Public TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Font ResizerAa
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
  • National
  • World
  • Cinema
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Bengaluru City

ತಮಿಳುನಾಡಿಗೆ ಕಾವೇರಿ – ನಿತ್ಯ 8 ಸಾವಿರ ಕ್ಯುಸೆಕ್‌ ನೀರು ಹರಿಸಲು ಸರ್ಕಾರ ನಿರ್ಧಾರ: ಸಿಎಂ

Public TV
Last updated: July 14, 2024 8:17 pm
Public TV
Share
3 Min Read
Siddaramaiah 6
SHARE

ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ನೇತೃತ್ವದಲ್ಲಿ ವಿಧಾನಸೌಧದಲ್ಲಿ ನಡೆದ ಸರ್ವಪಕ್ಷಗಳ ಸಭೆಯಲ್ಲಿ ತಮಿಳುನಾಡಿಗೆ ಪ್ರತಿನಿತ್ಯ 1 ಟಿಎಂಸಿ ನೀರಿಗೆ ಬದಲಾಗಿ, ಜುಲೈ 31ರ ವರೆಗೆ 8 ಸಾವಿರ ಕ್ಯುಸೆಕ್‌ ನೀರು ಹರಿಸಲು ತೀರ್ಮಾನ ಕೈಗೊಳ್ಳಲಾಗಿದೆ.

Contents
ನಿರ್ಣಯ – 1ನಿರ್ಣಯ – 2

ಜುಲೈ 31ರ ವರೆಗೆ ತಮಿಳುನಾಡಿಗೆ (Tamil Nadu) ನಿತ್ಯ 1 ಟಿಎಂಸಿ ನೀರು ಹರಿಸಬೇಕೆಂಬ ಕಾವೇರಿ ನೀರು ನಿಯಂತ್ರಣಾ ಸಮಿತಿ ಶಿಫಾರಸು ಹಿನ್ನೆಲೆಯಲ್ಲಿ ಭಾನುವಾರ ವಿಧಾನಸೌಧದಲ್ಲಿ ಸರ್ವಪಕ್ಷಗಳ ಸಭೆ ನಡೆಸಲಾಯಿತು. ಸಭೆಯಲ್ಲಿ ಆಡಳಿತ ಹಾಗೂ ಪ್ರತಿಪಕ್ಷಗಳ ಘಟಾನುಘಟಿ ನಾಯಕರು ಪಾಲ್ಗೊಂಡಿದ್ದರು. ಸಮಗ್ರ ಚರ್ಚೆಯ ಬಳಿಕ ಎರಡು ಪ್ರಮುಖ ನಿರ್ಣಯಗಳನ್ನು ಕೈಗೊಳ್ಳಲಾಯಿತು.

KRS

ನಿರ್ಣಯ – 1

ಲೀಗಲ್ ಟೀಂ ಮೋಹನ್ ಕಾತರಕಿ ಅವರ ಸಲಹೆ ಮೇರೆಗೆ ತಮಿಳುನಾಡಿಗೆ 1 ಟಿಎಂಸಿ ಬದಲಾಗಿ 8 ಸಾವಿರ ಕ್ಯುಸೆಕ್ ನೀರು ಬಿಡಲು ತೀರ್ಮಾನ.

ನಿರ್ಣಯ – 2

1 ಟಿಎಂಸಿ ನೀರು ಬಿಡಬೇಕು ಎಂಬ ಕಾವೇರಿ ನೀರು ನಿಯಂತ್ರಣಾ ಸಮಿತಿ ಆದೇಶಕ್ಕೆ ವಿರುದ್ಧವಾಗಿ ಕಾವೇರಿ ನೀರು ನಿರ್ವಹಣಾ ಸಮಿತಿ (ಸಿಡಬ್ಲ್ಯೂಎಂಎ) ಮುಂದೆ ಮೇಲ್ಮನವಿ ಸಲ್ಲಿಸಲು ತೀರ್ಮಾನ.

Siddaramaiah 2 2

ಸಭೆಯ ಬಳಿಕ ಮಾತನಾಡಿದ ಸಿಎಂ ಸಿದ್ದರಾಮಯ್ಯ, ಸರ್ವಪಕ್ಷಗಳ ಸಭೆಯಲ್ಲಿ ತಮಿಳುನಾಡಿಗೆ ಪ್ರತಿನಿತ್ಯ 1 ಟಿಎಂಸಿ ನೀರಿಗೆ ಬದಲಾಗಿ, 8 ಸಾವಿರ ಕ್ಯೂಸೆಕ್‌ ನೀರು ಹರಿಸಲು ತೀರ್ಮಾನ ಕೈಗೊಳ್ಳಲಾಗಿದೆ. ಅಲ್ಲದೇ ಕಾವೇರಿ ನೀರು ನಿಯಂತ್ರಣಾ ಸಮಿತಿ ಆದೇಶಕ್ಕೆ ವಿರುದ್ಧವಾಗಿ ಮೇಲ್ಮನವಿ ಸಲ್ಲಿಸಲು ನಿರ್ಧರಿಸಲಾಗಿದೆ. ಕಾವೇರಿ ವಿಚಾರವಾಗಿ ಕೇಂದ್ರಕ್ಕೆ ಸರ್ವ ಪಕ್ಷ ನಿಯೋಗ ತೆಗೆದುಕೊಂಡು ಹೋಗಲ್ಲ ಎಂದು ಸ್ಪಷ್ಟಪಡಿಸಿದ್ದಾರೆ.

ಇಂದಿನ ಸರ್ವ ಪಕ್ಷಗಳ ಸಭೆ ಕರೆಯಲಾಗಿತ್ತು. ಅಶೋಕ್, ಸದಾನಂದಗೌಡ, ಜಿ.ಟಿ ದೇವೇಗೌಡ, ಸಿಟಿ ರವಿ, ಎ.ಮಂಜು, ರೈತ ಸಂಘದವರು, ಯದವೀರ್, ಕಾವೇರಿ ಭಾಗದ ಶಾಕಸರ ಇದ್ದರು. ಸಭೆಯಲ್ಲಿ ವಸ್ತು ಸ್ಥಿತಿಯನ್ನ ನಾನು, ಡಿಕೆ ಶಿವಕುಮಾರ್ ಕೊಟ್ಟಿದ್ದೇವೆ. ಲೀಗಲ್ ಟೀಂ ಕಾತರಕಿ, ಎ.ಜಿ ಶಶಿಕಿರಣ್ ಶೆಟ್ಟಿ ಅವರು ಸಭೆಯಲ್ಲಿ ಇದ್ದರು.

ಸಂಗ್ರಹವಿರುವ ನೀರು 2 ತಿಂಗಳಿಗೆ ಆಗುತ್ತೆ:
ಜುಲೈ 11 ರಂದು ನಡೆದ ಕಾವೇರಿ ನೀರು ನಿಯಂತ್ರಣಾ ಸಮಿತಿ ಸಭೆಯಲ್ಲಿ 31ರ ವರೆಗೆ ತಮಿಳುನಾಡಿಗೆ ನಿತ್ಯ 1 ಟಿಎಂಸಿ ನೀರು ಬಿಡುವಂತೆ ಶಿಫಾರಸು ಮಾಡಲಾಗಿತ್ತು. ಸಾಮಾನ್ಯವಾಗಿ ಜೂನ್‌ ತಿಂಗಳಲ್ಲಿ 9.14 ಟಿಎಂಸಿ ನೀರು ಬಿಡಬೇಕಿತ್ತು. ಜುಲೈನಲ್ಲಿ 31.24 ಟಿಎಂಸಿ ನೀರು ಬಿಡಬೇಕಿತ್ತು. ಆದ್ರೆ ಸಂಗ್ರಹವಿರುವ 40.43 ಟಿಎಂಸಿ ನೀರು 2 ತಿಂಗಳಿಗೆ ಆಗುತ್ತೆ. ಈಗ ನಾವು 5 ಟಿಎಂಸಿಗೂ ಹೆಚ್ಚು ನೀರು ಬಿಡುಗಡೆ ಮಾಡಿದ್ದೇವೆ ಎಂದು ವಿವರಿಸಿದರು.

1 ಟಿಎಂಸಿ ನೀರು ಬಿಡೋಕೆ ಆಗಲ್ಲ: 
ಸಭೆಯಲ್ಲಿ ಕಾತರಕಿ ಅವರು ನೀರಿನ ಸಂಗ್ರಹದ ಬಗ್ಗೆ ಮಾಹಿತಿ ನೀಡಿದ್ದಾರೆ. ಈ ಬಾರಿ ಸುಮಾರು 30% ಒಳಹರಿವು ಕಡಿಮೆಯಾಗಿದೆ. ಕಬಿನಿಯಲ್ಲಿ 96%, ಹಾರಂಗಿಯಲ್ಲಿ 76%, ಹೇಮಾವತಿಯಲ್ಲಿ 56%, ಕೆಆರ್‌ಎಸ್‌ನಲ್ಲಿ 54% ನೀರು ಸಂಗ್ರಹವಾಗಿದೆ. ಒಟ್ಟಾರೆಯಾಗಿ 63% ಮಾತ್ರ ನೀರು ಸಂಗ್ರಹ ಆಗಿದೆ. ಜುಲೈ 12ರಂದು 5 ಸಾವಿರ ಕ್ಯುಸೆಕ್‌ ಒಳಹರಿವು ಆಗಿತ್ತು, ಅಷ್ಟೇ ಹೊರಹರಿವೂ ಆಗಿದೆ. ಜು.13 ಮತ್ತು 14ರಂದು ಒಳಹರಿವು ಹೆಚ್ಚಾಗಿದ್ದರೂ, ಒಂದು ಟಿಎಂಸಿ ನೀರು ಬಿಡೋಕೆ ಕಷ್ಟಸಾಧ್ಯವಾಗಿದೆ. ಆದ್ದರಿಂದ ಮೇಲ್ಮನವಿ ಸಲ್ಲಿಸಲು ನಿರ್ಧರಿಸಿದ್ದೇವೆ ಎಂದು ಮಾಹಿತಿ ನೀಡಿದ್ದಾರೆ.

ಮಳೆ ಕಡಿಮೆಯಾದ್ರೆ ಬಿಡೋ ನೀರೂ ಕಡಿಮೆ ಮಾಡ್ತೀವಿ: 
ಸದ್ಯ 8 ಸಾವಿರ ಕ್ಯುಸೆಕ್‌ ನೀರು ಬಿಡುವ ನಿರ್ಧಾರ ಆಗಿದೆ. 1 ಟಿಎಂಸಿ ನೀರಿನ ಬದಲಾಗಿ 8 ಸಾವಿರ ಕ್ಯುಸೆಕ್ ಬಿಡಲು ಕಾತರಕಿ ಸಲಹೆ ಕೊಟ್ಟರು. ಮಳೆ ಬಾರದೇ ಹೋದರೆ ಕ್ಯುಸೆಕ್ ನೀರಿನಲ್ಲೂ ಕಡಿಮೆ ಮಾಡೋಣ, ಜೊತೆಗೆ ಅಪೀಲು ಹಾಕೋಣ ಅಂತಾ ಸಲಹೆ ಕೊಟ್ಟರು. ಅದರಂತೆ ತೀರ್ಮಾನ ಆಗಿದೆ. ಒಂದು ವೇಳೆ ಮಳೆ ಜಾಸ್ತಿ ಆದಲ್ಲಿ ಎಷ್ಟು ಬಿಡಬೇಕೋ ಅಷ್ಟು ನೀರು ಬಿಡ್ತೀವಿ. ಮಳೆ ಕಡಿಮೆ ಆದರೆ ಈಗ ಬಿಡುವ 8 ಸಾವಿರ ಕ್ಯುಸೆಕ್ ನೀರಿನಲ್ಲೂ ಕಡಿಮೆ ಮಾಡುತ್ತೇವೆ ಎಂದು ಸಿಎಂ ಸ್ಪಷ್ಟಪಡಿಸಿದರು.

TAGGED:bjpcauvery waterCWRCDK ShivakumarR. Ashokasiddaramaiahtamil naduಕಾವೇರಿ ನೀರುಕಾವೇರಿ ನೀರು ನಿಯಂತ್ರಣಾ ಸಮಿತಿಡಿಕೆ ಶಿವಕುಮಾರ್ತಮಿಳುನಾಡುಸಿಡಬ್ಲ್ಯೂಆರ್‌ಸಿಸಿದ್ದರಾಮಯ್ಯ
Share This Article
Facebook Whatsapp Whatsapp Telegram

Cinema News

Actress Sumalatha condoles the death of Malayalam Actor Shanawas
`ಕ್ಯಾರಮ್, ಬ್ಯಾಡ್ಮಿಂಟನ್ ಆಡುವಾಗ ಸೆಕೆಂಡ್‍ನಲ್ಲಿ ಸೋಲಿಸುತ್ತಿದ್ದರು’- ಸುಮಲತಾ ನೆನಪು ಹಂಚಿಕೊಂಡಿದ್ದು ಯಾರ ಬಗ್ಗೆ?
Cinema Latest South cinema Top Stories
janaki vs state of kerala
ಜಾನಕಿ V v/s ಸ್ಟೇಟ್ ಆಫ್ ಕೇರಳ ಚಿತ್ರ ಸ್ಟ್ರೀಮಿಂಗ್: ಸ್ವಾತಂತ್ರ್ಯ ದಿನಕ್ಕೆ ಗಿಫ್ಟ್
Cinema Latest South cinema Top Stories
Santhosh balaraj 1
ಸ್ಯಾಂಡಲ್‌ವುಡ್‌ನ ಯುವ ನಟ ಸಂತೋಷ್ ಬಾಲರಾಜ್ ನಿಧನ
Cinema Latest Sandalwood Top Stories
Ramya Prajwal Devaraj
ರಮ್ಯಾಗೆ ಅಶ್ಲೀಲ ಮೆಸೇಜ್ ಕೇಸ್: ಪ್ರಜ್ವಲ್ ಕಿಡಿ
Cinema Latest Sandalwood Top Stories
Ramya Case 2 arrested by ccb police
ನಟಿ ರಮ್ಯಾಗೆ ಅಶ್ಲೀಲ ಕಾಮೆಂಟ್ – ಸಿಸಿಬಿ ಪೊಲೀಸರಿಂದ ಇನ್ನಿಬ್ಬರು ಅರೆಸ್ಟ್
Cinema Latest Sandalwood Top Stories

You Might Also Like

Amit shah
Latest

ಎಲ್.ಕೆ ಅಡ್ವಾಣಿ ಹಿಂದಿಕ್ಕಿ ದೀರ್ಘಾವಧಿಯ ಗೃಹ ಸಚಿವರಾಗಿ ಸೇವೆ ಸಲ್ಲಿಸಿದ ಅಮಿತ್ ಶಾ

Public TV
By Public TV
22 minutes ago
SATYAPAL MALIK
Latest

ಜಮ್ಮು-ಕಾಶ್ಮೀರದ ಮಾಜಿ ರಾಜ್ಯಪಾಲ ಸತ್ಯಪಾಲ್ ಮಲಿಕ್ ನಿಧನ

Public TV
By Public TV
25 minutes ago
Trump 1
Latest

ಟ್ರಂಪ್ ಸುಂಕ ಬೆದರಿಕೆ ನಡ್ವೆ ಅಮೆರಿಕಕ್ಕೆ ತಿವಿದ ಇಂಡಿಯನ್ ಆರ್ಮಿ – ಪಾಕ್‌ಗೆ ಶಸ್ತ್ರಾಸ್ತ್ರ ಪೂರೈಕೆ ಬಗ್ಗೆ 1971ರ ಪೇಪರ್ ಕಟಿಂಗ್‌ ಪೋಸ್ಟ್

Public TV
By Public TV
39 minutes ago
HD Revanna
Chikkamagaluru

ಜೈಲಲ್ಲಿರೋ ಪ್ರಜ್ವಲ್ ಹುಟ್ಟುಹಬ್ಬ – ಶೃಂಗೇರಿ ಶಾರದಾಂಬೆಗೆ ವಿಶೇಷ ಪೂಜೆ ಸಲ್ಲಿಸಿದ ರೇವಣ್ಣ

Public TV
By Public TV
1 hour ago
America
Latest

ವೀಸಾ ಅವಧಿ ಮೀರಿ ವಾಸ್ತವ್ಯ; ಭಾರತ ಸೇರಿ ವಿದೇಶಿ ಪ್ರಜೆಗಳಿಗೆ ಅಮೆರಿಕ ಗಡೀಪಾರು ಎಚ್ಚರಿಕೆ

Public TV
By Public TV
2 hours ago
Raichur 1
Districts

ಸಾರಿಗೆ ಮುಷ್ಕರದಿಂದ ಹೈರಾಣಾದ ಜನ – ರಾಯಚೂರಿನಲ್ಲಿ ಆಂಧ್ರ, ತೆಲಂಗಾಣದ ಬಸ್‌ ಬಳಕೆ

Public TV
By Public TV
2 hours ago
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?