ಕೇಂದ್ರ ಮಧ್ಯಸ್ಥಿಕೆ ವಹಿಸಲಿ, ಮೇಕೆದಾಟು ಅಣೆಕಟ್ಟು ಕಟ್ಟಲು ಸಿದ್ಧ – ಸಿದ್ದರಾಮಯ್ಯ

Public TV
2 Min Read
mekedatu

ಮೈಸೂರು: ಕೇಂದ್ರ ಸರ್ಕಾರ ಮಧ್ಯಸ್ಥಿಕೆ ವಹಿಸಲಿ ಮೇಕೆದಾಟು ಅಣೆಕಟ್ಟು (Mekedatu Dam) ಕಟ್ಟಲು ನಾವು ಸಿದ್ಧರಿದ್ದೇವೆ ಎಂದು ಸಿಎಂ ಸಿದ್ದರಾಮಯ್ಯ (Siddaramaiah) ಹೇಳಿದ್ದಾರೆ.

DK Shivakumar Mekedatu Padyatra scaled

ಮೈಸೂರಿನಲ್ಲಿ (Mysuru) ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮೇಕೆದಾಟು ಯೋಜನೆ (Mekedatu Project) ವಿಚಾರಕ್ಕೆ ಪ್ರತಿಕ್ರಿಯಿಸಿದರು. ಮೇಕೆದಾಟು ಅಣೆಕಟ್ಟು ಕಟ್ಟಲು ನಾವು ಸಿದ್ಧರಿದ್ದೇವೆ. ತಮಿಳುನಾಡಿನವರು ರಾಜಕೀಯ ಕಾರಣಕ್ಕೆ ವಿರೋಧ ಮಾಡುತ್ತಿದ್ದಾರೆ. ಆದ್ದರಿಂದ ಕೇಂದ್ರದವರು (Union Government) ಮಧ್ಯಸ್ಥಿಕೆ ವಹಿಸಲಿ ಅಂತ ಒತ್ತಾಯಿಸಿದ್ದಾರೆ. ಇದನ್ನೂ ಓದಿ: ದೇವೇಗೌಡರ ಕುಟುಂಬಕ್ಕೆ ಎಷ್ಟು ಸೈಟು ಬರೆಸಿಕೊಂಡಿದ್ದಾರೆ ಪಟ್ಟಿ ಕೊಡ್ಲಾ? – ಸಿದ್ದರಾಮಯ್ಯ

Nirmala Sitharaman 2

ವಿತ್ತ ಸಚಿವರು ಕರ್ನಾಟಕದ ಋಣ ತೀರಿಸಬಾರದಾ?
ಇದೇ ವೇಳೆ ನೀತಿ ಆಯೋಗದ ಸಭೆಗೆ ಗೈರಾದ ವಿಚಾರಕ್ಕೆ ಪ್ರತಿಕ್ರಿಯಿಸಿ, ಉದ್ದೇಶ ಪೂರ್ವಕವಾಗಿ ನೀತಿ ಆಯೋಗದ ಸಭೆಗೆ ಬಾಯ್ಕಾಟ್ ಮಾಡಿದ್ದೇನೆ. ನಾನು ಮಾತ್ರ ಅಲ್ಲ, ಬಿಜೆಪಿಯೇತರ ಸರ್ಕಾರದ ರಾಜ್ಯಗಳು ಬಾಯ್ಕಾಟ್ ಮಾಡಿದ್ದಾರೆ. ರಾಜ್ಯಕ್ಕೆ ನ್ಯಾಯವೇ ಸಿಗದಿದ್ದ ಮೇಲೆ ಸಭೆಗೆ ಹೋಗಿ ಏನು ಪ್ರಯೋಜನ? ಕೇಂದ್ರ ಬಜೆಟ್‌ನಲ್ಲಿ ರಾಜ್ಯಕ್ಕೆ ಸಂಪೂರ್ಣ ಅನ್ಯಾಯವಾಗಿದೆ. ಪ್ರತಿ ಬಾರಿಯೂ ನಿರ್ಮಾಲಾ ಸೀತಾರಾಮನ್ ರಾಜ್ಯಕ್ಕೆ ಬಂದು ಸುಳ್ಳು ಹೇಳಿ ಹೋಗುತ್ತಾರೆ. ಕರ್ನಾಟಕದಿಂದ ರಾಜ್ಯಸಭಾ ಸದಸ್ಯರಾಗಿದ್ದಾರೆ. ಕರ್ನಾಟಕದ ಋಣ ತೀರಿಸಿಬಾರದಾ? ಎಂದು ಪ್ರಶ್ನೆ ಮಾಡಿದರು. ಇದನ್ನೂ ಓದಿ: ರಾಮನಗರ ಹೆಸರು ಬದಲಾವಣೆಗೆ ಸಂಘಟನೆಗಳ ವಿರೋಧ – ರಾಜ್ಯಪಾಲರಿಗೆ ಮನವಿ ಸಲ್ಲಿಸಲು ನಿರ್ಧಾರ

ಕುಮಾರಸ್ವಾಮಿ ಮಂಡ್ಯದಿಂದ ಆಯ್ಕೆಯಾಗಿದ್ದಾರೆ. ಮಂಡ್ಯ ಕ್ಷೇತ್ರಕ್ಕೆ ಕಾರ್ಖಾನೆ ತಂದಿದ್ದಾರಾ? 15ನೇ ಹಣಕಾಸು ಆಯೋಗದಲ್ಲಿ ಕರ್ನಾಟಕ ರಾಜ್ಯಕ್ಕೆ ಆಗಿರುವ ಅನ್ಯಾಯ ದೇಶದ ಯಾವ ರಾಜ್ಯಕ್ಕೂ ಆಗಿಲ್ಲ. ಅತಿ ಹೆಚ್ಚು ತೆರಿಗೆ ಕೊಡುವ 2ನೇ ರಾಜ್ಯ ಕರ್ನಾಟಕ ಇಂತಹ ರಾಜ್ಯಕ್ಕೆ ಅನ್ಯಾಯಾಗುತ್ತಿದೆ. ಅನ್ಯಾಯ ಆಗಿಲ್ಲ ಎಂದು ಕೇಂದ್ರ ಸಚಿವರು ಹೇಳುತ್ತಾರೆ. ಆಂಧ್ರ ಪ್ರದೇಶ, ಬಿಹಾರಕ್ಕೆ ಕೊಟ್ಟಿರುವ ಅನುದಾನ ಎಷ್ಟು? ನಮ್ಮದು ಎಷ್ಟು ಎಂದು ಹೇಳಲಿ. ಭದ್ರಾ ಮೇಲ್ದಂಡೆ ಯೋಜನೆ ಸೇರಿದಂತೆ ಹಳೇಯ ಯಾವ ಯೋಜನೆಗಳಿಗೆ ದುಡ್ಡು ಕೊಟ್ಟಿಲ್ಲ. ನಮಗೆ ಪಾಠ ಮಾಡಲು ಬರುತ್ತಾರಾ? ನಿರ್ಮಾಲಾ ಸೀತಾರಾಮನ್ ವಿರುದ್ಧ ಸಿಎಂ ನಡೆದಿಸಿದರು.

ಕರಪ್ಷನ್ ಸಂಪೂರ್ಣ ಹೋಗಿದೆ ಅಂತ ಹೇಳಲ್ಲ:
ನನ್ನ ಅವಧಿಯಲ್ಲಿ ಕರಪ್ಷನ್ ಸಂಪೂರ್ಣ ಹೋಗಿದೆ ಎಂದು ಹೇಳಲ್ಲ. ಆದರೆ ಕಡಿಮೆಯಾಗಿದೆ ಎಂದು ಹೇಳಬಲ್ಲೆ. ಬಿಜೆಪಿಯ ಅವಧಿಯಲ್ಲಿ ಭ್ರಷ್ಟಾಚಾರ ಎಷ್ಟಿತ್ತು? ಅದನ್ನ ಇಡೀ ದೇಶವೇ ನೋಡಿದೆ. ಈಗ ಕರ್ನಾಟಕವನ್ನ ಭ್ರಷ್ಟ್ರ ರಾಜ್ಯ ಎಂದು ಬಿಂಬಿಸುವ ಯತ್ನವನ್ನ ಬಿಜೆಪಿ ಮಾಡುತ್ತಿದೆ. ಸಂಸತ್‌ನಲ್ಲಿ ಕರ್ನಾಟಕಕ್ಕೆ ಭ್ರಷ್ಟಚಾರದ ಹಣೆ ಪಟ್ಟಿ ಕಟ್ಟುವ ಯತ್ನ ನಡೆಯುತ್ತಿದೆ. ಬಿಜೆಪಿಗೆ ಮಾನ ಮರ್ಯಾದೆ ಇದ್ಯಾ? ಅಂತ ಪ್ರಶ್ನೆ ಮಾಡಿದರು. ಇದನ್ನೂ ಓದಿ: ಬಿಹಾರದಲ್ಲಿ ಮೀಸಲಾತಿ ಹೆಚ್ಚಿಸಿದ್ದ ನಿತೀಶ್‌ಗೆ ಹಿನ್ನಡೆ – ಹೈಕೋರ್ಟ್‌ ಆದೇಶಕ್ಕೆ ತಡೆ ನೀಡದ ಸುಪ್ರೀಂ

Share This Article