವುದೇ ತೊಂದರೆಯಾಗದಂತೆ ಮುನ್ನೆಚ್ಚರಿಕೆ ವಹಿಸಿ, ವೈದ್ಯಕೀಯ ತಂಡ ಮತ್ತು ಉರಗ ತಜ್ಞರ ತಂಡದ ಸದಸ್ಯರು ಸಹ ಸ್ಟ್ಯಾಂಡ್‌ಬೈನಲ್ಲಿ ಇದ್ದರು.

Share This Article