Public TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Font ResizerAa
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
  • National
  • World
  • Cinema
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Bengaluru City

ಬೆಂಗಳೂರು 5 ಭಾಗಗಳಾಗಿ ವಿಭಜನೆ – ಗ್ರೇಟರ್‌ ಬೆಂಗಳೂರು ಪ್ರಾಧಿಕಾರ ಮಸೂದೆಯಲ್ಲಿ ಏನಿದೆ? ಇಲ್ಲಿದೆ ಕಂಪ್ಲೀಟ್‌ ಮಾಹಿತಿ

Public TV
Last updated: July 23, 2024 8:09 pm
Public TV
Share
7 Min Read
bengaluru city
SHARE

– ವಿಧಾನಸಭೆಯಲ್ಲಿ ಡಿಕೆ ಶಿವಕುಮಾರ್‌ ಮಸೂದೆ ಮಂಡನೆ
– 10 ಪಾಲಿಕೆ ರಚಿಸಲು ಪ್ರಸ್ತಾಪ
– ನಗರ ಪಾಲಿಕೆಗಳ ಆದಾಯದಲ್ಲಿ ಪ್ರಾಧಿಕಾರಕ್ಕೆ ಪಾಲು

ಬೆಂಗಳೂರು: ಗ್ರೇಟರ್‌ ಬೆಂಗಳೂರು ಪ್ರಾಧಿಕಾರ (Greater Bengaluru Authority) ರಚಿಸಿ ಬೆಂಗಳೂರು ನಗರವನ್ನು 10 ಪಾಲಿಕೆಗಳವರೆಗೆ ವಿಭಜಿಸುವ ಗ್ರೇಟರ್‌ ಬೆಂಗಳೂರು ಪ್ರಾಧಿಕಾರ ಆಡಳಿತ ಮಸೂದೆ -2024ನ್ನು ಡಿಸಿಎಂ ಡಿ.ಕೆ.ಶಿವಕುಮಾರ್ (DK Shivakumar) ಇಂದು ವಿಧಾನಸಭೆಯಲ್ಲಿ ಮಂಡನೆ ಮಾಡಿದ್ದಾರೆ.

ಮೇಯರ್‌ ಹಾಗೂ ಉಪ ಮೇಯರ್‌ ಅವಧಿಯನ್ನು 5 ವರ್ಷಕ್ಕೆ ಹೆಚ್ಚಳ, 400 ವಾರ್ಡ್ ಗಳನ್ನು ಮಾಡುವುದು ಸೇರಿದಂತೆ ಹಲವು ಮಹತ್ವದ ಅಂಶಗಳು ಗ್ರೇಟರ್‌ ಬೆಂಗಳೂರು ಆಡಳಿತ ಮಸೂದೆಯಲ್ಲಿದೆ.

ಬೃಹತ್‌ ಬೆಂಗಳೂರು ಮಹಾನಗರ ಪಾಲಿಕೆ, ಹೊಸಕೋಟೆ, ನೆಲಮಂಗಲ, ದೇವನಹಳ್ಳಿ, ದೊಡ್ಡಬಳ್ಳಾಪುರ, ಎಲೆಕ್ಟ್ರಾನಿಕ್‌ ಸಿಟಿ, ಬಿಡದಿ, ಆನೇಕಲ್‌ ಸೇರಿ ಎರಡೂ ಜಿಲ್ಲೆ ಹಾಗೂ ಸುತ್ತಮುತ್ತ ಪ್ರದೇಶಗಳನ್ನು ಸೇರಿಸಿ ಗ್ರೇಟರ್‌ ಬೆಂಗಳೂರು ರಚಿಸುವ ಮಸೂದೆ ಇದಾಗಿದೆ.

 

ಮಸೂದೆಯಲ್ಲಿ ಏನಿದೆ?
10 ಪಾಲಿಕೆ ರಚಿಸಲು ಪ್ರಸ್ತಾಪ
ಕನಿಷ್ಠ ಹತ್ತು ಲಕ್ಷ ಜನಸಂಖ್ಯೆಗೆ ಕಡಿಮೆ ಇಲ್ಲದಂತೆ ಒಂದೊಂದು ನಗರ ಪಾಲಿಕೆ ರಚನೆ ಮಾಡಲು ಅವಕಾಶ ಕಲ್ಪಿಸಲಾಗಿದೆ. ಈ ವೇಳೆ ಪ್ರತಿ ಚದರ ಕಿ.ಮೀ.ಗೆ 5 ಸಾವಿರ ಜನಸಂಖ್ಯೆ ಇರಬೇಕು ಎಂಬುದನ್ನು ಗಮನದಲ್ಲಿಟ್ಟುಕೊಂಡು ಒಂದೊಂದು ಪಾಲಿಕೆಗೆ 200 ವಾರ್ಡ್‌ವರೆಗೆ ರಚನೆ ಮಾಡಲು ಅವಕಾಶ ಕಲ್ಪಿಸಲಾಗಿದೆ.

ಕನಿಷ್ಠ 50 ರಿಂದ ಗರಿಷ್ಠ 200 ವಾರ್ಡ್‌ವರೆಗೆ ರಚನೆ ಮಾಡಲು ಅವಕಾಶ ಕಲ್ಪಿಸಿದ್ದು, ಈ ಮೂಲಕ ಗರಿಷ್ಠ 2,000 ವಾರ್ಡ್‌ ರಚನೆಗೆ ಬಿಲ್‌ನಲ್ಲಿ ಅವಕಾಶ ಸಿಗಲಿದೆ. ಇದನ್ನೂ ಓದಿ: ಬಜೆಟ್‌ ಭಾಷಣ ಮುಗಿದ ಬೆನ್ನಲ್ಲೇ ಚಿನ್ನ, ಬೆಳ್ಳಿ ದರ ದಿಢೀರ್‌ ಭಾರೀ ಇಳಿಕೆ

ಬಿಬಿಎಂಪಿ ವ್ಯಾಪ್ತಿ ಸದ್ಯ 708 ಚ.ಕಿ.ಮೀ. ಇದೆ. ಪ್ರತಿಯೊಂದು ಪಾಲಿಕೆಯು ಸರಾಸರಿ 200 ಚ.ಕಿ.ಮೀ. ವಿಸ್ತೀರ್ಣ ಹೊಂದಿರಲಿವೆ. ಜಿಬಿಎ ವ್ಯಾಪ್ತಿ ಸುಮಾರು 1400 ಚ.ಕಿ.ಮೀ. ಇರಲಿದೆ. ಎಲೆಕ್ಟ್ರಾನಿಕ್‌ ಸಿಟಿ ಸೇರಿದಂತೆ ಹೊರವಲಯದಲ್ಲಿ ಹೆಚ್ಚು ಅಭಿವೃದ್ಧಿ ಹೊಂದಿರುವ ಪ್ರದೇಶಗಳು ಜಿಬಿಎ ವ್ಯಾಪ್ತಿಗೆ ತರಲು ಶಿಫಾರಸು ಮಾಡಲಾಗಿದೆ.

ಗ್ರೇಟರ್‌ ಬೆಂಗಳೂರು ಪ್ರಾಧಿಕಾರ ರಚನೆ ಬಳಿಕ ಬಿಡಿಎ ಭೂ ಬಳಕೆ ಮತ್ತು ಅಭಿವೃದ್ಧಿ ನಕ್ಷೆ ಅನುಮೋದಿಸುವ ಅಧಿಕಾರ ಕಳೆದುಕೊಳ್ಳಲಿದೆ. ಕೇವಲ ಯೋಜನೆಗಳನ್ನು ಅನುಷ್ಠಾನಗೊಳಿಸುವ ಜವಾಬ್ದಾರಿ ಮಾತ್ರ ಹೊಂದಿರುತ್ತದೆ. ರಾಜ್ಯ ಸರ್ಕಾರವು ಬಿಡುಗಡೆ ಮಾಡುವ ಅನುದಾನವನ್ನು ಯಾವ ಪಾಲಿಕೆಗೆ ಎಷ್ಟು ಹಂಚಿಕೆ ಮಾಡಬೇಕೆಂಬುದನ್ನು ಪ್ರಾಧಿಕಾರವೇ ನಿರ್ಧರಿಸಲಿದೆ.

BBMP

ಮೂರು ಹಂತದ ಆಡಳಿತ ವ್ಯವಸ್ಥೆ:
ಗ್ರೇಟರ್‌ ಬೆಂಗಳೂರು, ನಗರ ಪಾಲಿಕೆ ಹಾಗೂ ವಾರ್ಡ್‌ ಸಮಿತಿಗಳು ಸೇರಿ ಮೂರು ಹಂತದ ಆಡಳಿತ ವ್ಯವಸ್ಥೆ ಜಾರಿಗೆ ಬರಲಿದೆ. ಇದರಡಿ ಮೇಯರ್‌, ಆಯುಕ್ತರು, ಜಂಟಿ ಆಯುಕ್ತರು, ಸ್ಥಾಯಿ ಸಮಿತಿ, ವಲಯ ಸಮಿತಿ, ವಾರ್ಡ್‌ ಸಮಿತಿ ಹಾಗೂ ಏರಿಯಾ ಸಭೆ ಕಾರ್ಯನಿರ್ವಹಿಸಲಿವೆ.

ಪ್ರಮುಖ ಮೇಲ್ಸೇತುವೆಗಳು, ಎಕ್ಸ್‌ಪ್ರೆಸ್‌ ಎಲಿವೇಟೆಡ್‌ ರಸ್ತೆಗಳು, ಆರ್ಟಿರಿಯಲ್‌, ಸಬ್‌ ಆರ್ಟಿರಿಯಲ್‌ ರಸ್ತೆ ನಿರ್ಮಾಣ ಹಾಗೂ ನಿರ್ವಹಣೆ ಮಳೆ ನೀರು ಕಾಲುವೆಗಳ ನಿರ್ವಹಣೆ, ಕುಡಿಯುವ ನೀರು ಸರಬರಾಜು ಹಾಗೂ ಒಳಚರಂಡಿ ವ್ಯವಸ್ಥೆಯೂ ಗ್ರೇಟರ್‌ ಬೆಂಗಳೂರು ಪ್ರಾಧಿಕಾರ ವ್ಯಾಪ್ತಿಗೆ ಬರಲಿದೆ.

ಆಸ್ತಿ ತೆರಿಗೆ ನಿಗದಿ, ರಿಬೇಟರ್‌ ಘೋಷಣೆ, ಹೊಸ ತೆರಿಗೆಗಳ ಬಗ್ಗೆ ಸರ್ಕಾರಕ್ಕೆ ಶಿಫಾರಸು ಮಾಡುವುದು ಸೇರಿ ಬಹುತೇಕ ಅಧಿಕಾರಿಗಳನ್ನು ಪ್ರಾಧಿಕಾರಕ್ಕೆ ನೀಡಲಾಗಿದೆ.

Siddaramaiah DK Shivakumar

ಸಿಎಂ ಪ್ರಾಧಿಕಾರದ ಅಧ್ಯಕ್ಷರು:
ಗ್ರೇಟರ್‌ ಬೆಂಗಳೂರು ಪ್ರಾಧಿಕಾರಕ್ಕೆ ಮುಖ್ಯಮಂತ್ರಿಗಳು ಅಧ್ಯಕ್ಷರಾಗಿದ್ದು, ಬೆಂಗಳೂರು ನಗರ ಉಸ್ತುವಾರಿ ಸಚಿವರು ಉಪಾಧ್ಯಕ್ಷರಾಗಿರುತ್ತಾರೆ.

ಗ್ರೇಟರ್‌ ಬೆಂಗಳೂರು ಪ್ರಾಧಿಕಾರಕ್ಕೆ ಮುಖ್ಯಮಂತ್ರಿಗಳು ಅಧ್ಯಕ್ಷರಾಗಿರಲಿದ್ದಾರೆ. ಅವರೊಂದಿಗೆ ಬೆಂಗಳೂರು ನಗರಾಭಿವೃದ್ದಿ ಸಚಿವರು ಉಪಾಧ್ಯಕ್ಷರಾಗಿ ಕೆಲಸ ಮಾಡಲಿದ್ದಾರೆ. ಹಾಗೆಯೇ ಗ್ರೇಟರ್‌ ಬೆಂಗಳೂರು ಪ್ರಾಧಿಕಾರದ ಮುಖ್ಯ ಆಯುಕ್ತರು ಸದಸ್ಯ ಕಾರ್ಯದರ್ಶಿಯಾಗಿ ಕೆಲಸ ಮಾಡಲಿದ್ದಾರೆ.

ಉಳಿದಂತೆ ಗೃಹ ಸಚಿವ, ನಗರಾಭಿವೃದ್ಧಿ ಸಚಿವ, ಸಾರಿಗೆ ಸಚಿವ, ಇಂಧನ ಸಚಿವ, ಬೃಹತ್‌ ಬೆಂಗಳೂರು ವ್ಯಾಪ್ತಿಯ ಶಾಸಕರಾಗಿ ಸಚಿವರಾಗಿರುವವರು ಸದಸ್ಯರಾಗಿರಲಿದ್ದಾರೆ. ಅದೇ ರೀತಿ ಮಹಾನಗರ ಪಾಲಿಕೆಗಳ ಮೇಯರ್‌ಗಳು, ಪ್ರತಿ ಮಹಾನಗರ ಪಾಲಿಕೆಯಿಂದ ನಾಮ ನಿರ್ದೇಶನಗೊಂಡ ಇಬ್ಬರು, ಬಿಡಿಎ ಆಯುಕ್ತ, ಜಲಮಂಡಳಿ ಅಧ್ಯಕ್ಷ, ಬಿಎಂಟಿಸಿ ಎಂಡಿ, ಬಿಎಂಆರ್‌ಸಿಎಲ್‌ ವ್ಯವಸ್ಥಾಪಕ ನಿರ್ದೇಶಕ, ಬೆಸ್ಕಾಂ ವ್ಯವಸ್ಥಾಪಕ ನಿರ್ದೇಶಕ, ಬೆಂಗಳೂರು ನಗರ ಪೊಲೀಸ್‌ ಆಯುಕ್ತ, ಬೆಂಗಳೂರು ಮಹಾನಗರ ಭೂ ಸಾರಿಗೆ ಪ್ರಾಧಿಕಾರದ ಸಿಇಒ, ಬೆಂಗಳೂರು ಘನತ್ಯಾಜ್ಯ ನಿರ್ವಹಣೆಯ ವ್ಯವಸ್ಥಾಪಕ ನಿರ್ದೇಶಕ, ಗ್ರೇಟರ್‌ ಬೆಂಗಳೂರು ಪ್ರಾಧಿಕಾರದ ಮುಖ್ಯ ನಗರ ಯೋಜನಾಧಿಕಾರಿ, ಪ್ರಧಾನ ಮುಖ್ಯ ಎಂಜಿನಿಯರ್‌, ಅಗ್ನಿಶಾಮಕ ಮತ್ತು ತುರ್ತು ಸೇವೆಗಳ ನಿರ್ದೇಶಕರು ಸದಸ್ಯರಾಗಿರಲಿದ್ದಾರೆ. ಇದನ್ನೂ ಓದಿ: Budget 2024 | ಮೊದಲ ಬಾರಿಗೆ ಉದ್ಯೋಗ ಪಡೆದವರಿಗೆ 15 ಸಾವಿರ ರೂ.

ನಗರಕ್ಕೆ ಸಂಬಂಧಿಸಿದ ಎಲ್ಲಾ ಇಲಾಖೆ ಪ್ರಾಧಿಕಾರ ವ್ಯಾಪ್ತಿಗೆ:
ಜಿಬಿಎ ಅಡಿಯಲ್ಲಿಯೇ ಬಿಬಿಎಂಪಿ, ಬಿಡಿಎ, ಜಲಮಂಡಳಿ, ಬೆಸ್ಕಾಂ, ಮೆಟ್ರೊ, ಸಂಚಾರ ಪೊಲೀಸ್‌ ಹಾಗೂ ಸಾರಿಗೆ ಇಲಾಖೆ ಸೇರಿದಂತೆ ನಗರಕ್ಕೆ ಸಂಬಂಧಿಸಿದ ಎಲ್ಲ ಇಲಾಖೆಗಳೂ ಕಾರ್ಯ ನಿರ್ವಹಿಸಬೇಕಾಗುತ್ತದೆ.

bengaluru development authority bda

ಪ್ರತಿ ಪಾಲಿಕೆಗೆ ಒಬ್ಬರು ಆಯುಕ್ತರು
ಬಿಬಿಎಂಪಿಯನ್ನು ಐದು ಪಾಲಿಕೆಗಳನ್ನಾಗಿ ವಿಭಜಿಸುವ ಪ್ರಸ್ತಾವವೂ ಸಮಿತಿ ಸಲ್ಲಿಸಿರುವ ಕರಡು ವಿಧೇಯಕದಲ್ಲಿದೆ. ತಲಾ ಒಬ್ಬರು ಮೇಯರ್‌, ಉಪ ಮೇಯರ್‌ ಜತೆಗೆ 10 ಸದಸ್ಯರ ಸಂಪುಟವೂ ಇರಲಿದೆ. ಆದರೆ, ಸ್ಥಾಯಿ ಸಮಿತಿಗಳು ರದ್ದಾಗಲಿವೆ. ಪ್ರತಿ ಪಾಲಿಕೆಗೂ ಸರ್ಕಾರದಿಂದ ನೇಮಿಸಲ್ಪಟ್ಟ ಒಬ್ಬ ಆಯುಕ್ತರು ಮತ್ತು ಪ್ರತಿ ವಲಯಕ್ಕೆ ಒಬ್ಬ ವಲಯ ಆಯುಕ್ತರು ಇರಲಿದ್ದಾರೆ.

ನಿಗಾ ವಹಿಸಲು ಕಾರ್ಯಕಾರಿ ಸಮಿತಿ ರಚನೆ
ಗ್ರೇಟರ್‌ ಬೆಂಗಳೂರು ಪ್ರಾಧಿಕಾರವು ಸಿಎಂ ಅಥವಾ ಉಸ್ತುವಾರಿ ಸಚಿವರ ನೇತೃತ್ವದಲ್ಲಿ 3 ತಿಂಗಳಲ್ಲಿ ಒಮ್ಮೆಯಾದರೂ ಸಭೆ ನಡೆಸಬೇಕಿದೆ. ಅಲ್ಲದೆ, ಈ ಸಭೆಯಲ್ಲಿ ನಿರ್ಧರಿಸುವ ಹಾಗೂ ಇತರ ಕಾರ್ಯಗಳನ್ನು ಅನುಷ್ಠಾನಗೊಳಿಸಲು ಪ್ರತ್ಯೇಕ ಕಾರ್ಯಕಾರಿ ಸಮಿತಿ ರಚನೆಗೆ ವಿಧೇಯಕದಲ್ಲಿ ಪ್ರಸ್ತಾಪಿಸಲಾಗಿದೆ. ಈ ಸಮಿತಿಗೆ ಬೆಂಗಳೂರು ನಗರಾಭಿವೃದ್ಧಿ ಸಚಿವ ಅಥವಾ ಮುಖ್ಯಮಂತ್ರಿಗಳು ಸೂಚಿಸುವ ಸಚಿವರು ಅಧ್ಯಕ್ಷರಾಗಿ ಕೆಲಸ ಮಾಡಲಿದ್ದಾರೆ. ಅವರೊಂದಿಗೆ ಮುಖ್ಯ ಆಯುಕ್ತ ಸದಸ್ಯ ಕಾರ್ಯದರ್ಶಿಯಾಗಿ ಹಾಗೂ ಉಳಿದ ಅಧಿಕಾರಿಗಳು ಸದಸ್ಯರಾಗಿರಲಿದ್ದಾರೆ.

ನಗರ ಪಾಲಿಕೆಗಳ ಆದಾಯದಲ್ಲಿ ಪ್ರಾಧಿಕಾರಕ್ಕೆ ಪಾಲು
ನಗರ ಪಾಲಿಕೆಗಳು ಸಂಗ್ರಹಿಸುವ ಆದಾಯದಲ್ಲಿ ಗ್ರೇಟರ್ ಬೆಂಗಳೂರು ಪ್ರಾಧಿಕಾರಕ್ಕೆ ಪಾಲು ನೀಡಬೇಕಿದೆ. ಅದು ರಾಜ್ಯ ಸರ್ಕಾರ ಸೂಚಿಸುವಷ್ಟು ಆದಾಯದಿಂದ ಘನತ್ಯಾಜ್ಯ ನಿರ್ವಹಣೆ ಸೇರಿದಂತೆ ಇನ್ನಿತರ ಕಾರ್ಯಗಳನ್ನು ಮಾಡಲಾಗುತ್ತದೆ. ಅಲ್ಲದೆ, ಆ ಆದಾಯವನ್ನು ಕಡಿಮೆ ಆದಾಯ ಹೊಂದಿದ ನಗರ ಪಾಲಿಕೆಗೆ ಹಂಚಿಕೆ ಮಾಡಲಾಗುತ್ತದೆ.

bengaluru city arial dh 1553098309 e1676618084318

ಆರ್ಥಿಕ ಅಭಿವೃದ್ಧಿ ಸಂಸ್ಥೆ ರಚನೆ
ಗ್ರೇಟರ್ ಬೆಂಗಳೂರು ವ್ಯಾಪ್ತಿಯಲ್ಲಿ ಹೂಡಿಕೆ ಆಕರ್ಷಣೆ ಸೇರಿದಂತೆ ಆರ್ಥಿಕವಾಗಿ ಬಲ ತುಂಬಲು ಆರ್ಥಿಕ ಅಭಿವೃದ್ಧಿ ಸಂಸ್ಥೆ ರಚಿಸುವ ಕುರಿತು ವಿಧೇಯಕದಲ್ಲಿ ಪ್ರಸ್ತಾಪಿಸಲಾಗಿದೆ. ಪ್ರಾಧಿಕಾರ ರಚನೆಯಾದ ಒಂದು ವರ್ಷದಲ್ಲಿ ಆರ್ಥಿಕ ಅಭಿವೃದ್ಧಿ ಸಂಸ್ಥೆ ರಚನೆಯಾಗಲಿದೆ. ಈ ಸಂಸ್ಥೆಗೆ ಬೆಂಗಳೂರು ನಗರಾಭಿವೃದ್ಧಿ ಸಚಿವರು ಅಧ್ಯಕ್ಷರಾಗಿರಲಿದ್ದು, ಹೂಡಿಕೆ ಆಕರ್ಷಣೆ, ಉದ್ಯೋಗ ಸೃಷ್ಟಿಯಂತಹ ಕೆಲಸ ಮಾಡಲಿದೆ. ಇದನ್ನೂ ಓದಿ: ದಿಢೀರ್‌ ಕುಸಿತಗೊಂಡು ನಂತರ ಸಾವಿರ ಅಂಕ ಏರಿಕೆಯಾಗಿ ಸೆನ್ಸೆಕ್ಸ್‌ ಮತ್ತೆ ಕುಸಿದಿದ್ದು ಯಾಕೆ?

ಪ್ರತ್ಯೇಕ ಭದ್ರತಾ ಪಡೆ ರಚನೆ
ಗ್ರೇಟರ್‌ ಬೆಂಗಳೂರು ಪ್ರಾಧಿಕಾರಕ್ಕಾಗಿ ಪ್ರತ್ಯೇಕ ಭದ್ರತಾ ಪಡೆ ರಚಿಸುವುದಾಗಿ ವಿಧೇಯಕದಲ್ಲಿ ತಿಳಿಸಲಾಗಿದೆ. ಈ ಪಡೆಯು ನಗರ ಪಾಲಿಕೆಗಳ ಆಸ್ತಿ ರಕ್ಷಣೆ, ಆದಾಯ ಸೋರಿಕೆ ತಡೆ, ಬೈಲಾಗಳ ಉಲ್ಲಂಘಟನೆ ಮಾಡುವವರ ವಿರುದ್ಧ ಕ್ರಮದಂತಹ ಕೆಲಸ ಮಾಡಲಿದೆ ಎಂದು ಹೇಳಲಾಗಿದೆ.

ಎಸ್‌/ಎಸ್‌ಟಿ-ಹಿಂದುಳಿದ ವರ್ಗಕ್ಕೆ 50% ರಷ್ಟು ಮೀಸಲು
ಗ್ರೇಟರ್‌ ಬೆಂಗಳೂರು ಪ್ರದೇಶ ವ್ಯಾಪ್ತಿಯಲ್ಲಿ ರಚಿಸಲಾಗುವ ನಗರ ಪಾಲಿಕೆಗಳಿಗೆ ನಡೆಯುವ ಚುನಾವಣೆಯಲ್ಲಿ 50% ರಷ್ಟು ಸ್ಥಾನಗಳನ್ನು ಪರಿಶಿಷ್ಟ ಜಾತಿ/ಪಂಗಡ ಹಾಗೂ ಹಿಂದುಳಿದ ವರ್ಗಗಳಿಗೆ ಮೀಸಲಿಡಲಾಗುವುದು ಎಂದು ತಿಳಿಸಲಾಗಿದೆ. ಹಾಗೆಯೇ ಪ್ರತಿ ನಗರ ಪಾಲಿಕೆಗಳು 50ರಿಂದ 200 ವಾರ್ಡ್‌ಗಳನ್ನು ಹೊಂದಿರುವುದು ಕಡ್ಡಾಯವಾಗಿಸಿ ಕಾಯ್ದೆಯಲ್ಲಿ ಉಲ್ಲೇಖಿಸಲಾಗಿದೆ.

Bengaluru City 1

ಬಿ.ಎಸ್‌. ಪಾಟೀಲ್‌ ನೇತೃತ್ವದ ವರದಿ ಆಧರಿಸಿ ಬಿಲ್
ಸರ್ಕಾರದ ನಿವೃತ್ತ ಮುಖ್ಯ ಕಾರ್ಯದರ್ಶಿ ಬಿ.ಎಸ್. ಪಾಟೀಲ್ ನೇತೃತ್ವದ ಸಮಿತಿ ಜುಲೈನಲ್ಲಿ ಬೃಹತ್‌ ಬೆಂಗಳೂರು ಮಹಾನಗರ ಪಾಲಿಕೆ ಸುಧಾರಣಾ ಸಮಿತಿ ಸರ್ಕಾರಕ್ಕೆ ಸಲ್ಲಿಸಿತ್ತು. ನಿವೃತ್ತ ಐಎಎಸ್‌ ಅಧಿಕಾರಿ ಸಿದ್ದಯ್ಯ, ನಗರತಜ್ಞ ವಿ. ರವಿಚಂದರ್‌ ಅವರು ಈ ವರದಿ ಸಿದ್ದಪಡಿಸಿ ಸಲ್ಲಿಸಿದ್ದರು. ಈ ವರದಿ ಆಧಾರದ ಮೇಲೆ ಬಿಲ್‌ ರಚನೆ ಮಾಡಿದ್ದು, ಇದಕ್ಕೆ ಸಂಪುಟ ಒಪ್ಪಿಗೆ ನೀಡಿದೆ.

ಮೇಯರ್ ಅವಧಿ 5 ವರ್ಷಕ್ಕೆ ಹೆಚ್ಚಳ
ಗ್ರೇಟರ್‌ ಬೆಂಗಳೂರು ಪ್ರಾಧಿಕಾರದ ಅಡಿಯಲ್ಲಿ ರಚನೆಯಾಗುವ ನಗರ ಪಾಲಿಕೆ ಚುನಾವಣೆ ನಂತರ ನಡೆಯುವ ಮೊದಲ ಸಭೆಯಲ್ಲಿ ಮೇಯರ್‌ ಮತ್ತು ಉಪ ಮೇಯರ್‌ಗಳನ್ನು ಸದಸ್ಯರು ಆಯ್ಕೆ ಮಾಡಬೇಕಿದೆ. ಅಲ್ಲದೆ, ಮೇಯರ್‌ ಮತ್ತು ಉಪಮೇಯರ್‌ ಅವಧಿಯನ್ನು 5 ವರ್ಷಕ್ಕೆ ಹೆಚ್ಚಿಸಲಾಗಿದೆ ಎಂದು ವಿಧೇಯಕದಲ್ಲಿ ತಿಳಿಸಲಾಗಿದೆ.

6 ಸ್ಥಾಯಿ ಸಮಿತಿಗಳ ರಚನೆ
ಪ್ರತಿ ನಗರ ಪಾಲಿಕೆಯಲ್ಲಿ 6 ಸ್ಥಾಯಿ ಸಮಿತಿ ರಚಿಸಲಾಗುತ್ತದೆ. ಆಡಳಿತ, ಶಿಕ್ಷಣ ಮತ್ತು ಸಾಮಾಜಿಕ ನ್ಯಾಯ ಸ್ಥಾಯಿ ಸಮಿತಿ, ಕಂದಾಯ, ಆದಾಯ ಮತ್ತು ಲೆಕ್ಕಪತ್ರ ಸ್ಥಾಯಿ ಸಮಿತಿ, ಸಾರ್ವಜನಿಕ ಕಾಮಗಾರಿ ಮತ್ತು ಎಂಜಿನಿಯರಿಂಗ್‌ ಸ್ಥಾಯಿ ಸಮಿತಿ, ಸಾರ್ವಜನಿಕ ಆರೋಗ್ಯ ಮತ್ತು ನೈಸರ್ಗಿಕ ವಿಕೋಪ ನಿರ್ವಹಣಾ ಸ್ಥಾಯಿ ಸಮಿತಿ, ಅರಣ್ಯ, ಪರಿಸರ, ಕೆರೆ ಮತ್ತು ತೋಟಗಾರಿಕೆ ಸ್ಥಾಯಿ ಸಮಿತಿ, ನಗರ ಯೋಜನೆ ಮತ್ತು ಮೂಲಸೌಕರ್ಯ ಸ್ಥಾಯಿ ಸಮಿತಿಗಳನ್ನು ರಚಿಸಲಾಗುತ್ತದೆ. ಪ್ರತಿ ಸ್ಥಾಯಿ ಸಮಿತಿಯೂ 5 ಸದಸ್ಯರಿರಲಿದ್ದು, ಅವರನ್ನು ನಗರ ಪಾಲಿಕೆ ಸಭೆಯಲ್ಲಿ ಕೌನ್ಸಿಲರ್‌ಗಳು ಆಯ್ಕೆ ಮಾಡಲಿದ್ದಾರೆ. ಅಲ್ಲದೆ, ಆ ಐವರಲ್ಲಿ ಒಬ್ಬರನ್ನು ಅಧ್ಯಕ್ಷರನ್ನಾಗಿ ನೇಮಕ ಮಾಡಲಾಗುತ್ತದೆ. ಈ ಸ್ಥಾಯಿ ಸಮಿತಿಗಳಿಗೆ ಆಯ್ಕೆಯಾದ ಸದಸ್ಯರ ಅವಧಿ 30 ತಿಂಗಳವರೆಗೆ ಇರಲಿದೆ ಎಂದು ವಿಧೇಯಕದಲ್ಲಿ ಉಲ್ಲೇಖಿಸಲಾಗಿದೆ.

5 ಪಾಲಿಕೆ ರಚನೆ ಮಾಡಲು ಸರ್ಕಾರ ನಿರ್ಧಾರ
ಕಳೆದ ಐದು ವರ್ಷಗಳ ಹಿಂದೆಯೇ ಬಿಬಿಎಂಪಿ ಪುನರ್‌ರಚನಾ ವರದಿ ಸಲ್ಲಿಸಲಾಗಿದೆ. ಅದರಲ್ಲಿ 5 ಪಾಲಿಕೆ ರಚನೆ, 400 ವಾರ್ಡ್‌ಗಳ ವಿಂಗಡಣೆ ಕುರಿತು ಪ್ರಸ್ತಾಪಿಸಲಾಗಿತ್ತು. ಆ ವರದಿಯನ್ನು ಸರ್ಕಾರ ಈ ಹಿಂದೆಯೇ ಅಂಗೀಕರಿಸಿದೆ. ಹೀಗಾಗಿ ಆ ವರದಿಯಲ್ಲಿನ ಶಿಫಾರಸುಗಳ ಅನುಷ್ಠಾನಕ್ಕಾಗಿ ಕಾಯಿದೆ ರೂಪಿಸಬೇಕಿದೆ. ಈ ಮಸೂದೆ ಅನ್ವಯ 1 ರಿಂದ 10 ಪಾಲಿಕೆ ರಚಿಸಬಹುದು. ಆದರೆ ಸರ್ಕಾರ ಸುಮಾರು ಐದು ಪಾಲಿಕೆ ಮಾತ್ರ ರಚನೆಗೆ ಮುಂದಾಗಬಹುದು ಎನ್ನಲಾಗುತ್ತಿದೆ.

 

TAGGED:bbmpbengaluruDK Shivakumarkarnatakaಡಿಕೆ ಶಿವಕುಮಾರ್ಬಿಬಿಎಂಪಿಬೆಂಗಳೂರು
Share This Article
Facebook Whatsapp Whatsapp Telegram

Cinema Updates

rakshak bullet
ಸತ್ಯ ಒಪ್ಪಿಕೊಂಡ ರಕ್ಷಕ್: ಆಡಿಯೋ ವೈರಲ್ ಬಗ್ಗೆ ಹೇಳಿದ್ದೇನು?
Bengaluru City Cinema Districts Latest Top Stories
ramya 5 2
ನಿಮ್ಮಿಂದಲೇ ಹೆಣ್ಮಕ್ಕಳಿಗೆ ದೌರ್ಜನ್ಯ – ದರ್ಶನ್‌ ಫ್ಯಾನ್ಸ್‌ ವಿರುದ್ಧ ರಮ್ಯಾ ಕೆಂಡಾಮಂಡಲ
Bengaluru City Cinema Latest Main Post
Rashmika Mandannas New Film Mysaa Launched with a Traditional Pooja Muhurta program 2
ರಶ್ಮಿಕಾ ಮಂದಣ್ಣ ನಟನೆಯ ಮೈಸಾ ಚಿತ್ರಕ್ಕೆ ಮುಹೂರ್ತ- ಗೋಂಡ್ ಹಾಡಿಗೆ ಡಾನ್ಸ್
Cinema Latest South cinema
Darshan The Devil
ʼದಿ ಡೆವಿಲ್ʼ ಶೂಟಿಂಗ್ ಮುಕ್ತಾಯ : ಪೋಸ್ಟ್ ಪ್ರೊಡಕ್ಷನ್ ವರ್ಕ್ ಶುರು
Cinema Latest Sandalwood Top Stories
just married
ಶೈನ್ ಶೆಟ್ಟಿಯ ಜಸ್ಟ್ ಮ್ಯಾರೀಡ್‌ಗೆ ಡೇಟ್ ಫಿಕ್ಸ್
Cinema Latest Sandalwood Top Stories

You Might Also Like

IND vs ENG 4th test Ben Stokes offers a draw India denies and continues to bat
Cricket

ಬೆನ್‌ ಸ್ಟೋಕ್ಸ್‌ ಡ್ರಾ ಆಫರ್‌ ರಿಜೆಕ್ಟ್‌ – ಬ್ಯಾಟಿಂಗ್‌ ಮುಂದುವರಿಸಿ ಚಮಕ್‌ ಕೊಟ್ಟ ಜಡೇಜಾ, ಸುಂದರ್‌

Public TV
By Public TV
4 hours ago
Mallikarjun Kharge 3
Districts

ಕಷ್ಟ ಪಟ್ಟಿದ್ದು ನಾನು, ಕೃಷ್ಣ ಸಿಎಂ ಆದ್ರು – ಮುಖ್ಯಮಂತ್ರಿ ಸ್ಥಾನ ಸಿಗದಿದ್ದಕ್ಕೆ ಖರ್ಗೆ ಬಹಿರಂಗ ಬೇಸರ

Public TV
By Public TV
4 hours ago
Ravindra Jadeja Washington Sundar
Cricket

ಜಡೇಜಾ, ಸುಂದರ್‌ ಅಜೇಯ ಶತಕ – ಡ್ರಾದಲ್ಲಿ ಟೆಸ್ಟ್‌ ಅಂತ್ಯ

Public TV
By Public TV
4 hours ago
Chikkamagaluru Elephant Attack
Chikkamagaluru

ಚಿಕ್ಕಮಗಳೂರು | ಆನೆ ದಾಳಿಗೆ ವೃದ್ಧ ಬಲಿ – 4 ದಿನಗಳ ಅಂತರದಲ್ಲಿ ಇಬ್ಬರು ಸಾವು

Public TV
By Public TV
5 hours ago
Lakshmi Hebbalkar
Belgaum

ರಾಹುಲ್‌ ಗಾಂಧಿ ಜೊತೆ ಯುವಕರು ಸೈನಿಕರಾಗಿ ಕೆಲಸ ಮಾಡಬೇಕು: ಲಕ್ಷ್ಮಿ ಹೆಬ್ಬಾಳ್ಕರ್

Public TV
By Public TV
5 hours ago
American Airlines 1
Latest

ಟೇಕಾಫ್‌ ವೇಳೆ ಕೈಕೊಟ್ಟ ಲ್ಯಾಂಡಿಂಗ್‌ ಗೇರ್‌ – ಬೋಯಿಂಗ್ ವಿಮಾನದಲ್ಲಿ ಕಾಣಿಸಿಕೊಂಡ ಬೆಂಕಿ

Public TV
By Public TV
6 hours ago
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?