Public TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Font ResizerAa
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
  • National
  • World
  • Cinema
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Bengaluru City

ಉಡುಪಿಯ ಹಲವೆಡೆ ನೆರೆ ಪರಿಸ್ಥಿತಿ; ಹಾಸನ, ಕೊಡಗಿನನಲ್ಲಿ ಭೂಕುಸಿತದ ಅವಾಂತರ; ಕಪಿಲಾ ನದಿ ತೀರದಲ್ಲೂ ಪ್ರವಾಹ ಭೀತಿ!

Public TV
Last updated: July 17, 2024 11:11 pm
Public TV
Share
3 Min Read
Rain 03 1
SHARE

ಬೆಂಗಳೂರು: ಉತ್ತರ ಕನ್ನಡ (Uttara Kannada) ಜಿಲ್ಲೆ ಮೇಲೆ ಪ್ರಕೃತಿ ಮುನಿಸಿಕೊಂಡಂತಿದೆ. ಶಿರೂರು ಭೂಕುಸಿತ ದುರಂತ ಇಡೀ ಕರಾವಳಿಯನ್ನ ಆತಂಕದ ಕಡಲಲ್ಲಿ ಮುಳುಗಿಸಿದೆ. ಶಿರೂರು ಭೂಕುಸಿತದಿಂದ ಹಲವು ದುರಂತಗಳು ಸಂಭವಿಸಿವೆ. 200 ಮೀಟರ್‌ನಷ್ಟು ಗಾತ್ರದ ಗುಡ್ಡ ಕುಸಿದ ಧಾಟಿಗೆ ಗಂಗಾವಳಿ ನದಿಯಲ್ಲಿ ಮಿನಿ ಸುನಾಮಿ ಸೃಷ್ಟಿಯಾಗಿ ನದಿ ತಟದ ಉಳುವರೆ ಗ್ರಾಮದ ನಾಲ್ಕು ಮನೆ ನೆಲಸಮವಾಗಿವೆ.

10ಕ್ಕೂ ಹೆಚ್ಚು ಮನೆಗಳಿಗೆ ಹಾನಿಯಾಗಿದೆ. ಸೀಥಿಗೌಡ ಎಂಬ ಮಹಿಳೆ ಗಂಗಾವಳಿ ಪಾಲಾಗಿದ್ದು, 14 ಮಂದಿ ಗಾಯಗೊಂಡಿದ್ದಾರೆ. ಇನ್ನು, ನದಿಗೆ ಬಿದ್ದ ಹೆಚ್‌ಪಿ ಗ್ಯಾಸ್ ಟ್ಯಾಂಕರ್‌ನಿಂದ ಅನಿಲ ಸೋರಿಕೆಯಾಗ್ತಿತ್ತು. ಕೂಡಲೇ ಕಾರ್ಯಾಚರಣೆ ನಡೆಸಿದ ಸಿಬ್ಬಂದಿ ಟ್ಯಾಂಕರ್ ವಾಲ್ ಬಂದ್ ಮಾಡಿದ್ದಾರೆ. ನದಿ ತಟದ 35 ಕುಟುಂಬಗಳಿಗೆ ನದಿ ನೀರು ಬಳಸದಂತೆ ಎಚ್ಚರಿಕೆ ನೀಡಲಾಗಿದೆ.

Rain 01 1

ಇನ್ನೂ ಶಿರೂರು ಬಳಿ ಮತ್ತಷ್ಟು ಗುಡ್ಡ ಕುಸಿಯುವ ಭೀತಿ ಎದುರಾಗಿದೆ. 90 ಮೀಟರ್ ಗುಡ್ಡ ಬಿರುಕುಬಿಟ್ಟಿದೆ. ಬಿರುಕಿನ ಪ್ರಮಾಣ ಕ್ಷಣಕ್ಷಣಕ್ಕೂ ಹೆಚ್ಚುತ್ತಿದೆ. ಸಂಜೆ ಸಣ್ಣಪ್ರಮಾಣದಲ್ಲಿ ಮಣ್ಣು ಕುಸಿದಿದೆ. ಹೀಗಾಗಿ ರಕ್ಷಣಾ ಕಾರ್ಯಚರಣೆ ಸ್ಥಗಿತಗೊಂಡಿದ್ದು, ಗುರುವಾರ ಮತ್ತೆ ಮುಂದುವರಿಯಲಿದೆ. ಈ ಭಾಗದ ಜನರನ್ನು ಬೇರೆಡೆಗೆ ಶಿಫ್ಟ್ ಮಾಡಲಾಗಿದೆ. ಅಂಗಡಿ ಮುಂಗಟ್ಟು ಮುಚ್ಚಿಸಲಾಗಿದೆ. ಒಟ್ಟು ಏಳು ಮಂದಿ ಬಲಿ ಆಗಿದ್ದು, ಇನ್ನೂ ಮೂವರ ಶವಗಳು ಪತ್ತೆಯಾಗಬೇಕಿದೆ. ಮಣ್ಣಿನಡಿ ಕಾರೊಂದು ಹೂತುಹೋಗಿರೋದನ್ನು ಜಿಪಿಎಸ್ ಮೂಲಕ ಪತ್ತೆ ಹಚ್ಚಲಾಗಿದೆ. ಹೀಗಾಗಿ ಸಾವು ನೋವು ಇನ್ನಷ್ಟು ಹೆಚ್ಚುವ ಸಂಭವ ಇದೆ. ಮೃತರ ಕುಟುಂಬಗಳಿಗೆ ತಲಾ 5 ಲಕ್ಷ ಪರಿಹಾರವನ್ನು ಸಿಎಂ ಘೋಷಿಸಿದ್ದಾರೆ. ಅವೈಜ್ಞಾನಿಕ ಕಾಮಗಾರಿ ಸಂಬಂಧ ಕೇಂದ್ರಕ್ಕೆ ದೂರು ಕೊಡಲು ರಾಜ್ಯ ಸರ್ಕಾರ ನಿರ್ಧರಿಸಿದೆ.

Rain 02 1

ಕರಾವಳಿ ತತ್ತರ:
ಭಾರೀ ಮಳೆಗೆ ಕರಾವಳಿ ಜಿಲ್ಲೆಗಳು ತತ್ತರಿಸಿವೆ. ಉಡುಪಿ ಜಿಲ್ಲೆಯಲ್ಲಿ ದಾಖಲೆಯ 148 ಮಿಮೀ ಮಳೆಯಾಗಿದೆ. ಹೆಬ್ರಿಯಲ್ಲಿ ಅತ್ಯಧಿಕ ಅಂದ್ರೆ 203 ಮಿ.ಮೀ, ಕುಂದಾಪುರ 186, ಬ್ರಹ್ಮಾವರ 164, ಬೈಂದೂರು 151 ಮಿಲಿಮೀಟರ್‌ ಮಳೆಯಾಗಿದೆ. ಸ್ವರ್ಣಾ, ಸೀತಾ ನದಿಗಳ ರೌದ್ರನರ್ತನಕ್ಕೆ ಬೈಂದೂರಿನ ಹಲವು ಗ್ರಾಮಗಳು ಜಲಾವೃತವಾಗಿವೆ. ಗದ್ದೆ, ರಸ್ತೆಯಲ್ಲಿ ಜನ ದೋಣಿಯಲ್ಲಿ ಸಂಚರಿಸುವಂತಾಗಿದೆ. ನೀಲಾವರದ ನಾಗದೇವರ ಗುಡಿ ಜಲಾವೃತವಾಗಿದೆ. ಬ್ರಹ್ಮಾವರದ ಅಚ್ಲಾಡಿಯಲ್ಲಿ ಅನಾರೋಗ್ಯದಿಂದ ಬಳಲ್ತಿದ್ದ ವೃದ್ಧೆಯನ್ನು ದೋಣಿ ನೆರವಿಂದ ಆಸ್ಪತ್ರೆಗೆ ಸಾಗಿಸಲಾಗಿದೆ. ಮಡಿಸಾಲು ಹೊಳೆ ಉಕ್ಕಿ ಹರಿದ ಪರಿಣಾಮ ನೂರಾರು ಎಕರೆ ಕೃಷಿ ಭೂಮಿ ಮುಳುಗಿದೆ. ಕಾಪು ತಾಲೂಕಿನ ಕುರ್ಕಾಲು ಕಿಂಡಿ ಅಣೆಕಟ್ಟಿಗೆ ನಾಡದೋಣಿಯೊಂದು ಸಿಲುಕಿದ್ದು, ನೀರಿನ ಹರಿವಿಗೆ ತಡೆಯಾಗಿದೆ. ದಕ್ಷಿಣ ಕನ್ನಡದ ನದಿಗಳು ಉಕ್ಕೇರಿವೆ. ಮಂಗಳೂರು ಹೊರವಲಯದ ಅಡ್ಯಾರ್ – ಪಾವೂರು ಬಳಿಯ ತಗ್ಗುಪ್ರದೇಶದ ಕೃಷಿಭೂಮಿಗೆ ನೀರು ನುಗ್ಗಿದೆ. ನೇತ್ರಾವತಿ ನದಿಗೆ ಪಾವೂರು ಬಳಿ ಅಡ್ಡಲಾಗಿ ಕಟ್ಟಿರುವ ಡ್ಯಾಂ ಭರ್ತಿಯಾಗಿದ್ದು, ಎಲ್ಲಾ 36 ಗೇಟ್‌ಗಳಿಂದ ನೀರನ್ನು ಸಮುದ್ರಕ್ಕೆ ಹೊರಬಿಡಲಾಗ್ತಿದೆ. ನದಿ ಪಾತ್ರದ ಜನರಿಗೂ ಎಚ್ಚರಿಕೆ ನೀಡಲಾಗಿದೆ.

Rain 04

ಹಾಸನದಲ್ಲೂ ಭೂಕುಸಿತ:
ಅಲ್ಲದೇ ಮಲೆನಾಡು ಭಾಗದಲ್ಲೂ ಉತ್ತಮ ಮಳೆ ಆಗ್ತಿದೆ. ಆಗುಂಬೆಯಲ್ಲಿ 210, ಭಾಗಮಂಡಲದಲ್ಲಿ 150, ಶೃಂಗೇರಿ, ಕೊಟ್ಟಿಗೆಹಾರ, ಕಮ್ಮರಡಿಯಲ್ಲಿ 140 ಮಿಲಿಮೀಟರ್ ಮಳೆಯಾಗಿದೆ. ಸಕಲೇಶಪುರದ ದೊಡ್ಡತಪ್ಪಲು ಬಳಿ ರಸ್ತೆ ಮೇಲೆ ಗುಡ್ಡ ಕುಸಿದಿದೆ. ಕೊಲ್ಲಹಳ್ಳಿ ಬಳಿ ಹೈವೇಯಲ್ಲಿ ಮತ್ತೆ ಭೂಕುಸಿತ ಸಂಭವಿಸಿದೆ. 500 ಮೀಟರ್ ಉದ್ದಕ್ಕೂ ಕುಸಿತವಾಗ್ತಿದೆ. ಸೂಕ್ತ ತಡೆಗೋಡೆ ನಿರ್ಮಿಸದ ಕಾರಣ ಮಣ್ಣು ಕೊಚ್ಚಿ ಹೋಗ್ತಿದೆ. ಹೇಮಾವತಿ ನದಿ ಉಕ್ಕಿಹರಿದ ಪರಿಣಾಮ ಹೊಳೆಮಲ್ಲೇಶ್ವರ ದೇಗುಲದ ಮೆಟ್ಟಿಲು ಜಲಾವೃವಾಗಿವೆ. ಜಂಬರಡಿ ಸೇತುವೆ ಮೇಲೆ ನೀರು ಹರಿಯುತ್ತಿದೆ. ಕೊಡಗಿನ ಕರ್ತೋಜಿ ಮುಖ್ಯರಸ್ತೆ ಬಿರುಕುಬಿಟ್ಟಿದ್ದು, ಪಬ್ಲಿಕ್ ಟಿವಿ ವರದಿ ಬೆನ್ನಲ್ಲೇ ಹೆದ್ದಾರಿ ಪ್ರಾಧಿಕಾರ ಕಾಮಗಾರಿಗೆ ಮುಂದಾಗಿದೆ. ಕೊಪ್ಪ ತಾಲೂಕಿನ ಗುಡ್ಡೆತೋಟದಲ್ಲಿ 2 ಮನೆಗಳ ಮೇಲೆ ಗುಡ್ಡ ಕುಸಿದಿದೆ. ಭದ್ರಾನದಿ ಅಪಾಯದ ಮಟ್ಟ ಮೀರಿದ್ದು, ಕಳಸ ಸಮೀಪದ ಹೆಬ್ಬಾಳೆ ಸೇತುವೆ ಮೇಲೆ ಸಂಚಾರ ನಿರ್ಬಂಧಿಸಲಾಗಿದೆ. ಶೃಂಗೇರಿ ಜಲಾವೃತವಾಗಿದ್ದು, ತುಂಗೆ ಶಾಂತಿಸಲೆಂದು ಶೃಂಗೇರಿಮಠದ ಕಿರಿಯ ಶ್ರೀಗಳು ಪೂಜೆ ಸಲ್ಲಿಸಿದ್ದಾರೆ. ಶಿವಮೊಗ್ಗ, ಚಿಕ್ಕಮಗಳೂರಿನ ಪ್ರವಾಸಿತಾಣಗಳಿಗೆ ಸದ್ಯಕ್ಕೆ ಯಾರು ಬರಬೇಡಿ ಎಂದು ಡಿಸಿ ಮನವಿ ಮಾಡಿದ್ದಾರೆ.

Rain 05

ದಕ್ಷಿಣ ಒಳನಾಡಿಗೂ ಜಲದಿಗ್ಭಂದನ:
ರಣಮಳೆಯ ಆರ್ಭಟದಿಂದಾಗಿ ದಕ್ಷಿಣ ಒಳನಾಡು, ಉತ್ತರ ಒಳನಾಡಿನ ಹಲವೆಡೆ ಮಳೆ ಅಬ್ಬರವಿದೆ. ಕಾವೇರಿಕೊಳ್ಳದ ಜಲಾಶಯಗಳಿಗೆ ನೀರಿನ ಒಳಹರಿವು-ಹೊರಹರಿವು ಹೆಚ್ಚಿದೆ. 24 ಗಂಟೆಯಲ್ಲಿ ಕೆಆರ್‌ಎಸ್‌ಗೆ 3 ಟಿಎಂಸಿ ನೀರು ಸೇರಿದೆ. ಕಬಿನಿ ಜಲಾಶಯ ಸಂಪೂರ್ಣ ಭರ್ತಿಯಾಗಿರುವ ಹಿನ್ನೆಲೆಯಲ್ಲಿ ಜಲಾಶಯದಿಂದ ಅಧಿಕ ನೀರು ಬಿಟ್ಟಿರುವ ಕಾರಣ ನಂಜನಗೂಡಿನ ಹಳ್ಳದಕೇರಿಗೆ ನೀರು ನುಗ್ಗಿದ್ದು, ಬಡಾವಣೆ ಮುಳುಗಡೆ ಭೀತಿ ಎದುರಿಸ್ತಿದೆ. ಕಪಿಲಾ ನದಿ ತೀರದಲ್ಲೂ ಪ್ರವಾಹ ಭೀತಿ ಎದುರಾಗಿದೆ. ಬಿದಿರಹಳ್ಳಿ ಸೇತುವೆ ಮುಳುಗಡೆಯಾಗಿದೆ. ಸರಗೂರು ತಾಲೂಕಿನ ಹಲವು ಗ್ರಾಮಗಳ ಸಂಪರ್ಕಕ್ಕೆ ತೊಂದರೆಯಾಗಿದೆ.

TAGGED:bengalurudakshina kannadaIMDkabini damKarnataka RainskrsUttara Kannadaಕಬಿನಿಕರ್ನಾಟಕಕರ್ನಾಟಕ ಸರ್ಕಾರಕೆಆರ್‍ಎಸ್ ಡ್ಯಾಂಬೆಂಗಳೂರುಮಳೆ
Share This Article
Facebook Whatsapp Whatsapp Telegram

Cinema Updates

shivarajkumar
ಕಮಲ್ ಹಾಸನ್ ಹೇಳಿಕೆಯನ್ನು ಸಮರ್ಥನೆ ಮಾಡಿಕೊಳ್ಳಲ್ಲ: ಕೊನೆಗೂ ಮೌನ ಮುರಿದ ಶಿವಣ್ಣ
11 hours ago
smriti Irani e1500383222701
ಮತ್ತೆ ಬಣ್ಣ ಹಚ್ಚಿದ ಸ್ಮೃತಿ ಇರಾನಿ – 12 ವರ್ಷಗಳ ನಂತರ ಸೀರಿಯಲ್‌ಗೆ ರೀ ಎಂಟ್ರಿ
12 hours ago
darshan 1
‘ಅಂಬಿ’ ಕನ್ವರ್ ಲಾಲ್ ಲುಕ್‌ನಲ್ಲಿ ಬಂದ ದರ್ಶನ್- ‘ದ ಡೆವಿಲ್’ ಪೋಸ್ಟರ್ ಔಟ್
12 hours ago
disha patani 3
ಹಾಲಿವುಡ್‌ನತ್ತ ಹೊರಟ ಬಾಲಿವುಡ್ ಬೋಲ್ಡ್ ಬ್ಯೂಟಿ ದಿಶಾ ಪಟಾನಿ!
14 hours ago

You Might Also Like

Train
Bengaluru City

ಮಳೆ ಅಬ್ಬರ; 5 ತಿಂಗಳು ಬೆಂಗಳೂರು, ಮಂಗಳೂರು ರೈಲು ಸಂಚಾರ ಸ್ಥಗಿತ

Public TV
By Public TV
7 hours ago
D.K Shivakumar 2
Bengaluru City

ದ್ವೇಷ ಭಾಷಣ ಯಾರೇ ಮಾಡಿದ್ರೂ ಕಠಿಣ ಕ್ರಮ – ಸಿಎಂ ಸಿದ್ದರಾಮಯ್ಯ

Public TV
By Public TV
7 hours ago
mahesh joshi
Bengaluru City

ಮಹೇಶ್ ಜೋಶಿಗೆ ರಾಜ್ಯ ಸಚಿವ ಸ್ಥಾನಮಾನ ಸವಲತ್ತು ಹಿಂಪಡೆದ ಸರ್ಕಾರ

Public TV
By Public TV
8 hours ago
CDS Anil Chauhan
Latest

ಪಾಕ್ ದಾಳಿಯಿಂದ ನಮ್ಮ ಫೈಟರ್ ಜೆಟ್‌ಗಳಿಗೂ ಹಾನಿ? – ಮೊದಲ ಬಾರಿಗೆ ಸಿಡಿಎಸ್ ಪ್ರತಿಕ್ರಿಯೆ ಏನು?

Public TV
By Public TV
8 hours ago
MeghaPramod 2
Bengaluru City

ಅಖಂಡ ರಾಷ್ಟ್ರ ತಪಸ್ವಿನಿ ಅಹಲ್ಯಾಬಾಯಿ ಹೋಳ್ಕರ್: ಮೇಘಾ ಪ್ರಮೋದ್

Public TV
By Public TV
8 hours ago
Saleem DGP KARNATAKA
Bengaluru City

ಮಂಡ್ಯ ಮಗು ಸಾವಿನ ಬಳಿಕ ಎಚ್ಚೆತ್ತ ಪೊಲೀಸ್‌ ಇಲಾಖೆ – ಕದ್ದು ಮುಚ್ಚಿ ಗಾಡಿ ಹಿಡಿಯದಂತೆ ಡಿಜಿ & ಐಜಿಪಿ ಆದೇಶ

Public TV
By Public TV
9 hours ago
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?